Andolana originals

ರಸ್ತೆಗಳಲ್ಲಿ ಸಂಚರಿಸುವವರಿಗೆ ಮುದ ನೀಡುವ ಮೇ ಫ್ಲವರ್‌

ಕೆ. ಆರ್. ನಗರದಿಂದ ಭೇರ್ಯ ಗ್ರಾಮದವರೆಗೆ ಹಾಸನ- ಮೈಸೂರು ಹೆದ್ದಾರಿಯಲ್ಲಿ ಕೆಂಬಣ್ಣದ ಹೂಗಳ ಚಿತ್ತಾರ

ಭೇರ್ಯ ಮಹೇಶ್

ಕೆ. ಆರ್. ನಗರ: ಬೇಸಿಗೆಯ ನಡುವೆ ಆಗೊಮ್ಮೆ ಈಗೊಮ್ಮೆ ಇಣುಕಿ ಹೋಗುವ ಮೋಡಗಳು. . . ಭೂಮಿಗೆ ತಂಪೆರೆಯುವ ಮಳೆ ಹನಿಗಳು. . . ಇವೆಲ್ಲದಕ್ಕೂ ಜತೆಯಾಗಿ ಪಳಪಳ ಹೊಳೆಯುವ ಕೆಂಪನೆ ಹೂಗಳು. . . ದೂರ ದೂರಕ್ಕೂ ಕಣ್ಸೆಳೆಯುವ, ಹತ್ತಿರ ಬಂದರೆ ಆಹ್ಲಾದಕರ ಅನುಭವ ನೀಡುವ ಅಪೂರ್ವ ಮೇ ಫ್ಲವರ್ ಮರಗಳು ರಸ್ತೆಯಲ್ಲಿ ಸಂಚರಿಸುವವರ ಗಮನ ಸೆಳೆಯುತ್ತಿವೆ.

ಕೆ. ಆರ್. ನಗರದಿಂದ ಭೇರ್ಯ ಗ್ರಾಮ ದವರೆಗೆ ಹಾಸನ- ಮೈಸೂರು ಹೆದ್ದಾರಿಯಲ್ಲಿ ಬರುವ ಚಿಕ್ಕವಡ್ಡರಗುಡಿ, ಹೊಸ ಅಗ್ರಹಾರ, ರೈಲ್ವೆ ನಿಲ್ದಾಣ ಹಾಗೂ ಭೇರ್ಯ ಗ್ರಾಮದ ಆಸ್ಪತ್ರೆ ಆವರಣ ಮುಂತಾದ ಕಡೆಗಳಲ್ಲಿ ಮೇ ಫ್ಲವರ್ ಮರಗಳು ಹೂಗಳಿಂದ ತುಂಬಿ ಆಕರ್ಷಿಸುತ್ತಿವೆ.

ಬಣ್ಣ ಬಣ್ಣದ ಅಪರೂಪದ ಹೂವುಗಳು ಅರಳಿ ನಿಲ್ಲುವ ಕಾಲವಿದು. ಈ ತಿಂಗಳಲ್ಲಿ ಅರಳುವ ಮೇ ಫ್ಲವರ್ ಕಣ್ಮನ ಸೆಳೆಯುತ್ತಿವೆ. ಹಲವು ರಸ್ತೆ ಬದಿಗಳಲ್ಲೂ ಇವುಗಳ ಅಂದ ಮೈದಳೆದಿದೆ. ಅಂತೆಯೇ, ಈ ತಿಂಗಳಲ್ಲಷ್ಟೇ ಬಿಡುವ ಮತ್ತೊಂದು ಹೂವು ‘ಬಾಲ್ ಲಿಲ್ಲಿ’. ರಾಕೆಟ್ ನಂತೆ ಚಿಮ್ಮಲು ತಯಾರಾದಂತೆ ಭಾಸವಾಗುವ ಕೆಂಪು ಬಣ್ಣದ ಈ ಹೂವು ಕಂಗೊಳಿಸುತ್ತಿದೆ. ಜತೆಗೆ ತರಹೇವಾರಿ ಸಾಮಾನ್ಯ ಲಿಲ್ಲಿ ಹೂಗಳೂ ಆಕರ್ಷಿಸುತ್ತಿವೆ.

ಮನೆಗಳ ಮುಂದೆ ಅಲಂಕಾರಕ್ಕಾಗಿ ಪಾಟ್ ಗಳಲ್ಲಿ ಬೆಳೆಸಿರುವ ಲಿಲ್ಲಿ ಹೂ, ಕಣಿವೆ ಲಲ್ಲಿ ಹೂ, ಬಾಲ್ ಲಿಲ್ಲಿ ಹೂಗಳು ಮನಸ್ಸಿಗೆ ಮುದ ನೀಡುತ್ತಿವೆ. ಮೇ ತಿಂಗಳಲ್ಲಿ ಬಿಡುವ ಇತರ ಹೂ ಗಳು ಮೇ ಫ್ಲವರ್ (ಡೆಲೊನಿಕ್ಸ್ ರೆಜಿಯಾ), ಕ್ಯಾಷಿಯಾ ಜವಾನಿಕ, ಲೆಜಿಸ್ತೋನಿಯಾ, ಫ್ಲಮೇರಿಯಾ (ದೇವಕಣಿಗಲು), ರೈನ್ ಟ್ರೇ ಮತ್ತು ಕಾಪರ್ ಪಾಡ್ನ ಎಂಬ ಹಳದಿ ಬಣ್ಣದ ಹೂವುಗಳು ಮೇ ತಿಂಗಳಲ್ಲಿ ಕಾಣಸಿಗುತ್ತವೆ.

ಈಗಾಗಲೇ ಹಲವೆಡೆ ಹೂವು ಬಿಟ್ಟಿವೆ. ಇವುಗಳಲ್ಲಿ ಕೆಲವು ಹೂವು ಬಿಟ್ಟ ನಂತರ ಎರಡರಿಂದ ಮೂರು ತಿಂಗಳುಗಳ ಕಾಲವೂ ತಮ್ಮ ಸೊಬಗನ್ನು ಬೀರುತ್ತವೆ. ಮರದಲ್ಲಿ ಹೂ ಗೊಂಚಲುಗಳು ನಗೆ ಬೀರಿದರೆ, ಉದುರಿದ ದಳಗಳು ನೆಲದಲ್ಲಿ ಹೂ ಹಾಸಿಗೆಯಂತೆ ಕಂಗೊಳಿಸುತ್ತವೆ.

ಮೇ ಫ್ಲವರ್‌ಗಳನ್ನು ನಮ್ಮ ಪೂರ್ವಿಕರ ಕಾಲದಲ್ಲಿ ಮದುವೆ ಸಮಾರಂಭಕ್ಕೆ ಚಪ್ಪರಕ್ಕೆ ಹಾಗೂ ಹಬ್ಬಗಳಲ್ಲಿ ಉಪಯೋಗಿಸಲಾಗುತ್ತಿತ್ತು. ಕಾಲ ಬದಲಾದಂತೆ ಈ ಮರದ ಸಂತತಿ ಕಡಿಮೆಯಾಗಿ ಗ್ರಾಮೀಣ ಭಾಗದಲ್ಲಿ ಮತ್ತು ನಗರ ಪ್ರದೇಶದ ಪಾರ್ಕ್‌ಗಳಲ್ಲಿ ನೋಡುಗರ ಕಣ್ಮನ ಸೆಳೆಯುತ್ತಿವೆ. -ಜೆ. ಎಂ. ಕುಮಾರ್, ಗೌರವಾಧ್ಯಕ್ಷರು, ಕರ್ನಾಟಕ ರಾಜ್ಯ ರೈತ ಪರ್ವ ಸಂಘ

ಆಂದೋಲನ ಡೆಸ್ಕ್

Recent Posts

ಎಚ್‌ಡಿಕೆಯನ್ನು ಸಿಎಂ ಮಾಡ್ತೀವಿ ಎಂದು ವಿಜಯೇಂದ್ರ, ಅಶೋಕ್‌ ಹೇಳಲಿ: ದಿನೇಶ್‌ ಗುಂಡೂರಾವ್‌ ಸವಾಲು

ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.‌ಅಶೋಕ್‌ ಹೇಳಲಿ…

4 hours ago

ಮನರೇಗಾ ಹೆಸರು ಬದಲಾವಣೆ ಖಂಡಿಸಿ ನಾಳೆ ಬೃಹತ್‌ ಧರಣಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್‌ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…

4 hours ago

ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರ ನಡೆದುಕೊಂಡ ಕ್ರಮ ಸರಿಯಲ್ಲ: ಮಾಜಿ ಮೇಯರ್‌ ಶಿವಕುಮಾರ್‌

ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್‌ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…

4 hours ago

ಮ್ಯಾನ್ಮಾರ್‌ನಲ್ಲಿ ಶೌರ್ಯ ಘರ್ಜನೆ: 9 ಮಂದಿ ಉಗ್ರರ ಸಂಹಾರ

ಮ್ಯಾನ್ಮಾರ್‌ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್‌ ಆಪರೇಷನ್‌ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…

4 hours ago

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ವ್ಯಕ್ತಿಯ ಸಜೀವ ದಹನ

ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…

4 hours ago

ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು

ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…

4 hours ago