Andolana originals

ಮಾಂದಲ ಪಟ್ಟಿಗೆ ಶೀಘ್ರದಲ್ಲೇ ಅಭಿವೃದ್ಧಿ ಭಾಗ್ಯ..!

ನವೀನ್ ಡಿಸೋಜ

ಒಂದು ಜಿಲ್ಲೆ – ಒಂದು ತಾಣ ಯೋಜನೆಯಡಿ ಕಾಯಕಲ್ಪ ; ಮೂಲ ಸೌಕರ್ಯಗಳ ಅಭಿವೃದ್ಧಿಗೆ ಚಿಂತ

ಮಡಿಕೇರಿ: ಜಿಲ್ಲೆಯ ಪ್ರಸಿದ್ಧ ಪ್ರವಾಸಿತಾಣಗಳಲ್ಲೊಂದಾದ ಮಾಂದಲಪಟ್ಟಿಯಲ್ಲಿ ಪ್ರವಾಸೋದ್ಯಮ ಪೂರಕ ಅಭಿವೃದ್ಧಿಗೆ ಯೋಜನೆ ಸಿದ್ಧವಾಗುತ್ತಿದ್ದು, ಸದ್ಯದಲ್ಲಿಯೇ ರಸ್ತೆ ಸೇರಿದಂತೆ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ.

ಕೊಡಗಿನಲ್ಲಿ ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ತಾಣಗಳಲ್ಲಿ ಮಡಿಕೇರಿ ಸಮೀಪದ ಗಾಳಿಬೀಡು ಪಂಚಾಯಿತಿ ವ್ಯಾಪ್ತಿಯ ಮಾಂದಲಪಟ್ಟಿ ಕೂಡ ಒಂದಾಗಿದೆ. ಚಲನಚಿತ್ರವೊಂದರ ಶೂಟಿಂಗ್ ನಡೆದ ಬಳಿಕ ಮುಗಿಲು ಪೇಟೆ ಎಂಬ ಹೆಸರಿನಿಂದಲೂ ಕರೆಯಲ್ಪಡುವ ಮಾಂದಲಪಟ್ಟಿಯು ರಸ್ತೆ ಸಮಸ್ಯೆ, ಬಾಡಿಗೆ ಜೀಪುಗಳ ಕಿರಿಕಿರಿಯಿಂದ ಆಗಿಂದಾಗ್ಗೆ ಸುದ್ದಿಯಲ್ಲಿರುತ್ತದೆ. ಮೂಲ ಸೌಲಭ್ಯವಿಲ್ಲದ ಈ ಸುಂದರ ಪ್ರಾಕೃತಿಕ ತಾಣವನ್ನು ಒಂದು ಜಿಲ್ಲೆ – ಒಂದು ತಾಣ ಯೋಜನೆಯಡಿ ಗುರುತಿಸಲಾಗಿದ್ದು, ಸದ್ಯದಲ್ಲಿಯೇ ಅಭಿವೃದ್ಧಿ ಕಾರ್ಯಗಳು ಆರಂಭವಾಗಲಿವೆ.

ಮಾಂದಲಪಟ್ಟಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದ್ದು, ಇದಕ್ಕಾಗಿ ಕ್ರಿಯಾಯೋಜನೆ ಸಿದ್ಧಪಡಿಸಲು ಕ್ರಮ ಕೈಗೊಂಡಿದೆ. ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಅಭಿವೃದ್ಧಿಪಡಿಸಬೇಕಾಗಿರುವ ಪ್ರವಾಸಿ ಸೌಲಭ್ಯಗಳ ಕುರಿತು ಯೋಜನೆ ರೂಪಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕಿ ಅನಿತಾ ಭಾಸ್ಕರ್ ತಿಳಿಸಿದ್ದಾರೆ.

ಮಾಂದಲಪಟ್ಟಿ ಮಡಿಕೇರಿ ಹೊರವಲಯದ ಗಾಳಿಬೀಡು ಗ್ರಾ.ಪಂ. ವ್ಯಾಪ್ತಿಗೆ ಒಳಪಡುತ್ತದೆ. ಆದರೆ ಇದು ಅರಣ್ಯ ಇಲಾಖೆಗೆ ಒಳಪಡುವ ಸ್ಥಳವಾದ್ದರಿಂದ ಅಲ್ಲಿ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲು ಪಂಚಾಯ್ತಿಗೆ ಸಾಧ್ಯವಿರಲಿಲ್ಲ. ಆದರೆ ಇತ್ತೀಚೆಗೆ ನಡೆಸಿದ ಸರ್ವೆಯಿಂದ ಮಾಂದಲಪಟ್ಟಿ ಟಿಕೆಟ್ ಕೌಂಟರ್ ಜಂಕ್ಷನ್ ಇರುವ ಪ್ರದೇಶ ಅರಣ್ಯ ಇಲಾಖೆಗೆ ಒಳಪಡುವುದಿಲ್ಲ ಎಂದು ತಿಳಿದು ಬಂದಿದ್ದು, ಅಲ್ಲಿ ಈಗ ಪಂಚಾಯಿತಿಯಿಂದ ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ. ಇದಕ್ಕಾಗಿ ಕ್ರಿಯಾ ಯೋಜನೆಯೂ ಸಿದ್ಧವಾಗಿದೆ. ಪಂಚಾಯಿತಿಯಿಂದ ೧.೩ ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಪ್ರವಾಸೋದ್ಯಮ ಇಲಾಖೆ ಶಿಫಾರಸು ಮಾಡಿದೆ.

ಮಾಂದಲಪಟ್ಟಿ ತಾಣ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವುದರಿಂದ ಅಲ್ಲಿ ರಸ್ತೆ, ವ್ಯೂವ್ ಪಾಂಯಿಂಟ್, ಶೌಚಾಲಯ ಮುಂತಾದ ಯಾವುದೇ ಸೌಲಭ್ಯವನ್ನು ಕಲ್ಪಿಸಬೇಕಾದರೆ ಅದು ಅರಣ್ಯ ಇಲಾಖೆಯಿಂದಲೇ ಆಗಬೇಕಿದೆ. ಹೀಗಾಗಿ ಅರಣ್ಯ ಇಲಾಖೆ ಜತೆ ಶಾಸಕರು ಚರ್ಚೆ ನಡೆಸಿದ್ದು, ಅಂದಾಜು ೩ ಕೋಟಿ ರೂ. ವೆಚ್ಚದಲ್ಲಿ ರಸ್ತೆ ಸೇರಿದಂತೆ ನಾನಾ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಯೋಜಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರು ಮಾಹಿತಿ ನೀಡಿದ್ದಾರೆ.

” ಮಾಂದಲಪಟ್ಟಿಗೆ ಪ್ರತಿ ವರ್ಷ ೩೦ ರಿಂದ ೪೦ ಲಕ್ಷದಷ್ಟು ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ ಈ ತಾಣಕ್ಕೆಸಂಪರ್ಕ ಕಲ್ಪಿಸುವ ಮತ್ತು ಒಳಭಾಗದ ರಸ್ತೆಗಳೇ ಸರಿಯಿಲ್ಲದ ಕಾರಣ, ಇಲ್ಲಿ ಪ್ರವಾಸಿಗರು ಜೀಪ್ಸಫಾರಿಯನ್ನೇ ಅವಲಂಬಿಸಬೇಕಿದೆ. ಇಂತಹ ಸಂದರ್ಭಗಳಲ್ಲಿ ಕೆಲವು ಜೀಪ್ ಚಾಲಕರು ಮತ್ತು ಪ್ರವಾಸಿಗರ ನಡುವೆ ವಾಗ್ವಾದ, ಘರ್ಷಣೆಗಳು ನಡೆದಿವೆ. ಇಂತಹ ಘಟನೆಗಳು ಕೊಡಗು ಪ್ರವಾಸೋದ್ಯಮದ ಮೇಲೆ ನೇರ ಪರಿಣಾಮ ಬೀರುತ್ತವೆ. ಇದಲ್ಲದೆ ಅಲ್ಲಿ ಮೂಲ ಸೌಲಭ್ಯಗಳ ಕೊರತೆಯೂ ಇದೆ, ಹೀಗಾಗಿ ಮಾಂದಲಪಟ್ಟಿ ಅಭಿವೃದ್ಧಿ ಕೊಡಗು ಪ್ರವಾಸೋದ್ಯಮ ಬೆಳವಣಿಗೆಯ ದೃಷ್ಟಿಯಿಂದ ಅನಿವಾರ್ಯವಾಗಿದೆ.”

” ಮಾಂದಲಪಟ್ಟಿ ಪ್ರವಾಸಿ ತಾಣಕ್ಕೆ ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುತ್ತಾರೆ. ಹೀಗಾಗಿ ಈತಾಣವನ್ನು ಒಂದು ಜಿಲ್ಲೆ ಒಂದುತಾಣ ಯೋಜನೆಯಡಿ ಅಭಿವೃದ್ಧಿಪಡಿಸಲು ಗುರುತಿಸಲಾಗಿದೆ. ಪ್ರವಾಸೋದ್ಯಮ ಇಲಾಖೆ ಮತ್ತು ಗ್ರಾಮ ಪಂಚಾಯಿತಿಯಿಂದಲೂ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಿದ್ದು, ಒಳಭಾಗದ ರಸ್ತೆ,ಮೂಲ ಸೌಕರ್ಯ ಅಭಿವೃದ್ಧಿಗೆ ಅರಣ್ಯ ಇಲಾಖೆ ಚಿಂತನೆ ನಡೆಸಿದೆ.”

ಅನಿತಾ ಭಾಸ್ಕರ್, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕಿ.

ಆಂದೋಲನ ಡೆಸ್ಕ್

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

6 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

6 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

6 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

6 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

6 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

7 hours ago