Andolana originals

ಮೇಟಗಳ್ಳಿ : ಹಾವು-ಚೇಳುಗಳದ್ದೇ ದರ್ಬಾರು

ಮೈಸೂರು : ನಗರದ ಜನ ವಸತಿ ಹಾಗೂ ಕೈಗಾರಿಕಾ ಪ್ರದೇಶವಾಗಿರುವ ಮೇಟಗಳ್ಳಿ ಬಡಾವಣೆಯು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹಾವು-ಚೇಳುಗಳ ಆವಾಸ ಸ್ಥಾನವಾಗಿ ಮಾರ್ಪಟ್ಟಿದ್ದು, ಬೇಸಿಗೆಯ ಈ ರಜಾ ದಿನಗಳಲ್ಲೂ ಮಕ್ಕಳು ಮನೆಯ ಹೊರಗೆ ಆಟವಾಡಲು, ಮಹಿಳೆ ಯರು,ಹಿರಿಯ ನಾಗರಿಕರು ವಾಯು ವಿಹಾರ ಮಾಡಲು ಭಯದಲ್ಲೇ ಮನೆಯ ಹೊರಗೆ ಕಾಲಿಡುವಂತಾಗಿದೆ.

ಈ ಪ್ರದೇಶದಲ್ಲಿನ ಖಾಲಿನಿವೇಶನಗಳಲ್ಲಿ ಹೊಂಗೆ, ಮಾವು,ಬೇವು ಸೇರಿದಂತೆ ವಿವಿಧ ಬಗೆ ಯ ಮರಗಳು ಸಮೃದ್ಧವಾಗಿ ಬೆಳೆದುನಿಂತಿದ್ದರೆ, ಇಲ್ಲಿನ ಮಥುರಾ ಉದ್ಯಾನ, ಶ್ರೀಲಕ್ಷ್ಮಿವೆಂಕಟೇಶ್ವರ ದೇವಸ್ಥಾನ, ಶ್ರೀ ಮಾರಮ್ಮ ದೇವಸ್ಥಾನದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಗಿಡ-ಗಂಟಿಗಳು ಸೊಂಪಾಗಿ ಬೆಳೆದು ನಿಂತಿದ್ದು, ಹಾವು-ಚೇಳುಗಳ ಆವಾಸ ಸ್ಥಾನವಾಗಿದೆ. ಹಾವುಗಳು ಕಂಡ ತಕ್ಷಣ ಇಲ್ಲಿನ ನಾಗರಿಕರು ಉರಗ ತಜ್ಞ ಸ್ನೇಕ್‌ಶ್ಯಾಂ ಅವರಿಗೆ ಕರೆ ಮಾಡುತ್ತಾರೆ. ಕರೆ ಬಂದ ಕೂಡಲೇ ಸ್ಥಳಕ್ಕೆ ಧಾವಿಸುವ ಸ್ನೇಕ್ ಶ್ಯಾಂ ಹಾವುಗಳನ್ನು ಹಿಡಿದು ಅರಣ್ಯ ಪ್ರದೇಶಕ್ಕೆಬಿಡುತ್ತಾರೆ.

ಈ ಕಾರ್ಯದಲ್ಲಿ ಸ್ನೇಕ್‌ಶ್ಯಾಂ ಅವರ ಮಗ ಸೂರ್ಯ ಕೀರ್ತಿಕೂಡ ಕೈಜೋಡಿಸುತ್ತಾರೆ. ಜೊತೆಗೆ ಈ ಭಾಗದ ಜನರೂ ಈಗೀಗ ಹಾವು ಹಿಡಿಯುವ ಕಲೆಯನ್ನು ಕರಗತ ಮಾಡಿಕೊಂಡಿದ್ದು, ಆಗಾಗ್ಗೆ ಕಂಡುಬರುವ ಹಾವುಗಳನ್ನು ಸ್ನೇಕ್‌ಶ್ಯಾಂ ಹಿಡಿಯುವುದನ್ನು ನೋಡಿ ಇಲ್ಲಿನ ಜನರು ಕಲಿತು ಕೊಂಡಿದ್ದಾರೆ. ಆ ಪೈಕಿ ಪಿ. ಮಂಜುನಾಥ್ ಕೂಡ ಒಬ್ಬರು. ಸಂಬಂಧ ಪಟ್ಟವರು ಇನ್ನಾದರೂ ಇತ್ತ ಗಮನಹರಿಸಿ ಹಾವು ಗಳಉಪಟಳ ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಆ ಮೂಲಕ ಸ್ಥಳೀಯರಿಗೆ,ಅದರಲ್ಲೂ ವಿಶೇಷವಾಗಿ ಆಟವಾಡುವ ಮಕ್ಕಳಿಗೆ ಅನುಕೂಲ ಕಲ್ಪಿಸಿ ಕೊಡಬೇಕು ಎನ್ನುತ್ತಾರೆ ಮೇಟಗಳ್ಳಿನಿವಾಸಿ ಪಿ.ಮದನ್.

ರಸ್ತೆ ಬದಿ ಕಸದ ರಾಶಿ
ಮಥುರಾ ಉದ್ಯಾನ ಆವರಣದ ಗೋಡೆಗೆ ಹೊಂದಿಕೊಂಡಂತೆಯೇ ಹಸಿ ತ್ಯಾಜ್ಯ, ಒಣ ಕಸ ಸುರಿಯಲಾಗುತ್ತಿದೆ. ಮಥುರಾ ನಗರ ೩ನೇ ‘ಬಿ’ ಅಡ್ಡರಸ್ತೆ ನಾಮ-ಲಕದ ಬಳಿಯೂ ಕಸ ಸುರಿಯಲಾಗಿದೆ. ಮಥುರಾ ಉದ್ಯಾನದ
ಒಳಭಾಗದಲ್ಲಿಯೂ ಅಲ್ಲಲ್ಲಿ ಕಸದ ರಾಶಿ ಕಂಡುಬರುತ್ತಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆ ರಸ್ತೆ ಬದಿಯೂ ಕಸದ ರಾಶಿ ಇದೆ. ಕಸದ ರಾಶಿಯಿಂದಾಗಿ ಶಾಲೆಯಲ್ಲಿ ಮಕ್ಕಳ ಬಿಸಿಯೂಟ ನೀಡಲು ಆಗದಂತೆ
ಅನೈರ್ಮಲ್ಯ ತಾಂಡವವಾಡುತ್ತಿದೆ. ಮೇಟಗಳ್ಳಿಯಲ್ಲಿ ಹಾದು ಹೋಗಿರುವ ರೈಲು ಮಾರ್ಗದ ಇಕ್ಕೆಲಗಳಲ್ಲೂ ರಾಶಿ ರಾಶಿ ಕಸ ಬಿದ್ದಿದೆ. ರಸ್ತೆಯ ಇಕ್ಕೆಲಗಳಲ್ಲಿ ಬಿದ್ದಿರುವ ಕಸದಿಂದಾಗಿ ಪಾದಚಾರಿಗಳು, ವಾಯು ವಿಹಾರಿಗಳು ಕಿರಿ ಕಿರಿ ಅನುಭವಿಸುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಇತ್ತ ಗಮನಹರಿಸಿ ಕಸದ ರಾಶಿ ತೆರವುಗೊಳಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಾರೆ. ಇದರ ಜತೆ ಕಸವನ್ನು ಎಲ್ಲೆಂದರಲ್ಲಿ ಹಾಕದಂತೆ ನಿರ್ಬಂಧ ವಿಧಿಸುವಂತೆಯೂ ಒತ್ತಾಯಿಸುತ್ತಾರೆ.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

16 hours ago