Andolana originals

ಸಹಕಾರ ಕ್ಷೇತ್ರಕ್ಕೆ ಶಾಸಕ ಗಣೇಶ್‌ ಪ್ರಸಾದ್‌ ಪ್ರವೇಶ

ಮಹೇಂದ್ರ ಹಸಗೂಲಿ

ಬುಧವಾರ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಲಿರುವ ಶಾಸಕರು 

ಗುಂಡ್ಲುಪೇಟೆ: ಮೈಸೂರು- ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ (ಎಂಸಿಡಿಸಿಸಿ ಬ್ಯಾಂಕ್)ನ ನಿರ್ದೇಶಕರ ಚುನಾವಣೆಯು ಜೂ.೨೬ರಂದು ನಡೆಯಲಿದ್ದು, ಗುಂಡ್ಲುಪೇಟೆ ತಾಲ್ಲೂಕು ಭಾಗದಿಂದ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಮೊದಲ ಬಾರಿಗೆ ಸಹಕಾರ ಕ್ಷೇತ್ರದ ಚುನಾವಣೆ ಎದುರಿಸುತ್ತಿದ್ಧಾರೆ.

ತಾಲ್ಲೂಕಿನಲ್ಲಿ ೩೫ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್‌ಗಳಿದ್ದು, ಗುಂಡ್ಲುಪೇಟೆ ಪಟ್ಟಣ, ಬೊಮ್ಮಲಾಪುರ, ರಂಗೂಪುರ, ಕಸಬಾ ಪಿಎಸಿಸಿ ಗಳಿಗೆ ಮತದಾನದ ಹಕ್ಕು ಇಲ್ಲ. ೨೨ರಲ್ಲಿ ಕಾಂಗ್ರೆಸ್ ಬೆಂಬಲಿತರ ಆಡಳಿತವಿದೆ.

೯ರಲ್ಲಿ ಬಿಜೆಪಿ ಬೆಂಬ ಲಿತರ ಆಡಳಿತವಿದೆ. ೩೧ ಪಿಎಸಿಸಿಗಳ ಪೈಕಿ ೨೨ರಲ್ಲಿ ಕಾಂಗ್ರೆಸ್ ಬೆಂಬಲಿತರಿದ್ದು, ತಮ್ಮ ಪಕ್ಷದ ಶಾಸಕರೇ ಸ್ಪರ್ಧೆ ಮಾಡುವುದರಿಂದ ಸಹಕಾರ ಸಂಘದ ಮತ ಚಲಾಯಿಸುವ ಹಕ್ಕು ಪಡೆದವರು ಕಾಂಗ್ರೆಸ್ ವಿರುದ್ಧ ಮತ ಹಾಕುವ ಧೈರ್ಯ ಮಾಡುವುದಿಲ್ಲ.

ಹಾಗಾಗಿ ನಿರಾಯಾಸವಾಗಿ ಗಣೇಶ್ ಪ್ರಸಾದ್ ಗೆಲುವು ನಿಶ್ಚಿತ ಎನ್ನಲಾಗುತ್ತಿದೆ. ಇನ್ನು ಬಿಜೆಪಿಯಿಂದ ಹುಂಡೀಪುರ ಪಿಎಸಿಸಿಎಸ್ ಬ್ಯಾಂಕ್ ಅಧ್ಯಕ್ಷ ಶೆಟ್ಟಹಳ್ಳಿ ವೀರಪ್ಪ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಸ್ಥಳೀಯ ಶಾಸಕರ ವಿರುದ್ಧ ಇವರು ಗೆಲುವು ಸಾಧಿಸುವುದು ಕಷ್ಟಕರ ಎಂಬ ಮಾತುಗಳು ಕೇಳಿಬರುತ್ತಿವೆ.

ಕಾಂಗ್ರೆಸ್‌ನಲ್ಲಿ ಸ್ಪರ್ಧೆಗೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿತ್ತು. ಚಾಮುಲ್ ನಿರ್ದೇಶಕ ಎಚ್.ಎಸ್. ನಂಜುಂಡಪ್ರಸಾದ್, ತಾ.ಪಂ. ಮಾಜಿ ಸದಸ್ಯ ಎಚ್.ಎನ್.ನಟೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರ್, ಜಿ.ಪಂ. ಮಾಜಿ ಉಪಾಧ್ಯಕ್ಷ ಕೆ. ಎಸ್.ಮಹೇಶ್ ಸೇರಿದಂತೆ ಇನ್ನೂ ಅನೇಕರು ಶಾಸಕರ ದುಂಬಾಲು ಬಿದ್ದಿದ್ದರು. ಕಳೆದ ಬಾರಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದ ಕಾರಣ ಕಾಂಗ್ರೆಸ್ ಅಭ್ಯರ್ಥಿಗೆ ಸೋಲಾಗಿತ್ತು. ಇಂತಹ ಘಟನೆ ಮರುಕಳಿಸಬಾರದು ಎಂಬ ಕಾರಣಕ್ಕೆ ಶಾಸಕರೇ ಕಣಕ್ಕಿಳಿದಿದ್ದಾರೆ.

” ಕಾಂಗ್ರೆಸ್ ಹೈಕಮಾಂಡ್ ಸೂಚನೆಯನ್ನು ನಾನು ಪಾಲಿಸಬೇಕಿದೆ. ಶಾಸಕರೇ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಇಲ್ಲವೇ ಎಂದು ಮಾಜಿ ಶಾಸಕರು ಹೇಳಿಕೆ ನೀಡಿದ್ದಾರೆ. ಅವರೇ ನನ್ನ ವಿರುದ್ಧ ಸ್ಪರ್ಧಿಸಿದ್ದರೆ ಚೆನ್ನಾಗಿರುತ್ತಿತ್ತು. ವಂಶ ಪಾರಂಪರ್ಯ ರಾಜಕಾರಣ ಎನ್ನುವ ಶಾಸಕರಿಗೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಕ್ಕಳಿಬ್ಬರು ರಾಜಕೀಯದಲ್ಲಿ ಇರುವುದು ಗೊತ್ತಿಲ್ಲವೇ? ನಿರಂಜನಕುಮಾರ್ ಅವರ ತಂದೆ ಶಿವಮಲ್ಲಪ್ಪ ಸಾಕಷ್ಟು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದರು. ನಂತರ ಇವರು ಬೇರೆಯವರಿಗೆ ಅವಕಾಶ ನೀಡದೆ ಶಾಸಕರಾಗಲಿಲ್ಲವೇ ?”

-ಎಚ್.ಎಂ.ಗಣೇಶ್‌ಪ್ರಸಾದ್, ಶಾಸಕರು

ಆಂದೋಲನ ಡೆಸ್ಕ್

Recent Posts

ಕೋವಿಡ್‌ ಹಗರಣ: ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯ ಅಂತಿಮ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ಮೈಕೆಲ್‌…

24 mins ago

ಚಾಮುಂಡಿಬೆಟ್ಟಕ್ಕೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಭೇಟಿ

ಮೈಸೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವಿಯ…

52 mins ago

ಹೊಸ ವರ್ಷದ ಸಂಭ್ರಮ: ಚಾಮುಂಡಿಬೆಟ್ಟಕ್ಕೆ ಹರಿದು ಬಂದ ಭಕ್ತಸಾಗರ

ಮೈಸೂರು: 2026ರ ಮೊದಲ ದಿನವಾದ ಇಂದು ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ. ಹೊಸ ವರ್ಷದ ಅಂಗವಾಗಿ…

1 hour ago

ಮೈಸೂರು: ನಿರಾಶ್ರಿತರಿಗೆ ಹೊದಿಕೆ ನೀಡುವ ಮೂಲಕ ಹೊಸ ವರ್ಷಾಚರಣೆ

ಮೈಸೂರು: ಹೊಸ ವರ್ಷ ಎಂದು ಮೋಜು ಮಸ್ತಿ ಮಾಡದೇ ರಸ್ತೆ ಬದಿಯ ನಿರಾಶ್ರಿತರಿಗೆ ಹೂದಿಕೆಗಳನ್ನು ನೀಡುವ ಮೂಲಕ ಯುವಕರ ತಂಡ…

2 hours ago

ಹೊಸ ವರ್ಷದ ಸಂಭ್ರಮ: ಯೋಗನರಸಿಂಹಸ್ವಾಮಿ ದೇವಸ್ಥಾನದಲ್ಲಿ ಭಕ್ತರಿಗೆ ಲಡ್ಡು ವಿತರಣೆ

ಮೈಸೂರು: ನೂತನ ವರ್ಷವನ್ನು ಮೈಸೂರಿನ ವಿಜಯನಗರದಲ್ಲಿರುವ ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಮೂಲಕ ಸ್ವಾಗತಿಸಲಾಯಿತು.…

2 hours ago

ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ…

2 hours ago