Andolana originals

3 ತಿಂಗಳಿಂದ ಬಾರದ ಮಾಸಾಶನ ; ಬಡಜನರು ಕಂಗಾಲು

ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ

ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ ಸೇರಿದಂತೆ ಅನೇಕರಿಗೆ ಪ್ರತಿ ತಿಂಗಳು ಸರ್ಕಾರದಿಂದ ಬರುತ್ತಿದ್ದ ಮಾಸಾಶನ 3 ತಿಂಗಳಿನಿಂದ ಕೈಸೇರದೆ ಕಂಗಾಲಾಗಿ ನಿತ್ಯವೂ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ.

ಜಿಲ್ಲೆಯಲ್ಲಿ ಹಿಂದುಳಿದ ವರ್ಗದವರು ಮತ್ತು ಅತಿ ಹೆಚ್ಚು ಕೂಲಿ ಕಾರ್ಮಿಕರು, ಗಿರಿಜನರು, ರೈತರು ವಾಸಿಸುವ ಕೋಟೆ ತಾಲ್ಲೂಕಿನಲ್ಲಿ 32 ಸಾವಿರ ಬಡಜನರು ವಿಧವಾ ವೇತನ, ಅಂಗವಿಕಲರ ವೇತನ, ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆಯ ಮಾಸಾಶನ ತಲಾ 1,200 ರೂ. ಗಳನ್ನು ಅವಲಂಬಿಸಿದ್ದಾರೆ.

ಇದರಿಂದಲೇ ತಮ್ಮ ಜೀವನಕ್ಕೆ ಆಧಾರವಾದ ಆಹಾರ, ಔಷಧ ಇನ್ನಿತರ ಪದಾರ್ಥಗಳನ್ನು ತೆಗೆದು ಕೊಂಡು ಮಕ್ಕಳಿಗೆ, ಇನ್ನಿತರರಿಗೆ ಹೊರಯಾಗದಂತೆ ಜೀವನ ನಡೆಸುತ್ತಿದ್ದರು. ಆದರೆ, ೩ ತಿಂಗಳುಗಳಿಂದ ಅವರ ಕುಟುಂಬದ ಯಾವ ಸದಸ್ಯರು ಹೆಚ್ಚಿನ ಆದಾಯವಿರುವ ಪ್ರಮಾಣ ಪತ್ರ ಮಾಡಿಸಿಕೊಂಡು ಶಾಲಾ ಕಾಲೇಜು ಹಾಗೂ ಇನ್ನಿತರ ಕೆಲಸ ಕಾರ್ಯಗಳಿಗೆ ಬಳಸಿರುತ್ತಾರೋ ಅಂತಹವರಿಗೆ ಯೋಜನೆಯ ಸೌಲಭ್ಯ ದೊರೆಯುತ್ತಿಲ್ಲ. ಇದನ್ನು ತಿಳಿಯದೆ ಬಹುತೇಕರು ನಿತ್ಯವೂ ಬ್ಯಾಂಕು, ಅಂಚೆ ಕಚೇರಿಗಳಿಗೆ ಅಲೆದಾಡಿ, ಹಣ ಬಾರದಿದ್ದರಿಂದ ಪರಿತಪಿಸುತ್ತಿದ್ದಾರೆ.

ತಾಲ್ಲೂಕಿನಲ್ಲಿ 15 ಸಾವಿರಕ್ಕೂ ಹೆಚ್ಚು ಜನರಿಗೆ ವಿವಿಧ ಯೋಜನೆಗಳ ಮೂಲಕ ಬರುತ್ತಿದ್ದ ಮಾಸಾಶನ ರದ್ದಾಗಿದೆ. 2 ತಿಂಗಳುಗಳಿಂದ ಪ್ರತಿನಿತ್ಯ ಸಾವಿರಾರು ಜನರು ಕೋಟೆ ಮತ್ತು ಸರಗೂರು ತಾಲ್ಲೂಕು ಕಚೇರಿಗಳಲ್ಲಿನ ಕಂದಾಯ ಇಲಾಖೆ ಅಧಿಕಾರಿಗಳ ಬಳಿಗೆ ಹೋಗಿ ಸರಿಪಡಿಸಿಕೊಳ್ಳಲು ಮುಂದಾದರೂ ಪ್ರಯೋಜನವಾಗುತ್ತಿಲ್ಲ. ಅನೇಕ ಸಬೂಬುಗಳನ್ನು ಹೇಳಿ ಜನರನ್ನು ಕಳಿಸುತ್ತಿದ್ದಾರೆ. ಒಂದೆಡೆ ಸರ್ಕಾರದ ಮಾಸಾಶನವೂ ಇಲ್ಲ, ಮತ್ತೊಂ ದೆಡೆ ಬೇರೆ ಕಡೆ ಹೋಗಿ ಕೆಲಸ ಮಾಡಲೂ ಶಕ್ತಿ ಇಲ್ಲದೆ ಪರದಾಡುತ್ತಿದ್ದಾರೆ. ಇನ್ನಾದರೂ ಅರ್ಹರಿಗೆ ಮಾಸಾಶನ ಕೊಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಮುಂದಾಗಬೇಕಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

9 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

9 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

9 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

9 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

9 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

9 hours ago