Andolana originals

ಕೈಕೊಟ್ಟ ಮುಂಗಾರು ಮಳೆ; ಕಂಗಾಲಾದ ಅನ್ನದಾತರು

ಎಂ.ನಾರಾಯಣ

ತಿ.ನರಸೀಪುರ ತಾಲ್ಲೂಕಿನಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆ; ಒಣಗುತ್ತಿರುವ ಬೆಳೆ

ತಿ.ನರಸೀಪುರ: ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ರೈತರು, ಕೃಷಿ ಕಾರ್ಮಿಕರು ಹಾಗೂ ಗ್ರಾಮೀಣ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈಗಾಗಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಲಾಶಯದ ನೀರನ್ನು ನಂಬಿಕೊಂಡು ಬೆಳೆ ಬೆಳೆಯಬೇಡಿ ಎಂದು ರೈತರಿಗೆ ಸೂಚನೆಯನ್ನೂ ನೀಡಿದ್ದಾರೆ. ಇಂತಹ ಸ್ಥಿತಿಯಲ್ಲಿ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಬಹುತೇಕ ರೈತರು ಕೃಷಿಯನ್ನೇ ನಂಬಿ ಜೀವನ ನಡೆಸುತ್ತಿದ್ದಾರೆ. ತಿ. ನರಸೀ ಪುರ ತಾಲ್ಲೂಕಿನಲ್ಲಿ ಅತ್ಯಂತ ಕಡಿಮೆ ಮಳೆಯಾಗಿದೆ.

ಈ ಭಾಗದ ಜನತೆ ಕೆಆರ್‌ಎಸ್, ಕಬಿನಿ ಜಲಾಶಯಗಳ ನೀರನ್ನೇ ನಂಬಿದ್ದು, ಮಳೆ ಕೊರತೆಯಿಂದಾಗಿ ಬಿತ್ತನೆ ಕಾರ್ಯಗಳಿಗೆ ಹಿನ್ನಡೆಯಾಗಿದೆ. ಹೀಗಾಗಿ ಮಳೆಗಾಗಿ ರೈತರು ಆಕಾಶದತ್ತ ನೋಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮುಂದಿನ ದಿನಗಳಲ್ಲಿ ಮಳೆಯಾಗದಿದ್ದರೆ ಕೃಷಿ, ಕುಡಿಯುವ ನೀರು, ಗ್ರಾಮೀಣ ಉದ್ಯೋಗ, ಜಾನುವಾರುಗಳ ಮೇವು ಮತ್ತು ಗ್ರಾಮೀಣ ಆರ್ಥಿಕತೆಗೆ ತೀವ್ರ ಹೊಡೆತ ಬೀಳಲಿದೆ. ತಿ.ನರಸೀಪುರ ತಾಲ್ಲೂಕಿನ ವರುಣ ಕ್ಷೇತ್ರದ ಶಾಸಕರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ತಿ.ನರಸೀಪುರ ಕ್ಷೇತ್ರದ ಶಾಸಕರೂ ಆದ ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಸಂಸದ ಸುನಿಲ್ ಬೋಸ್ ಅವರು ಕೂಡಲೇ ಅಧಿಕಾರಿಗಳ ಸಭೆ ನಡೆಸಿ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗುವ ಮೂಲಕ ಅವರ ಆರ್ಥಿಕ ಸಬಲತೆಗೆ ಯೋಜನೆಗಳನ್ನು ರೂಪಿಸಬೇಕು ಎಂಬುದು ಈ ಭಾಗದ ರೈತರ ಆಶಯವಾಗಿದೆ.

ಮುಂಗಾರು ಮಳೆ ಅಭಾವದಿಂದಾಗಿ ಈ ಭಾಗದಲ್ಲಿ ರೈತರು ಬಿತ್ತನೆ ಕಾರ್ಯವನ್ನು ಮುಂದೂಡಿದ್ದು, ಅಣೆಕಟ್ಟೆ ಗಳಲ್ಲೂ ನೀರಿಲ್ಲದೆ ರೈತರು ಮುಂದೆ ಏನು ಮಾಡ ಬೇಕೆಂಬುದೇ ತಿಳಿಯದೆ ಕಂಗಾಲಾಗಿದ್ದಾರೆ. ತಾಲ್ಲೂಕಿನಲ್ಲಿ ಅತ್ಯಂತ ಕಡಿಮೆ ಮಳೆಯಾಗಿದೆ ಎಂಬ ವರದಿಗಳಿದ್ದು, ಇದರ ಆಧಾರದ ಮೇಲೆ ಸರ್ಕಾರ ಈ ತಾಲ್ಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಿಸುವ ಮೂಲಕ ಈ ಭಾಗದ ರೈತರ ನೆರವಿಗೆ ಮುಂದೆ ಬರಬೇಕು ಎಂದು ರೈತರು, ಸ್ಥಳೀಯರು ಒತ್ತಾಯಿಸಿದ್ದಾರೆ.

” ಮುಂಗಾರಿನಲ್ಲಿ ಭತ್ತ ಬೆಳೆಯುವ ರೈತರು ಈ ಬಾರಿ ಕಡ್ಡಾಯವಾಗಿ ಭತ್ತ ಬೆಳೆಯಬಾರದು. ಮಳೆ ಆಶ್ರಿತ ಬೆಳೆಗಳಾದ ಅಲಸಂದೆ, ಹಸಿರು, ಉದ್ದು, ರಾಗಿ, ಜೋಳ ಮುಂತಾದ ದ್ವಿದಳ ಧಾನ್ಯ ಬೆಳೆಗಳನ್ನು ಬೆಳೆಯಬೇಕು. ಒಂದೆರಡು ಬಾರಿ ಮಳೆ ಬಿದ್ದರೆ ಈ ಬೆಳೆಗಳಿಗೆ ಆಸರೆಯಾಗಲಿದೆ.”

-ಎಂ.ರೂಪ, ಸಹಾಯಕ ಕೃಷಿ ನಿರ್ದೇಶಕಿ, ತಿ.ನರಸೀಪುರ

” ವಾಡಿಕೆಗಿಂತ ಕಡಿಮೆ ಮಳೆ ಈ ಬಾರಿ ತಾಲ್ಲೂಕಿನಲ್ಲಿ ಜುಲೈ ತಿಂಗಳ ಒಳಗೆ ೭೨.೦೭ ಮಿ.ಮೀ. ವಾಡಿಕೆ ಮಳೆ ಆಗಬೇಕಿತ್ತು. ಆದರೆ, ಕೇವಲ ೩೫ ಮಿ.ಮೀ. ಮಳೆಯಾಗಿದೆ. ಶೇ.೫೨ರಷ್ಟು ಮಳೆ ಕೊರತೆಯಾಗಿದೆ. ೨೦೨೫ರಲ್ಲಿ ತಾಲ್ಲೂಕಿನಲ್ಲಿ ೭೨.೦೭ ಮಿ.ಮೀ. ವಾಡಿಕೆ ಮಳೆಗೆ ೧೧೭ ಮಿ.ಮೀ. ಮಳೆಯಾಗಿ ವಾಡಿಕೆ ಗಿಂತ ಹೆಚ್ಚು ಮಳೆಯಾಗಿತ್ತು.”

” ಎಸ್.ಎಂ.ಕೃಷ್ಣ, ಬಿ. ಎಸ್.ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಮಳೆ ಇಲ್ಲದೆ ಬರ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಬಾರಿಯೂ ಅಂತಹ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಸರ್ಕಾರ ರೈತರಿಗೆ ಸ್ಪಂದಿಸಬೇಕು.”

-ಕುಳ್ಳೇಗೌಡ, ರೈತ, ಕುಂತನಹಳ್ಳಿ

” ಮಳೆಯ ಕೊರತೆಯಿಂದ ಬೋರ್‌ವೆಲ್ ಹಾಗೂ ಕೃಷಿ ಪಂಪ್‌ಸೆಟ್‌ಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿದ್ದು, ತರಕಾರಿ ಹಾಗೂ ತೋಟಗಾರಿಕೆ ಬೆಳೆಗಳಿಗೂ ಸಮರ್ಪಕ ನೀರು ಇಲ್ಲದೆ, ಬೆಳೆಗಳು ಬಾಡುತ್ತಿವೆ.”

-ರಾಜೇಶ್, ರೈತ, ಹ್ಯಾಕನೂರು

 

 

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

5 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

5 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

6 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

6 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

11 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

12 hours ago