Andolana originals

ಮಿಷನ್ ಆಸ್ಪತ್ರೆ ಕಾರ್ಮಿಕರ ಪ್ರತಿಭಟನೆ: ಜಿಲ್ಲಾಧಿಕಾರಿಗೆ ಮನವಿ

ಮೈಸೂರು: ತಮ್ಮ ನ್ಯಾಯಯುತ ಬೇಡಿಕೆಗಳಿಗೆ, ಸಮಸ್ಯೆಗಳಿಗೆ ಮೈಸೂರಿನ ಸಿಎಸ್‌ಐ ಮೆಮೋರಿಯಲ್ ಹೋಲ್ಡ್ ವರ್ತ್ (ಮಿಷನ್ ) ಆಸ್ಪತ್ರೆ ಆಡಳಿತ ವರ್ಗ ಸ್ಪಂದಿಸದೆ, ನಿರ್ಲಕ್ಷ್ಯ ಧೋರಣೆಯನ್ನು ತಾಳುತ್ತಿದೆ. ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿಸಿ ಕಾರ್ಮಿಕರು ಅನುಭವಿಸುತ್ತಿರುವ ಸಂಕಷ್ಟ, ಸಮಸ್ಯೆಗಳನ್ನು ಬಗೆಹರಿಸಿಕೊಡಬೇಕೆಂದು ಆಸ್ಪತ್ರೆಯ ಮುಷ್ಕರ ನಿರತ ಎಂಪ್ಲಾಯಿಸ್ ಯೂನಿಯನ್ ಸದಸ್ಯರು ಎಐಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಬುಧವಾರ ಮನವಿ ಸಲ್ಲಿಸಿದರು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಮುಖಂಡರು, ಆಸ್ಪತ್ರೆಯ ಆಡಳಿತಾಧಿಕಾರಿ ವಿನ್ವೆಂಟ್ ಪಾಲ್ ಅವರ ದುರಾಡಳಿತದಿಂದ ಆಸ್ಪತ್ರೆ ಕಾರ್ಯಚಟುವಟಿಕೆಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಕಾರ್ಮಿಕರಿಗೆ ನೀಡಬೇಕಾದ ಸೌಲಭ್ಯಗಳನ್ನು ನೀಡದೇ ವಂಚಿಸಲಾಗುತ್ತಿದೆ. ಅಲ್ಲದೇ ಕಾರ್ಮಿಕ ಸಂಘ ನೀಡಿರುವ ವೇತನ ಪರಿಷ್ಕರಣೆ ಮತ್ತು ಇತರೆ ಸೌಲಭ್ಯ ಹೆಚ್ಚಿಸಲು ನೀಡಿರುವ ಬೇಡಿಕೆ ಪತ್ರಕ್ಕೆ ಸ್ಪಂದಿಸದೆ ನಿರ್ಲಕ್ಷ್ಯ ವಹಿಸಲಾಗಿದೆ. ಕಳೆದ ಏಪ್ರಿಲ್ ತಿಂಗಳಿಂದ ಕಾರ್ಮಿಕರಿಗೆ ವೇತನವನ್ನೂ ನೀಡಿಲ್ಲ. ಹೀಗಾಗಿ ಕಾರ್ಮಿಕರ ಸಮಸ್ಯೆ ಪರಿಹಾರಕ್ಕಾಗಿ ಕಾನೂನಿನ್ವಯ ಕಳೆದ ಜುಲೈ 15ರಂದು ನೋಟಿಸ್ ಮುಷ್ಕರ ನಡೆಸಲಾಗುತ್ತಿದೆ. ಆದರೆ ಕಾರ್ಮಿಕರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಯನ್ನು ಬಗೆಹರಿಸುವ ಬದಲು ಆಡಳಿತ ಮಂಡಳಿಯು ಕಾರ್ಮಿಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ದೂರಿದರು.

ಸಿಎಸ್‌ಐ ಹೋಲ್ಡ್ ವರ್ತ್ ಮೆಮೋರಿಯಲ್ 62 ಆಸ್ಪತ್ರೆ ಎಂಪ್ಲಾಯೀಸ್ ಯೂನಿಯನ್ ಉಪಾಧ್ಯಕ್ಷ ರಾದ ದಯಾಪ್ರಕಾಶ್, ಸಿ.ಶಂಕರ್, ಪ್ರಧಾನ ಕಾರ್ಯದರ್ಶಿ ವಿಲ್ಲನ್ ಪ್ರಭಾಕರ್, ಕಾರ್ಯದರ್ಶಿ ಪಾಲ್ ಡೇವಿಡ್, ಸಹ ಕಾರ್ಯದರ್ಶಿ ಆ‌ರ್. ಸಿದ್ದರಾಜು, ಖಜಾಂಚಿ ಮ್ಯಾನ್ಯುಯಲ್, ಜೋಸೆಫ್ ಮತ್ತಿತರರು ಹಾಜರಿದ್ದರು.

ಬೇಡಿಕೆಗಳು

• ಬಾಕಿ ಉಳಿಸಿಕೊಂಡಿರುವ 4 ತಿಂಗಳ ವೇತನವನ್ನು ಕೂಡಲೇ ಪಾವತಿಸಬೇಕು

• ವೇತನ ಪರಿಷ್ಕರಣೆಯನ್ನು ನಿಗದಿತ ಅವಧಿಯೊಳಗೆ ಮಾತುಕತೆಯ ಮೂಲಕ ಬಗೆಹರಿಸಬೇಕು

• ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸಲು ಕ್ರಮ ತೆಗೆದುಕೊಳ್ಳಬೇಕು

• ಈಗಾಗಲೇ ನಿವೃತ್ತರಾದ ಕಾರ್ಮಿಕರಿಗೆ (ಉಪಧನ) ಉಳಿಸಿಕೊಂಡಿದ್ದು, ಕೂಡಲೇ ಪಾವತಿಸಲು ಕ್ರಮ ತೆಗೆದುಕೊಳ್ಳಬೇಕು

ಭೂಮಿಕಾ

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

6 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

6 hours ago