Andolana originals

ಮಿಷನ್ ಆಸ್ಪತ್ರೆ ಕಾರ್ಮಿಕರ ಪ್ರತಿಭಟನೆ: ಜಿಲ್ಲಾಧಿಕಾರಿಗೆ ಮನವಿ

ಮೈಸೂರು: ತಮ್ಮ ನ್ಯಾಯಯುತ ಬೇಡಿಕೆಗಳಿಗೆ, ಸಮಸ್ಯೆಗಳಿಗೆ ಮೈಸೂರಿನ ಸಿಎಸ್‌ಐ ಮೆಮೋರಿಯಲ್ ಹೋಲ್ಡ್ ವರ್ತ್ (ಮಿಷನ್ ) ಆಸ್ಪತ್ರೆ ಆಡಳಿತ ವರ್ಗ ಸ್ಪಂದಿಸದೆ, ನಿರ್ಲಕ್ಷ್ಯ ಧೋರಣೆಯನ್ನು ತಾಳುತ್ತಿದೆ. ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿಸಿ ಕಾರ್ಮಿಕರು ಅನುಭವಿಸುತ್ತಿರುವ ಸಂಕಷ್ಟ, ಸಮಸ್ಯೆಗಳನ್ನು ಬಗೆಹರಿಸಿಕೊಡಬೇಕೆಂದು ಆಸ್ಪತ್ರೆಯ ಮುಷ್ಕರ ನಿರತ ಎಂಪ್ಲಾಯಿಸ್ ಯೂನಿಯನ್ ಸದಸ್ಯರು ಎಐಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಬುಧವಾರ ಮನವಿ ಸಲ್ಲಿಸಿದರು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಮುಖಂಡರು, ಆಸ್ಪತ್ರೆಯ ಆಡಳಿತಾಧಿಕಾರಿ ವಿನ್ವೆಂಟ್ ಪಾಲ್ ಅವರ ದುರಾಡಳಿತದಿಂದ ಆಸ್ಪತ್ರೆ ಕಾರ್ಯಚಟುವಟಿಕೆಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಕಾರ್ಮಿಕರಿಗೆ ನೀಡಬೇಕಾದ ಸೌಲಭ್ಯಗಳನ್ನು ನೀಡದೇ ವಂಚಿಸಲಾಗುತ್ತಿದೆ. ಅಲ್ಲದೇ ಕಾರ್ಮಿಕ ಸಂಘ ನೀಡಿರುವ ವೇತನ ಪರಿಷ್ಕರಣೆ ಮತ್ತು ಇತರೆ ಸೌಲಭ್ಯ ಹೆಚ್ಚಿಸಲು ನೀಡಿರುವ ಬೇಡಿಕೆ ಪತ್ರಕ್ಕೆ ಸ್ಪಂದಿಸದೆ ನಿರ್ಲಕ್ಷ್ಯ ವಹಿಸಲಾಗಿದೆ. ಕಳೆದ ಏಪ್ರಿಲ್ ತಿಂಗಳಿಂದ ಕಾರ್ಮಿಕರಿಗೆ ವೇತನವನ್ನೂ ನೀಡಿಲ್ಲ. ಹೀಗಾಗಿ ಕಾರ್ಮಿಕರ ಸಮಸ್ಯೆ ಪರಿಹಾರಕ್ಕಾಗಿ ಕಾನೂನಿನ್ವಯ ಕಳೆದ ಜುಲೈ 15ರಂದು ನೋಟಿಸ್ ಮುಷ್ಕರ ನಡೆಸಲಾಗುತ್ತಿದೆ. ಆದರೆ ಕಾರ್ಮಿಕರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಯನ್ನು ಬಗೆಹರಿಸುವ ಬದಲು ಆಡಳಿತ ಮಂಡಳಿಯು ಕಾರ್ಮಿಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ದೂರಿದರು.

ಸಿಎಸ್‌ಐ ಹೋಲ್ಡ್ ವರ್ತ್ ಮೆಮೋರಿಯಲ್ 62 ಆಸ್ಪತ್ರೆ ಎಂಪ್ಲಾಯೀಸ್ ಯೂನಿಯನ್ ಉಪಾಧ್ಯಕ್ಷ ರಾದ ದಯಾಪ್ರಕಾಶ್, ಸಿ.ಶಂಕರ್, ಪ್ರಧಾನ ಕಾರ್ಯದರ್ಶಿ ವಿಲ್ಲನ್ ಪ್ರಭಾಕರ್, ಕಾರ್ಯದರ್ಶಿ ಪಾಲ್ ಡೇವಿಡ್, ಸಹ ಕಾರ್ಯದರ್ಶಿ ಆ‌ರ್. ಸಿದ್ದರಾಜು, ಖಜಾಂಚಿ ಮ್ಯಾನ್ಯುಯಲ್, ಜೋಸೆಫ್ ಮತ್ತಿತರರು ಹಾಜರಿದ್ದರು.

ಬೇಡಿಕೆಗಳು

• ಬಾಕಿ ಉಳಿಸಿಕೊಂಡಿರುವ 4 ತಿಂಗಳ ವೇತನವನ್ನು ಕೂಡಲೇ ಪಾವತಿಸಬೇಕು

• ವೇತನ ಪರಿಷ್ಕರಣೆಯನ್ನು ನಿಗದಿತ ಅವಧಿಯೊಳಗೆ ಮಾತುಕತೆಯ ಮೂಲಕ ಬಗೆಹರಿಸಬೇಕು

• ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸಲು ಕ್ರಮ ತೆಗೆದುಕೊಳ್ಳಬೇಕು

• ಈಗಾಗಲೇ ನಿವೃತ್ತರಾದ ಕಾರ್ಮಿಕರಿಗೆ (ಉಪಧನ) ಉಳಿಸಿಕೊಂಡಿದ್ದು, ಕೂಡಲೇ ಪಾವತಿಸಲು ಕ್ರಮ ತೆಗೆದುಕೊಳ್ಳಬೇಕು

ಭೂಮಿಕಾ

Recent Posts

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

10 mins ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

45 mins ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

1 hour ago

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

17 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

20 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

20 hours ago