Andolana originals

ಎಂಸಿಡಿಸಿಸಿಬಿ: ಅನಿಲ್ ಚಿಕ್ಕಮಾದು-ಪ್ರಕಾಶ್ ನಡುವೆ ಪೈಪೋಟಿ

ಮಂಜು ಕೋಟೆ

ಕೋಟೆ: ಎರಡೂ ಕಡೆಯವರಿಂದ ಕಾರ್ಯತಂತ್ರ; ಫಲಿತಾಂಶ ಕುರಿತು ಮೂಡಿದ ಕುತೂಹಲ

ಎಚ್.ಡಿ.ಕೋಟೆ: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಹೆಚ್.ಡಿ.ಕೋಟೆ ಕ್ಷೇತ್ರದ ನಿರ್ದೇಶಕರ ಚುನಾವಣೆಗೆ ಸ್ಪರ್ಧಿಸಿರುವ ಕಾಂಗ್ರೆಸ್ ಪಕ್ಷದ ಶಾಸಕ ಅನಿಲ್ ಚಿಕ್ಕಮಾದು, ಜಾ.ದಳ-ಬಿಜೆಪಿ ಮೈತ್ರಿ ಬೆಂಬಲಿತರಾದ ರೈತ ಗುಂಡತ್ತೂರು ಪ್ರಕಾಶ್ ಲಕ್ಷ್ಮೀಪ್ರಸಾದ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು ತೀವ್ರ ಕುತೂಹಲ ಮೂಡಿಸಿದೆ.

ತಾಲ್ಲೂಕಿನಲ್ಲಿ ಇದೇ ಪ್ರಥಮ ಬಾರಿಗೆ ಎಂಸಿಡಿಸಿಸಿ ಬ್ಯಾಂಕಿನ ನಿರ್ದೇಶಕರ ಚುನಾವಣೆಯಲ್ಲಿ ಕ್ಷೇತ್ರದ ಶಾಸಕರು ಸ್ಪರ್ಧಿಸಿರುವುದರಿಂದ ಕ್ಷೇತ್ರದ ಜನರಲ್ಲಿ ಕುತೂಹಲ ಇಮ್ಮಡಿಸಿದೆ. ಶಾಸಕ ಅನಿಲ್ ಚಿಕ್ಕಮಾದು ಗೆಲ್ಲುವುದು ಖಚಿತ ಎಂಬ ಮಾತುಗಳೂ ಕೇಳಿಬರುತ್ತಿವೆ.

ನಾಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿರುವ ಅನಿಲ್ ಚಿಕ್ಕಮಾದು ಎಂಡಿಸಿಡಿಸಿಬಿಗೆ ಸ್ಪರ್ಧಿಸಿರುವುದರಿಂದ ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿದ್ದು, ಗೆಲ್ಲಲು ಎಲ್ಲಾ ರೀತಿಯ ಕಾರ್ಯತಂತ್ರಗಳನ್ನು ನಡೆಸುತ್ತಿದ್ದು, ಕ್ಷೇತ್ರದ ೧೭ ಬ್ಯಾಂಕುಗಳ ಡೆಲಿಕೇಟ್ ಪ್ರತಿನಿಧಿಗಳ ಪೈಕಿ ೧೨ ಮಂದಿ ಶಾಸಕರ ಬೆಂಬಲಕ್ಕೆ ನಿಂತಿದ್ದಾರೆ.

ಕ್ಷೇತ್ರದ ಶಾಸಕತ್ವದ ಅಧಿಕಾರದ ಜೊತೆಗೆ ಸಹಕಾರ ಕ್ಷೇತ್ರದ ಅಧಿಕಾರವನ್ನು ಅನಿಲ್ ಅವರಿಗೆ ನೀಡಲೇಬೇಕೆಂದು ಮುಖಂಡರಾದ ನಾಗನಹಳ್ಳಿ ಪ್ರದೀಪ, ಭಾಸ್ಕರ, ಈರೇಗೌಡ, ನರಸೀಪುರ ರವಿ, ಹಿರೇಹಳ್ಳಿ ಸೋಮೇಶ್, ಪರಶಿವ ಮೂರ್ತಿ, ಶಿವಮಲ್ಲಪ್ಪ, ಹೋಂಡಾ ನಯಾಜ್, ನರಸಿಂಹಮೂರ್ತಿ, ರಾಜು ವಿಶ್ವಕರ್ಮ, ಗಣೇಶಾಚಾರ್, ಜಿನ್ನಹಳ್ಳಿ ರಾಜನಾಯಕ, ಕ್ಯಾತನಹಳ್ಳಿ ನಾಗರಾಜು, ವಡ್ಡರಗುಡಿ ರವಿ, ಚಂದ್ರು, ಸತೀಶ್‌ಗೌಡ ಮತ್ತಿತರ ಮುಖಂಡರು, ಡೆಲಿಕೇಟ್ಗಳು ಶ್ರಮಿಸುತ್ತಿದ್ದಾರೆ.

ಶಾಸಕರ ನಿರ್ದೇಶನದಂತೆ ಕಾರಣಾಂತರಗಳಿಂದ ಕಾಂಗ್ರೆಸ್ ಪಕ್ಷದವರಾದ ಮನುಗನಹಳ್ಳಿ ಮಾದಪ್ಪ ಮತ್ತು ಬಡಗಲಪುರ ಶಿವನಂಜೇಗೌಡ ಇಬರೂ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೂ ಇವರು ಕೂಡ ಶಾಸಕರಿಗೆ ಮತದಾನ ಮಾಡಲಿದ್ದಾರೆ ಎನ್ನಲಾಗಿದೆ. ಗುಂಡತ್ತೂರು ಪ್ರಕಾಶ್ ಲಕ್ಷ್ಮೀಪ್ರಸಾದ್ ಜಾ.ದಳ ಮತ್ತು ಬಿಜೆಪಿ ಮೈತ್ರಿ ಪಕ್ಷದ ಬೆಂಬಲಿತರಾಗಿ ಅಂತರಸಂತೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಡೆಲಿಕೇಟ್ ಆಗಿ ಪ್ರಪ್ರಥಮವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

ಚುನಾವಣೆಯಲ್ಲಿ ಶಾಸಕರಿಗೆ ಪೈಪೋಟಿ ನೀಡಲು ತಮ್ಮದೇ ಕಾರ್ಯತಂತ್ರಗಳನ್ನು ರೂಪಿಸಿಕೊಂಡು ಅಧಿಕೃತವಾಗಿ ಐವರು ಡೆಲಿಗೇಟ್ ಗಳನ್ನು ತಮ್ಮ ಬೆಂಬಲಕ್ಕೆ ಇಟ್ಟುಕೊಂಡು ಮತ್ತೆ ಹಲವರನ್ನು ಸೆಳೆಯಲು ತೆರೆ ಮೆರೆಯಲ್ಲಿ ಪ್ರಯತ್ನಿಸುತಿದ್ದಾರೆ. ಹಲವು ವರ್ಷಗಳಿಂದ ಇವರ ಬಣದವರನ್ನೇ ತಾಲ್ಲೂಕಿನಲ್ಲಿ ನಿರ್ದೇಶಕರನ್ನಾಗಿ ಆಯ್ಕೆ ಮಾಡಿಕೊಂಡು ಬರುತ್ತಿದ್ದು, ಕ್ಷೇತ್ರವನ್ನು ಭದ್ರಕೋಟೆಯನ್ನಾಗಿ ಉಳಿಸಿಕೊಳ್ಳಬೇಕೆಂಬ ಛಲದಿಂದ ಶಾಸಕರಾದ ಜಿ.ಡಿ.ಹರೀಶ್ ಗೌಡ, ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ, ಮುಖಂಡರಾದ ಕೆ.ಎಸ್.ಗೌಡ್ರು, ಹರೀಶ್ ಗೌಡ, ಗುಂಡತ್ತೂರು ಮಹೇಶ, ಕರವೇ ನಟರಾಜ್, ಬೆಳಗನಹಳ್ಳಿ ಶಿವರಾಜ್, ಪ್ರಕಾಶ್, ಸಿರಿ ಹೊಸಮಾಳ, ಶಿವರಾಜ್, ವಕೀಲ ರವಿಕುಮಾರ್, ಮಟಕೆರೆ ರಾಜೇಶ್, ಯೋಗೇಶ್, ಸೋಮ ಶೇಖರ್, ಮಾಯಿ ಮತ್ತಿತರ ಮುಖಂಡರು, ಡೆಲಿಗೇಟ್‌ಗಳು ಕೆಲಸ ನಿರ್ವಹಿಸುತ್ತಿದ್ದಾರೆ.

ಒ ಟ್ಟಾರೆ ಜೂ.೨೬ರಂದು ನಡೆಯುವ ಚುನಾವಣೆಯಲ್ಲಿ ಕೋಟೆ ಕ್ಷೇತ್ರದ ಮತದಾರರು ಯಾವ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

” ಜನತೆ ಈಗ ನನ್ನನ್ನು ಶಾಸಕನನ್ನಾಗಿ ಮಾಡಿ ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಮಾಡಲು ಅವಕಾಶ ನೀಡಿದ್ದಾರೆ. ಅದೇ ರೀತಿ ರೈತರ ಅಭಿವೃದ್ಧಿಗಾಗಿ ಸಹಕಾರ ಕ್ಷೇತ್ರದಲ್ಲಿ ಕೆಲಸ ಮಾಡಬೇಕೆಂದು ಅಗತ್ಯ ಸಹಕಾರ ನೀಡಿರುವುದರಿಂದ ಅಧಿಕ ಮತಗಳಿಂದ ಜಯ ಸಾಧಿಸುತ್ತೇನೆ.”

-ಅನಿಲ್ ಚಿಕ್ಕಮಾದು, ಶಾಸಕ

” ಕ್ಷೇತ್ರದ ಶಾಸಕರಿಗೆ ಪ್ರತಿಸ್ಪರ್ಧಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಸಿಕ್ಕಿದೆ. ರೈತನಾಗಿರುವುದರಿಂದ ನನಗೆ ಎಲ್ಲರ ಉತ್ತಮ ಬೆಂಬಲ ದೊರಕಿದೆ. ಗೆದ್ದೇ ಗೆಲ್ಲುತ್ತೇನೆ ಎಂಬ ಪೂರ್ಣ ವಿಶ್ವಾಸ ನನಗಿದೆ.”

-ಗುಂಡತ್ತೂರು ಪ್ರಕಾಶ್ ಲಕ್ಷ್ಮೀ ಪ್ರಸಾದ್

ಆಂದೋಲನ ಡೆಸ್ಕ್

Recent Posts

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…

9 hours ago

ಹನೂರು: ಶ್ರೀರಂಗನಾಥಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಅನುಮತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…

10 hours ago

ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾಗಾಂಧಿ ಮನೆಗೆ ವಾಪಸ್‌

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…

10 hours ago

ಇನ್ನೊಂದು ವಾರದೊಳಗೆ ನೀಟ್-ಯುಜಿ ಪರೀಕ್ಷೆ ದಿನಾಂಕ ಘೋಷಣೆ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…

11 hours ago

ಸದ್ಯಕ್ಕೆ ಬಸ್‌ ಪ್ರಯಾಣ ದರ ಏರಿಕೆ ಮಾಡುವ ಚಿಂತನೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ…

11 hours ago

ನೀಟ್‌ ಪರೀಕ್ಷೆ ರದ್ದು: ಕೇಂದ್ರದ ವಿರುದ್ಧ ಮೈಸೂರು ಯೂತ್‌ ಕಾಂಗ್ರೆಸ್‌ ಪ್ರತಿಭಟನೆ

ಮೈಸೂರು: ನೀಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ…

11 hours ago