Andolana originals

ಮೊಬೈಲ್ ವ್ಯಸನ; ಕೊರೊನಾ ಸಂದರ್ಭ ಮೂಲ ಕಾರಣ

ಕೆ.ಎಸ್.ಚಂದ್ರಶೇಖರಮೂರ್ತಿ

ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ ಚಿಂತನೆಗೆ ಶಿಕ್ಷಕ ವೃಂದ ಸ್ವಾಗತ 

ಮೈಸೂರು: ಆಧುನಿಕತೆ ಬೆಳೆಯುತ್ತಾ ಹೋದಂತೆ ಆಧುನಿಕ ತಂತ್ರಜನ ಕೂಡ ನಮ್ಮ ಜೀವನ ಶೈಲಿಯೊಳಗೆ ಬೆರೆತುಕೊಳ್ಳುತ್ತದೆ. ಕೆಲ ದಶಕಗಳಿಂದ ಜೀವನಕ್ಕೆ ಅತ್ಯ ವಶ್ಯಕವಾದ ಆಹಾರ, ನೀರು, ವಸತಿ ಜೊತೆಗೆ ಮೊಬೈಲ್ ಫೋನ್ ಕೂಡ ಸೇರ್ಪಡೆಯಾಗಿದೆ. ಇಂದಿನ ಬಹುತೇಕ ಮಕ್ಕಳು ಒಂದ್ಹೊತ್ತು ಊಟ ಬಿಡುತ್ತಾರೆಯೇ ಹೊರತು, ಫೋನ್ ಬಿಟ್ಟು ಇರಲಾರರು. ಅಷ್ಟರ ಮಟ್ಟಿಗೆ ಈ ಮೊಬೈಲ್ ಗೀಳಿಗೆ ಅಂಟಿಕೊಂಡಿರುವುದುಂಟು.

ಇನ್ನು ಪ್ರೌಢಾವಸ್ಥೆಯಲ್ಲಿ ಇರುವ ಅಂದರೆ ಹದಿನಾರು ವರ್ಷದವರೆಗಿನ ಮಕ್ಕಳ ಕಥೆ ಅದಕ್ಕಿಂತ ಭಿನ್ನವಾಗಿದೆ. ಮೊಬೈಲ್ ಬಳಕೆಯಲ್ಲಿ ಹದಿಹರೆಯದ ಮಕ್ಕಳು ತಮ್ಮ ವಯೋ ಮಾನಕ್ಕನುಗುಣವಾಗಿ ಅಗತ್ಯಕ್ಕೆಮೀರಿದ ವಿಚಾರಗಳನ್ನು ತಿಳಿದು ಕೊಂಡು ಓದಿನ ಕಡೆಗಿನ ಆಸಕ್ತಿ ಕಳೆದುಕೊಳ್ಳುತ್ತಿರುವ ಪ್ರಮಾಣ ಹೆಚ್ಚಾಗುತ್ತಿದೆ.

ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಆರಂಭ ವಾದ ಈ ಆನ್‌ಲೈನ್ ತರಗತಿಗಳ ಪರಿಣಾಮವಾಗಿ ಪ್ರಾಥಮಿಕ ಶಾಲೆ ಮಕ್ಕಳಿಂದ, ಪದವಿವಿದ್ಯಾರ್ಥಿಗಳ ವರೆಗೂ ಮೊಬೈಲ್ ಅನಿವಾರ್ಯ ಎಂಬಂತಾಗಿದೆ.

ಆದರೆ, ಇತ್ತೀಚಿನ ದಿನಗಳಲ್ಲಿ ಬಹುತೇಕ ವಿದ್ಯಾರ್ಥಿಗಳು ಮೊಬೈಲ್ ಹಿಡಿದುಕೊಂಡು ಫೇಸ್‌ಬುಕ್, ವಾಟ್ಸಾಪ್, ಇನ್ಸ್ಟಾಗ್ರಾಮ್‌ನಂತಹ ಸಾಮಾಜಿಕ ಜಾಲ ತಾಣಗಳಲ್ಲಿ ಕಾಲಹರಣ ಮಾಡುತ್ತಿದ್ದಾರೆ. ಮೊಬೈಲ್ಬಳಕೆಯಿಂದಾಗಿ ಅವರ ನಡೆ ನುಡಿಯಲ್ಲಿ ಬದಲಾವಣೆ, ಶೈಕ್ಷಣಿಕ ಪ್ರಗತಿಯಲ್ಲಿ ಕುಂಠಿತ, ವೈಚಾರಿಕ, ವೈಜ್ಞಾನಿಕ, ಮೌಲ್ಯ ಆಧಾರಿತ ಶಿಕ್ಷಣ ಸೇರಿದಂತೆ ಮಕ್ಕಳ ವ್ಯಕ್ತಿತ್ವ ವಿಕಸನದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ೧೬ ವರ್ಷ ಅಂದರೆ ಎಸ್‌ಎಸ್‌ಎಲ್‌ಸಿವರೆಗಿನ ಮಕ್ಕಳು ಬಳಕೆ ಮಾಡುವುದನ್ನು ನಿರ್ಬಂಧಿಸಬೇಕು ಎಂಬ ಆಲೋಚನೆ ಮಾಡಿದೆ.

ಹದಿನಾರು ವರ್ಷ ವಯೋ ಮಾನದ ಒಳಗಿನ ಮಕ್ಕಳು ಮೊಬೈಲ್ ಬಳಸುವುದನ್ನು ನಿಷೇಧಿಸುವ ಸಂಬಂಧ ನೀತಿ ರೂಪಿಸಲು ಮಿತಿಯೊಂದನ್ನು ರಚನೆ ಮಾಡಲಿದ್ದು, ಈ ಸಮಿತಿ ಯಲ್ಲಿ ಶಿಕ್ಷಣ ತಜ್ಞರು, ತಾಂತ್ರಿಕ ತಜ್ಞರು, ತರಬೇತಿ ಸಂಸ್ಥೆಗಳು, ಮನೋವೈದ್ಯರು ಇರಲಿದ್ದಾರೆ ಎಂದು ತಿಳಿದುಬಂದಿದೆ.

ಈಗಾಗಲೇ ಯುರೋಪ್ ಆಸ್ಟ್ರೇಲಿಯಾಗಳಲ್ಲಿ ಶಾಲಾ ಕಾಲೇಜುಗಳಲ್ಲಿ ಮೊಬೈಲ್ ನಿಷೇಧ ನೀತಿ ಯಿದ್ದು, ಇದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಕೂಡ ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿರ್ಬಂಧ ನೀತಿಯನ್ನು ರೂಪಿಸುವ ಚಿಂತನೆ ನಡೆ ಯುತ್ತಿದೆ. ಒಟ್ಟಾರೆಯಾಗಿ ಸರ್ಕಾರದ ಈ ಚಿಂತನೆಗೆ ಸಾರ್ವಜನಿಕ ವಲಯ, ಪೋಷಕರು, ಶಿಕ್ಷಕ ವೃಂದ ಸ್ವಾಗತ ವ್ಯಕ್ತವಾಗುತ್ತಿದೆ

“ಮೊಬೈಲ್ ಫೋನ್ ಬಳಕೆಯಿಂದಾಗಿ ನಾವು ಗೂಗಲ್‌ನಲ್ಲಿ ಶೈಕ್ಷಣಿಕ ವಿಚಾರವಾಗಿ ಹೆಚ್ಚುಮಾಹಿತಿಯನ್ನು ಪಡೆಯಬಹುದು.ಶಾಲೆಗಳಿಂದ ಯಾವುದೇಮಾಹಿತಿ ಇದ್ದರೂ ಗ್ರೂಪ್ನಲ್ಲಿ ಪಡೆದುಕೊಳ್ಳುತ್ತೇವೆ. ಆದರೆ ಸಾಮಾಜಿಕ ಮಾಧ್ಯಮವನ್ನು ಬಳಸಿಕೊಂಡು ಅಡ್ಡದಾರಿ ಹಿಡಿಯಬಾರದು. ಫೋನ್‌ನ್ನು ಸದುಪಯೋಗ ಮಾಡಿಕೊಳ್ಳಬೇಕೇ ಹೊರತು ದುರುಪಯೋಗ ಮಾಡಿಕೊಳ್ಳಬಾರದು.”

-ರಕ್ಷಿತಾ, ವಿದ್ಯಾರ್ಥಿನಿ, ೮ನೇ ತರಗತಿ, ಸರ್ಕಾರಿ ಪ್ರೌಢಶಾಲೆ, ಕುಕ್ಕರಹಳ್ಳಿ

” ಬಹಳ ವರ್ಷಗಳಿಂದಲೇ ಶಾಲಾ ಆವರಣದಲ್ಲಿ ಮೊಬೈಲ್ ಫೋನ್ ಬಳಕೆ ಮಾಡುವುದನ್ನು ನಿಷೇಧಿಸಲಾಗಿದೆ. ಆದರೆ ಕೋವಿಡ್ ಸಂದರ್ಭದಲ್ಲಿ ಆನ್‌ಲೈನ್ ತರಗತಿ ಆರಂಭವಾದ ದಿನಗಳಿಂದ ಮಕ್ಕಳು ಫೋನ್‌ಗಳಿಗೆ ವ್ಯಸನಿಗಳಂತಾಗಿದ್ದಾರೆ. ಮೊಬೈಲ್ ಬಳಕೆಯಲ್ಲಿ ಇತಿಮಿತಿಯ ಜೊತೆಗೆ ಭವಿಷ್ಯ ರೂಪಿಸುವ ಮಾಹಿತಿ ವಿಚಾರವನ್ನು ತಿಳಿದು ಕೊಳ್ಳಲು ಬಳಸಿದರೆ ಉಪಯುಕ್ತವಾಗಿರುತ್ತದೆ.”

-ಆರ್.ಚಂದ್ರು, ಮುಖ್ಯ ಶಿಕ್ಷಕ, ಸರ್ಕಾರಿ ಪ್ರೌಢಶಾಲೆ, ಕುಕ್ಕರಹಳ್ಳಿ

” ಸರ್ಕಾರದ ಆಲೋಚನೆ ಸೂಕ್ತವಾಗಿದೆ. ಆದರೆ ಅದು ಎಷ್ಟರ ಮಟ್ಟಿಗೆ ಕಾರ್ಯರೂಪಕ್ಕೆ ಬರತ್ತದೆ ಎಂಬುದು ಪ್ರಶ್ನೆಯಾಗಿದೆ.ಕೊರೊನಾ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಮೊಬೈಲ್ ಕೊಟ್ಟಿದ್ದೇ ನಮ್ಮ ವ್ಯವಸ್ಥೆ. ಈಗ ಮಕ್ಕಳಿಂದ ಮೊಬೈಲ್ ವಾಪಸ್ ಪಡೆಯಲು ಆಗುತ್ತಿಲ್ಲ. ಅಷ್ಟರಮಟ್ಟಿಗೆ ಮಕ್ಕಳು ಮೊಬೈಲ್ ಫೋನ್‌ಗಳಿಗೆ ಅಂಟಿಕೊಂಡಿದ್ದಾರೆ. ಪೋಷಕರು ಮನಸ್ಸು ಮಾಡಿ ಮಕ್ಕಳಿಗೆ ಈ ಮೊಬೈಲ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸುವುದು ಸೂಕ್ತ.”

-ರಾಮಚಂದ್ರ ಭಟ್, ಮುಖ್ಯ ಶಿಕ್ಷಕರು, ಸದ್ವಿದ್ಯಾ ಪ್ರೌಢಶಾಲೆ, ಮೈಸೂರು

” ಮೊಬೈಲ್ ಬಳಕೆ ನಿಷೇಧ ಒಳ್ಳೆಯದು. ಆದರೆ ಶೈಕ್ಷಣಿಕವಾಗಿ ಉಪಯುಕ್ತ ಅಂಶಗಳನ್ನು ಬಳಸುವಂತೆಮಾಡಿ ಸಾಮಾಜಿಕ ಜಾಲತಾಣ ಸೇರಿದಂತೆ ಅನಗತ್ಯ ಎಲ್ಲಾ ಸಾಫ್ಟ್‌ವೇರ್ ಅಪ್ಲಿಕೇಶನ್‌ಗಳನ್ನು ನಿರ್ಬಂಧ ಮಾಡುವುದು ಸೂಕ್ತವಾಗಿರುತ್ತದೆ. ಮೊಬೈಲ್ ಬಳಕೆ ಬದಲು ನಾವು ಲ್ಯಾಪ್‌ಟಾಪ್ ಬಳಸಿ ಶೈಕ್ಷಣಿಕ ವಿಚಾರಗಳನ್ನು ಹೆಚ್ಚು ಅರಿಯಲು ಮುಂದಾಗಬೇಕು.”

-ಅಭಿನವ್, ೮ನೇ ತರಗತಿ, ವಿದ್ಯಾರ್ಥಿ, ಸದ್ವಿದ್ಯಾ ಪ್ರೌಢಶಾಲೆ

 

 

ಆಂದೋಲನ ಡೆಸ್ಕ್

Recent Posts

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

4 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

4 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

4 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

4 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

5 hours ago

ಬೆಳಗಾವಿ-ಮುಂಬೈ ಇಂಡಿಗೋ ವಿಮಾನ ಸೇವೆ: ದಿನಾಂಕ ಫಿಕ್ಸ್‌

ಬೆಳಗಾವಿ: ಗಡಿನಾಡು ಬೆಳಗಾವಿ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರಿದೆ. ಬೆಳಗಾವಿ ಮತ್ತು ನವಿ ಮುಂಬೈ ನಡುವೆ ನೇರ ವಿಮಾನ…

5 hours ago