Andolana originals

ಕಿಡ್ನಿಗೆ ಒಂದಕ್ಕಿಂತ ಹೆಚ್ಚು ರಕ್ತನಾಳಗಳು : ಅಪರೂಪದ ಪ್ರಕರಣ

ಮಂಡ್ಯ : ಮಾನವನ ದೇಹದಲ್ಲಿ ಮೂತ್ರಕೋಶ(ಕಿಡ್ನಿ) ಬಹುಮುಖ್ಯವಾದ ಅಂಗ. ಇತ್ತೀಚೆಗೆ ಕಿಡ್ನಿ ಸೋಂಕು, ಕಿಡ್ನಿ ವೈಫಲ್ಯಗಳು, ಕಿಡ್ನಿಯಲ್ಲಿ ಕಲ್ಲು. . . ಮುಂತಾದ ಸಮಸ್ಯೆಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಇಂತಹ ಸನ್ನಿವೇಶದಲ್ಲಿ ಕಿಡ್ನಿ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ, ಸಂಶೋಧನೆಗಳ ಮೂಲಕ ಪರಿಹಾರೋಪಾಯಗಳನ್ನು ಕಂಡುಕೊಳ್ಳಲು ವೈದ್ಯಲೋಕ ಮುಂದಾಗಿದೆ.

ಬೆಂಗಳೂರಿನ ಆಕಾಶ್ ಮೆಡಿಕಲ್ ಕಾಲೇಜಿನಲ್ಲಿ ೪ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಮದ್ದೂರು ತಾಲ್ಲೂಕಿನ ಮರಕಾಡುದೊಡ್ಡಿಯ ಎಂ. ಬಿ. ಚಂದನ್ ಅವರು ಅಂಗರಚನಾಶಾಸ್ತ್ರ ವಿಭಾಗದಲ್ಲಿ ಮೃತ ದೇಹವನ್ನು ವಿಭಜಿಸುವಾಗ ಆ ದೇಹದ ಕಿಡ್ನಿಯಲ್ಲಿ ಒಂದಕ್ಕಿಂತ ಹೆಚ್ಚು ರಕ್ತನಾಳಗಳಿರುವುದು ಕಂಡು ಬಂದಿದೆ. ಈ ಕುರಿತು ಚಂದನ್ ಅಧ್ಯಯನ ಮಾಡಿ ಹಾಸನದಲ್ಲಿ ನಡೆದ ಸ್ಟೇಟ್ ಅನಾಟೆಮಿ ಕಾನ್ಛರೆನ್ಸ್‌ನಲ್ಲಿ ಭಾಗವಹಿಸಿ ಈ ವಿಷಯವನ್ನು ಪ್ರಸ್ತುತಪಡಿಸಿದ್ದರು.

ಅದಾದ ಬಳಿಕ ಈ ವಿಷಯವು ಮುಲ್ಲರ್ ಜರ್ನಲ್ ಆಫ್ ಮೆಡಿಕಲ್ ಸೈನ್ಸ್ ಅಂಡ್ ರೀಸರ್ಚ್ ನಲ್ಲಿ ಪ್ರಕಟಗೊಂಡಿತು. ಭಾರತದಲ್ಲಿ ಕಿಡ್ನಿಗೆ ಒಂದಕ್ಕಿಂತ ಹೆಚ್ಚು ರಕ್ತನಾಳಗಳು ಇರುವಂತಹ ಪ್ರಕರಣಗಳು ಶೇ. ೧೫ ಜನರಲ್ಲಿ ಕಂಡು ಬಂದಿವೆ ಎಂದು ಸಂಶೋಧನೆಗಳು ತಿಳಿಸಿವೆ. ಇದರಿಂದಾಗಿ ಅವರಲ್ಲಿ ಬೇಗ ರಕ್ತದೊತ್ತಡದ ಸಮಸ್ಯೆ ಉಂಟಾಗ ಬಹುದು, ಕಿಡ್ನಿಯನ್ನು ದಾನ ಮಾಡು ವಾಗ ಸಮಸ್ಯೆಯಾಗಬಹುದು ಹಾಗೂ ಕಿಡ್ನಿ ಕ್ಯಾನ್ಸರ್‌ಗೆ ಕಾರಣವಾಗಬಹುದು ಎಂಬುದಾಗಿ ತಜ್ಞರು ತಿಳಿಸಿದ್ದು, ಇದರ ಪೂರ್ವಾಪರಗಳ ಕುರಿತು ಪ್ರಸ್ತುತ ಹೆಚ್ಚಿನ ಸಂಶೋಧನೆಗಳು ನಡೆಯು ತ್ತಿವೆ ಎಂದು ಚಂದನ್ ತಿಳಿಸಿದ್ದಾರೆ.

ಹೀಗೆ ಕಿಡ್ನಿಯಲ್ಲಿ ಒಂದಕ್ಕಿಂತ ಹೆಚ್ಚು ರಕ್ತನಾಳಗಳು ಇರುವ ವ್ಯಕ್ತಿಗಳು ಮತ್ತೊಬ್ಬರಿಗೆ ಕಿಡ್ನಿ ದಾನ ಮಾಡಲು ಸಾಧ್ಯವಾಗುವುದಿಲ್ಲ ಹಾಗೂ ಮತ್ತೊಬ್ಬರಿಂದ ಕಿಡ್ನಿ ಪಡೆಯಲೂ ಸಾಧ್ಯವಾಗುವುದಿಲ್ಲ. ಆದ್ದರಿಂದ ಇದರ ಬಗ್ಗೆ ತಿಳಿವಳಿಕೆ ಹೊಂದುವುದು ವೈದ್ಯರಿಗೆ ಬಹಳ ಮುಖ್ಯವಾಗುತ್ತದೆ. ಶಸ್ತ್ರಚಿಕಿತ್ಸಕರು, ರೇಡಿಯಾಲಜಿಸ್ಟ್ ಹಾಗೂ ಮೂತ್ರ ಶಾಸ್ತ್ರಜ್ಞರು ಸರ್ಜರಿ ಮಾಡುವಾಗ ಮತ್ತು ಆಂಜಿಯೋಗ್ರಫಿ ಮಾಡುವಾಗ ಇದರಿಂದ ಆಗುವಂತಹ ಅನಾಹುತಗಳನ್ನು ತಪ್ಪಿಸಬಹುದು ಎನ್ನುವ ಚಂದನ್, ನನ್ನ ಈ ಅಧ್ಯಯನಕ್ಕೆ ಸಹಾಯ ಮಾಡಿದ ಅಂಗರಚನಾಶಾಸ್ತ್ರ ವಿಭಾಗ, ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿ ನೀಡಿದ ಮಾರ್ಗದರ್ಶನವನ್ನು ಸ್ಮರಿಸಿದ್ದಾರೆ.

– ಹೇಮಂತ್ ಕುಮಾರ್

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ

ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…

36 mins ago

ಓದುಗರ ಪತ್ರ: ನ್ಯಾಯಾಂಗ ಬಡಾವಣೆಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…

39 mins ago

ಓದುಗರ ಪತ್ರ: ಮಹಾರಾಣಿ ಕಾಲೇಜು ಆವರಣದಲ್ಲಿನ ಕಸ ತೆರವುಗೊಳಿಸಿ

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…

41 mins ago

ಓದುಗರ ಪತ್ರ: ಭರಚುಕ್ಕಿ ಜಲಪಾತ ಸಂಪರ್ಕ ರಸ್ತೆ ದುರಸ್ತಿ ಮಾಡಿ

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…

43 mins ago

ರೋಮಾಂಚನಕಾರಿ ಜಲ ಸಾಹಸ ಕ್ರೀಡೋತ್ಸವ…

ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ…

45 mins ago

ಸಂಘರ್ಷದ ಸಮಯದಲ್ಲಿ ಭಾರತೀಯ ಸೇನೆ ಅನಾಥ..!

ಚೀನಿ ಸೈನಿಕರು ಫಿರಂಗಿಗಳೊಂದಿಗೆ ಮುನ್ನುಗ್ಗುತ್ತಲೇ ಇದ್ದರು... ಉದ್ವಿಗ್ನ ಸನ್ನಿವೇಶದಲ್ಲಿ ರಕ್ಷಣಾ ಸಚಿವರಿಂದ ಸಿಗದ ಸ್ಪಷ್ಟ ಸಂದೇಶ ೨ ಗಂಟೆಗಳ ಕಾಲ…

49 mins ago