Andolana originals

ಕಲಿಕಾ ಓಟದಲ್ಲಿ ಮುಂದಿರುವ ಮೇದನಿ ಸರ್ಕಾರಿ ಶಾಲೆ

ಟಿ.ಎ.ಸಾದಿಕ್ ಪಾಷಾ

ಬೆಳಿಗ್ಗೆ ೮.೩೦ಕ್ಕೇ ಪಾಠ ಪ್ರವಚನ ಆರಂಭ; ಫಲಿತಾಂಶ ಸುಧಾರಣೆಗೆ ಶಿಕ್ಷಕರ ಶ್ರಮ

ತಲಕಾಡು: ಹೋಬಳಿಯ ಮೇದನಿ ಸರ್ಕಾರಿ ಪ್ರೌಢಶಾಲೆ ಕಲಿಕಾ ಓಟದಲ್ಲಿ ಮುಂದಿದೆ. ಸಾಮಾನ್ಯವಾಗಿ ಸರ್ಕಾರಿ ಶಾಲೆಗಳು ಬೆಳಿಗ್ಗೆ ೧೦ರಿಂದ ಸಂಜೆ ೪.೩೦ರವರೆವಿಗೆ ಪಾಠ ಪ್ರವಚನ ಮಾಡುವುದು ವಾಡಿಕೆ. ಆದರೆ ಮೇದನಿ ಸರ್ಕಾರಿ ಪ್ರೌಢಶಾಲೆ ಬೆಳಿಗ್ಗೆ ೮.೩೦ಕ್ಕೆ ಬಾಗಿಲು ತೆಗೆದು ಸಂಜೆ ೫.೩೦ರವರೆಗೂ ಕಾರ್ಯ ನಿರ್ವಹಣೆ ಮಾಡುತ್ತಿರುವುದರಿಂದ ಸಾರ್ವಜನಿಕರ ಗಮನ ಸೆಳೆಯುತ್ತಿದೆ.

ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಧಾರಣೆ ಕಾಣಲು ಇಡೀ ಶಾಲೆಯ ಶಿಕ್ಷಕರು ಒಂದು ತಂಡವಾಗಿ ಕೆಲಸ ಮಾಡುತ್ತಿದ್ದಾರೆ. ಶಿಕ್ಷಣ ಇಲಾಖೆಯ ೨೯ ಅಂಶಗಳ ಕಾರ್ಯಕ್ರಮವನ್ನು ಪ್ರಾಮಾಣಿಕವಾಗಿ ಶಾಲೆಯಲ್ಲಿ ಅಳವಡಿಸಿಕೊಂಡಿರುವುದಕ್ಕೆ ಹೊಸದೊಂದು ಮನ್ವಂತರದ ಫಲಿತಾಂಶವನ್ನು ಮೇದನಿ ಗ್ರಾಮಸ್ಥರು ನಿರೀಕ್ಷೆ ಮಾಡುತ್ತಿದ್ದಾರೆ.

ಈ ಹಿಂದೆಯೂ ಉತ್ತಮ ಶಾಲೆಯೆಂದು ಮೇದನಿ ಪ್ರೌಢಶಾಲೆ ಹೆಸರು ಮಾಡಿತ್ತು. ಫಲಿತಾಂಶ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ರಾಷ್ಟ್ರಮಟ್ಟದಲ್ಲಿ ಈ ಶಾಲೆಯ ವಿದ್ಯಾರ್ಥಿಗಳು ಹೆಸರು ಮಾಡಿದ್ದರು. ಕಳೆದ ವರ್ಷ ರಾಷ್ಟ್ರಮಟ್ಟದ ಥ್ರೋ ಬಾಲ್ನಲ್ಲಿ ಪ್ರಶಸ್ತಿ ಬಾಚಿಕೊಂಡ ಈ ಶಾಲೆಯ ವಿದ್ಯಾರ್ಥಿಗಳು ಬದಲಾದ ಸರ್ಕಾರದ ನಿಲುವಿಗೆ ಹೊಂದಿಕೊಳ್ಳಲು ಎಸ್‌ಎಸ್ ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಹೋರಾಟ ಮಾಡಿ ಶೇ.೬೦ರಷ್ಟಿನ ಗುರಿ ಮಾತ್ರ ತಲುಪಿತ್ತು.

ಈಗ ಮುಂದಿನ ಪರೀಕ್ಷೆಯಲ್ಲಿ ಇದರ ಫಲಿತಾಂಶ ಮತ್ತಷ್ಟು ಸುಧಾರಣೆ ಮಾಡಲೇ ಬೇಕೆಂದು ಮಾಡಿರುವ ದೃಢಸಂಕಲ್ಪದ ಪ್ರತಿಫಲ ಎಂಬಂತೆ ೨ ತಾಸುಗಳ ಕಾಲ೧೦ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಶೇಷ ಬೋಧನೆಗೆ ಮುಂದಾಗಿದೆ. ೮ ಮತ್ತು ೯ನೇ ತರಗತಿಯ ವಿದ್ಯಾರ್ಥಿಗಳಿಗೂ ಕ್ರೀಡಾ ಚಟುವಟಿಕೆಗಳನ್ನು ಮೇದನಿ ಶಾಲೆ ಹಮ್ಮಿಕೊಂಡು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

” ಈ ಶಾಲೆಯ ಫಲಿತಾಂಶ ಸುಧಾರಣೆಗೆ ಶಾಲಾ ಶಿಕ್ಷಕರಾದ ಹರಿಕುಮಾರ್, ಮಾದಲಾಂಬಿಕಾ, ಮಹಾದೇವ ಪ್ರಸಾದ್, ಸುರೇಶ್ ಕುಮಾರ್, ಕಾವ್ಯ, ಸಿದ್ದೇಶ್, ಶಿಲ್ಪಶ್ರೀ ಅವರ ಜೊತೆಗೆ ಮೇದನಿ ಗ್ರಾಮಸ್ಥರು, ಎಸ್‌ಡಿಎಂಸಿ ಆಡಳಿತ ಮಂಡಳಿಯ ಸದಸ್ಯರು ಹೆಚ್ಚು ಆಸಕ್ತಿ ವಹಿಸಿದ್ದಾರೆ.”

-ಶಿವನಂಜು, ಮುಖ್ಯ ಶಿಕ್ಷಕ

” ಫಲಿತಾಂಶ ಸುಧಾರಣೆಗೆ ಬಿಇಒ ಶಿವಮೂರ್ತಿ ಅವರ ಮಾರ್ಗದರ್ಶನದಲ್ಲಿ ಮುಖ್ಯಶಿಕ್ಷಕ ಶಿವನಂಜುರವರು ಬಹಳ ಶ್ರಮ ಪಡುತ್ತಿದ್ದಾರೆ. ಗ್ರಾಮದಲ್ಲಿ ವ್ಯಾಸಂಗ ಮಾಡಿದ ಹಳೇ ವಿದ್ಯಾರ್ಥಿಗಳು ಮತ್ತು ವಿವಿಧೆಡೆ ನೌಕರಿ ಮಾಡುತ್ತಿರುವ ಜನರು ಸಲಹೆ, ಸಹಾಯ ನೀಡುವಂತಾಗಲಿ.”

-ಕುಮಾರ್, ಎಸ್‌ಡಿಎಂಸಿ ಅಧ್ಯಕ್ಷರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

3 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

3 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

3 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

6 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

6 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

6 hours ago