Andolana originals

ಮೇಲುಕೋಟೆ: ಪ್ರವಾಸಿಗರಿಗೆ ತ್ಯಾಜ್ಯದ ದರ್ಶನ

ನಿರ್ವಹಣೆ ಮಾಡದ ಗ್ರಾಪಂ ವಿರುದ್ಧ ಸಾರ್ವಜನಿಕರು ಅಸಮಾಧಾನ 

ಮೇಲುಕೋಟೆ: ಅಶುಚಿತ್ವದಿಂದ ಗಬ್ಬೆದ್ದು ನಾರುತ್ತಿರುವ ಮೇಲುಕೋಟೆಗೆ ಸ್ವಚ್ಛತೆಯ ಕಾಯಕಲ್ಪ ಬೇಕಿದೆ. ಚೆಲುವನ ದರ್ಶನಕ್ಕೆ ಬರುವ ಭಕ್ತರಿಗೆ ಅಶುಚಿತ್ವದ ದರ್ಶನವಾಗುತ್ತಿದ್ದು, ಬಂದವರು ಸರ್ಕಾರವನ್ನು ದೂರುತ್ತಿದ್ದಾರೆ. ಶುಚಿತ್ವದ ನಿರ್ವಹಣೆಗೆ ಶಾಶ್ವತ ವ್ಯವಸ್ಥೆ ಆಗಬೇಕಿದೆ.

ಮೇಲುಕೋಟೆಪ್ರವಾಸಿ ತಾಣವಾಗಿದ್ದರೂ ಈವರೆಗೆ ಸ್ವಚ್ಛತೆಯ ಕಡೆಗೆ ಹೆಚ್ಚು ನಿಗಾ ವಹಿಸಿಲ್ಲ. ಬೀದಿ ಬೀದಿಗಳ ಚರಂಡಿಗಳಲ್ಲಿ ತ್ಯಾಜ್ಯ ತುಂಬಿಕೊಂಡು ನೀರು ಸರಾಗವಾಗಿ ಹರಿಯದೆ ಗಬ್ಬೆದ್ದು ನಾರುತ್ತಿದೆ. ಪ್ರಮುಖ ಬೀದಿಗಳ ಚರಂಡಿಗಳಲ್ಲಿ ಗಿಡ-ಗಂಟಿಗಳು ಬೆಳೆದಿದ್ದು, ಸೊಳ್ಳೆಗಳ ಆವಾಸ ಸ್ಥಾನವಾಗಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ.

ಚೆಲುವನಾರಾಯಣಸ್ವಾಮಿ ಮತ್ತು ಯೋಗಾನರಸಿಂಹಸ್ವಾಮಿ ದೇವಾಲಯಗಳ ಬಳಿ ತ್ಯಾಜ್ಯ ಎಲ್ಲೆಂದರಲ್ಲಿ ಹರಡಿದೆ. ಗ್ರಾಮ ಪಂಚಾಯಿತಿಗೆ ಹೋಗುವ ದಾರಿಯಲ್ಲೇ ಕಸದ ರಾಶಿ ಬಿದ್ದಿದ್ದು, ಎಲ್ಲರನ್ನು ಸ್ವಾಗತಿಸುವಂತಿದೆ. ಗಾಂದಿ ಗ್ರಾಮ ಪುರಸ್ಕಾರ ಪಡೆದ ಮೇಲುಕೋಟೆ ಪಂಚಾಯಿತಿ ಸ್ವಚ್ಛತೆಗೆ ಸಮರ್ಪಕ ವ್ಯವಸ್ಥೆ ಮಾಡದಿರುವುದು ಇಂತಹ ಅವ್ಯವಸ್ಥೆಗೆ ಕಾರಣವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ಇದನ್ನು ಓದಿ : ಬೆರಗು ಮೂಡಿಸುವ ಗ್ರಾಮೀಣಾಭಿವೃದ್ಧಿ ಮಳಿಗೆ

ಕ್ಷೇತ್ರಕ್ಕೆ ಬರುವ ಪ್ರವಾಸಿಗರ ವಾಹನಗಳಿಂದ ಶುಲ್ಕ ಪಡೆಯುವ ಗ್ರಾಮ ಪಂಚಾಯಿತಿ ವಾರ್ಷಿಕ ಲಕ್ಷಾಂತರ ರೂ. ಆದಾಯ ಗಳಿಸುತ್ತಿದ್ದರೂ ಸ್ವಚ್ಛತೆಯ ಕಡೆ ಗಮನಹರಿಸದಿರುವುದು ಬೇಸರದ ಸಂಗತಿ ಎಂದು ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೇಲುಕೋಟೆಯ ಸ್ವಚ್ಛತೆಗೆ ಮೇಲಧಿಕಾರಿಗಳು ಯೋಜನೆ ರೂಪಿಸಬೇಕು, ಸ್ಥಳೀಯ ಪೌರಕಾರ್ಮಿಕರಿಗೆ ಸೇವಾಭದ್ರತೆ ಒದಗಿಸಿ ಕೆಲಸಕ್ಕೆ ತಕ್ಕ ಸಂಭಾವನೆ ನೀಡುವ ಮೂಲಕ ಸ್ವಚ್ಛತೆಗೆ ಆದ್ಯತೆ ನೀಡಬೇಕಿದೆ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

” ಹಂಗಾಮಿ ಪೌರಕಾರ್ಮಿಕರಿಗೆ ಮನರೇಗ ಮೂಲಕ ಕೂಲಿ ನೀಡುತ್ತಿದ್ದರೂ ಸಮರ್ಪಕವಾಗಿ ಸ್ವಚ್ಛತಾಕಾರ್ಯ ನಿರ್ವಹಿಸುತ್ತಿರಲಿಲ್ಲ . ಇದೀಗ ಕೆಲಸಕ್ಕೆ ಬಾರದ ಕಾರಣ ಸ್ವಚ್ಛಮಾಡಲು ಬೇರೆ ಕಡೆಯಿಂದ ಪೌರಕಾರ್ಮಿಕರನ್ನು ಕರೆಸಲು ಮುಂದಾಗಿದ್ದೇವೆ. ಸ್ವಚ್ಛತೆಯನ್ನು ಸಮರ್ಪಕವಾಗಿ ನಿರ್ವಹಿಸಲು ಮೇಲಽಕಾರಿಗಳ ಅನುಮತಿ ಪಡೆದು ವಾರ್ಷಿಕ ಟೆಂಡರ್ ಕರೆಯಲಾಗುತ್ತದೆ.”

-ರಾಜೇಶ್ವರ್, ಮೇಲುಕೋಟೆ ಗ್ರಾಪಂ ಪಿಡಿಒ

” ಮೇಲುಕೋಟೆ ಚೆಲುವನಾರಾಯಣಸ್ವಾಮಿ ದರ್ಶನಕ್ಕೆ ಬಂದ ನಮಗೆ ಎಲ್ಲ ಕಡೆ ಕಸದ ರಾಶಿಯ ದರ್ಶನವಾಗುತ್ತಿದೆ. ವಾಹನಗಳಿಂದ ಶುಲ್ಕ ವಸೂಲಿ ಮಾಡುವ ಆಡಳಿತ ಅದೇ ಹಣದಲ್ಲಿ ಸ್ವಚ್ಛತೆ ನಿರ್ವಹಿಸಲು ಗಮನಹರಿಸಬೇಕು. ದೇವಾಲಯ ಮತ್ತು ಕಲ್ಯಾಣಿ ಹಾಗೂ ಬೆಟ್ಟದ ದೇವಾಲಯಗಳ ಬಳಿ ಸ್ವಚ್ಛತೆ ನಿರಂತರವಾಗಿ ನಿರ್ವಹಣೆ ಮಾಡಬೇಕಾದ ಅಗತ್ಯವಿದೆ.”

-ಸತೀಶ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

2 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

2 hours ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

2 hours ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

2 hours ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

2 hours ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

3 hours ago