ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾ ಯಣ ಅವರು ನಗರದ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿಗಳ ಬೆವರಿಳಿಸಿದ ಘಟನೆ ಆಸ್ಪತ್ರೆಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿಯ ಪ್ರಥಮ ವಾರ್ಷಿಕ ಸಭೆಯಲ್ಲಿ ನಡೆಯಿತು.
ತಾಲ್ಲೂಕು ಆಸ್ಪತ್ರೆಯಲ್ಲಿ ಬುಧವಾರ ನಡೆದ ಆರೋಗ್ಯ ರಕ್ಷಾ ಸಮಿತಿಯ ಪ್ರಥಮ ವಾರ್ಷಿಕ ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕರು, ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಶಿವಪ್ರಸಾದ ಅವರು ೨೦೨೩-೨೪ನೇ ಸಾಲಿನ ಆಯವ್ಯಯಗಳ ವರದಿಯನ್ನು ಮಂಡಿಸಿದಾಗ ಅದನ್ನು ಪರಿಶೀಲನೆಗೆ ಕೈಗೆತ್ತಿಕೊಂಡು ಕೆಂಡಾಮಂಡಲರಾಗಿ ಸಭೆ ನಡೆಸುವ ರೀತಿ ಇದಲ್ಲ ಎಂದರು.
ಈ ಸಭೆಗೆ ಎಂಟು ಜನ ನಾಮನಿರ್ದೇಶಿತ ಸದಸ್ಯರಿದ್ದಾರೆ. ಅವರು ಹಾಗೂ ತಮಗೆ ಈ ಅಂದಾಜು ವೆಚ್ಚಗಳ ಆಮೂಲಾಗ್ರ ಮಾಹಿತಿಯನ್ನು ಮೊದಲೇ ನೀಡಿ ನಂತರ ವಾರ್ಷಿಕ ಸಭೆ ಕರೆಯಬೇಕಿತ್ತು. ಆದರೆ ಇದಾಗಿಲ್ಲ, ಯಾವ ಸದಸ್ಯರಿಗೂ ಮಾಹಿತಿ ನೀಡಿಲ್ಲ. ಈಗ ದಿಢೀರೆಂದು ಚರ್ಚಿಸಿ ಅನುಮೋದನೆ ನೀಡಿ ಎಂದರೆ ಹೇಗೆ? ವಿವರಗಳ ಪಟ್ಟಿ ನೀಡಿದ ೩-೪ ದಿನಗಳ ನಂತರ ಸದ್ಯದಲ್ಲೇ ಮತ್ತೆ ಸಭೆ ಕರೆಯಿರಿ. ಆ ಸಭೆಯಲ್ಲಿ ಚರ್ಚೆ ಮಾಡೋಣ. ಬೇರೆ ವಿಷಯಗಳ ಕುರಿತು ಮಾತ್ರ ಇಲ್ಲಿ ಚರ್ಚಿಸೋಣ ಎಂದರು. ವಾರ್ಷಿಕವಾಗಿ ಉಳಿದ ಹಣವನ್ನು ಯಾವ ಬಾಬ್ತಿಗೆ ಉಪಯೋಗಿಸಿಕೊಳ್ಳಬಹುದು? ಯಾವು ದಕ್ಕೆ ಬಳಸಿಕೊಳ್ಳುವಂತಿಲ್ಲ ಎಂಬುದರ ಕುರಿತಂತೆ ತಮಗೆ ಮಾಹಿತಿ ಬೇಕು. ಉದಾಹರಣೆಗೆ ತಾಯಿ-ಮಕ್ಕಳ ಆಸ್ಪತ್ರೆಯ ನಿರ್ವಹಣೆ ಇಬ್ಬರೇ ಮಹಿಳಾ ವೈದ್ಯರಿಂದ ಸಾಧ್ಯವಿಲ್ಲ. ಹಾಗಾಗಿ ಅತಿಥಿ ವೈದ್ಯರನ್ನಾದರೂ ಬಳಸಿ ಕೊಳ್ಳಬಹುದೇ ಎಂಬುದರ ಕುರಿತು ತಮಗೆ ಲಿಖಿತವಾಗಿ ಮಾಹಿತಿ ನೀಡಬೇಕು ಎಂದು ಶಾಸಕರು ಆಡಳಿತಾಧಿಕಾರಿ ಶಿವಪ್ರಸಾದರಿಗೆ ತಾಕೀತು ಮಾಡಿದರು.
ಮೇಲ್ದರ್ಜೆಗೇರಿದ ಆಸ್ಪತ್ರೆಯಲ್ಲಿ ಕುಡುಕರ ಹಾವಳಿ ಹೆಚ್ಚಾಗಿದೆ. ನಮಗೆ ರಕ್ಷಣೆ ಬೇಕು ಎಂದು ವೈದ್ಯರು ಮನವಿ ಮಾಡಿದರು. ಅಲ್ಲದೆ, ಆಸ್ಪತ್ರೆಗೆ ಶುದ್ಧ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಬೇಕು. ಶಿಥಿಲವಾದ ತಾಯಿ-ಮಕ್ಕ ಆಸ್ಪತ್ರೆಯ ಆವರಣದ ವಸತಿಗೃಹಗಳನ್ನು ಕೆಡವಿ ಹೊಸ ಕಟ್ಟಡ ನಿರ್ಮಿ ಸಬೇಕು ಎಂಬ ಬೇಡಿಕೆ ಇಟ್ಟರು. ಆಗ ಶಾಸಕರು, ಆಸ್ಪತ್ರೆಗೆ ಪೊಲೀಸ್ ಬೀಟ್ ವ್ಯವಸ್ಥೆ ಕಲ್ಪಿಸುವಂತೆ ಅಲ್ಲಿಂದಲೇ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ಕುಡಿಯುವ ನೀರಿನ ಸಂಪರ್ಕ ನೀಡುವಂತೆ ನಗರಸಭೆಯ ಅಧಿಕಾರಿಗಳಿಗೆ ತಿಳಿಸಿದರು.
ಶಿಥಿಲವಾದ ಕಟ್ಟಡಗಳ ಕುರಿತಂತೆ ಲೋಕೋಪ ಯೋಗಿ ಅಧಿಕಾರಿಗಳಿಗೆ ವರದಿ ನೀಡುವಂತೆ ಆದೇಶಿಸಿದರು. ಸಾರ್ವಜನಿಕ ಆಸ್ಪತ್ರೆಯ ವಿಸ್ತೀರ್ಣ ಹಾಗೂ ಮಾಲೀಕತ್ವದ ಕುರಿತು ಪ್ರಶ್ನಿಸಿದಾಗ ಆಘಾತಕಾರಿ ವಿಷಯ ಬೆಳಕಿಗೆ ಬಂತು. ಅದಕ್ಕೆ ಉತ್ತರಿಸಿದ ಅಧಿಕಾರಿಗಳು, ಆಸ್ಪತ್ರೆಯ ವಿಸ್ತಿರ್ಣ ೩ ಎಕರೆ ೧೬ ಗುಂಟೆ ಇದ್ದು, ೧೯೯೦ರ ದಶಕದಲ್ಲಿ ನಿರ್ಮಾಣವಾದ ಈ ಜಾಗದ ಮಾಲೀಕತ್ವ ಇಂದಿಗೂ ಮೈಸೂರು ಮಹಾ ರಾಜರ ಹೆಸರಲ್ಲೇ ಇದೆ ಎಂಬುದನ್ನು ಬಹಿರಂಗಪಡಿಸಿದಾಗ ಶಾಸಕರೂ ಸೇರಿದಂತೆ ಸಭೆಯಲ್ಲಿದ್ದವರು ಆಶ್ವರ್ಯಚಕಿತರಾದರು. ಆರೋಗ್ಯ ರಕ್ಷಾ ಸಮಿತಿಯ ೮ ಸದಸ್ಯರುಗಳೊಂದಿಗೆ ತಾಲ್ಲೂಕು ವೈದ್ಯಾಧಿಕಾರಿ ಡಾ. ಈಶ್ವರ್, ಡಾ. ಸುರೇಶ, ಡಾ. ಸುವರ್ಣ, ಡಾ. ಚಂದ್ರಕಲಾ, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಮತ್ತಿತರರು ಭಾಗಿಯಾಗಿದ್ದರು.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…