Andolana originals

ಹಾಲಿನ ದರ ಹೆಚ್ಚಳ; ರೈತರಲ್ಲಿ ಹರ್ಷ

ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆ: ಹಾಲಿನ ದರ ಹೆಚ್ಚಳದಿಂದ ಒಂದೆಡೆ ಗ್ರಾಹಕರಿಗೆ ಬೇಸರವಾಗಿದ್ದರೆ ರೈತರಲ್ಲಿ ಸಂತಸ ಮೂಡಿಸಿದೆ.

ಚಾಮುಲ್ ವತಿಯಿಂದ ಜಿಲ್ಲಾ ಹೈನುಗಾರರಿಗೆ ಯುಗಾದಿ ಹಬ್ಬದ ಪ್ರಯುಕ್ತ ಖರೀದಿ ದರವನ್ನು ೪ ರೂ. ಹೆಚ್ಚಳ ಮಾಡುವ ಮೂಲಕ ಯುಗಾದಿ ಉಡುಗೊರೆ ನೀಡಲಾಗಿದೆ.

ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟವು ಒಟ್ಟು ೪೬೧ ಹಾಲು ಉತ್ಪಾದಕ ಸಹಕಾರ ಸಂಘಗಳಿಂದ ಪ್ರತಿನಿತ್ಯ ೨.೬೧ ಲಕ್ಷ ಕೆಜಿ ಹಾಲು ಸಂಗ್ರಹಿಸುತ್ತಿದೆ. ಒಕ್ಕೂಟ ವ್ಯಾಪ್ತಿಯಲ್ಲಿ ಹಾಗೂ ತಮಿಳುನಾಡು, ಕೇರಳ ಮಾರುಕಟ್ಟೆಗಳಿಗೆ ಪ್ರತಿದಿನ ೬೫ ಸಾವಿರ ಲೀಟರ್ ಹಾಲು, ೧೬,೮೪೫ ಕೆಜಿ ಮೊಸರು, ದೇಶದ ವಿವಿಧ ಭಾಗಗಳಿಗೆ ೬೪,೭೮೯ ಲೀಟರ್ ಯುಹೆಚ್‌ಟಿ ಹಾಲನ್ನು ಮಾರಾಟ ಮಾಡಲಾಗುತ್ತಿದೆ.

ಸರ್ಕಾರದ ಕ್ಷೀರ ಭಾಗ್ಯ ಯೋಜನೆಗೆ ಹಾಲಿನ ಪುಡಿ ಸರಬರಾಜು ಮಾಡಲಾಗುತ್ತಿದೆ. ಹೈನುಗಾರರ ಹಿತದೃಷ್ಟಿಯಿಂದ ಹಾಲು ಉತ್ಪಾದಕರನ್ನು ಪ್ರೋತ್ಸಾಹಿಸಲು ಮಾ.೨೯ ರಂದು ಜಿಲ್ಲಾ ಹಾಲು ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ಒಕ್ಕೂಟದ ವ್ಯಾಪ್ತಿಯ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ ೪ ರೂ.ಗಳನ್ನು ಏಪ್ರಿಲ್ ೧ರಿಂದ ಅನ್ವಯವಾಗುವಂತೆ ಹೆಚ್ಚಿಸಲಾಗಿದೆ.

ಹಾಲು ಉತ್ಪಾದಕರು ಸರಬರಾಜು ಮಾಡುವ ಶೇ.೪.೦ ಜಿಡ್ಡು ಹಾಗೂ ೮.೫ ಜಿಡ್ಡೇತರ ಘನಾಂಶದ ಪ್ರತಿ ಲೀಟರ್ ಹಾಲಿಗೆ ಒಕ್ಕೂಟದಿಂದ ೩೫.೨೦ ರೂ. ಹಾಗೂ ಸರ್ಕಾರದ ಪ್ರೋತ್ಸಾಹಧನ ಪ್ರತಿ ಲೀಟರ್‌ಗೆ ೫ ರೂ. ಸೇರಿದಂತೆ ಉತ್ಪಾದಕರಿಗೆ ಒಟ್ಟು ೪೦.೨೦ ರೂ. ಪಾವತಿಯಾಗಲಿದೆ.

ಒಟ್ಟಾರೆ ಜೀವನೋಪಾಯಕ್ಕಾಗಿ ಒಂದೆರಡು ಹಸುಗಳನ್ನು ಸಾಕುವ ರೈತರಿಗೆ ಇದರಿಂದ ಅನುಕೂಲವಾಗಿದೆ.

” ಲೀಟರ್‌ಗೆ ೪ ರೂ. ಹೆಚ್ಚಳವಾಗಿರುವುದಕ್ಕೆ ನಮಗ ಬೇಸರವಿಲ್ಲ. ಏಕೆಂದರೆ ಅದು ನೇರವಾಗಿ ರೈತರಿಗೆ ತಲುಪುತ್ತದೆ. ರೈತರ ಶ್ರಮದ ಮುಂದೆ ಹಾಲಿನ ದರ ಹೆಚ್ಚಳ ಮಾಡಿರುವುದು ಅಂತಹ ಹೊರೆಯಾಗದು.”

-ಮಂಜುನಾಥ್, ಗ್ರಾಹಕ.

” ರೈತರು ಕಷ್ಟಪಟ್ಟು ಹಸು ಸಾಕಿ ಜೀವನ ಸಾಗಿಸುತ್ತಾರೆ. ಒಂದು ಲೀಟರ್ ನೀರಿನ ಬೆಲೆಯೇ ೨೦ ರೂ. ಇದೆ. ಈಗ ಕೇವಲ ೪ ರೂ. ಹಾಲಿನ ಬೆಲೆ ಹೆಚ್ಚಳ ಮಾಡಿದ್ದು ದೊಡ್ಡದಲ್ಲ. ರೈತರಿಗೆ ತಕ್ಕಮಟ್ಟಿಗೆ ಸಮಾಧಾನ ತಂದಿದೆ.”

-ಮಹೇಶ್, ರೈತ

ಆಂದೋಲನ ಡೆಸ್ಕ್

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

10 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

10 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

11 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

11 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

11 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

12 hours ago