Andolana originals

ಕಿಡ್ನಿಗೆ ಒಂದಕ್ಕಿಂತ ಹೆಚ್ಚು ರಕ್ತನಾಳಗಳು : ಅಪರೂಪದ ಪ್ರಕರಣ

ಮಂಡ್ಯ : ಮಾನವನ ದೇಹದಲ್ಲಿ ಮೂತ್ರಕೋಶ(ಕಿಡ್ನಿ) ಬಹುಮುಖ್ಯವಾದ ಅಂಗ. ಇತ್ತೀಚೆಗೆ ಕಿಡ್ನಿ ಸೋಂಕು, ಕಿಡ್ನಿ ವೈಫಲ್ಯಗಳು, ಕಿಡ್ನಿಯಲ್ಲಿ ಕಲ್ಲು. . . ಮುಂತಾದ ಸಮಸ್ಯೆಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಇಂತಹ ಸನ್ನಿವೇಶದಲ್ಲಿ ಕಿಡ್ನಿ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ, ಸಂಶೋಧನೆಗಳ ಮೂಲಕ ಪರಿಹಾರೋಪಾಯಗಳನ್ನು ಕಂಡುಕೊಳ್ಳಲು ವೈದ್ಯಲೋಕ ಮುಂದಾಗಿದೆ.

ಬೆಂಗಳೂರಿನ ಆಕಾಶ್ ಮೆಡಿಕಲ್ ಕಾಲೇಜಿನಲ್ಲಿ ೪ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಮದ್ದೂರು ತಾಲ್ಲೂಕಿನ ಮರಕಾಡುದೊಡ್ಡಿಯ ಎಂ. ಬಿ. ಚಂದನ್ ಅವರು ಅಂಗರಚನಾಶಾಸ್ತ್ರ ವಿಭಾಗದಲ್ಲಿ ಮೃತ ದೇಹವನ್ನು ವಿಭಜಿಸುವಾಗ ಆ ದೇಹದ ಕಿಡ್ನಿಯಲ್ಲಿ ಒಂದಕ್ಕಿಂತ ಹೆಚ್ಚು ರಕ್ತನಾಳಗಳಿರುವುದು ಕಂಡು ಬಂದಿದೆ. ಈ ಕುರಿತು ಚಂದನ್ ಅಧ್ಯಯನ ಮಾಡಿ ಹಾಸನದಲ್ಲಿ ನಡೆದ ಸ್ಟೇಟ್ ಅನಾಟೆಮಿ ಕಾನ್ಛರೆನ್ಸ್‌ನಲ್ಲಿ ಭಾಗವಹಿಸಿ ಈ ವಿಷಯವನ್ನು ಪ್ರಸ್ತುತಪಡಿಸಿದ್ದರು.

ಅದಾದ ಬಳಿಕ ಈ ವಿಷಯವು ಮುಲ್ಲರ್ ಜರ್ನಲ್ ಆಫ್ ಮೆಡಿಕಲ್ ಸೈನ್ಸ್ ಅಂಡ್ ರೀಸರ್ಚ್ ನಲ್ಲಿ ಪ್ರಕಟಗೊಂಡಿತು. ಭಾರತದಲ್ಲಿ ಕಿಡ್ನಿಗೆ ಒಂದಕ್ಕಿಂತ ಹೆಚ್ಚು ರಕ್ತನಾಳಗಳು ಇರುವಂತಹ ಪ್ರಕರಣಗಳು ಶೇ. ೧೫ ಜನರಲ್ಲಿ ಕಂಡು ಬಂದಿವೆ ಎಂದು ಸಂಶೋಧನೆಗಳು ತಿಳಿಸಿವೆ. ಇದರಿಂದಾಗಿ ಅವರಲ್ಲಿ ಬೇಗ ರಕ್ತದೊತ್ತಡದ ಸಮಸ್ಯೆ ಉಂಟಾಗ ಬಹುದು, ಕಿಡ್ನಿಯನ್ನು ದಾನ ಮಾಡು ವಾಗ ಸಮಸ್ಯೆಯಾಗಬಹುದು ಹಾಗೂ ಕಿಡ್ನಿ ಕ್ಯಾನ್ಸರ್‌ಗೆ ಕಾರಣವಾಗಬಹುದು ಎಂಬುದಾಗಿ ತಜ್ಞರು ತಿಳಿಸಿದ್ದು, ಇದರ ಪೂರ್ವಾಪರಗಳ ಕುರಿತು ಪ್ರಸ್ತುತ ಹೆಚ್ಚಿನ ಸಂಶೋಧನೆಗಳು ನಡೆಯು ತ್ತಿವೆ ಎಂದು ಚಂದನ್ ತಿಳಿಸಿದ್ದಾರೆ.

ಹೀಗೆ ಕಿಡ್ನಿಯಲ್ಲಿ ಒಂದಕ್ಕಿಂತ ಹೆಚ್ಚು ರಕ್ತನಾಳಗಳು ಇರುವ ವ್ಯಕ್ತಿಗಳು ಮತ್ತೊಬ್ಬರಿಗೆ ಕಿಡ್ನಿ ದಾನ ಮಾಡಲು ಸಾಧ್ಯವಾಗುವುದಿಲ್ಲ ಹಾಗೂ ಮತ್ತೊಬ್ಬರಿಂದ ಕಿಡ್ನಿ ಪಡೆಯಲೂ ಸಾಧ್ಯವಾಗುವುದಿಲ್ಲ. ಆದ್ದರಿಂದ ಇದರ ಬಗ್ಗೆ ತಿಳಿವಳಿಕೆ ಹೊಂದುವುದು ವೈದ್ಯರಿಗೆ ಬಹಳ ಮುಖ್ಯವಾಗುತ್ತದೆ. ಶಸ್ತ್ರಚಿಕಿತ್ಸಕರು, ರೇಡಿಯಾಲಜಿಸ್ಟ್ ಹಾಗೂ ಮೂತ್ರ ಶಾಸ್ತ್ರಜ್ಞರು ಸರ್ಜರಿ ಮಾಡುವಾಗ ಮತ್ತು ಆಂಜಿಯೋಗ್ರಫಿ ಮಾಡುವಾಗ ಇದರಿಂದ ಆಗುವಂತಹ ಅನಾಹುತಗಳನ್ನು ತಪ್ಪಿಸಬಹುದು ಎನ್ನುವ ಚಂದನ್, ನನ್ನ ಈ ಅಧ್ಯಯನಕ್ಕೆ ಸಹಾಯ ಮಾಡಿದ ಅಂಗರಚನಾಶಾಸ್ತ್ರ ವಿಭಾಗ, ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿ ನೀಡಿದ ಮಾರ್ಗದರ್ಶನವನ್ನು ಸ್ಮರಿಸಿದ್ದಾರೆ.

– ಹೇಮಂತ್ ಕುಮಾರ್

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

6 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

6 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

6 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

6 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

6 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

6 hours ago