ಮಹೇಂದ್ರ ಹಸಗೂಲಿ
ಗುಂಡ್ಲುಪೇಟೆ: ಹಾಲಿನ ದರ ಹೆಚ್ಚಳದಿಂದ ಒಂದೆಡೆ ಗ್ರಾಹಕರಿಗೆ ಬೇಸರವಾಗಿದ್ದರೆ ರೈತರಲ್ಲಿ ಸಂತಸ ಮೂಡಿಸಿದೆ.
ಚಾಮುಲ್ ವತಿಯಿಂದ ಜಿಲ್ಲಾ ಹೈನುಗಾರರಿಗೆ ಯುಗಾದಿ ಹಬ್ಬದ ಪ್ರಯುಕ್ತ ಖರೀದಿ ದರವನ್ನು ೪ ರೂ. ಹೆಚ್ಚಳ ಮಾಡುವ ಮೂಲಕ ಯುಗಾದಿ ಉಡುಗೊರೆ ನೀಡಲಾಗಿದೆ.
ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟವು ಒಟ್ಟು ೪೬೧ ಹಾಲು ಉತ್ಪಾದಕ ಸಹಕಾರ ಸಂಘಗಳಿಂದ ಪ್ರತಿನಿತ್ಯ ೨.೬೧ ಲಕ್ಷ ಕೆಜಿ ಹಾಲು ಸಂಗ್ರಹಿಸುತ್ತಿದೆ. ಒಕ್ಕೂಟ ವ್ಯಾಪ್ತಿಯಲ್ಲಿ ಹಾಗೂ ತಮಿಳುನಾಡು, ಕೇರಳ ಮಾರುಕಟ್ಟೆಗಳಿಗೆ ಪ್ರತಿದಿನ ೬೫ ಸಾವಿರ ಲೀಟರ್ ಹಾಲು, ೧೬,೮೪೫ ಕೆಜಿ ಮೊಸರು, ದೇಶದ ವಿವಿಧ ಭಾಗಗಳಿಗೆ ೬೪,೭೮೯ ಲೀಟರ್ ಯುಹೆಚ್ಟಿ ಹಾಲನ್ನು ಮಾರಾಟ ಮಾಡಲಾಗುತ್ತಿದೆ.
ಸರ್ಕಾರದ ಕ್ಷೀರ ಭಾಗ್ಯ ಯೋಜನೆಗೆ ಹಾಲಿನ ಪುಡಿ ಸರಬರಾಜು ಮಾಡಲಾಗುತ್ತಿದೆ. ಹೈನುಗಾರರ ಹಿತದೃಷ್ಟಿಯಿಂದ ಹಾಲು ಉತ್ಪಾದಕರನ್ನು ಪ್ರೋತ್ಸಾಹಿಸಲು ಮಾ.೨೯ ರಂದು ಜಿಲ್ಲಾ ಹಾಲು ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ಒಕ್ಕೂಟದ ವ್ಯಾಪ್ತಿಯ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ಗೆ ೪ ರೂ.ಗಳನ್ನು ಏಪ್ರಿಲ್ ೧ರಿಂದ ಅನ್ವಯವಾಗುವಂತೆ ಹೆಚ್ಚಿಸಲಾಗಿದೆ.
ಹಾಲು ಉತ್ಪಾದಕರು ಸರಬರಾಜು ಮಾಡುವ ಶೇ.೪.೦ ಜಿಡ್ಡು ಹಾಗೂ ೮.೫ ಜಿಡ್ಡೇತರ ಘನಾಂಶದ ಪ್ರತಿ ಲೀಟರ್ ಹಾಲಿಗೆ ಒಕ್ಕೂಟದಿಂದ ೩೫.೨೦ ರೂ. ಹಾಗೂ ಸರ್ಕಾರದ ಪ್ರೋತ್ಸಾಹಧನ ಪ್ರತಿ ಲೀಟರ್ಗೆ ೫ ರೂ. ಸೇರಿದಂತೆ ಉತ್ಪಾದಕರಿಗೆ ಒಟ್ಟು ೪೦.೨೦ ರೂ. ಪಾವತಿಯಾಗಲಿದೆ.
ಒಟ್ಟಾರೆ ಜೀವನೋಪಾಯಕ್ಕಾಗಿ ಒಂದೆರಡು ಹಸುಗಳನ್ನು ಸಾಕುವ ರೈತರಿಗೆ ಇದರಿಂದ ಅನುಕೂಲವಾಗಿದೆ.
” ಲೀಟರ್ಗೆ ೪ ರೂ. ಹೆಚ್ಚಳವಾಗಿರುವುದಕ್ಕೆ ನಮಗ ಬೇಸರವಿಲ್ಲ. ಏಕೆಂದರೆ ಅದು ನೇರವಾಗಿ ರೈತರಿಗೆ ತಲುಪುತ್ತದೆ. ರೈತರ ಶ್ರಮದ ಮುಂದೆ ಹಾಲಿನ ದರ ಹೆಚ್ಚಳ ಮಾಡಿರುವುದು ಅಂತಹ ಹೊರೆಯಾಗದು.”
-ಮಂಜುನಾಥ್, ಗ್ರಾಹಕ.
” ರೈತರು ಕಷ್ಟಪಟ್ಟು ಹಸು ಸಾಕಿ ಜೀವನ ಸಾಗಿಸುತ್ತಾರೆ. ಒಂದು ಲೀಟರ್ ನೀರಿನ ಬೆಲೆಯೇ ೨೦ ರೂ. ಇದೆ. ಈಗ ಕೇವಲ ೪ ರೂ. ಹಾಲಿನ ಬೆಲೆ ಹೆಚ್ಚಳ ಮಾಡಿದ್ದು ದೊಡ್ಡದಲ್ಲ. ರೈತರಿಗೆ ತಕ್ಕಮಟ್ಟಿಗೆ ಸಮಾಧಾನ ತಂದಿದೆ.”
-ಮಹೇಶ್, ರೈತ
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…