Andolana originals

ಮುಂಗಾರು: ಎರಡೂ ಮಾಸ ಮಳೆ ಅಭಾವ!

ಚಾಮರಾಜನಗರ: ಪೂರ್ವ ಮುಂಗಾರು ಅವಧಿಯಲ್ಲಿ ಅಧಿಕ ಮಳೆ ಬಿದ್ದು ಸುಮಾರು ೫೭೧ ರೈತರ ೨೪೧.೦೩ ಹೆಕ್ಟೇರ್ ಪ್ರದೇಶದ ಬೆಳೆಹಾನಿಯಾಗಿದ್ದು, ಜಿಲ್ಲೆಯಲ್ಲಿ ಸದ್ಯದ ಮುಂಗಾರು ಹಂಗಾಮಿನಲ್ಲಿ ವಿವಿಧ ಬೆಳೆಗಳು ಮಳೆ ಕೊರತೆ ಎದುರಿಸ ಲಾರಂಭಿಸಿವೆ. ಈ ನಡುವೆ ಮೋಡ ಕವಿದ ವಾತಾವರಣ ಆವರಿಸಿ ತುಂತುರು ಹನಿ ಬೀಳುತ್ತಿದ್ದು, ಗಟ್ಟಿ ಮಳೆ ಆಗಬೇಕಿದೆ ಎಂದು ಕೃಷಿ ಇಲಾಖೆ ಮೂಲಗಳು ತಿಳಿಸಿವೆ.

ಜಿಲ್ಲೆಯಲ್ಲಿ ೨೦೨೫ರ ಮಾರ್ಚ್, ಏಪ್ರಿಲ್, ಮೇ ಮಾಹೆಯ ಪೂರ್ವ ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಿತ್ತು.

ಮಾರ್ಚ್‌ನಲ್ಲಿ ೧೫.೩ ಮಿ.ಮೀ. ವಾಡಿಕೆಗಿಂತ ೧೬.೪ ಮಿ. ಮೀ. ಮಳೆ ಬಿದ್ದಿತ್ತು.ಅಂತೆಯೇ ಏಪ್ರಿಲ್‌ನಲ್ಲಿ ೬೬.೮ ಮಿ.ಮೀ. ವಾಡಿಕೆಗಿಂತ ೮೬.೦೬ ಮಿ.ಮೀ., ಮೇ ನಲ್ಲಿ ೧೧೪ ಮಿ.ಮೀ. ವಾಡಿಕೆಗಿಂತ ೧೧೯.೦೨ ಮಿ.ಮೀ. ಮಳೆ ಸುರಿದಿತ್ತು. ಕ್ರಮವಾಗಿ ಈ ಮೂರೂ ತಿಂಗಳುಗಳಲ್ಲಿ ಶೇ.೭, ಶೇ.೩೬, ಶೇ.೫ರಷ್ಟು ಹೆಚ್ಚು ಮಳೆಯಾಗಿ ಸುಮಾರು ೫೭೧ ರೈತರ ೨೪೧.೦೩ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ ಸಂಭವಿಸಿದ್ದು, ಪರಿಹಾರ ಕ್ಕಾಗಿ ರೈತರು ಚಾತಕ ಪಕ್ಷಿಯಂತೆ ಎದುರು ನೋಡುತ್ತಿದ್ದಾರೆ.

ಪೂರ್ವ ಮುಂಗಾರಿನಲ್ಲಿ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಅತಿಹೆಚ್ಚು ೧೫೧.೧೮ ಹೆಕ್ಟೇರ್, ಚಾಮರಾಜನಗರ ತಾಲ್ಲೂಕಿನಲ್ಲಿ ೭೫.೬೨ ಹೆಕ್ಟೇರ್, ಹನೂರು ತಾಲ್ಲೂಕಿನಲ್ಲಿ ೧೪.೫೫ ಹೆಕ್ಟೇರ್, ಕೊಳ್ಳೇಗಾಲ ತಾಲ್ಲೂಕಿನಲ್ಲಿ ೦.೫ ಹೆಕ್ಟೇರ್‌ನಲ್ಲಿ ಬೆಳೆ ಹಾನಿ ಸಂಭವಿಸಿತ್ತು. ಕೃಷಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ಮಾಡಿರುವ ಈ ವರದಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ಅವರಿಗೆ ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಮುಖಾಂತರ ಕಳೆದ ತಿಂಗಳೇ ಸಲ್ಲಿಕೆಯಾಗಿದೆ. ಅಲ್ಲಿ ಅನುಮತಿ ದೊರೆತ ಕೂಡಲೇ ಜಿಲ್ಲಾಧಿಕಾರಿಯವರ ಪ್ರಕೃತಿ ವಿಕೋಪ ನಿಧಿಯ ವೈಯಕ್ತಿಕ ಠೇವಣಿ ಖಾತೆಯಿಂದ ಡಿಬಿಟಿ ಮುಖಾಂತರ ರೈತರ ಖಾತೆಗೆ ನೇರವಾಗಿ ಪರಿಹಾರ ಹಣ ಜಮೆ ಆಗಲಿದೆ.

ಬಹುತೇಕ ಬಾಳೆ ಬೆಳೆಯೇ ಹೆಚ್ಚು ಹಾನಿಗೊಳಗಾಗಿದ್ದು, ಎನ್‌ಡಿ ಆರ್‌ಎಫ್ ಮಾರ್ಗಸೂಚಿ ಪ್ರಕಾರ ಬಾಳೆ ಬೆಳೆಗೆ (ನೀರಾವರಿ) ೧೭ ಸಾವಿರ ರೂ., ಮಳೆ ಆಶ್ರಿತಕ್ಕೆ ೮,೫೦೦ ರೂ.ಗಳನ್ನು ಪ್ರತಿ ಹೆಕ್ಟೇರ್‌ಗೆ ನಿಗದಿಪಡಿಸಲಾಗಿದೆ. ೨೦೨೪ರ ಪೂರ್ವ ಮುಂಗಾರು ಅವಧಿಯಲ್ಲಿ ೯೮೫.೩೮ ಹೆ.ಬಾಳೆ, ೧೫.೯ ಹೆಕ್ಟೇರ್ ಜೋಳದ ಬೆಳೆ ಅತಿವೃಷ್ಟಿಯಿಂದ ಹಾನಿಗೊಳಗಾಗಿ ೨,೧೭೦ ರೈತರಿಗೆ ಒಟ್ಟು ೧,೫೭,೪೩,೧೭೫ ರೂ. ಪರಿಹಾರವು ಜಿಲ್ಲಾ ವಿಪತ್ತು ನಿರ್ವಹಣಾ ನಿಧಿಯ ಅನುದಾನದಿಂದ ಪಾವತಿಯಾಗಿತ್ತು. ಈ ಬಾರಿಯ ಪೂರ್ವ ಮುಂಗಾರು ಬೆಳೆ ಹಾನಿ ಪರಿಹಾರ ಇಷ್ಟರಲ್ಲೇ ಸಂದಾಯ ಆಗಲಿದೆ ಎಂದು ಕಂದಾಯ ಇಲಾಖೆ ಮೂಲಗಳು ತಿಳಿಸಿವೆ

” ಸೋಮವಾರವೂ ದಟ್ಟ ಮೋಡ ಕವಿದು ಚಾಮರಾಜನಗರದಲ್ಲಿ ಹನಿ ತೊಟ್ಟಿಕ್ಕುತ್ತಲೇ ಇತ್ತು. ಈ ಜಿನುಗು ಮಳೆಯಿಂದ ಬೆಳೆದು ನಿಂತಿರುವ ಬೆಳೆಗಳಿಗೆ ಹೆಚ್ಚಿನ ಪ್ರಯೋಜನ ಆಗುತ್ತಿಲ್ಲ. ಮಳೆ ಜೋರಾಗಿ ಬೀಳಬೇಕು.”

– ಬೂದಿತಿಟ್ಟು ಮಲ್ಲೇಶ್, ರೈತ

” ಜೂನ್, ಜುಲೈನಲ್ಲಿ ಮಳೆ ಕೊರತೆ ಯಾಗಿದೆಯಾದರೂ ಬೆಳೆಗಳಿಗೆ ತೊಂದರೆ ಉಂಟಾಗಿಲ್ಲ. ಸೂರ್ಯಕಾಂತಿ, ಜೋಳದ ಬೆಳೆ ಕಟಾವು ಹಂತದಲ್ಲಿವೆ. ರಾಗಿ ಬಿತ್ತನೆ ಇನ್ನೂ ನಡೆಯುತ್ತಿದೆ. ಹವಾಮಾನ ಇಲಾಖೆ ಪ್ರಕಾರ ಈ ವಾರ ಜಿಲ್ಲೆಯಲ್ಲಿ ಮಳೆ ಆಗಲಿದೆ.”

– ಬಿ.ಬಿ.ಅಬೀದ್, ಜಂಟಿ ಕೃಷಿ ನಿರ್ದೇಶಕರು

ಆಗ ಮಳೆ ಪ್ರಭಾವ, ಈಗ ಅಭಾವ:  ಪೂರ್ವ ಮುಂಗಾರು ಸಂದರ್ಭದಲ್ಲಿ ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದ್ದರೆ ಮುಂಗಾರು ವೇಳೆ (ಜೂನ್, ಜುಲೈ) ಮಳೆ ಕೊರತೆ ಬಾಧಿಸಿ ಸಹಜವಾಗಿಯೇ ನಾನಾ ಬೆಳೆಗಳು ತುಸು ಪ್ರತಿಕೂಲ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ. ಜೂನ್‌ನಲ್ಲಿ ಶೇ.೪೬ರಷ್ಟು ಮತ್ತು ಜುಲೈನಲ್ಲಿ ಇದೇ ೨೮ರ ಸೋಮವಾರದತನಕ ಶೇ.೨೯ರಷ್ಟು ಮಳೆ ಕೊರತೆಯನ್ನು ಜಿಲ್ಲೆ ಎದುರಿಸುತ್ತಿದೆ. ಜುಲೈನಲ್ಲಿ ಇಲ್ಲಿಯ ತನಕ ೧೧೬ ಮಿ.ಮೀ. ಮಳೆ ವಾಡಿಕೆಯಂತೆ ಬೀಳಬೇಕಿತ್ತು. ಬಿದ್ದಿರುವುದು ೮೨ ಮಿ.ಮೀ. ಮಾತ್ರ. ಇನ್ನು ಜೂನ್‌ನಲ್ಲಿ ವಾಡಿಕೆಯಂತೆ ೫೮.೪ ಮಿ.ಮೀ. ಆಗಬೇಕಿತ್ತು, ಆಗಿರುವುದು ೩೧.೮ ಮಿ.ಮೀ. ಮಾತ್ರ! ಮೋಡ ಕವಿದ ವಾತಾವರಣ, ತುಂತುರು ಹನಿಗೆ ಸೀಮಿತವಾಗದೇ ಮುಂದೆ ಮಳೆ ಸುರಿದರೆ ಬೆಳೆಗಳಿಗೆ ಹೇಳಿಕೊಳ್ಳುವಂತಹ ಸಮಸ್ಯೆ ಆಗುವುದಿಲ್ಲ. ಒಂದು ವೇಳೆ ಮಳೆ ಅಭಾವ ಯಥಾಸ್ಥಿತಿಯಲ್ಲಿ ಸಾಗಿದರೆ ಬೆಳೆಗಳು ಕ್ರಮೇಣ ಒಣಗಿ ಬರಪರಿಸ್ಥಿತಿ ಎದುರಾಗುವ ಅಪಾಯವಿದೆ ಎಂದು ತಿಳಿದು ಬಂದಿದೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

3 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

4 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

5 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

6 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

11 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

13 hours ago