Andolana originals

3 ತಿಂಗಳಿಂದ ಬಾರದ ಮಾಸಾಶನ ; ಬಡಜನರು ಕಂಗಾಲು

ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ

ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ ಸೇರಿದಂತೆ ಅನೇಕರಿಗೆ ಪ್ರತಿ ತಿಂಗಳು ಸರ್ಕಾರದಿಂದ ಬರುತ್ತಿದ್ದ ಮಾಸಾಶನ 3 ತಿಂಗಳಿನಿಂದ ಕೈಸೇರದೆ ಕಂಗಾಲಾಗಿ ನಿತ್ಯವೂ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ.

ಜಿಲ್ಲೆಯಲ್ಲಿ ಹಿಂದುಳಿದ ವರ್ಗದವರು ಮತ್ತು ಅತಿ ಹೆಚ್ಚು ಕೂಲಿ ಕಾರ್ಮಿಕರು, ಗಿರಿಜನರು, ರೈತರು ವಾಸಿಸುವ ಕೋಟೆ ತಾಲ್ಲೂಕಿನಲ್ಲಿ 32 ಸಾವಿರ ಬಡಜನರು ವಿಧವಾ ವೇತನ, ಅಂಗವಿಕಲರ ವೇತನ, ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆಯ ಮಾಸಾಶನ ತಲಾ 1,200 ರೂ. ಗಳನ್ನು ಅವಲಂಬಿಸಿದ್ದಾರೆ.

ಇದರಿಂದಲೇ ತಮ್ಮ ಜೀವನಕ್ಕೆ ಆಧಾರವಾದ ಆಹಾರ, ಔಷಧ ಇನ್ನಿತರ ಪದಾರ್ಥಗಳನ್ನು ತೆಗೆದು ಕೊಂಡು ಮಕ್ಕಳಿಗೆ, ಇನ್ನಿತರರಿಗೆ ಹೊರಯಾಗದಂತೆ ಜೀವನ ನಡೆಸುತ್ತಿದ್ದರು. ಆದರೆ, ೩ ತಿಂಗಳುಗಳಿಂದ ಅವರ ಕುಟುಂಬದ ಯಾವ ಸದಸ್ಯರು ಹೆಚ್ಚಿನ ಆದಾಯವಿರುವ ಪ್ರಮಾಣ ಪತ್ರ ಮಾಡಿಸಿಕೊಂಡು ಶಾಲಾ ಕಾಲೇಜು ಹಾಗೂ ಇನ್ನಿತರ ಕೆಲಸ ಕಾರ್ಯಗಳಿಗೆ ಬಳಸಿರುತ್ತಾರೋ ಅಂತಹವರಿಗೆ ಯೋಜನೆಯ ಸೌಲಭ್ಯ ದೊರೆಯುತ್ತಿಲ್ಲ. ಇದನ್ನು ತಿಳಿಯದೆ ಬಹುತೇಕರು ನಿತ್ಯವೂ ಬ್ಯಾಂಕು, ಅಂಚೆ ಕಚೇರಿಗಳಿಗೆ ಅಲೆದಾಡಿ, ಹಣ ಬಾರದಿದ್ದರಿಂದ ಪರಿತಪಿಸುತ್ತಿದ್ದಾರೆ.

ತಾಲ್ಲೂಕಿನಲ್ಲಿ 15 ಸಾವಿರಕ್ಕೂ ಹೆಚ್ಚು ಜನರಿಗೆ ವಿವಿಧ ಯೋಜನೆಗಳ ಮೂಲಕ ಬರುತ್ತಿದ್ದ ಮಾಸಾಶನ ರದ್ದಾಗಿದೆ. 2 ತಿಂಗಳುಗಳಿಂದ ಪ್ರತಿನಿತ್ಯ ಸಾವಿರಾರು ಜನರು ಕೋಟೆ ಮತ್ತು ಸರಗೂರು ತಾಲ್ಲೂಕು ಕಚೇರಿಗಳಲ್ಲಿನ ಕಂದಾಯ ಇಲಾಖೆ ಅಧಿಕಾರಿಗಳ ಬಳಿಗೆ ಹೋಗಿ ಸರಿಪಡಿಸಿಕೊಳ್ಳಲು ಮುಂದಾದರೂ ಪ್ರಯೋಜನವಾಗುತ್ತಿಲ್ಲ. ಅನೇಕ ಸಬೂಬುಗಳನ್ನು ಹೇಳಿ ಜನರನ್ನು ಕಳಿಸುತ್ತಿದ್ದಾರೆ. ಒಂದೆಡೆ ಸರ್ಕಾರದ ಮಾಸಾಶನವೂ ಇಲ್ಲ, ಮತ್ತೊಂ ದೆಡೆ ಬೇರೆ ಕಡೆ ಹೋಗಿ ಕೆಲಸ ಮಾಡಲೂ ಶಕ್ತಿ ಇಲ್ಲದೆ ಪರದಾಡುತ್ತಿದ್ದಾರೆ. ಇನ್ನಾದರೂ ಅರ್ಹರಿಗೆ ಮಾಸಾಶನ ಕೊಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಮುಂದಾಗಬೇಕಿದೆ.

ಆಂದೋಲನ ಡೆಸ್ಕ್

Recent Posts

ಪಿರಿಯಾಪಟ್ಟಣ | ವಿಶೇಷಚೇತನರಿಗೆ ವಿತರಣೆಯಾಗದ ಸಾಧನಗಳು

ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…

1 hour ago

ಗ್ರಾಪಂನಲ್ಲೇ ವಾಸಸ್ಥಳ ದೃಢೀಕರಣ ಪತ್ರ ; ಇನ್ನು ಹೋಬಳಿ ಕೇಂದ್ರಗಳಿಗೆ ಅಲೆಯುವಂತಿಲ್ಲ: ಸರ್ಕಾರದ ತೀರ್ಮಾನ

ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

5 hours ago

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

6 hours ago

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

17 hours ago