Andolana originals

ರಸ್ತೆಗಳಲ್ಲಿ ಸಂಚರಿಸುವವರಿಗೆ ಮುದ ನೀಡುವ ಮೇ ಫ್ಲವರ್‌

ಕೆ. ಆರ್. ನಗರದಿಂದ ಭೇರ್ಯ ಗ್ರಾಮದವರೆಗೆ ಹಾಸನ- ಮೈಸೂರು ಹೆದ್ದಾರಿಯಲ್ಲಿ ಕೆಂಬಣ್ಣದ ಹೂಗಳ ಚಿತ್ತಾರ

ಭೇರ್ಯ ಮಹೇಶ್

ಕೆ. ಆರ್. ನಗರ: ಬೇಸಿಗೆಯ ನಡುವೆ ಆಗೊಮ್ಮೆ ಈಗೊಮ್ಮೆ ಇಣುಕಿ ಹೋಗುವ ಮೋಡಗಳು. . . ಭೂಮಿಗೆ ತಂಪೆರೆಯುವ ಮಳೆ ಹನಿಗಳು. . . ಇವೆಲ್ಲದಕ್ಕೂ ಜತೆಯಾಗಿ ಪಳಪಳ ಹೊಳೆಯುವ ಕೆಂಪನೆ ಹೂಗಳು. . . ದೂರ ದೂರಕ್ಕೂ ಕಣ್ಸೆಳೆಯುವ, ಹತ್ತಿರ ಬಂದರೆ ಆಹ್ಲಾದಕರ ಅನುಭವ ನೀಡುವ ಅಪೂರ್ವ ಮೇ ಫ್ಲವರ್ ಮರಗಳು ರಸ್ತೆಯಲ್ಲಿ ಸಂಚರಿಸುವವರ ಗಮನ ಸೆಳೆಯುತ್ತಿವೆ.

ಕೆ. ಆರ್. ನಗರದಿಂದ ಭೇರ್ಯ ಗ್ರಾಮ ದವರೆಗೆ ಹಾಸನ- ಮೈಸೂರು ಹೆದ್ದಾರಿಯಲ್ಲಿ ಬರುವ ಚಿಕ್ಕವಡ್ಡರಗುಡಿ, ಹೊಸ ಅಗ್ರಹಾರ, ರೈಲ್ವೆ ನಿಲ್ದಾಣ ಹಾಗೂ ಭೇರ್ಯ ಗ್ರಾಮದ ಆಸ್ಪತ್ರೆ ಆವರಣ ಮುಂತಾದ ಕಡೆಗಳಲ್ಲಿ ಮೇ ಫ್ಲವರ್ ಮರಗಳು ಹೂಗಳಿಂದ ತುಂಬಿ ಆಕರ್ಷಿಸುತ್ತಿವೆ.

ಬಣ್ಣ ಬಣ್ಣದ ಅಪರೂಪದ ಹೂವುಗಳು ಅರಳಿ ನಿಲ್ಲುವ ಕಾಲವಿದು. ಈ ತಿಂಗಳಲ್ಲಿ ಅರಳುವ ಮೇ ಫ್ಲವರ್ ಕಣ್ಮನ ಸೆಳೆಯುತ್ತಿವೆ. ಹಲವು ರಸ್ತೆ ಬದಿಗಳಲ್ಲೂ ಇವುಗಳ ಅಂದ ಮೈದಳೆದಿದೆ. ಅಂತೆಯೇ, ಈ ತಿಂಗಳಲ್ಲಷ್ಟೇ ಬಿಡುವ ಮತ್ತೊಂದು ಹೂವು ‘ಬಾಲ್ ಲಿಲ್ಲಿ’. ರಾಕೆಟ್ ನಂತೆ ಚಿಮ್ಮಲು ತಯಾರಾದಂತೆ ಭಾಸವಾಗುವ ಕೆಂಪು ಬಣ್ಣದ ಈ ಹೂವು ಕಂಗೊಳಿಸುತ್ತಿದೆ. ಜತೆಗೆ ತರಹೇವಾರಿ ಸಾಮಾನ್ಯ ಲಿಲ್ಲಿ ಹೂಗಳೂ ಆಕರ್ಷಿಸುತ್ತಿವೆ.

ಮನೆಗಳ ಮುಂದೆ ಅಲಂಕಾರಕ್ಕಾಗಿ ಪಾಟ್ ಗಳಲ್ಲಿ ಬೆಳೆಸಿರುವ ಲಿಲ್ಲಿ ಹೂ, ಕಣಿವೆ ಲಲ್ಲಿ ಹೂ, ಬಾಲ್ ಲಿಲ್ಲಿ ಹೂಗಳು ಮನಸ್ಸಿಗೆ ಮುದ ನೀಡುತ್ತಿವೆ. ಮೇ ತಿಂಗಳಲ್ಲಿ ಬಿಡುವ ಇತರ ಹೂ ಗಳು ಮೇ ಫ್ಲವರ್ (ಡೆಲೊನಿಕ್ಸ್ ರೆಜಿಯಾ), ಕ್ಯಾಷಿಯಾ ಜವಾನಿಕ, ಲೆಜಿಸ್ತೋನಿಯಾ, ಫ್ಲಮೇರಿಯಾ (ದೇವಕಣಿಗಲು), ರೈನ್ ಟ್ರೇ ಮತ್ತು ಕಾಪರ್ ಪಾಡ್ನ ಎಂಬ ಹಳದಿ ಬಣ್ಣದ ಹೂವುಗಳು ಮೇ ತಿಂಗಳಲ್ಲಿ ಕಾಣಸಿಗುತ್ತವೆ.

ಈಗಾಗಲೇ ಹಲವೆಡೆ ಹೂವು ಬಿಟ್ಟಿವೆ. ಇವುಗಳಲ್ಲಿ ಕೆಲವು ಹೂವು ಬಿಟ್ಟ ನಂತರ ಎರಡರಿಂದ ಮೂರು ತಿಂಗಳುಗಳ ಕಾಲವೂ ತಮ್ಮ ಸೊಬಗನ್ನು ಬೀರುತ್ತವೆ. ಮರದಲ್ಲಿ ಹೂ ಗೊಂಚಲುಗಳು ನಗೆ ಬೀರಿದರೆ, ಉದುರಿದ ದಳಗಳು ನೆಲದಲ್ಲಿ ಹೂ ಹಾಸಿಗೆಯಂತೆ ಕಂಗೊಳಿಸುತ್ತವೆ.

ಮೇ ಫ್ಲವರ್‌ಗಳನ್ನು ನಮ್ಮ ಪೂರ್ವಿಕರ ಕಾಲದಲ್ಲಿ ಮದುವೆ ಸಮಾರಂಭಕ್ಕೆ ಚಪ್ಪರಕ್ಕೆ ಹಾಗೂ ಹಬ್ಬಗಳಲ್ಲಿ ಉಪಯೋಗಿಸಲಾಗುತ್ತಿತ್ತು. ಕಾಲ ಬದಲಾದಂತೆ ಈ ಮರದ ಸಂತತಿ ಕಡಿಮೆಯಾಗಿ ಗ್ರಾಮೀಣ ಭಾಗದಲ್ಲಿ ಮತ್ತು ನಗರ ಪ್ರದೇಶದ ಪಾರ್ಕ್‌ಗಳಲ್ಲಿ ನೋಡುಗರ ಕಣ್ಮನ ಸೆಳೆಯುತ್ತಿವೆ. -ಜೆ. ಎಂ. ಕುಮಾರ್, ಗೌರವಾಧ್ಯಕ್ಷರು, ಕರ್ನಾಟಕ ರಾಜ್ಯ ರೈತ ಪರ್ವ ಸಂಘ

ಆಂದೋಲನ ಡೆಸ್ಕ್

Recent Posts

ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಡೀಸೆಲ್‌ ಸಮಸ್ಯೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ತಕ್ಷಣಕ್ಕೆ ಡೀಸೆಲ್‌ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇರಾನ್‌-ಇಸ್ರೇಲ್‌ ಸಂಘರ್ಷ…

1 hour ago

ನಂಜನಗೂಡು| ನಂಜುಂಡೇಶ್ವರನ ದೊಡ್ಡ ಜಾತ್ರೆಯಲ್ಲಿ ಕಾಲ್ತುಳಿತ: ಇಬ್ಬರಿಗೆ ಗಾಯ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಜರುಗಿದ ಗೌತಮ ಪಂಚಮಹಾರಥೋತ್ಸವದಲ್ಲಿ ಕಾಲ್ತುಳಿತ ಸಂಭವಿಸಿದ ಪರಿಣಾಮ ಇಬ್ಬರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ನಂಜನಗೂಡಿನ…

1 hour ago

ರಾಜ್ಯದ ಹಲವೆಡೆ ಇಂದೂ ಕೂಡ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ…

2 hours ago

ಕುವೈತ್‌ ಮೇಲೆ ಇರಾನ್‌ ಭೀಕರ ದಾಳಿ: ಭಾರತೀಯ ಕಾರ್ಮಿಕ ಸಾವು

ಟೆಹರಾನ್:‌ ಕುವೈತ್‌ ವಿದ್ಯುತ್‌ ಸ್ಥಾವರದ ಮೇಲೆ ಇರಾನ್‌ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ…

2 hours ago

ನಂಜನಗೂಡಿನ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತ: ಓರ್ವ ಭಕ್ತ ಸಾವು

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…

3 hours ago

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಸಾವು

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…

3 hours ago