Andolana originals

ಸಹಕಾರ ಕ್ಷೇತ್ರಕ್ಕೆ ಶಾಸಕ ಗಣೇಶ್‌ ಪ್ರಸಾದ್‌ ಪ್ರವೇಶ

ಮಹೇಂದ್ರ ಹಸಗೂಲಿ

ಬುಧವಾರ ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಲಿರುವ ಶಾಸಕರು 

ಗುಂಡ್ಲುಪೇಟೆ: ಮೈಸೂರು- ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ (ಎಂಸಿಡಿಸಿಸಿ ಬ್ಯಾಂಕ್)ನ ನಿರ್ದೇಶಕರ ಚುನಾವಣೆಯು ಜೂ.೨೬ರಂದು ನಡೆಯಲಿದ್ದು, ಗುಂಡ್ಲುಪೇಟೆ ತಾಲ್ಲೂಕು ಭಾಗದಿಂದ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಮೊದಲ ಬಾರಿಗೆ ಸಹಕಾರ ಕ್ಷೇತ್ರದ ಚುನಾವಣೆ ಎದುರಿಸುತ್ತಿದ್ಧಾರೆ.

ತಾಲ್ಲೂಕಿನಲ್ಲಿ ೩೫ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್‌ಗಳಿದ್ದು, ಗುಂಡ್ಲುಪೇಟೆ ಪಟ್ಟಣ, ಬೊಮ್ಮಲಾಪುರ, ರಂಗೂಪುರ, ಕಸಬಾ ಪಿಎಸಿಸಿ ಗಳಿಗೆ ಮತದಾನದ ಹಕ್ಕು ಇಲ್ಲ. ೨೨ರಲ್ಲಿ ಕಾಂಗ್ರೆಸ್ ಬೆಂಬಲಿತರ ಆಡಳಿತವಿದೆ.

೯ರಲ್ಲಿ ಬಿಜೆಪಿ ಬೆಂಬ ಲಿತರ ಆಡಳಿತವಿದೆ. ೩೧ ಪಿಎಸಿಸಿಗಳ ಪೈಕಿ ೨೨ರಲ್ಲಿ ಕಾಂಗ್ರೆಸ್ ಬೆಂಬಲಿತರಿದ್ದು, ತಮ್ಮ ಪಕ್ಷದ ಶಾಸಕರೇ ಸ್ಪರ್ಧೆ ಮಾಡುವುದರಿಂದ ಸಹಕಾರ ಸಂಘದ ಮತ ಚಲಾಯಿಸುವ ಹಕ್ಕು ಪಡೆದವರು ಕಾಂಗ್ರೆಸ್ ವಿರುದ್ಧ ಮತ ಹಾಕುವ ಧೈರ್ಯ ಮಾಡುವುದಿಲ್ಲ.

ಹಾಗಾಗಿ ನಿರಾಯಾಸವಾಗಿ ಗಣೇಶ್ ಪ್ರಸಾದ್ ಗೆಲುವು ನಿಶ್ಚಿತ ಎನ್ನಲಾಗುತ್ತಿದೆ. ಇನ್ನು ಬಿಜೆಪಿಯಿಂದ ಹುಂಡೀಪುರ ಪಿಎಸಿಸಿಎಸ್ ಬ್ಯಾಂಕ್ ಅಧ್ಯಕ್ಷ ಶೆಟ್ಟಹಳ್ಳಿ ವೀರಪ್ಪ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಸ್ಥಳೀಯ ಶಾಸಕರ ವಿರುದ್ಧ ಇವರು ಗೆಲುವು ಸಾಧಿಸುವುದು ಕಷ್ಟಕರ ಎಂಬ ಮಾತುಗಳು ಕೇಳಿಬರುತ್ತಿವೆ.

ಕಾಂಗ್ರೆಸ್‌ನಲ್ಲಿ ಸ್ಪರ್ಧೆಗೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿತ್ತು. ಚಾಮುಲ್ ನಿರ್ದೇಶಕ ಎಚ್.ಎಸ್. ನಂಜುಂಡಪ್ರಸಾದ್, ತಾ.ಪಂ. ಮಾಜಿ ಸದಸ್ಯ ಎಚ್.ಎನ್.ನಟೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರ್, ಜಿ.ಪಂ. ಮಾಜಿ ಉಪಾಧ್ಯಕ್ಷ ಕೆ. ಎಸ್.ಮಹೇಶ್ ಸೇರಿದಂತೆ ಇನ್ನೂ ಅನೇಕರು ಶಾಸಕರ ದುಂಬಾಲು ಬಿದ್ದಿದ್ದರು. ಕಳೆದ ಬಾರಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದ ಕಾರಣ ಕಾಂಗ್ರೆಸ್ ಅಭ್ಯರ್ಥಿಗೆ ಸೋಲಾಗಿತ್ತು. ಇಂತಹ ಘಟನೆ ಮರುಕಳಿಸಬಾರದು ಎಂಬ ಕಾರಣಕ್ಕೆ ಶಾಸಕರೇ ಕಣಕ್ಕಿಳಿದಿದ್ದಾರೆ.

” ಕಾಂಗ್ರೆಸ್ ಹೈಕಮಾಂಡ್ ಸೂಚನೆಯನ್ನು ನಾನು ಪಾಲಿಸಬೇಕಿದೆ. ಶಾಸಕರೇ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಇಲ್ಲವೇ ಎಂದು ಮಾಜಿ ಶಾಸಕರು ಹೇಳಿಕೆ ನೀಡಿದ್ದಾರೆ. ಅವರೇ ನನ್ನ ವಿರುದ್ಧ ಸ್ಪರ್ಧಿಸಿದ್ದರೆ ಚೆನ್ನಾಗಿರುತ್ತಿತ್ತು. ವಂಶ ಪಾರಂಪರ್ಯ ರಾಜಕಾರಣ ಎನ್ನುವ ಶಾಸಕರಿಗೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಕ್ಕಳಿಬ್ಬರು ರಾಜಕೀಯದಲ್ಲಿ ಇರುವುದು ಗೊತ್ತಿಲ್ಲವೇ? ನಿರಂಜನಕುಮಾರ್ ಅವರ ತಂದೆ ಶಿವಮಲ್ಲಪ್ಪ ಸಾಕಷ್ಟು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದರು. ನಂತರ ಇವರು ಬೇರೆಯವರಿಗೆ ಅವಕಾಶ ನೀಡದೆ ಶಾಸಕರಾಗಲಿಲ್ಲವೇ ?”

-ಎಚ್.ಎಂ.ಗಣೇಶ್‌ಪ್ರಸಾದ್, ಶಾಸಕರು

ಆಂದೋಲನ ಡೆಸ್ಕ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

10 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

11 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

12 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

12 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

13 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

14 hours ago