Andolana originals

300 ಸಿಎ ನಿವೇಶನಗಳ ಹಂಚಿಕೆಗೆ ಎಂಡಿಎ ನಿರ್ಧಾರ

ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ 

ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಖಾಸಗಿ ಸಂಸ್ಥೆಗಳಿಗೆ ೩೦೦ ನಾಗರಿಕ ನಿವೇಶನಗಳನ್ನು (ಸಿಎ) ಹಂಚಿಕೆ ಮಾಡಲು ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನ ಮಾಡಲಾಯಿತು. ಎಂಡಿಎ ಸಭಾಂಗಣದಲ್ಲಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿದ ಬಳಿಕ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲು ನಿರ್ಧರಿಸಲಾಯಿತು.

ನಾಗರಿಕ ನಿವೇಶನಗಳ ಹಂಚಿಕೆಗೆ ಹಲವಾರು ಅರ್ಜಿಗಳು ಬಂದಿದ್ದರೂ ಹಂಚಿಕೆ ಮಾಡಲು ಸಾಧ್ಯವಾಗಿಲ್ಲ. ಸಿಎ ನಿವೇಶನ ಮಂಜೂರು ಮಾಡುವಂತೆ ಅನೇಕ ಸಂಸ್ಥೆಗಳು ಸರ್ಕಾರದ ಮೇಲೆ ಒತ್ತಡ ಹೇರುತ್ತಿವೆ. ಸಾರ್ವಜನಿಕ ಸಮಾರಂಭಗಳಲ್ಲಿ ಸಿಎಂ, ಸಚಿವರು ಪಾಲ್ಗೊಳ್ಳುವಾಗಲೂ ಇದೇ ಬೇಡಿಕೆ ಬರುತ್ತಿತ್ತು. ಇದನ್ನು ಮನಗಂಡ ಎಂಡಿಎ ವಿವಿಧ ಬಡಾವಣೆಗಳಲ್ಲಿರುವ ಸಿಎ ನಿವೇಶನಗಳನ್ನು ಹಂಚಿಕೆ ಮಾಡಲು ತೀರ್ಮಾನಿಸಿ ಸಂಘ- ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲು ಬಯಸಿದೆ. ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸುವ ಜತೆಗೆ, ಸಿಎ ನಿವೇಶನ ಮಂಜೂರು ಮಾಡಲು ವಿಧಿಸಲಾಗುವ ಷರತ್ತುಗಳನ್ನು ಪ್ರಕಟಿಸಲಾಗುತ್ತದೆ. ಈಗಾಗಲೇ ಹಲವು ವರ್ಷಗಳಿಂದ ಸಿಎ ನಿವೇಶನಕ್ಕೆ ಅರ್ಜಿ ಸಲ್ಲಿಸಿರುವ ಸಂಘ-ಸಂಸ್ಥೆಗಳಿಗೆ ಹಿರಿತನದ ಆಧಾರದ ಮೇಲೆ ಮಂಜೂರು ಮಾಡಲಾಗುತ್ತದೆ.

ಕ್ಷಿಪ್ರ ಕಾರ್ಯಪಡೆ ರಚನೆ: ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡು ಕ್ಷಿಪ್ರ ಕಾರ್ಯಪಡೆ ರಚನೆ ಮಾಡಲು ಒಪ್ಪಿಗೆ ನೀಡಲಾಯಿತು. ಎಂಡಿಎ ವ್ಯಾಪ್ತಿಯಲ್ಲಿ ಅನಧಿಕೃತ ಚಟುವಟಿಕೆಗಳು ಹಾಗೂ ಅತಿಕ್ರಮ ಪ್ರವೇಶಗಳನ್ನು ತಡೆಗಟ್ಟಿ ಪ್ರಾಧಿಕಾರದ ಆಸ್ತಿ ಸಂರಕ್ಷಣೆ ಮಾಡುವುದು, ಅನಧಿಕೃತ ಚಟುವಟಿಕೆಗಳು ಹಾಗೂ ಅತಿಕ್ರಮ ಪ್ರವೇಶ ತಡೆಗಳಂತಹ ತುರ್ತು ಪರಿಸ್ಥಿತಿಯಲ್ಲಿ ಪ್ರಾಧಿಕಾರದ ಅಧಿಕಾರಿಗಳು, ನೌಕರರಿಗೆ ಸಹಾಯವಾಗುವಂತೆ ಹೊರಗುತ್ತಿಗೆ ಆಧಾರದ ಮೇಲೆ ಕ್ಷಿಪ್ರ ಕಾರ್ಯಪಡೆ ಕೆಲಸ ಮಾಡಲಿದೆ.

ನಿವೃತ್ತ ಡಿವೈಎಸ್‌ಪಿ ಹಂತದ ನಾಲ್ವರು ಸೇರಿದಂತೆ ನಿವೃತ್ತ ಪೊಲೀಸರನ್ನು ನೇಮಿಸಿಕೊಳ್ಳಲಾಗುತ್ತದೆ. ಈ ತಂಡಕ್ಕೆ ಬೇಕಾದ ವೇತನ ಮತ್ತಿತರ ಸೌಲಭ್ಯಗಳನ್ನು ಎಂಡಿಎದಿಂದ ಪಾವತಿಸುವುದಕ್ಕೂ ಒಪ್ಪಿಗೆ ನೀಡಲಾಯಿತು. ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್, ಕಾರ್ಯದರ್ಶಿ ಜಾನ್ಸನ್, ನಗರಾಭಿವೃದ್ಧಿ ಇಲಾಖೆ ಜಂಟಿ ಕಾರ್ಯದರ್ಶಿ ಕೃಷ್ಣಮೂರ್ತಿ, ಸೆಸ್ಕ್ ಮುಖ್ಯ ಅಭಿಯಂತರ ಮೃತ್ಯುಂಜಯಪ್ಪ, ಎಂಡಿಎ ಅಧಿಕ್ಷಕ ಅಭಿಯಂತರರು, ನಗರ ಯೋಜಕ ಸದಸ್ಯರು, ಕರ್ನಾಟಕ ನಗರ ನೀರು ಸರಬರಾಜು ಒಳಚರಂಡಿ ಮಂಡಳಿ ಅಧಿಕ್ಷಕ ಅಭಿಯಂತರರು ಹಾಜರಿದ್ದರು.

ಪ್ಯಾನಲ್ ವಕೀಲರನ್ನು ಬದಲಿಸಲು ನಿರ್ಧಾರ: 

ಮೈಸೂರು: ಎಂಡಿಎ ಆಸ್ತಿ ವಿಚಾರ, ವಿವಾದ ಸೇರಿದಂತೆ ಇನ್ನಿತರೆ ಪ್ರಕರಣಗಳಲ್ಲಿ ಎಂಡಿಎ ಪರವಾಗಿ ವಾದ ಮಾಡುತ್ತಿರುವ ಪ್ಯಾನಲ್ ವಕೀಲರನ್ನು ಬದಲಿಸಿ ಹೊಸದಾಗಿ ವಕೀಲರನ್ನು ನಿಯೋಜಿಸಲು ಸಭೆಯಲ್ಲಿ ಸಮ್ಮತಿಸಲಾಯಿತು. ಹೈ ಕೋರ್ಟ್, ಸುಪ್ರೀಂ ಕೋಟ್ನಲ್ಲಿರುವಂತಹ ಪ್ರಕರಣಗಳನ್ನು ಇತ್ಯರ್ಥಪಡಿಸುವುದು, ಎಂಡಿಎ ಪರವಾದ ರೀತಿಯಲ್ಲಿ ತೀರ್ಪು ಬರುವಂತೆ ಸಮರ್ಥವಾಗಿ ವಾದ ಮಂಡಿಸುವಂತಹ ನುರಿತ ಪ್ಯಾನಲ್ ವಕೀಲರನ್ನು ನೇಮಕ ಮಾಡುವುದಕ್ಕೆ ವಿಸ್ತೃತ ಚರ್ಚೆ ನಡೆದ ಬಳಿಕ ಸಭೆ ಒಪ್ಪಿಗೆ ನೀಡಿತು. ಸಭೆಯಲ್ಲಿ ಆಯುಕ್ತ ಕೆ.ಆರ್. ರಕ್ಷಿತ್ ಮಂಡಿಸಿದ ವಿಷಯಗಳಿಗೆ ಒಪ್ಪಿಗೆ ನೀಡಲಾಯಿತು. ಹೊಸ ಖಾಸಗಿ ಬಡಾವಣೆಗಳ ರಚನೆ, ನಕ್ಷೆ ಅನುಮೋದನೆ ಸೇರಿದಂತೆ ಬೇರೆ ಯಾವುದೇ ವಿಷಯಗಳನ್ನು ಸಭೆಯಲ್ಲಿ ಮಂಡಿಸಲಿಲ್ಲ.

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

7 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

7 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

7 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

8 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

8 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

8 hours ago