Andolana originals

ಕಲಿಕಾ ಓಟದಲ್ಲಿ ಮುಂದಿರುವ ಮೇದನಿ ಸರ್ಕಾರಿ ಶಾಲೆ

ಟಿ.ಎ.ಸಾದಿಕ್ ಪಾಷಾ

ಬೆಳಿಗ್ಗೆ ೮.೩೦ಕ್ಕೇ ಪಾಠ ಪ್ರವಚನ ಆರಂಭ; ಫಲಿತಾಂಶ ಸುಧಾರಣೆಗೆ ಶಿಕ್ಷಕರ ಶ್ರಮ

ತಲಕಾಡು: ಹೋಬಳಿಯ ಮೇದನಿ ಸರ್ಕಾರಿ ಪ್ರೌಢಶಾಲೆ ಕಲಿಕಾ ಓಟದಲ್ಲಿ ಮುಂದಿದೆ. ಸಾಮಾನ್ಯವಾಗಿ ಸರ್ಕಾರಿ ಶಾಲೆಗಳು ಬೆಳಿಗ್ಗೆ ೧೦ರಿಂದ ಸಂಜೆ ೪.೩೦ರವರೆವಿಗೆ ಪಾಠ ಪ್ರವಚನ ಮಾಡುವುದು ವಾಡಿಕೆ. ಆದರೆ ಮೇದನಿ ಸರ್ಕಾರಿ ಪ್ರೌಢಶಾಲೆ ಬೆಳಿಗ್ಗೆ ೮.೩೦ಕ್ಕೆ ಬಾಗಿಲು ತೆಗೆದು ಸಂಜೆ ೫.೩೦ರವರೆಗೂ ಕಾರ್ಯ ನಿರ್ವಹಣೆ ಮಾಡುತ್ತಿರುವುದರಿಂದ ಸಾರ್ವಜನಿಕರ ಗಮನ ಸೆಳೆಯುತ್ತಿದೆ.

ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಧಾರಣೆ ಕಾಣಲು ಇಡೀ ಶಾಲೆಯ ಶಿಕ್ಷಕರು ಒಂದು ತಂಡವಾಗಿ ಕೆಲಸ ಮಾಡುತ್ತಿದ್ದಾರೆ. ಶಿಕ್ಷಣ ಇಲಾಖೆಯ ೨೯ ಅಂಶಗಳ ಕಾರ್ಯಕ್ರಮವನ್ನು ಪ್ರಾಮಾಣಿಕವಾಗಿ ಶಾಲೆಯಲ್ಲಿ ಅಳವಡಿಸಿಕೊಂಡಿರುವುದಕ್ಕೆ ಹೊಸದೊಂದು ಮನ್ವಂತರದ ಫಲಿತಾಂಶವನ್ನು ಮೇದನಿ ಗ್ರಾಮಸ್ಥರು ನಿರೀಕ್ಷೆ ಮಾಡುತ್ತಿದ್ದಾರೆ.

ಈ ಹಿಂದೆಯೂ ಉತ್ತಮ ಶಾಲೆಯೆಂದು ಮೇದನಿ ಪ್ರೌಢಶಾಲೆ ಹೆಸರು ಮಾಡಿತ್ತು. ಫಲಿತಾಂಶ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ರಾಷ್ಟ್ರಮಟ್ಟದಲ್ಲಿ ಈ ಶಾಲೆಯ ವಿದ್ಯಾರ್ಥಿಗಳು ಹೆಸರು ಮಾಡಿದ್ದರು. ಕಳೆದ ವರ್ಷ ರಾಷ್ಟ್ರಮಟ್ಟದ ಥ್ರೋ ಬಾಲ್ನಲ್ಲಿ ಪ್ರಶಸ್ತಿ ಬಾಚಿಕೊಂಡ ಈ ಶಾಲೆಯ ವಿದ್ಯಾರ್ಥಿಗಳು ಬದಲಾದ ಸರ್ಕಾರದ ನಿಲುವಿಗೆ ಹೊಂದಿಕೊಳ್ಳಲು ಎಸ್‌ಎಸ್ ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಹೋರಾಟ ಮಾಡಿ ಶೇ.೬೦ರಷ್ಟಿನ ಗುರಿ ಮಾತ್ರ ತಲುಪಿತ್ತು.

ಈಗ ಮುಂದಿನ ಪರೀಕ್ಷೆಯಲ್ಲಿ ಇದರ ಫಲಿತಾಂಶ ಮತ್ತಷ್ಟು ಸುಧಾರಣೆ ಮಾಡಲೇ ಬೇಕೆಂದು ಮಾಡಿರುವ ದೃಢಸಂಕಲ್ಪದ ಪ್ರತಿಫಲ ಎಂಬಂತೆ ೨ ತಾಸುಗಳ ಕಾಲ೧೦ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಶೇಷ ಬೋಧನೆಗೆ ಮುಂದಾಗಿದೆ. ೮ ಮತ್ತು ೯ನೇ ತರಗತಿಯ ವಿದ್ಯಾರ್ಥಿಗಳಿಗೂ ಕ್ರೀಡಾ ಚಟುವಟಿಕೆಗಳನ್ನು ಮೇದನಿ ಶಾಲೆ ಹಮ್ಮಿಕೊಂಡು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

” ಈ ಶಾಲೆಯ ಫಲಿತಾಂಶ ಸುಧಾರಣೆಗೆ ಶಾಲಾ ಶಿಕ್ಷಕರಾದ ಹರಿಕುಮಾರ್, ಮಾದಲಾಂಬಿಕಾ, ಮಹಾದೇವ ಪ್ರಸಾದ್, ಸುರೇಶ್ ಕುಮಾರ್, ಕಾವ್ಯ, ಸಿದ್ದೇಶ್, ಶಿಲ್ಪಶ್ರೀ ಅವರ ಜೊತೆಗೆ ಮೇದನಿ ಗ್ರಾಮಸ್ಥರು, ಎಸ್‌ಡಿಎಂಸಿ ಆಡಳಿತ ಮಂಡಳಿಯ ಸದಸ್ಯರು ಹೆಚ್ಚು ಆಸಕ್ತಿ ವಹಿಸಿದ್ದಾರೆ.”

-ಶಿವನಂಜು, ಮುಖ್ಯ ಶಿಕ್ಷಕ

” ಫಲಿತಾಂಶ ಸುಧಾರಣೆಗೆ ಬಿಇಒ ಶಿವಮೂರ್ತಿ ಅವರ ಮಾರ್ಗದರ್ಶನದಲ್ಲಿ ಮುಖ್ಯಶಿಕ್ಷಕ ಶಿವನಂಜುರವರು ಬಹಳ ಶ್ರಮ ಪಡುತ್ತಿದ್ದಾರೆ. ಗ್ರಾಮದಲ್ಲಿ ವ್ಯಾಸಂಗ ಮಾಡಿದ ಹಳೇ ವಿದ್ಯಾರ್ಥಿಗಳು ಮತ್ತು ವಿವಿಧೆಡೆ ನೌಕರಿ ಮಾಡುತ್ತಿರುವ ಜನರು ಸಲಹೆ, ಸಹಾಯ ನೀಡುವಂತಾಗಲಿ.”

-ಕುಮಾರ್, ಎಸ್‌ಡಿಎಂಸಿ ಅಧ್ಯಕ್ಷರು

ಆಂದೋಲನ ಡೆಸ್ಕ್

Recent Posts

ಮೈಸೂರು ಜಿಲ್ಲೆಯಲ್ಲಿ ಪಶು ಪಾಲನೆಗೆ ಪಶು ವೈದ್ಯರ ಬರ

ಹೆಚ್.ಎಸ್. ದಿನೇಶ್‌ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು…

4 mins ago

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

10 hours ago

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…

11 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

11 hours ago

ಎಂ.ಬಿ.ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು

ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…

12 hours ago