Andolana originals

ಕೋಟೆಯಲ್ಲಿ ಜನಾಕರ್ಷಿಸುತ್ತಿರುವ ಮಿನಿ ದಸರಾ

ಮಂಜು ಕೋಟೆ

ವರದರಾಜಸ್ವಾಮಿ ದೇವಾಲಯ, ಚಾಮುಂಡೇಶ್ವರಿ ದೇವಾಲಯದಲ್ಲಿ ಪ್ರತಿನಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು 

ಎಚ್.ಡಿ.ಕೋಟೆ: ಜಿಲ್ಲೆಯ ಕೇಂದ್ರ ಸ್ಥಾನವಾದ ಮೈಸೂರಿನಲ್ಲಿ ನಾಡಹಬ್ಬ ದಸರಾ ಮಹೋತ್ಸವ ಅದ್ಧೂರಿಯಾಗಿ ನಡೆಯುತ್ತಿದ್ದರೆ ತಾಲ್ಲೂಕಿನ ಕೇಂದ್ರ ಸ್ಥಾನವಾದ ಎಚ್.ಡಿ.ಕೋಟೆ ಪಟ್ಟಣದಲ್ಲಿ ಮಿನಿ ದಸರಾ ಮಹೋತ್ಸವ ಸಡಗರದಿಂದ ನಡೆಯುತ್ತಿದ್ದು ಜನಾಕರ್ಷಿಸುತ್ತಿದೆ.

ಚೋಳರ ಕಾಲದ ಹಾಗೂ ಮುಜರಾಯಿ ಇಲಾಖೆಗೆ ಸೇರಿದ ಪಟ್ಟಣದ ಮೊದಲನೇ ಮುಖ್ಯ ರಸ್ತೆಯಲ್ಲಿರುವ ಶ್ರೀ ವರದರಾಜಸ್ವಾಮಿ ದೇವಸ್ಥಾನದಲ್ಲಿ ಹಾಗೂ ಹೌಸಿಂಗ್ ಬೋರ್ಡಿನಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪ್ರತಿನಿತ್ಯವೂ ದಸರಾ ಮತ್ತು ನವರಾತ್ರಿ ಮಹೋತ್ಸವ ಅರ್ಥಪೂರ್ಣವಾಗಿ ನಡೆಯುತ್ತಿದೆ.

ವರದರಾಜಸ್ವಾಮಿ ದೇವಸ್ಥಾನದಲ್ಲಿ ಬೊಂಬೆಗಳ ಪೂಜೆ, ಶ್ರೀ ಕೃಷ್ಣ ರಾಸಲೀಲೆ ಹಾಗೂ ಕಲ್ಯಾಣೋತ್ಸವ ಲಕ್ಷ್ಮೀಪೂಜೆ, ವರದರಾಜಸ್ವಾಮಿ, ಶ್ರೀದೇವಿ, ಭೂದೇವಿ ದೇವರ ವಿಗ್ರಹಗಳ ಪೂಜೆ, ವಿವಿಧ ಸಾಂಸ್ಕ ತಿಕ ಕಾರ್ಯಕ್ರಮಗಳು ಪ್ರತಿ ಸಮುದಾಯ, ಅಧಿಕಾರಿಗಳು, ಜನಪ್ರತಿನಿಧಿಗಳ ಮುಖಾಂತರ ನಡೆಯುತ್ತಿದೆ.

ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಚಾಮುಂಡೇಶ್ವರಿ ದೇವಿಗೆ ಪ್ರತಿನಿತ್ಯ ಬಗೆಬಗೆಯ ಅಲಂಕಾರ, ಪೂಜೆ, ಹೋಮ-ಹವನಗಳನ್ನು ನಡೆಸಲಾಗುತ್ತಿದೆ. ಮೊದಲನೇ ಮುಖ್ಯ ರಸ್ತೆ ಮತ್ತು ಚಾಮುಂಡೇಶ್ವರಿ ದೇವಸ್ಥಾನದ ಮುಖ್ಯರಸ್ತೆಯಲ್ಲಿನ ದೀಪಾಲಂಕಾರ ಜನರನ್ನು ಆಕರ್ಷಿಸುತ್ತಿದೆ. ಪ್ರತಿನಿತ್ಯ ಪೂಜೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪಟ್ಟಣ ಸೇರಿದಂತೆ ವಿವಿಧ ಭಾಗಗಳಿಂದ ಜನರು ಮತ್ತು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ಈ ಎರಡೂ ದೇವಸ್ಥಾನಗಳ ಸಮಿತಿಯವರು ಮತ್ತು ಮುಖ್ಯಸ್ಥರು ದಸರಾ ಮಹೋತ್ಸವವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ. ಹಲವು ವರ್ಷಗಳಿಂದ ಪಟ್ಟಣದಲ್ಲಿ ನಡೆಯುತ್ತಿರುವ ಮಿನಿ ದಸರಾ ಕಾರ್ಯಕ್ರಮ ವರ್ಷದಿಂದ ವರ್ಷಕ್ಕೆ ಜನ ಸಾಮಾನ್ಯರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.

” ಮೈಸೂರು ನಗರವನ್ನು ಹೊರತುಪಡಿಸಿದರೆ ಎಚ್.ಡಿ. ಕೋಟೆ ಪಟ್ಟಣದಲ್ಲಿ ಮಾತ್ರ ಪೊಲೀಸರ ಗಾರ್ಡ್ ಆಫ್‌  ಆನರ್ ಮೂಲಕ ದಸರಾ ಮಹೋತ್ಸವ ಕಾರ್ಯಕ್ರಮ ನಡೆಯುವುದರಿಂದ ಶಾಸಕರು, ಸ್ಥಳೀಯ ಪ್ರತಿನಿಧಿಗಳು, ವರ್ತಕರು, ಅನೇಕ ಮುಖಂಡರು ಹೆಚ್ಚಿನ ಸಹಕಾರ ನೀಡಿದರೆ ಇಲ್ಲಿನ ಮಿನಿ ದಸರಾ ಮತ್ತಷ್ಟು ಅದ್ಧೂರಿಯಾಗಿ, ಅರ್ಥಪೂರ್ಣವಾಗಿ ನಡೆಯಲಿದೆ.”

-ಕನ್ನಡ ಪ್ರಮೋದ್, ಅಧ್ಯಕ್ಷರು ಕಸಾಪ 

” ಎಚ್.ಡಿ.ಕೋಟೆ ಪಟ್ಟಣದಲ್ಲಿ ಮಿನಿ ದಸರಾ ಮಹೋತ್ಸವ ಮತ್ತು ನವರಾತ್ರಿ ಉತ್ಸವ ನಿಮಿತ್ತ ದೇವಸ್ಥಾನಗಳಲ್ಲಿ ದೇವರಿಗೆ ಅನೇಕ ವಿಶೇಷ ಪೂಜೆ, ಅಭಿಷೇಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿರುವುದು ಸಂತಸ ಮೂಡಿಸಿದೆ.”

-ಸುಮತಿ, ಹೌಸಿಂಗ್ ಬೋರ್ಡ್ ನಿವಾಸಿ,

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

1 hour ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

2 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

2 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

3 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

8 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

8 hours ago