Andolana originals

ಕಿಡ್ನಿಗೆ ಒಂದಕ್ಕಿಂತ ಹೆಚ್ಚು ರಕ್ತನಾಳಗಳು : ಅಪರೂಪದ ಪ್ರಕರಣ

ಮಂಡ್ಯ : ಮಾನವನ ದೇಹದಲ್ಲಿ ಮೂತ್ರಕೋಶ(ಕಿಡ್ನಿ) ಬಹುಮುಖ್ಯವಾದ ಅಂಗ. ಇತ್ತೀಚೆಗೆ ಕಿಡ್ನಿ ಸೋಂಕು, ಕಿಡ್ನಿ ವೈಫಲ್ಯಗಳು, ಕಿಡ್ನಿಯಲ್ಲಿ ಕಲ್ಲು. . . ಮುಂತಾದ ಸಮಸ್ಯೆಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಇಂತಹ ಸನ್ನಿವೇಶದಲ್ಲಿ ಕಿಡ್ನಿ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ, ಸಂಶೋಧನೆಗಳ ಮೂಲಕ ಪರಿಹಾರೋಪಾಯಗಳನ್ನು ಕಂಡುಕೊಳ್ಳಲು ವೈದ್ಯಲೋಕ ಮುಂದಾಗಿದೆ.

ಬೆಂಗಳೂರಿನ ಆಕಾಶ್ ಮೆಡಿಕಲ್ ಕಾಲೇಜಿನಲ್ಲಿ ೪ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಮದ್ದೂರು ತಾಲ್ಲೂಕಿನ ಮರಕಾಡುದೊಡ್ಡಿಯ ಎಂ. ಬಿ. ಚಂದನ್ ಅವರು ಅಂಗರಚನಾಶಾಸ್ತ್ರ ವಿಭಾಗದಲ್ಲಿ ಮೃತ ದೇಹವನ್ನು ವಿಭಜಿಸುವಾಗ ಆ ದೇಹದ ಕಿಡ್ನಿಯಲ್ಲಿ ಒಂದಕ್ಕಿಂತ ಹೆಚ್ಚು ರಕ್ತನಾಳಗಳಿರುವುದು ಕಂಡು ಬಂದಿದೆ. ಈ ಕುರಿತು ಚಂದನ್ ಅಧ್ಯಯನ ಮಾಡಿ ಹಾಸನದಲ್ಲಿ ನಡೆದ ಸ್ಟೇಟ್ ಅನಾಟೆಮಿ ಕಾನ್ಛರೆನ್ಸ್‌ನಲ್ಲಿ ಭಾಗವಹಿಸಿ ಈ ವಿಷಯವನ್ನು ಪ್ರಸ್ತುತಪಡಿಸಿದ್ದರು.

ಅದಾದ ಬಳಿಕ ಈ ವಿಷಯವು ಮುಲ್ಲರ್ ಜರ್ನಲ್ ಆಫ್ ಮೆಡಿಕಲ್ ಸೈನ್ಸ್ ಅಂಡ್ ರೀಸರ್ಚ್ ನಲ್ಲಿ ಪ್ರಕಟಗೊಂಡಿತು. ಭಾರತದಲ್ಲಿ ಕಿಡ್ನಿಗೆ ಒಂದಕ್ಕಿಂತ ಹೆಚ್ಚು ರಕ್ತನಾಳಗಳು ಇರುವಂತಹ ಪ್ರಕರಣಗಳು ಶೇ. ೧೫ ಜನರಲ್ಲಿ ಕಂಡು ಬಂದಿವೆ ಎಂದು ಸಂಶೋಧನೆಗಳು ತಿಳಿಸಿವೆ. ಇದರಿಂದಾಗಿ ಅವರಲ್ಲಿ ಬೇಗ ರಕ್ತದೊತ್ತಡದ ಸಮಸ್ಯೆ ಉಂಟಾಗ ಬಹುದು, ಕಿಡ್ನಿಯನ್ನು ದಾನ ಮಾಡು ವಾಗ ಸಮಸ್ಯೆಯಾಗಬಹುದು ಹಾಗೂ ಕಿಡ್ನಿ ಕ್ಯಾನ್ಸರ್‌ಗೆ ಕಾರಣವಾಗಬಹುದು ಎಂಬುದಾಗಿ ತಜ್ಞರು ತಿಳಿಸಿದ್ದು, ಇದರ ಪೂರ್ವಾಪರಗಳ ಕುರಿತು ಪ್ರಸ್ತುತ ಹೆಚ್ಚಿನ ಸಂಶೋಧನೆಗಳು ನಡೆಯು ತ್ತಿವೆ ಎಂದು ಚಂದನ್ ತಿಳಿಸಿದ್ದಾರೆ.

ಹೀಗೆ ಕಿಡ್ನಿಯಲ್ಲಿ ಒಂದಕ್ಕಿಂತ ಹೆಚ್ಚು ರಕ್ತನಾಳಗಳು ಇರುವ ವ್ಯಕ್ತಿಗಳು ಮತ್ತೊಬ್ಬರಿಗೆ ಕಿಡ್ನಿ ದಾನ ಮಾಡಲು ಸಾಧ್ಯವಾಗುವುದಿಲ್ಲ ಹಾಗೂ ಮತ್ತೊಬ್ಬರಿಂದ ಕಿಡ್ನಿ ಪಡೆಯಲೂ ಸಾಧ್ಯವಾಗುವುದಿಲ್ಲ. ಆದ್ದರಿಂದ ಇದರ ಬಗ್ಗೆ ತಿಳಿವಳಿಕೆ ಹೊಂದುವುದು ವೈದ್ಯರಿಗೆ ಬಹಳ ಮುಖ್ಯವಾಗುತ್ತದೆ. ಶಸ್ತ್ರಚಿಕಿತ್ಸಕರು, ರೇಡಿಯಾಲಜಿಸ್ಟ್ ಹಾಗೂ ಮೂತ್ರ ಶಾಸ್ತ್ರಜ್ಞರು ಸರ್ಜರಿ ಮಾಡುವಾಗ ಮತ್ತು ಆಂಜಿಯೋಗ್ರಫಿ ಮಾಡುವಾಗ ಇದರಿಂದ ಆಗುವಂತಹ ಅನಾಹುತಗಳನ್ನು ತಪ್ಪಿಸಬಹುದು ಎನ್ನುವ ಚಂದನ್, ನನ್ನ ಈ ಅಧ್ಯಯನಕ್ಕೆ ಸಹಾಯ ಮಾಡಿದ ಅಂಗರಚನಾಶಾಸ್ತ್ರ ವಿಭಾಗ, ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿ ನೀಡಿದ ಮಾರ್ಗದರ್ಶನವನ್ನು ಸ್ಮರಿಸಿದ್ದಾರೆ.

– ಹೇಮಂತ್ ಕುಮಾರ್

ಆಂದೋಲನ ಡೆಸ್ಕ್

Recent Posts

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

12 hours ago

ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್‌ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…

12 hours ago

ತಮಿಳುನಾಡು ಫಲಿತಾಂಶ ತುಂಬಾ ಆಶ್ವರ್ಯಕರವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…

13 hours ago

ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್‌ ರಾಜೀನಾಮೆ

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್‌ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…

13 hours ago

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಯುವಕನ ಕೊಲೆ

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್‌ ಠಾಣೆಯಿಂದ ಕೇವಲ…

13 hours ago

ಹನೂರು: ಪಂಪ್‌ಸೆಟ್‌ ಮೋಟಾರ್‌ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್‌ಗಳನ್ನು…

15 hours ago