Andolana originals

ಮಿರ್ಲೆ: ಹುಣಸಮ್ಮ ತಾಯಿ ಸಿಡಿ ಉತ್ಸವಕ್ಕೆ ಸಕಲ ಸಿದ್ಧತೆ

ಕೆ.ಟಿ.ಮೋಹನ್ ಕುಮಾರ್

ಫೆ.೨೭ರಂದು ನವಗ್ರಾಮದೇವತೆ ಹುಣಸಮ್ಮತಾಯಿ ಸಿಡಿ ಉತ್ಸವ, ೨೮ರಂದು ರಥೋತ್ಸವ

ಸಾಲಿಗ್ರಾಮ: ತಾಲ್ಲೂಕಿನ ಮಿರ್ಲೆ ಗ್ರಾಮದ ನವಗ್ರಾಮದೇವತೆ ಶ್ರೀ ಹುಣಸಮ್ಮ ತಾಯಿ ದೇವರ ಸಿಡಿ ಉತ್ಸವ ಫೆ.೨೭ರಂದು ಹಾಗೂ ಫೆ.೨೮ರಂದು ರಥೋತ್ಸವವು ಸಾವಿರಾರು ಜನರ ನಡುವೆ ಧಾರ್ಮಿಕ ವಿಧಿ ವಿಧಾನಗ ಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.

ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು ಈಗಾಗಲೇ ಭರದ ಸಿದ್ಧತೆಯನ್ನು ನಡೆಸುತ್ತಿದ್ದಾರೆ. ಶ್ರೀ ಹುಣಸಮ್ಮ ತಾಯಿಯ ಹಬ್ಬದ ಅಂಗವಾಗಿ ದೇವಸ್ಥಾನ, ಮಿರ್ಲೆ ಗ್ರಾಮ ಹಾಗೂ ಸುತ್ತಮುತ್ತಲ ಗ್ರಾಮಗಳು ನವ ವಧುವಿನಂತೆ ಸಿಂಗಾರಗೊಳ್ಳುತ್ತಿವೆ. ದೇವಾಲಯದ ಸುತ್ತ ಮುತ್ತ ಸ್ವಚ್ಛತಾ ಕಾರ್ಯ ಹಾಗೂ ಬಣ್ಣದ ಲೇಪನ ಕಾರ್ಯ ಭರದಿಂದ ಸಾಗುತ್ತಿದೆ.

ಫೆ.೨೭ರಂದು ಶ್ರೀ ಹುಣಸಮ್ಮ ತಾಯಿಯ ರಥೋತ್ಸವದ ಅಂಗವಾಗಿ ನವಗ್ರಾಮಗಳಲ್ಲಿ ಹಬ್ಬವು ನಡೆಯಲಿದ್ದು. ಈ ಹಬ್ಬಕ್ಕೆ ತವರಿಗೆ ಆಗಮಿಸುವ ಹೆಣ್ಣುಮಕ್ಕಳು ದೇವಸ್ಥಾನಕ್ಕೆ ತೆರಳಿ ದೇವರಿಗೆ ಮಡಿಲು ತುಂಬಿಸುವ ಶಾಸ್ತ್ರ, ತಂಬಿಟ್ಟಿನ ಆರತಿ ಮಾಡಿಸಿ ವಿಶೇಷ ಪೂಜೆ ಸಲ್ಲಿಸಿಕೊಂಡು ಬರುವುದು ಈ ಹಿಂದಿನಿಂದಲೂ ನಡೆದುಕೊಂಡು ಬರುತ್ತಿರುವ ಪದ್ಧತಿಯಾಗಿದೆ. ಇಷ್ಟೇ ಅಲ್ಲದೆ ದೇವರಿಗೆ ವಿವಿಧ ರೀತಿಯ ಆರತಿಗಳನ್ನು ಮಾಡಿ ವಿಶೇಷ ಪೂಜೆಯನ್ನು ಸಲ್ಲಿಸಿ ಮಹಾಮಂಗಳಾರತಿಯೊಂದಿಗೆ ಪ್ರಸಾದ ವಿನಿಯೋಗ ಮಾಡಲಾಗುತ್ತದೆ.

ಫೆ.೨೮ರಂದು ನಡೆಯುವ ಶ್ರೀ ಹುಣಸಮ್ಮ ತಾಯಿಯ ರಥೋತ್ಸವಕ್ಕೆ ನವಗ್ರಾಮಗಳಾದ ಮಿರ್ಲೆ, ಶಾಬಾಳು, ನಾಟನಹಳ್ಳಿ, ಹಳೆಮಿರ್ಲೆ, ಕೊಡಿಯಾಲ, ಹನುಮನಹಳ್ಳಿ, ಬೀಚನಹಳ್ಳಿ, ನರಚನಹಳ್ಳಿ, ಬೀಚನಹಳ್ಳಿ ಕೊಪ್ಪಲು, ಮಾಳನಾಯಕನಹಳ್ಳಿ, ಮಾಳನಾಯಕನಹಳ್ಳಿ ಕೊಪ್ಪಲು ಗ್ರಾಮಗಳಿಂದ ಐದು ಸಿಡಿಗಳು ಮತ್ತು ನಾಲ್ಕು ರಥಗಳು ಆಗಮಿಸಲಿದ್ದು, ನಂತರ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ನಂತರ ಮಿರ್ಲೆ ಗ್ರಾಮದ ರಾಜಬೀದಿಗಳಲ್ಲಿ ಮೆರವಣಿಗೆಯು ಸಾಗಲಿದೆ. ಶ್ರೀ ಹುಣಸಮ್ಮ ತಾಯಿ ದೇವಾಲಯದ ಆವರಣಕ್ಕೆ ರಥವನ್ನು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಎಳೆದು ತರಲಿದ್ದಾರೆ.

ರಥೋತ್ಸವದ ದಿನದಂದು ದೇವಾಲಯದಲ್ಲಿ ಮುಂಜಾನೆಯಿಂದಲೇ ವಿವಿಧ ಪೂಜಾ ಕಾರ್ಯಗಳು ನಡೆಯಲಿವೆ. ಜಾತ್ರಾ ಮಹೋತ್ಸವ ಮುಗಿದ ನಂತರ ದೇವಸ್ಥಾನದ ಮುಂಭಾಗ ಇರುವ ಉಯ್ಯಾಲೆ ಯಲ್ಲಿ ಶ್ರೀ ಹುಣಸಮ್ಮ ತಾಯಿ ಆಟವಾಡುತ್ತಾಳೆ ಎಂಬ ನಂಬಿಕೆಯಿಂದ ರಾತ್ರಿ ೮ ಗಂಟೆ ನಂತರ ಈ ದೇವಸ್ಥಾನದ ಕಡೆಗೆ ಯಾರು ಹೋಗುವುದಿಲ್ಲ.

ಈ ರಥೋತ್ಸವಕ್ಕೆ ಮೈಸೂರು, ಮಂಡ್ಯ, ಹಾಸನ, ಕೊಡಗು, ಚಾಮರಾಜನಗರ, ಬೆಂಗಳೂರು, ತುಮಕೂರು, ಕೋಲಾರ, ಚಿಕ್ಕಮಗಳೂರು ಸೇರಿದಂತೆ ನಾಡಿನ ಹಲವು ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಲಿದ್ದಾರೆ.

” ಈ ಸಾಲಿನಲ್ಲಿ ಶ್ರೀ ಹುಣಸಮ್ಮ ತಾಯಿಯ ಸಿಡಿ ಉತ್ಸವ ಹಾಗೂಜಾತ್ರಾ ಮಹೋತ್ಸವವು ಅತ್ಯಂತವಿಜೃಂಭಣೆಯಿಂದ ನಡೆಯಲಿದ್ದು, ಭಕ್ತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಹಾಗೂ ದೇವತಾ ಕಾರ್ಯವು ಯಶಸ್ವಿಯಾಗಿ ನಡೆಯಲು ಎಲ್ಲಾ ರೀತಿಯ ಸಿದ್ಧತಾ ಕಾರ್ಯಗಳನ್ನು ಕೈಗೊಳ್ಳಲಾಗಿದೆ.”

-ಎಂ.ಎಲ್.ಲೋಕೇಶ್, ಧರ್ಮದರ್ಶಿಗಳು, ಶ್ರೀ ಹುಣಸಮ್ಮ ತಾಯಿ ದೇವಾಲಯ

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

19 mins ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

21 mins ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

22 mins ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

26 mins ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

30 mins ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

3 hours ago