Andolana originals

ಸರ್ಕಾರಿ ಆಸ್ಪತ್ರೆ ವೈದ್ಯರ ಬೆವರಿಳಿಸಿದ ಶಾಸಕ ದರ್ಶನ್‌

ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾ ಯಣ ಅವರು ನಗರದ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿಗಳ ಬೆವರಿಳಿಸಿದ ಘಟನೆ ಆಸ್ಪತ್ರೆಯಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿಯ ಪ್ರಥಮ ವಾರ್ಷಿಕ ಸಭೆಯಲ್ಲಿ ನಡೆಯಿತು.

ತಾಲ್ಲೂಕು ಆಸ್ಪತ್ರೆಯಲ್ಲಿ ಬುಧವಾರ ನಡೆದ ಆರೋಗ್ಯ ರಕ್ಷಾ ಸಮಿತಿಯ ಪ್ರಥಮ ವಾರ್ಷಿಕ ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕರು, ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಶಿವಪ್ರಸಾದ ಅವರು ೨೦೨೩-೨೪ನೇ ಸಾಲಿನ ಆಯವ್ಯಯಗಳ ವರದಿಯನ್ನು ಮಂಡಿಸಿದಾಗ ಅದನ್ನು ಪರಿಶೀಲನೆಗೆ ಕೈಗೆತ್ತಿಕೊಂಡು ಕೆಂಡಾಮಂಡಲರಾಗಿ ಸಭೆ ನಡೆಸುವ ರೀತಿ ಇದಲ್ಲ ಎಂದರು.

ಈ ಸಭೆಗೆ ಎಂಟು ಜನ ನಾಮನಿರ್ದೇಶಿತ ಸದಸ್ಯರಿದ್ದಾರೆ. ಅವರು ಹಾಗೂ ತಮಗೆ ಈ ಅಂದಾಜು ವೆಚ್ಚಗಳ ಆಮೂಲಾಗ್ರ ಮಾಹಿತಿಯನ್ನು ಮೊದಲೇ ನೀಡಿ ನಂತರ ವಾರ್ಷಿಕ ಸಭೆ ಕರೆಯಬೇಕಿತ್ತು. ಆದರೆ ಇದಾಗಿಲ್ಲ, ಯಾವ ಸದಸ್ಯರಿಗೂ ಮಾಹಿತಿ ನೀಡಿಲ್ಲ. ಈಗ ದಿಢೀರೆಂದು ಚರ್ಚಿಸಿ ಅನುಮೋದನೆ ನೀಡಿ ಎಂದರೆ ಹೇಗೆ? ವಿವರಗಳ ಪಟ್ಟಿ ನೀಡಿದ ೩-೪ ದಿನಗಳ ನಂತರ ಸದ್ಯದಲ್ಲೇ ಮತ್ತೆ ಸಭೆ ಕರೆಯಿರಿ. ಆ ಸಭೆಯಲ್ಲಿ ಚರ್ಚೆ ಮಾಡೋಣ. ಬೇರೆ ವಿಷಯಗಳ ಕುರಿತು ಮಾತ್ರ ಇಲ್ಲಿ ಚರ್ಚಿಸೋಣ ಎಂದರು. ವಾರ್ಷಿಕವಾಗಿ ಉಳಿದ ಹಣವನ್ನು ಯಾವ ಬಾಬ್ತಿಗೆ ಉಪಯೋಗಿಸಿಕೊಳ್ಳಬಹುದು? ಯಾವು ದಕ್ಕೆ ಬಳಸಿಕೊಳ್ಳುವಂತಿಲ್ಲ ಎಂಬುದರ ಕುರಿತಂತೆ ತಮಗೆ ಮಾಹಿತಿ ಬೇಕು. ಉದಾಹರಣೆಗೆ ತಾಯಿ-ಮಕ್ಕಳ ಆಸ್ಪತ್ರೆಯ ನಿರ್ವಹಣೆ ಇಬ್ಬರೇ ಮಹಿಳಾ ವೈದ್ಯರಿಂದ ಸಾಧ್ಯವಿಲ್ಲ. ಹಾಗಾಗಿ ಅತಿಥಿ ವೈದ್ಯರನ್ನಾದರೂ ಬಳಸಿ ಕೊಳ್ಳಬಹುದೇ ಎಂಬುದರ ಕುರಿತು ತಮಗೆ ಲಿಖಿತವಾಗಿ ಮಾಹಿತಿ ನೀಡಬೇಕು ಎಂದು ಶಾಸಕರು ಆಡಳಿತಾಧಿಕಾರಿ ಶಿವಪ್ರಸಾದರಿಗೆ ತಾಕೀತು ಮಾಡಿದರು.

ಮೇಲ್ದರ್ಜೆಗೇರಿದ ಆಸ್ಪತ್ರೆಯಲ್ಲಿ ಕುಡುಕರ ಹಾವಳಿ ಹೆಚ್ಚಾಗಿದೆ. ನಮಗೆ ರಕ್ಷಣೆ ಬೇಕು ಎಂದು ವೈದ್ಯರು ಮನವಿ ಮಾಡಿದರು. ಅಲ್ಲದೆ, ಆಸ್ಪತ್ರೆಗೆ ಶುದ್ಧ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಬೇಕು. ಶಿಥಿಲವಾದ ತಾಯಿ-ಮಕ್ಕ ಆಸ್ಪತ್ರೆಯ ಆವರಣದ ವಸತಿಗೃಹಗಳನ್ನು ಕೆಡವಿ ಹೊಸ ಕಟ್ಟಡ ನಿರ್ಮಿ ಸಬೇಕು ಎಂಬ ಬೇಡಿಕೆ ಇಟ್ಟರು. ಆಗ ಶಾಸಕರು, ಆಸ್ಪತ್ರೆಗೆ ಪೊಲೀಸ್ ಬೀಟ್ ವ್ಯವಸ್ಥೆ ಕಲ್ಪಿಸುವಂತೆ ಅಲ್ಲಿಂದಲೇ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ಕುಡಿಯುವ ನೀರಿನ ಸಂಪರ್ಕ ನೀಡುವಂತೆ ನಗರಸಭೆಯ ಅಧಿಕಾರಿಗಳಿಗೆ ತಿಳಿಸಿದರು.

ಶಿಥಿಲವಾದ ಕಟ್ಟಡಗಳ ಕುರಿತಂತೆ ಲೋಕೋಪ ಯೋಗಿ ಅಧಿಕಾರಿಗಳಿಗೆ ವರದಿ ನೀಡುವಂತೆ ಆದೇಶಿಸಿದರು. ಸಾರ್ವಜನಿಕ ಆಸ್ಪತ್ರೆಯ ವಿಸ್ತೀರ್ಣ ಹಾಗೂ ಮಾಲೀಕತ್ವದ ಕುರಿತು ಪ್ರಶ್ನಿಸಿದಾಗ ಆಘಾತಕಾರಿ ವಿಷಯ ಬೆಳಕಿಗೆ ಬಂತು. ಅದಕ್ಕೆ ಉತ್ತರಿಸಿದ ಅಧಿಕಾರಿಗಳು, ಆಸ್ಪತ್ರೆಯ ವಿಸ್ತಿರ್ಣ ೩ ಎಕರೆ ೧೬ ಗುಂಟೆ ಇದ್ದು, ೧೯೯೦ರ ದಶಕದಲ್ಲಿ ನಿರ್ಮಾಣವಾದ ಈ ಜಾಗದ ಮಾಲೀಕತ್ವ ಇಂದಿಗೂ ಮೈಸೂರು ಮಹಾ ರಾಜರ ಹೆಸರಲ್ಲೇ ಇದೆ ಎಂಬುದನ್ನು ಬಹಿರಂಗಪಡಿಸಿದಾಗ ಶಾಸಕರೂ ಸೇರಿದಂತೆ ಸಭೆಯಲ್ಲಿದ್ದವರು ಆಶ್ವರ್ಯಚಕಿತರಾದರು. ಆರೋಗ್ಯ ರಕ್ಷಾ ಸಮಿತಿಯ ೮ ಸದಸ್ಯರುಗಳೊಂದಿಗೆ ತಾಲ್ಲೂಕು ವೈದ್ಯಾಧಿಕಾರಿ ಡಾ. ಈಶ್ವರ್, ಡಾ. ಸುರೇಶ, ಡಾ. ಸುವರ್ಣ, ಡಾ. ಚಂದ್ರಕಲಾ, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಮತ್ತಿತರರು ಭಾಗಿಯಾಗಿದ್ದರು.

 

andolana

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

1 hour ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

2 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

5 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

5 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

5 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

5 hours ago