Andolana originals

ಎಂಸಿಡಿಸಿಸಿಬಿ: ಅನಿಲ್ ಚಿಕ್ಕಮಾದು-ಪ್ರಕಾಶ್ ನಡುವೆ ಪೈಪೋಟಿ

ಮಂಜು ಕೋಟೆ

ಕೋಟೆ: ಎರಡೂ ಕಡೆಯವರಿಂದ ಕಾರ್ಯತಂತ್ರ; ಫಲಿತಾಂಶ ಕುರಿತು ಮೂಡಿದ ಕುತೂಹಲ

ಎಚ್.ಡಿ.ಕೋಟೆ: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಹೆಚ್.ಡಿ.ಕೋಟೆ ಕ್ಷೇತ್ರದ ನಿರ್ದೇಶಕರ ಚುನಾವಣೆಗೆ ಸ್ಪರ್ಧಿಸಿರುವ ಕಾಂಗ್ರೆಸ್ ಪಕ್ಷದ ಶಾಸಕ ಅನಿಲ್ ಚಿಕ್ಕಮಾದು, ಜಾ.ದಳ-ಬಿಜೆಪಿ ಮೈತ್ರಿ ಬೆಂಬಲಿತರಾದ ರೈತ ಗುಂಡತ್ತೂರು ಪ್ರಕಾಶ್ ಲಕ್ಷ್ಮೀಪ್ರಸಾದ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು ತೀವ್ರ ಕುತೂಹಲ ಮೂಡಿಸಿದೆ.

ತಾಲ್ಲೂಕಿನಲ್ಲಿ ಇದೇ ಪ್ರಥಮ ಬಾರಿಗೆ ಎಂಸಿಡಿಸಿಸಿ ಬ್ಯಾಂಕಿನ ನಿರ್ದೇಶಕರ ಚುನಾವಣೆಯಲ್ಲಿ ಕ್ಷೇತ್ರದ ಶಾಸಕರು ಸ್ಪರ್ಧಿಸಿರುವುದರಿಂದ ಕ್ಷೇತ್ರದ ಜನರಲ್ಲಿ ಕುತೂಹಲ ಇಮ್ಮಡಿಸಿದೆ. ಶಾಸಕ ಅನಿಲ್ ಚಿಕ್ಕಮಾದು ಗೆಲ್ಲುವುದು ಖಚಿತ ಎಂಬ ಮಾತುಗಳೂ ಕೇಳಿಬರುತ್ತಿವೆ.

ನಾಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿರುವ ಅನಿಲ್ ಚಿಕ್ಕಮಾದು ಎಂಡಿಸಿಡಿಸಿಬಿಗೆ ಸ್ಪರ್ಧಿಸಿರುವುದರಿಂದ ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿದ್ದು, ಗೆಲ್ಲಲು ಎಲ್ಲಾ ರೀತಿಯ ಕಾರ್ಯತಂತ್ರಗಳನ್ನು ನಡೆಸುತ್ತಿದ್ದು, ಕ್ಷೇತ್ರದ ೧೭ ಬ್ಯಾಂಕುಗಳ ಡೆಲಿಕೇಟ್ ಪ್ರತಿನಿಧಿಗಳ ಪೈಕಿ ೧೨ ಮಂದಿ ಶಾಸಕರ ಬೆಂಬಲಕ್ಕೆ ನಿಂತಿದ್ದಾರೆ.

ಕ್ಷೇತ್ರದ ಶಾಸಕತ್ವದ ಅಧಿಕಾರದ ಜೊತೆಗೆ ಸಹಕಾರ ಕ್ಷೇತ್ರದ ಅಧಿಕಾರವನ್ನು ಅನಿಲ್ ಅವರಿಗೆ ನೀಡಲೇಬೇಕೆಂದು ಮುಖಂಡರಾದ ನಾಗನಹಳ್ಳಿ ಪ್ರದೀಪ, ಭಾಸ್ಕರ, ಈರೇಗೌಡ, ನರಸೀಪುರ ರವಿ, ಹಿರೇಹಳ್ಳಿ ಸೋಮೇಶ್, ಪರಶಿವ ಮೂರ್ತಿ, ಶಿವಮಲ್ಲಪ್ಪ, ಹೋಂಡಾ ನಯಾಜ್, ನರಸಿಂಹಮೂರ್ತಿ, ರಾಜು ವಿಶ್ವಕರ್ಮ, ಗಣೇಶಾಚಾರ್, ಜಿನ್ನಹಳ್ಳಿ ರಾಜನಾಯಕ, ಕ್ಯಾತನಹಳ್ಳಿ ನಾಗರಾಜು, ವಡ್ಡರಗುಡಿ ರವಿ, ಚಂದ್ರು, ಸತೀಶ್‌ಗೌಡ ಮತ್ತಿತರ ಮುಖಂಡರು, ಡೆಲಿಕೇಟ್ಗಳು ಶ್ರಮಿಸುತ್ತಿದ್ದಾರೆ.

ಶಾಸಕರ ನಿರ್ದೇಶನದಂತೆ ಕಾರಣಾಂತರಗಳಿಂದ ಕಾಂಗ್ರೆಸ್ ಪಕ್ಷದವರಾದ ಮನುಗನಹಳ್ಳಿ ಮಾದಪ್ಪ ಮತ್ತು ಬಡಗಲಪುರ ಶಿವನಂಜೇಗೌಡ ಇಬರೂ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೂ ಇವರು ಕೂಡ ಶಾಸಕರಿಗೆ ಮತದಾನ ಮಾಡಲಿದ್ದಾರೆ ಎನ್ನಲಾಗಿದೆ. ಗುಂಡತ್ತೂರು ಪ್ರಕಾಶ್ ಲಕ್ಷ್ಮೀಪ್ರಸಾದ್ ಜಾ.ದಳ ಮತ್ತು ಬಿಜೆಪಿ ಮೈತ್ರಿ ಪಕ್ಷದ ಬೆಂಬಲಿತರಾಗಿ ಅಂತರಸಂತೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಡೆಲಿಕೇಟ್ ಆಗಿ ಪ್ರಪ್ರಥಮವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

ಚುನಾವಣೆಯಲ್ಲಿ ಶಾಸಕರಿಗೆ ಪೈಪೋಟಿ ನೀಡಲು ತಮ್ಮದೇ ಕಾರ್ಯತಂತ್ರಗಳನ್ನು ರೂಪಿಸಿಕೊಂಡು ಅಧಿಕೃತವಾಗಿ ಐವರು ಡೆಲಿಗೇಟ್ ಗಳನ್ನು ತಮ್ಮ ಬೆಂಬಲಕ್ಕೆ ಇಟ್ಟುಕೊಂಡು ಮತ್ತೆ ಹಲವರನ್ನು ಸೆಳೆಯಲು ತೆರೆ ಮೆರೆಯಲ್ಲಿ ಪ್ರಯತ್ನಿಸುತಿದ್ದಾರೆ. ಹಲವು ವರ್ಷಗಳಿಂದ ಇವರ ಬಣದವರನ್ನೇ ತಾಲ್ಲೂಕಿನಲ್ಲಿ ನಿರ್ದೇಶಕರನ್ನಾಗಿ ಆಯ್ಕೆ ಮಾಡಿಕೊಂಡು ಬರುತ್ತಿದ್ದು, ಕ್ಷೇತ್ರವನ್ನು ಭದ್ರಕೋಟೆಯನ್ನಾಗಿ ಉಳಿಸಿಕೊಳ್ಳಬೇಕೆಂಬ ಛಲದಿಂದ ಶಾಸಕರಾದ ಜಿ.ಡಿ.ಹರೀಶ್ ಗೌಡ, ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ, ಮುಖಂಡರಾದ ಕೆ.ಎಸ್.ಗೌಡ್ರು, ಹರೀಶ್ ಗೌಡ, ಗುಂಡತ್ತೂರು ಮಹೇಶ, ಕರವೇ ನಟರಾಜ್, ಬೆಳಗನಹಳ್ಳಿ ಶಿವರಾಜ್, ಪ್ರಕಾಶ್, ಸಿರಿ ಹೊಸಮಾಳ, ಶಿವರಾಜ್, ವಕೀಲ ರವಿಕುಮಾರ್, ಮಟಕೆರೆ ರಾಜೇಶ್, ಯೋಗೇಶ್, ಸೋಮ ಶೇಖರ್, ಮಾಯಿ ಮತ್ತಿತರ ಮುಖಂಡರು, ಡೆಲಿಗೇಟ್‌ಗಳು ಕೆಲಸ ನಿರ್ವಹಿಸುತ್ತಿದ್ದಾರೆ.

ಒ ಟ್ಟಾರೆ ಜೂ.೨೬ರಂದು ನಡೆಯುವ ಚುನಾವಣೆಯಲ್ಲಿ ಕೋಟೆ ಕ್ಷೇತ್ರದ ಮತದಾರರು ಯಾವ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

” ಜನತೆ ಈಗ ನನ್ನನ್ನು ಶಾಸಕನನ್ನಾಗಿ ಮಾಡಿ ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಮಾಡಲು ಅವಕಾಶ ನೀಡಿದ್ದಾರೆ. ಅದೇ ರೀತಿ ರೈತರ ಅಭಿವೃದ್ಧಿಗಾಗಿ ಸಹಕಾರ ಕ್ಷೇತ್ರದಲ್ಲಿ ಕೆಲಸ ಮಾಡಬೇಕೆಂದು ಅಗತ್ಯ ಸಹಕಾರ ನೀಡಿರುವುದರಿಂದ ಅಧಿಕ ಮತಗಳಿಂದ ಜಯ ಸಾಧಿಸುತ್ತೇನೆ.”

-ಅನಿಲ್ ಚಿಕ್ಕಮಾದು, ಶಾಸಕ

” ಕ್ಷೇತ್ರದ ಶಾಸಕರಿಗೆ ಪ್ರತಿಸ್ಪರ್ಧಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಸಿಕ್ಕಿದೆ. ರೈತನಾಗಿರುವುದರಿಂದ ನನಗೆ ಎಲ್ಲರ ಉತ್ತಮ ಬೆಂಬಲ ದೊರಕಿದೆ. ಗೆದ್ದೇ ಗೆಲ್ಲುತ್ತೇನೆ ಎಂಬ ಪೂರ್ಣ ವಿಶ್ವಾಸ ನನಗಿದೆ.”

-ಗುಂಡತ್ತೂರು ಪ್ರಕಾಶ್ ಲಕ್ಷ್ಮೀ ಪ್ರಸಾದ್

ಆಂದೋಲನ ಡೆಸ್ಕ್

Recent Posts

ಹೆಚ್ಚಾಯ್ತು ಸಫಾರಿ ವಿರೋಧ : 25ಕ್ಕೂ ಹೆಚ್ಚು ಗ್ರಾ.ಪಂ ಪಿಡಿಒಗಳಿಗೆ ಮನವಿ ಸಲ್ಲಿಸಿ ರೈತರು

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…

5 hours ago

ಟ್ರಂಪ್‌ ಸುಂಕ ರದ್ದುಪಡಿಸಿದ ಅಮೆರಿಕಾ ಸುಪ್ರೀಂಕೋರ್ಟ್‌ : ಭಾರತ ಹೇಳಿದ್ದೇನು?

ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…

5 hours ago

ಗಡಿ ಭದ್ರತೆಗೆ ಒತ್ತು : ತಮಿಳುನಾಡು ಚುನಾವಣೆಗೆ ಕರ್ನಾಟಕ ಪೊಲೀಸ್ ಸಹಕಾರ ಭರವಸೆ

ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…

6 hours ago

ಶಾರ್ಟ್ ಸರ್ಕ್ಯೂಟ್ : ಎಲೆಕ್ಟ್ರಾನಿಕ್ಸ್ ಅಂಗಡಿ ಸುಟ್ಟು ಭಸ್ಮ, ಲಕ್ಷಾಂತರ ರೂ. ನಷ್ಟ

ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…

6 hours ago

ಇವಿ ಹಬ್ ಆಗಿ ಕರ್ನಾಟಕ ರೂಪಾಂತರ ; ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…

6 hours ago

ಶೇ.10 ರಷ್ಟು ಜಾಗತಿಕ ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…

6 hours ago