Andolana originals

ಸಹಕಾರ ಕ್ಷೇತ್ರ ಪ್ರವೇಶಿಸಿದ ಶಾಸಕ ಅನಿಲ್ ಚಿಕ್ಕಮಾದು

ಮಂಜು ಕೋಟೆ

ಎಂಸಿಡಿಸಿಸಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ಧಿಸಲು ನಾಗನಹಳ್ಳಿ ಪಿಎಸಿಸಿಎಸ್ ನಿರ್ದೇಶಕರಾಗಿ ನೇಮಕ 

ಎಚ್.ಡಿ.ಕೋಟೆ: ಎಂಸಿಡಿಸಿಸಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ಧಿಸುವ ಸಲುವಾಗಿ ತಾಲ್ಲೂಕಿನ ನಾಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗುವ ಮೂಲಕ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಸಹ ಕಾರ ಕ್ಷೇತ್ರವನ್ನು ಪ್ರವೇಶ ಮಾಡಿದ್ದಾರೆ.

ಜೂನ್ ೧೫ರಂದು ನಡೆಯಲಿರುವ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಚುನಾವಣೆಯಲ್ಲಿ ಈ ಬಾರಿ ಎಚ್.ಡಿ. ಕೋಟೆ ಕ್ಷೇತ್ರದಿಂದ ಶಾಸಕ ಅನಿಲ್ ಚಿಕ್ಕಮಾದು ಸ್ಪರ್ಧಿಸಿ ಗೆಲುವು ಸಾಧಿಸಿ ಸಹಕಾರ ಕ್ಷೇತ್ರವನ್ನು ಪ್ರವೇಶಿಸಲೇ ಬೇಕೆಂದು ಪಣ ತೊಟ್ಟಿದ್ದಾರೆ.

ಈ ನಿಟ್ಟಿನಲ್ಲಿ ನಾಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಒ ನಾಗನಹಳ್ಳಿ ಪ್ರದೀಪ, ಅಧ್ಯಕ್ಷರಾದ ಉಪಕಾರಿ, ಉಪಾಧ್ಯಕ್ಷ ಮುದ್ದೇಗೌಡ, ನಿರ್ದೇಶಕರು, ಮತ್ತಿತರರು ತಮ್ಮ ಬ್ಯಾಂಕಿನಲ್ಲಿ ನಿರ್ದೇಶಕರೊಬ್ಬರು ನಿಧನರಾಗಿದ್ದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಅನಿಲ್ ಚಿಕ್ಕಮಾದು ಅವರನ್ನು ಎಲ್ಲ ದಾಖಲಾತಿಗಳೊಂದಿಗೆ ನೇಮಕ ಮಾಡಿಕೊಂಡಿದ್ದಾರೆ.

ನಾಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಗೆ ಶಾಸಕ ಅನಿಲ್ ಚಿಕ್ಕಮಾದು ಭೇಟಿ ನೀಡಿ ಆಡಳಿತ ಮಂಡಳಿಯವರನ್ನು ಅಭಿನಂದಿಸಿ, ಮುಂದಿನ ಚುನಾವಣೆಯ ಕಾರ್ಯತಂತ್ರಗಳ ಬಗ್ಗೆ ಮುಖಂಡರು, ಹಿತೈಷಿಗಳ ಜತೆ ಚರ್ಚೆ ಮತ್ತು ಸಭೆ ನಡೆಸಿದ್ದಾರೆ. ಅನಿಲ್ ಚಿಕ್ಕಮಾದು ಅವರ ಸ್ಪರ್ಧೆಯಿಂದ ಮೈಸೂರು ಮತ್ತು ಚಾ.ನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಚುನಾವಣೆ ತೀವ್ರ ಪೈಪೋಟಿಯಿಂದ ಕೂಡಿರುವ ಸಾಧ್ಯತೆ ಇದೆ.

” ಸಹಕಾರ ಕ್ಷೇತ್ರದಿಂದಲೂ ಎಚ್.ಡಿ. ಕೋಟೆ ಕ್ಷೇತ್ರಕ್ಕೆ ಮತ್ತು ರೈತರಿಗೆ ಅನುಕೂಲ ಮಾಡುವುದಕ್ಕಾಗಿ ನಾನು ಸಹಕಾರ ಕ್ಷೇತ್ರವನ್ನು ಪ್ರವೇಶ ಮಾಡುತ್ತಿದ್ದೇನೆ. ಎಂಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸುವ ಸಲುವಾಗಿ ನಾಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕನಾಗಿ ಈಗಾಗಲೇ ಆಯ್ಕೆಯಾಗಿದ್ದೇನೆ. ಎಲ್ಲಾ ರಂಗಗಳಲ್ಲೂ ತಾಲ್ಲೂಕು, ಜನಸಾಮಾನ್ಯರು, ರೈತರು ಅಭಿವೃದ್ಧಿ ಹೊಂದಬೇಕು ಎಂಬುದು ನನ್ನ ಗುರಿಯಾಗಿದೆ.”

-ಅನಿಲ್ ಚಿಕ್ಕಮಾದು, ಶಾಸಕರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

11 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

11 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

11 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

11 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

11 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

11 hours ago