Andolana originals

ಮೂಗನಕೊಪ್ಪಲಿನಲ್ಲಿ ಮಾದರಿ ಚಾಕಿ ಸಾಕಾಣಿಕಾ ಕೇಂದ್ರ

ಮಾಮರಶಿ

ರೇಷ್ಮೆ ಕೃಷಿಯಿಂದಲೇ ಉದ್ಯಮ ಕಟ್ಟಿದ ರೇಷ್ಮೆ ತ್ಯಾಗರಾಜು

೨೦೦ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ನೀಡಿದ ರೈತನ ಮಗ

ಮಳವಳ್ಳಿ: ರೇಷ್ಮೆ ಬೆಳೆಯಿಂದ ರೈತನ ಜೀವನ ಹಸನಾಗಲಿದೆ ಎಂಬುದನ್ನು ಸಾಬೀತುಪಡಿಸಿ, ಹಲವರಿಗೆ ಉದ್ಯೋಗ ಕಲ್ಪಿಸಿ, ದೇಶ-ವಿದೇಶಗಳಲ್ಲಿ ಅಧ್ಯಯನ ನಡೆಸಿ ‘ರೇಷ್ಮೆ ರಾಜ’ ಎಂಬ ಖ್ಯಾತಿ ಪಡೆದಿರುವ ಯುವ ರೈತ ರೇಷ್ಮೆ ಬೆಳೆಗಾರ ತ್ಯಾಗರಾಜು ಅವರ ಸಾಧನೆ ರೈತರಿಗೆ ಮಾದರಿಯಾಗಿದೆ.

ರಾಮನಗರ ಜಿಲ್ಲೆ, ಬಿಡದಿ ಹೋಬಳಿಯ ಕುಗ್ರಾಮ ಕಾಕರಾಮರನಹಳ್ಳಿಯವೆಂಕಟರಾಮಯ್ಯ-ವನ ಜಾಕ್ಷಮ್ಮ ಅವರ ಪುತ್ರ ತ್ಯಾಗರಾಜ ಅವರು ಬಿ.ಎ. ಪದವೀಧರ. ರೇಷ್ಮೆ ಕೃಷಿ ಬಗ್ಗೆ ಆಸಕ್ತಿ ಹೊಂದಿದ್ದ ಇವರು, ಕೀರನಗೆರೆ ಜಗದೀಶ್ ಅವರ ಚಾಕಿ ಕೇಂದ್ರದಲ್ಲಿ ೧೨ ವರ್ಷ ರೇಷ್ಮೆ ಬೆಳೆ, ಅಭಿವೃದ್ಧಿ ಬಗ್ಗೆ ಕಲಿತು, ೨೦೧೬ರಲ್ಲಿ ಮಳವಳ್ಳಿ ತಾಲ್ಲೂಕಿನ ಮೂಗನಕೊಪ್ಪಲು ಬಳಿ ‘ಮೂಗನಕೊಪ್ಪಲು ಚಾಕಿ ಸಾಕಾಣಿಕಾ ಕೇಂದ್ರ’ವನ್ನು ಆರಂಭಿಸಿ ೨೦೦ ಜನರಿಗೆ ಉದ್ಯೋಗ ಕಲ್ಪಿಸಿದ್ದಾರೆ. ತಮ್ಮ ನೌಕರರಿಗೆ ಪಿಎಫ್, ಇಎಸ್‌ಐ, ವಿಮೆ ಸೌಲಭ್ಯ ನೀಡಿ ಅವರ ಕುಟುಂಬಕ್ಕೆ ಆಧಾರವಾಗಿದ್ದಾರೆ.

೧೦ ಸಾವಿರ ರೈತರಿಗೆ ಮರಿ ಸರಬರಾಜು ಗುರಿ: ಆರಂಭದಲ್ಲಿ ೫೦ ಲಕ್ಷ ರೂ. ಬಂಡವಾಳ ಹೂಡಿ ಇದೀಗ ಒಂದೂವರೆ ಕೋಟಿ ರೂ. ಬಂಡವಾಳದೊಂದಿಗೆ ತಿಂಗಳಿಗೆ ಒಂದು ಲಕ್ಷಕ್ಕೂ ಅಧಿಕ ಚಾಕಿ ಮರಿಗಳನ್ನು ಉತ್ಪಾದಿಸಿ, ರಾಜ್ಯದ ೬ ಸಾವಿರ ರೈತರಿಗೆ ಸರಬರಾಜು ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ೧೦ ಸಾವಿರ ರೈತರಿಗೆ ಸರಬರಾಜು ಮಾಡುವ ಗುರಿ ಇಟ್ಟುಕೊಂಡಿದ್ದಾರೆ.

೫ ಸಾವಿರ ರೇಷ್ಮೆ ಗೂಡು ಉತ್ಪಾದಿಸುವ ಗುರಿ: ೩೯ನೇ ವಯಸ್ಸಿನಲ್ಲಿ ಕೃಷಿಯಲ್ಲಿ ತೊಡಗಿಸಿಕೊಂಡು, ರೇಷ್ಮೆ ಕಾಯಕ ಮಾಡುತ್ತಾ ತಿಂಗಳಿಗೆ ೨ ಸಾವಿರ ಕೆ.ಜಿ. ರೇಷ್ಮೆಗೂಡು ಉತ್ಪಾದಿಸುತ್ತಿದ್ದಾರೆ. ರೈತರಿಗೆ ಉಚಿತ ತರಬೇತಿ: ಸರ್ಕಾರದ ಯಾವುದೇ ಸವಲತ್ತು ಪಡೆಯದೇ ರೈತರಿಗೆ ಉಚಿತವಾಗಿ ತರಬೇತಿ, ಶೇ.೯೫ಕ್ಕೂ ಹೆಚ್ಚು ಇಳುವರಿ ಉತ್ಪಾದಿಸಲು ತಾಂತ್ರಿಕತೆ ಮತ್ತು ಸಲಹೆಯೊಂದಿಗೆ ಪ್ರತಿ ವರ್ಷ ರಾಜ್ಯದ ಸಾವಿರಾರು ಯುವ ರೈತರಿಗೆ ತರಬೇತಿ ನೀಡಿದ್ದಾರೆ.

೧೮ ದೇಶಗಳಿಗೆ ಅಧ್ಯಯನ ಪ್ರವಾಸ: ಚೀನಾ, ಬ್ರೆಜಿಲ್, ಜಪಾನ್, ಥೈಲ್ಯಾಂಡ್, ಇಸ್ರೇಲ್ ದೇಶಗಳು ಸೇರಿದಂತೆ ೧೮ಕ್ಕೂ ಹೆಚ್ಚು ದೇಶಗಳಿಗೆ ಪ್ರವಾಸ ತೆರಳಿ ರೇಷ್ಮೆ ಕೃಷಿ ಕುರಿತು ಅಧ್ಯಯನ ಮಾಡಿದ್ದಾರೆ.

ಸಮಾಜ ಸೇವೆಯಲ್ಲೂ ಮುಂದು: ಉತ್ತಮ ದ್ವಿತಳಿ ರೇಷ್ಮೆ ಬೆಳೆಗಾರರನ್ನು ಸನ್ಮಾನಿಸುತ್ತಾ, ರೇಷ್ಮೆ ಬೆಳೆಗಾರರಿಗೆ ಮಾರ್ಗದರ್ಶಕರಾಗಿರುವುದಲ್ಲದೆ, ಸರ್ಕಾರಿ ಶಾಲೆಗಳಿಗೆ ವಾಟರ್ ಫಿಲ್ಟರ್, ಕಪ್ಪು ಹಲಗೆಗಳು, ಮಕ್ಕಳ ಮನೆ ನಿರ್ಮಾಣ, ಪುಟಾಣಿ ಮಕ್ಕಳಿಗೆ ಚೇರ್ ಮತ್ತು ಟೇಬಲ್‌ಗಳನ್ನು ನೀಡುತ್ತಾ ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿದ್ದಾರೆ.

” ಮಂಡ್ಯ ಜಿಲ್ಲೆ ರಾಜ್ಯದಲ್ಲೇ ಅತಿ ಹೆಚ್ಚು ರೇಷ್ಮೆ ಬೆಳೆ ಯುವ ಜಿಲ್ಲೆಯಾಗಿದೆ. ಗುಣಮಟ್ಟದಲ್ಲಿ ರೇಷ್ಮೆ ಬೆಳೆ ಬೆಳೆದರೆ ರೈತರಿಗೆ ವರದಾನ. ಎಲ್ಲ ಬೆಳೆಗಿಂತಲೂ ರೇಷ್ಮೆ ಬೆಳೆ ಲಾಭದಾಯಕ. ಸರ್ಕಾರಗಳೂ ರೇಷ್ಮೆ ಬೆಳೆಗೆ ಬಹಳಷ್ಟು ಉತ್ತೇಜನ ನೀಡುತ್ತಿವೆ.”

– ತ್ಯಾಗರಾಜು, ರೇಷ್ಮೆ ಬೆಳೆಗಾರ 

 

 

ಆಂದೋಲನ ಡೆಸ್ಕ್

Recent Posts

ಹಣಕ್ಕಾಗಿ ವೃದ್ದೆ ಕೊಲೆ ; ಶವವನ್ನು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಕಿರಾತಕ

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…

54 mins ago

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

3 hours ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

3 hours ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

4 hours ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

6 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

7 hours ago