Andolana originals

‘ಮಿಷನ್ ಸುರಕ್ಷಾ’ ಅಭಿಯಾನ ಸರಿಯಲ್ಲ

  • ರಾಜ್ಯ ಸರ್ಕಾರದ ಕ್ರಮಕ್ಕೆ ಅಖಿಲ ಭಾರತ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಖಂಡನೆ
  • ವಿದ್ಯಾರ್ಥಿನಿಯರ ಮುಟ್ಟಿನ ಚಕ್ರದ ಮಾಹಿತಿ ಸಂಗ್ರಹ ಯಾವುದೇ ಕಾರಣಕ್ಕೂ ಸ್ವೀಕಾರಾರ್ಹವಲ್ಲ ಎಂದು ಚಿಂತಕರ ಆಕ್ರೋಶ
  • ಈ ಅಭಿಯಾನವೇ ಅಸಂಬದ್ಧ ಕ್ರಮ;  ಮುಟ್ಟಿನ ಚಕ್ರದ ಬಗ್ಗೆ ಡೇಟಾ ಸಂಗ್ರಹಿಸುವುದು ಅನಗತ್ಯ ನಡ

ಮೈಸೂರು: ಬಾಲ್ಯ ವಿವಾಹ ಮತ್ತು ಹದಿಹರಯದ ಗರ್ಭಧಾರಣೆಯ ಬಗ್ಗೆ ಸಾಕಷ್ಟು ಕಳವಳ ವ್ಯಕ್ತವಾದ ಕಾರಣ ಶಿವಮೊಗ್ಗ  ಜಿಲ್ಲಾಡಳಿತವು ಮಿಷನ್ ಸುರಕ್ಷಾ ಅಭಿಯಾನವನ್ನು ನಡೆಸಲು ಮುಂದಾಗಿರುವುದು ಸರಿಯಾದ ಕ್ರಮವಲ್ಲ ಎಂದು ಅಖಿಲ ಭಾರತ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ (ಎಐಪಿಡಬ್ಲ್ಯೂಎ)  ಅಸಮಾಧಾನ ವ್ಯಕ್ತಪಡಿಸಿದೆ.

ಸುರಕ್ಷಾ ಅಭಿಯಾನ ಕೈಗೊಳ್ಳುವ ಸಂಬಂಧ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.  ಹೇಮಂತ್ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು,  ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಮತ್ತು ಜಿಲ್ಲೆಯ ಐಟಿಐ ಮತ್ತು ಡಿಪ್ಲೊಮಾ ಕಾಲೇಜುಗಳ ಪ್ರಾಂಶುಪಾಲರಿಗೆ ಜ್ಞಾಪಕ ಪತ್ರವನ್ನು ಬಿಡುಗಡೆ ಮಾಡಿದ್ದಾರೆ.

ಇದರ ಅನ್ವಯ ಇನ್ನು ಮುಂದೆ ಕಾಲೇಜುಗಳು ವಿದ್ಯಾರ್ಥಿನಿಯರ ಮುಟ್ಟಿನ ಚಕ್ರದ ಬಗ್ಗೆ ದಾಖಲೆಯನ್ನು ನಿರ್ವಹಿಸಬೇಕು ಎಂಬುದು ಒಪ್ಪುವಂತಹ ವಿಷಯವಲ್ಲ ಎಂದು  ಅಖಿಲ ಭಾರತ ಮಹಿಳಾ ದೌರ್ಜನ್ಯ ವಿರೋಧಿ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರಾದ ಡಾ.ಇ.ರತಿ ರಾವ್,  ಕರ್ನಾಟಕ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಸುಮನಾ, ಸಬಿಹಾ,  ನಾ.ದಿವಾಕರ್, ಸರಸ್ವತಿ, ಶಬಾನಾ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲಾಡಳಿತದ ಈ ಮಿಷನ್ ಅಭಿಯಾನದ ಉದ್ದೇಶ ಒಳ್ಳೆಯದೇ ಎಂದು ಹಲವರು ಭಾವಿಸಿದ್ದುಂಟು. ಆದರೆ ವಿದ್ಯಾರ್ಥಿ ನಿಯರ ಮುಟ್ಟಿನ ಚಕ್ರದ ಮಾಹಿತಿಯನ್ನು ಸಂಗ್ರಹಿಸುವುದು ಯಾವುದೇ ಕಾರಣಕ್ಕೂ ಸ್ವೀಕಾರಾರ್ಹವಲ್ಲ.

ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶಕ್ಕೋಸ್ಕರ ಗ್ರಾಮ ಮಟ್ಟದ ಸಮಿತಿಗಳೊಂದಿಗೆ ಈ ಸೂಕ್ಷ್ಮ ಡೇಟಾವನ್ನು ಕಾಲೇಜು ಆಡಳಿತ ಹಂಚಿಕೊಳ್ಳುವುದು ಅಗತ್ಯ ಎಂದು ಜ್ಞಾಪಕ ಪತ್ರದಲ್ಲಿ ಸೂಚಿಸಲಾಗಿದೆ. ಹೀಗಾಗಿ ಈ ಸುರಕ್ಷಾ ಅಭಿಯಾನವು ಸಂಪೂರ್ಣವಾಗಿ ಸ್ಪಷ್ಟತೆಯ ಕೊರತೆಯಿಂದ ಕೂಡಿದೆ ಎಂದು ದೂರಿದ್ದಾರೆ.  ಈ ಅಭಿಯಾನವೇ ಅಸಂಬದ್ಧ ಕ್ರಮವಾಗಿರುವ ಕಾರಣ ಮುಟ್ಟಿನ ಚಕ್ರದ ಬಗ್ಗೆ ಡೇಟಾವನ್ನು ಸಂಗ್ರಹಿಸುವುದು ಅನಗತ್ಯ ನಡೆಯಾಗಿದೆ. ಬದಲಾಗಿ ವೈಜ್ಞಾನಿಕ ಆಧಾರದ ಮೇಲೆ ಪುರುಷ ಮತ್ತು ಮಹಿಳೆಯ ದೇಹ ರಚನೆ,  ಅಂಗಾಂಗಗಳ ಕಾರ್ಯನಿರ್ವಹಣೆ ಕುರಿತು ವಿದ್ಯಾರ್ಥಿಗಳಲ್ಲಿ, ಜನರಲ್ಲಿ ಆಡಳಿತದ ಎಲ್ಲ ವಿಭಾಗವೂ ಜಾಗೃತಿ ಮೂಡಿಸಬೇಕಾಗಿದೆ.

ಹದಿಹರೆಯದ ಗಂಡು ಮತ್ತು ಹೆಣ್ಣು ಮಕ್ಕಳು ಇಬ್ಬರೂ ಅನುಭವಿಸುವ ದೈಹಿಕ ಮತ್ತು ಮಾನಸಿಕ ಬದಲಾವಣೆಗಳು ಮತ್ತು ಅವುಗಳನ್ನು ಹೇಗೆ ಎದುರಿಸಬೇಕು ಎಂಬುದರ ಬಗ್ಗೆ ಪೋಷಕರು ಮತ್ತು ಶಿಕ್ಷಕರನ್ನು ಸಂವೇದನಾಶೀಲರನ್ನಾಗಿ ಮಾಡುವ ಅಗತ್ಯ ಇದೆ. ಜತೆಗೆ ಈ ಅಭಿಯಾನದಲ್ಲಿ ಹುಡುಗ ಮತ್ತು ಹುಡುಗಿಯರು ಇಬ್ಬರೂ ಭಾಗಿಯಾಗಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ. ಸಂತಾನೋತ್ಪತ್ತಿ ಪ್ರಕ್ರಿಯೆಯ ವೈಜ್ಞಾನಿಕ ಅರಿವಿನ ಕೊರತೆಯಿಂದಾಗಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆಗಳು,  ಲೈಂಗಿಕ ದೌರ್ಜನ್ಯಗಳು ಸಮಾಜದಲ್ಲಿ ವ್ಯಾಪಕವಾಗಿವೆ.

ಮುಖ್ಯವಾಗಿ ಪ್ರಾರಂಭಿಕವಾಗಿ ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಽಕಾರಿಗಳಿಗೆ ಜಾಗೃತಿ ತರಗತಿಯನ್ನು ನೀಡಬೇಕಾಗಿದೆ. ಹೆಣ್ಣು ಮಕ್ಕಳ ಮುಟ್ಟಿನ ಚಕ್ರವನ್ನು ಗುರಿಯಾಗಿರಿಸಿ ಕೊಂಡು ಏಕೆ ಹೀಗೆ ಚಿಂತನೆ ನಡೆಸಿದ್ದಾರೆ ಎಂಬುದು ನಿಜಕ್ಕೂ ಆಘಾತಕಾರಿಯಾದ ಸಂಗತಿ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಋತುಚಕ್ರದ ದತ್ತಾಂಶ ಸಂಗ್ರಹ ಕಾರ್ಯ ನಿಲ್ಲಿಸಲು ಆಗ್ರಹ:“ಋತುಚಕ್ರದ ಬಗ್ಗೆ ದತ್ತಾಂಶ ಸಂಗ್ರಹ ಕಾರ್ಯವನ್ನು ನಿಲ್ಲಿಸಬೇಕು. ‘ನನ್ನ ದೇಹ ನನ್ನ ಹಕ್ಕು’ ಮತ್ತು ‘ಲೈಂಗಿಕ ಕಿರುಕುಳ ತಡೆಗಟ್ಟುವಿಕೆ’ ಕುರಿತು ಸಮಾಜದ ಎಲ್ಲಾ ಹಂತಗಳಲ್ಲಿ ಜಾಗೃತಿ ಅಭಿಯಾನವನ್ನು ಪ್ರಾರಂಭಿಸಬೇಕು. ಇದರಲ್ಲಿ ವೈದ್ಯಕೀಯ ತಂಡದ ಒಳಗೊಳ್ಳುವಿಕೆಯೂ ಅತ್ಯಗತ್ಯ. ಹೀಗಾಗಿ ಪುರುಷ ಮತ್ತು ಸ್ತ್ರೀ ದೇಹಗಳ ಸುತ ಲಿನ ವೈಜ್ಞಾನಿಕ ಪರಿಕಲ್ಪನೆಗಳು, ಬಾಲ್ಯವಿವಾಹ ಮತ್ತು ಹದಿಹರೆಯದ ಗರ್ಭಧಾರಣೆಗಳು ಸೇರಿದಂತೆ ಎಲ್ಲ ರೀತಿಯ ಮಹಿಳಾ ದೌರ್ಜನ್ಯಗಳನ್ನು ತಡೆಗಟ್ಟುವಲ್ಲಿ ಪ್ರತಿಯೊಬ್ಬ ನಾಗರಿಕನ ಸಾಮಾಜಿಕ ಜವಾಬ್ದಾರಿಯನ್ನು ಜನಪ್ರಿಯಗೊಳಿಸಲು ಮಿಷನ್ ಸುರಕ್ಷಾ ಅಗಾಧ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಬಹುದಾಗಿದೆ ಎಂದು ರತಿ ರಾವ್ ಹಾಗೂ ಕರ್ನಾಟಕ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಸುಮನಾ, ಸಬಿಹಾ, ನಾ.ದಿವಾಕರ್, ಸರಸ ತಿ, ಶಬಾನಾ ಅವರು ತಿಳಿಸಿದ್ದಾರೆ. “

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

4 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

5 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

5 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

6 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

11 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

11 hours ago