Andolana originals

ಮೊಬೈಲ್ ವ್ಯಸನ; ಕೊರೊನಾ ಸಂದರ್ಭ ಮೂಲ ಕಾರಣ

ಕೆ.ಎಸ್.ಚಂದ್ರಶೇಖರಮೂರ್ತಿ

ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ ಚಿಂತನೆಗೆ ಶಿಕ್ಷಕ ವೃಂದ ಸ್ವಾಗತ 

ಮೈಸೂರು: ಆಧುನಿಕತೆ ಬೆಳೆಯುತ್ತಾ ಹೋದಂತೆ ಆಧುನಿಕ ತಂತ್ರಜನ ಕೂಡ ನಮ್ಮ ಜೀವನ ಶೈಲಿಯೊಳಗೆ ಬೆರೆತುಕೊಳ್ಳುತ್ತದೆ. ಕೆಲ ದಶಕಗಳಿಂದ ಜೀವನಕ್ಕೆ ಅತ್ಯ ವಶ್ಯಕವಾದ ಆಹಾರ, ನೀರು, ವಸತಿ ಜೊತೆಗೆ ಮೊಬೈಲ್ ಫೋನ್ ಕೂಡ ಸೇರ್ಪಡೆಯಾಗಿದೆ. ಇಂದಿನ ಬಹುತೇಕ ಮಕ್ಕಳು ಒಂದ್ಹೊತ್ತು ಊಟ ಬಿಡುತ್ತಾರೆಯೇ ಹೊರತು, ಫೋನ್ ಬಿಟ್ಟು ಇರಲಾರರು. ಅಷ್ಟರ ಮಟ್ಟಿಗೆ ಈ ಮೊಬೈಲ್ ಗೀಳಿಗೆ ಅಂಟಿಕೊಂಡಿರುವುದುಂಟು.

ಇನ್ನು ಪ್ರೌಢಾವಸ್ಥೆಯಲ್ಲಿ ಇರುವ ಅಂದರೆ ಹದಿನಾರು ವರ್ಷದವರೆಗಿನ ಮಕ್ಕಳ ಕಥೆ ಅದಕ್ಕಿಂತ ಭಿನ್ನವಾಗಿದೆ. ಮೊಬೈಲ್ ಬಳಕೆಯಲ್ಲಿ ಹದಿಹರೆಯದ ಮಕ್ಕಳು ತಮ್ಮ ವಯೋ ಮಾನಕ್ಕನುಗುಣವಾಗಿ ಅಗತ್ಯಕ್ಕೆಮೀರಿದ ವಿಚಾರಗಳನ್ನು ತಿಳಿದು ಕೊಂಡು ಓದಿನ ಕಡೆಗಿನ ಆಸಕ್ತಿ ಕಳೆದುಕೊಳ್ಳುತ್ತಿರುವ ಪ್ರಮಾಣ ಹೆಚ್ಚಾಗುತ್ತಿದೆ.

ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಆರಂಭ ವಾದ ಈ ಆನ್‌ಲೈನ್ ತರಗತಿಗಳ ಪರಿಣಾಮವಾಗಿ ಪ್ರಾಥಮಿಕ ಶಾಲೆ ಮಕ್ಕಳಿಂದ, ಪದವಿವಿದ್ಯಾರ್ಥಿಗಳ ವರೆಗೂ ಮೊಬೈಲ್ ಅನಿವಾರ್ಯ ಎಂಬಂತಾಗಿದೆ.

ಆದರೆ, ಇತ್ತೀಚಿನ ದಿನಗಳಲ್ಲಿ ಬಹುತೇಕ ವಿದ್ಯಾರ್ಥಿಗಳು ಮೊಬೈಲ್ ಹಿಡಿದುಕೊಂಡು ಫೇಸ್‌ಬುಕ್, ವಾಟ್ಸಾಪ್, ಇನ್ಸ್ಟಾಗ್ರಾಮ್‌ನಂತಹ ಸಾಮಾಜಿಕ ಜಾಲ ತಾಣಗಳಲ್ಲಿ ಕಾಲಹರಣ ಮಾಡುತ್ತಿದ್ದಾರೆ. ಮೊಬೈಲ್ಬಳಕೆಯಿಂದಾಗಿ ಅವರ ನಡೆ ನುಡಿಯಲ್ಲಿ ಬದಲಾವಣೆ, ಶೈಕ್ಷಣಿಕ ಪ್ರಗತಿಯಲ್ಲಿ ಕುಂಠಿತ, ವೈಚಾರಿಕ, ವೈಜ್ಞಾನಿಕ, ಮೌಲ್ಯ ಆಧಾರಿತ ಶಿಕ್ಷಣ ಸೇರಿದಂತೆ ಮಕ್ಕಳ ವ್ಯಕ್ತಿತ್ವ ವಿಕಸನದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ೧೬ ವರ್ಷ ಅಂದರೆ ಎಸ್‌ಎಸ್‌ಎಲ್‌ಸಿವರೆಗಿನ ಮಕ್ಕಳು ಬಳಕೆ ಮಾಡುವುದನ್ನು ನಿರ್ಬಂಧಿಸಬೇಕು ಎಂಬ ಆಲೋಚನೆ ಮಾಡಿದೆ.

ಹದಿನಾರು ವರ್ಷ ವಯೋ ಮಾನದ ಒಳಗಿನ ಮಕ್ಕಳು ಮೊಬೈಲ್ ಬಳಸುವುದನ್ನು ನಿಷೇಧಿಸುವ ಸಂಬಂಧ ನೀತಿ ರೂಪಿಸಲು ಮಿತಿಯೊಂದನ್ನು ರಚನೆ ಮಾಡಲಿದ್ದು, ಈ ಸಮಿತಿ ಯಲ್ಲಿ ಶಿಕ್ಷಣ ತಜ್ಞರು, ತಾಂತ್ರಿಕ ತಜ್ಞರು, ತರಬೇತಿ ಸಂಸ್ಥೆಗಳು, ಮನೋವೈದ್ಯರು ಇರಲಿದ್ದಾರೆ ಎಂದು ತಿಳಿದುಬಂದಿದೆ.

ಈಗಾಗಲೇ ಯುರೋಪ್ ಆಸ್ಟ್ರೇಲಿಯಾಗಳಲ್ಲಿ ಶಾಲಾ ಕಾಲೇಜುಗಳಲ್ಲಿ ಮೊಬೈಲ್ ನಿಷೇಧ ನೀತಿ ಯಿದ್ದು, ಇದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಕೂಡ ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿರ್ಬಂಧ ನೀತಿಯನ್ನು ರೂಪಿಸುವ ಚಿಂತನೆ ನಡೆ ಯುತ್ತಿದೆ. ಒಟ್ಟಾರೆಯಾಗಿ ಸರ್ಕಾರದ ಈ ಚಿಂತನೆಗೆ ಸಾರ್ವಜನಿಕ ವಲಯ, ಪೋಷಕರು, ಶಿಕ್ಷಕ ವೃಂದ ಸ್ವಾಗತ ವ್ಯಕ್ತವಾಗುತ್ತಿದೆ

“ಮೊಬೈಲ್ ಫೋನ್ ಬಳಕೆಯಿಂದಾಗಿ ನಾವು ಗೂಗಲ್‌ನಲ್ಲಿ ಶೈಕ್ಷಣಿಕ ವಿಚಾರವಾಗಿ ಹೆಚ್ಚುಮಾಹಿತಿಯನ್ನು ಪಡೆಯಬಹುದು.ಶಾಲೆಗಳಿಂದ ಯಾವುದೇಮಾಹಿತಿ ಇದ್ದರೂ ಗ್ರೂಪ್ನಲ್ಲಿ ಪಡೆದುಕೊಳ್ಳುತ್ತೇವೆ. ಆದರೆ ಸಾಮಾಜಿಕ ಮಾಧ್ಯಮವನ್ನು ಬಳಸಿಕೊಂಡು ಅಡ್ಡದಾರಿ ಹಿಡಿಯಬಾರದು. ಫೋನ್‌ನ್ನು ಸದುಪಯೋಗ ಮಾಡಿಕೊಳ್ಳಬೇಕೇ ಹೊರತು ದುರುಪಯೋಗ ಮಾಡಿಕೊಳ್ಳಬಾರದು.”

-ರಕ್ಷಿತಾ, ವಿದ್ಯಾರ್ಥಿನಿ, ೮ನೇ ತರಗತಿ, ಸರ್ಕಾರಿ ಪ್ರೌಢಶಾಲೆ, ಕುಕ್ಕರಹಳ್ಳಿ

” ಬಹಳ ವರ್ಷಗಳಿಂದಲೇ ಶಾಲಾ ಆವರಣದಲ್ಲಿ ಮೊಬೈಲ್ ಫೋನ್ ಬಳಕೆ ಮಾಡುವುದನ್ನು ನಿಷೇಧಿಸಲಾಗಿದೆ. ಆದರೆ ಕೋವಿಡ್ ಸಂದರ್ಭದಲ್ಲಿ ಆನ್‌ಲೈನ್ ತರಗತಿ ಆರಂಭವಾದ ದಿನಗಳಿಂದ ಮಕ್ಕಳು ಫೋನ್‌ಗಳಿಗೆ ವ್ಯಸನಿಗಳಂತಾಗಿದ್ದಾರೆ. ಮೊಬೈಲ್ ಬಳಕೆಯಲ್ಲಿ ಇತಿಮಿತಿಯ ಜೊತೆಗೆ ಭವಿಷ್ಯ ರೂಪಿಸುವ ಮಾಹಿತಿ ವಿಚಾರವನ್ನು ತಿಳಿದು ಕೊಳ್ಳಲು ಬಳಸಿದರೆ ಉಪಯುಕ್ತವಾಗಿರುತ್ತದೆ.”

-ಆರ್.ಚಂದ್ರು, ಮುಖ್ಯ ಶಿಕ್ಷಕ, ಸರ್ಕಾರಿ ಪ್ರೌಢಶಾಲೆ, ಕುಕ್ಕರಹಳ್ಳಿ

” ಸರ್ಕಾರದ ಆಲೋಚನೆ ಸೂಕ್ತವಾಗಿದೆ. ಆದರೆ ಅದು ಎಷ್ಟರ ಮಟ್ಟಿಗೆ ಕಾರ್ಯರೂಪಕ್ಕೆ ಬರತ್ತದೆ ಎಂಬುದು ಪ್ರಶ್ನೆಯಾಗಿದೆ.ಕೊರೊನಾ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಮೊಬೈಲ್ ಕೊಟ್ಟಿದ್ದೇ ನಮ್ಮ ವ್ಯವಸ್ಥೆ. ಈಗ ಮಕ್ಕಳಿಂದ ಮೊಬೈಲ್ ವಾಪಸ್ ಪಡೆಯಲು ಆಗುತ್ತಿಲ್ಲ. ಅಷ್ಟರಮಟ್ಟಿಗೆ ಮಕ್ಕಳು ಮೊಬೈಲ್ ಫೋನ್‌ಗಳಿಗೆ ಅಂಟಿಕೊಂಡಿದ್ದಾರೆ. ಪೋಷಕರು ಮನಸ್ಸು ಮಾಡಿ ಮಕ್ಕಳಿಗೆ ಈ ಮೊಬೈಲ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸುವುದು ಸೂಕ್ತ.”

-ರಾಮಚಂದ್ರ ಭಟ್, ಮುಖ್ಯ ಶಿಕ್ಷಕರು, ಸದ್ವಿದ್ಯಾ ಪ್ರೌಢಶಾಲೆ, ಮೈಸೂರು

” ಮೊಬೈಲ್ ಬಳಕೆ ನಿಷೇಧ ಒಳ್ಳೆಯದು. ಆದರೆ ಶೈಕ್ಷಣಿಕವಾಗಿ ಉಪಯುಕ್ತ ಅಂಶಗಳನ್ನು ಬಳಸುವಂತೆಮಾಡಿ ಸಾಮಾಜಿಕ ಜಾಲತಾಣ ಸೇರಿದಂತೆ ಅನಗತ್ಯ ಎಲ್ಲಾ ಸಾಫ್ಟ್‌ವೇರ್ ಅಪ್ಲಿಕೇಶನ್‌ಗಳನ್ನು ನಿರ್ಬಂಧ ಮಾಡುವುದು ಸೂಕ್ತವಾಗಿರುತ್ತದೆ. ಮೊಬೈಲ್ ಬಳಕೆ ಬದಲು ನಾವು ಲ್ಯಾಪ್‌ಟಾಪ್ ಬಳಸಿ ಶೈಕ್ಷಣಿಕ ವಿಚಾರಗಳನ್ನು ಹೆಚ್ಚು ಅರಿಯಲು ಮುಂದಾಗಬೇಕು.”

-ಅಭಿನವ್, ೮ನೇ ತರಗತಿ, ವಿದ್ಯಾರ್ಥಿ, ಸದ್ವಿದ್ಯಾ ಪ್ರೌಢಶಾಲೆ

 

 

ಆಂದೋಲನ ಡೆಸ್ಕ್

Recent Posts

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

50 mins ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

2 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 19  ಶುಕ್ರವಾರ  

2 hours ago

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

11 hours ago