Andolana originals

ಕಲಿಕಾ ಓಟದಲ್ಲಿ ಮುಂದಿರುವ ಮೇದನಿ ಸರ್ಕಾರಿ ಶಾಲೆ

ಟಿ.ಎ.ಸಾದಿಕ್ ಪಾಷಾ

ಬೆಳಿಗ್ಗೆ ೮.೩೦ಕ್ಕೇ ಪಾಠ ಪ್ರವಚನ ಆರಂಭ; ಫಲಿತಾಂಶ ಸುಧಾರಣೆಗೆ ಶಿಕ್ಷಕರ ಶ್ರಮ

ತಲಕಾಡು: ಹೋಬಳಿಯ ಮೇದನಿ ಸರ್ಕಾರಿ ಪ್ರೌಢಶಾಲೆ ಕಲಿಕಾ ಓಟದಲ್ಲಿ ಮುಂದಿದೆ. ಸಾಮಾನ್ಯವಾಗಿ ಸರ್ಕಾರಿ ಶಾಲೆಗಳು ಬೆಳಿಗ್ಗೆ ೧೦ರಿಂದ ಸಂಜೆ ೪.೩೦ರವರೆವಿಗೆ ಪಾಠ ಪ್ರವಚನ ಮಾಡುವುದು ವಾಡಿಕೆ. ಆದರೆ ಮೇದನಿ ಸರ್ಕಾರಿ ಪ್ರೌಢಶಾಲೆ ಬೆಳಿಗ್ಗೆ ೮.೩೦ಕ್ಕೆ ಬಾಗಿಲು ತೆಗೆದು ಸಂಜೆ ೫.೩೦ರವರೆಗೂ ಕಾರ್ಯ ನಿರ್ವಹಣೆ ಮಾಡುತ್ತಿರುವುದರಿಂದ ಸಾರ್ವಜನಿಕರ ಗಮನ ಸೆಳೆಯುತ್ತಿದೆ.

ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಧಾರಣೆ ಕಾಣಲು ಇಡೀ ಶಾಲೆಯ ಶಿಕ್ಷಕರು ಒಂದು ತಂಡವಾಗಿ ಕೆಲಸ ಮಾಡುತ್ತಿದ್ದಾರೆ. ಶಿಕ್ಷಣ ಇಲಾಖೆಯ ೨೯ ಅಂಶಗಳ ಕಾರ್ಯಕ್ರಮವನ್ನು ಪ್ರಾಮಾಣಿಕವಾಗಿ ಶಾಲೆಯಲ್ಲಿ ಅಳವಡಿಸಿಕೊಂಡಿರುವುದಕ್ಕೆ ಹೊಸದೊಂದು ಮನ್ವಂತರದ ಫಲಿತಾಂಶವನ್ನು ಮೇದನಿ ಗ್ರಾಮಸ್ಥರು ನಿರೀಕ್ಷೆ ಮಾಡುತ್ತಿದ್ದಾರೆ.

ಈ ಹಿಂದೆಯೂ ಉತ್ತಮ ಶಾಲೆಯೆಂದು ಮೇದನಿ ಪ್ರೌಢಶಾಲೆ ಹೆಸರು ಮಾಡಿತ್ತು. ಫಲಿತಾಂಶ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ರಾಷ್ಟ್ರಮಟ್ಟದಲ್ಲಿ ಈ ಶಾಲೆಯ ವಿದ್ಯಾರ್ಥಿಗಳು ಹೆಸರು ಮಾಡಿದ್ದರು. ಕಳೆದ ವರ್ಷ ರಾಷ್ಟ್ರಮಟ್ಟದ ಥ್ರೋ ಬಾಲ್ನಲ್ಲಿ ಪ್ರಶಸ್ತಿ ಬಾಚಿಕೊಂಡ ಈ ಶಾಲೆಯ ವಿದ್ಯಾರ್ಥಿಗಳು ಬದಲಾದ ಸರ್ಕಾರದ ನಿಲುವಿಗೆ ಹೊಂದಿಕೊಳ್ಳಲು ಎಸ್‌ಎಸ್ ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಹೋರಾಟ ಮಾಡಿ ಶೇ.೬೦ರಷ್ಟಿನ ಗುರಿ ಮಾತ್ರ ತಲುಪಿತ್ತು.

ಈಗ ಮುಂದಿನ ಪರೀಕ್ಷೆಯಲ್ಲಿ ಇದರ ಫಲಿತಾಂಶ ಮತ್ತಷ್ಟು ಸುಧಾರಣೆ ಮಾಡಲೇ ಬೇಕೆಂದು ಮಾಡಿರುವ ದೃಢಸಂಕಲ್ಪದ ಪ್ರತಿಫಲ ಎಂಬಂತೆ ೨ ತಾಸುಗಳ ಕಾಲ೧೦ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಶೇಷ ಬೋಧನೆಗೆ ಮುಂದಾಗಿದೆ. ೮ ಮತ್ತು ೯ನೇ ತರಗತಿಯ ವಿದ್ಯಾರ್ಥಿಗಳಿಗೂ ಕ್ರೀಡಾ ಚಟುವಟಿಕೆಗಳನ್ನು ಮೇದನಿ ಶಾಲೆ ಹಮ್ಮಿಕೊಂಡು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

” ಈ ಶಾಲೆಯ ಫಲಿತಾಂಶ ಸುಧಾರಣೆಗೆ ಶಾಲಾ ಶಿಕ್ಷಕರಾದ ಹರಿಕುಮಾರ್, ಮಾದಲಾಂಬಿಕಾ, ಮಹಾದೇವ ಪ್ರಸಾದ್, ಸುರೇಶ್ ಕುಮಾರ್, ಕಾವ್ಯ, ಸಿದ್ದೇಶ್, ಶಿಲ್ಪಶ್ರೀ ಅವರ ಜೊತೆಗೆ ಮೇದನಿ ಗ್ರಾಮಸ್ಥರು, ಎಸ್‌ಡಿಎಂಸಿ ಆಡಳಿತ ಮಂಡಳಿಯ ಸದಸ್ಯರು ಹೆಚ್ಚು ಆಸಕ್ತಿ ವಹಿಸಿದ್ದಾರೆ.”

-ಶಿವನಂಜು, ಮುಖ್ಯ ಶಿಕ್ಷಕ

” ಫಲಿತಾಂಶ ಸುಧಾರಣೆಗೆ ಬಿಇಒ ಶಿವಮೂರ್ತಿ ಅವರ ಮಾರ್ಗದರ್ಶನದಲ್ಲಿ ಮುಖ್ಯಶಿಕ್ಷಕ ಶಿವನಂಜುರವರು ಬಹಳ ಶ್ರಮ ಪಡುತ್ತಿದ್ದಾರೆ. ಗ್ರಾಮದಲ್ಲಿ ವ್ಯಾಸಂಗ ಮಾಡಿದ ಹಳೇ ವಿದ್ಯಾರ್ಥಿಗಳು ಮತ್ತು ವಿವಿಧೆಡೆ ನೌಕರಿ ಮಾಡುತ್ತಿರುವ ಜನರು ಸಲಹೆ, ಸಹಾಯ ನೀಡುವಂತಾಗಲಿ.”

-ಕುಮಾರ್, ಎಸ್‌ಡಿಎಂಸಿ ಅಧ್ಯಕ್ಷರು

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

2 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

2 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

5 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

5 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

5 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

6 hours ago