ಮಂಜು ಕೋಟೆ
ಎಂಸಿಡಿಸಿಸಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ಧಿಸಲು ನಾಗನಹಳ್ಳಿ ಪಿಎಸಿಸಿಎಸ್ ನಿರ್ದೇಶಕರಾಗಿ ನೇಮಕ
ಎಚ್.ಡಿ.ಕೋಟೆ: ಎಂಸಿಡಿಸಿಸಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ಧಿಸುವ ಸಲುವಾಗಿ ತಾಲ್ಲೂಕಿನ ನಾಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗುವ ಮೂಲಕ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಸಹ ಕಾರ ಕ್ಷೇತ್ರವನ್ನು ಪ್ರವೇಶ ಮಾಡಿದ್ದಾರೆ.
ಜೂನ್ ೧೫ರಂದು ನಡೆಯಲಿರುವ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಚುನಾವಣೆಯಲ್ಲಿ ಈ ಬಾರಿ ಎಚ್.ಡಿ. ಕೋಟೆ ಕ್ಷೇತ್ರದಿಂದ ಶಾಸಕ ಅನಿಲ್ ಚಿಕ್ಕಮಾದು ಸ್ಪರ್ಧಿಸಿ ಗೆಲುವು ಸಾಧಿಸಿ ಸಹಕಾರ ಕ್ಷೇತ್ರವನ್ನು ಪ್ರವೇಶಿಸಲೇ ಬೇಕೆಂದು ಪಣ ತೊಟ್ಟಿದ್ದಾರೆ.
ಈ ನಿಟ್ಟಿನಲ್ಲಿ ನಾಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಒ ನಾಗನಹಳ್ಳಿ ಪ್ರದೀಪ, ಅಧ್ಯಕ್ಷರಾದ ಉಪಕಾರಿ, ಉಪಾಧ್ಯಕ್ಷ ಮುದ್ದೇಗೌಡ, ನಿರ್ದೇಶಕರು, ಮತ್ತಿತರರು ತಮ್ಮ ಬ್ಯಾಂಕಿನಲ್ಲಿ ನಿರ್ದೇಶಕರೊಬ್ಬರು ನಿಧನರಾಗಿದ್ದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಅನಿಲ್ ಚಿಕ್ಕಮಾದು ಅವರನ್ನು ಎಲ್ಲ ದಾಖಲಾತಿಗಳೊಂದಿಗೆ ನೇಮಕ ಮಾಡಿಕೊಂಡಿದ್ದಾರೆ.
ನಾಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಗೆ ಶಾಸಕ ಅನಿಲ್ ಚಿಕ್ಕಮಾದು ಭೇಟಿ ನೀಡಿ ಆಡಳಿತ ಮಂಡಳಿಯವರನ್ನು ಅಭಿನಂದಿಸಿ, ಮುಂದಿನ ಚುನಾವಣೆಯ ಕಾರ್ಯತಂತ್ರಗಳ ಬಗ್ಗೆ ಮುಖಂಡರು, ಹಿತೈಷಿಗಳ ಜತೆ ಚರ್ಚೆ ಮತ್ತು ಸಭೆ ನಡೆಸಿದ್ದಾರೆ. ಅನಿಲ್ ಚಿಕ್ಕಮಾದು ಅವರ ಸ್ಪರ್ಧೆಯಿಂದ ಮೈಸೂರು ಮತ್ತು ಚಾ.ನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಚುನಾವಣೆ ತೀವ್ರ ಪೈಪೋಟಿಯಿಂದ ಕೂಡಿರುವ ಸಾಧ್ಯತೆ ಇದೆ.
” ಸಹಕಾರ ಕ್ಷೇತ್ರದಿಂದಲೂ ಎಚ್.ಡಿ. ಕೋಟೆ ಕ್ಷೇತ್ರಕ್ಕೆ ಮತ್ತು ರೈತರಿಗೆ ಅನುಕೂಲ ಮಾಡುವುದಕ್ಕಾಗಿ ನಾನು ಸಹಕಾರ ಕ್ಷೇತ್ರವನ್ನು ಪ್ರವೇಶ ಮಾಡುತ್ತಿದ್ದೇನೆ. ಎಂಸಿಡಿಸಿಸಿ ಬ್ಯಾಂಕ್ನ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸುವ ಸಲುವಾಗಿ ನಾಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕನಾಗಿ ಈಗಾಗಲೇ ಆಯ್ಕೆಯಾಗಿದ್ದೇನೆ. ಎಲ್ಲಾ ರಂಗಗಳಲ್ಲೂ ತಾಲ್ಲೂಕು, ಜನಸಾಮಾನ್ಯರು, ರೈತರು ಅಭಿವೃದ್ಧಿ ಹೊಂದಬೇಕು ಎಂಬುದು ನನ್ನ ಗುರಿಯಾಗಿದೆ.”
-ಅನಿಲ್ ಚಿಕ್ಕಮಾದು, ಶಾಸಕರು.
ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…