Andolana originals

ಮಂಜಿನ ನಗರಿಯತ್ತ ಪ್ರವಾಸಿಗರ ದಂಡು

  • ವಿವಿಧ ಕಾರಣಗಳಿಂದ ಕೊಡಗಿನತ್ತ ಮುಖ ಮಾಡಿದ ಪ್ರವಾಸಿಗರು
  • ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರ ಸಂಖ್ಯೆ ಏರಿಕೆ

ಮಡಿಕೇರಿ: ಪೆಹಲ್ಗಾಮ್ ದಾಳಿ, ಆಪರೇಷನ್ ಸಿಂಧೂರ, ಶಾಲಾ ಮಕ್ಕಳಿಗೆ ರಜೆ ಇರುವ ಕಾರಣಗಳಿಂದ ಕೊಡಗು ಜಿಲ್ಲೆಯತ್ತ ಪ್ರವಾಸಿಗರು ಮುಖ ಮಾಡುತ್ತಿದ್ದು, ಪ್ರವಾಸಿಗರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದೆ.

ಪೆಹಲ್ಗಾಮ್ ಉಗ್ರರದಾಳಿ, ಭಾರತದ ಆಪರೇಷನ್ ಸಿಂಧೂರ ಪ್ರತಿದಾಳಿ, ಸರಣಿ ಬ್ಲಾಕ್‌ಔಟ್‌ಗಳು ಉತ್ತರ ಭಾರತದ ಇತರೆ ರಾಜ್ಯಗಳ ಪ್ರವಾಸೋದ್ಯಮದ ಮೇಲೂ ಪರಿಣಾಮ ಬೀರಿವೆ.

ಗೋವಾ, ಮಂಗಳೂರು, ಪಾಂಡಿಚೇರಿ, ಕನ್ಯಾಕುಮಾರಿಯಂತಹ ಕಡಲ ತೀರದಲ್ಲಿ ಬಿಸಿಲು ಹೆಚ್ಚಿರುವುದರಿಂದ ತಂಪಾಗಿರುವ ಪಶ್ಚಿಮ ಘಟ್ಟ ಪ್ರದೇಶಗಳನ್ನೇ ಪ್ರವಾಸಿಗರು ಆಯ್ದುಕೊಳ್ಳುತ್ತಿರುವುದು ವಿಶೇಷ. ಅದರಲ್ಲಿಯೂ ಕರ್ನಾಟಕದ ಮಲೆನಾಡು ಜಿಲ್ಲೆಗಳಲ್ಲಿ ಪ್ರಾಕೃತಿಕ ಪ್ರವಾಸಿತಾಣಗಳತ್ತ ಪ್ರವಾಸಿಗರು ಒಲವು ತೋರುತ್ತಿದ್ದು, ಅತಿಥಿ ಸತ್ಕಾರಕ್ಕೆ ಹೆಸರಾಗಿರುವ ಕೊಡಗು ಈ ತಾಣಗಳ ಪೈಕಿ ಅತಿ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುತ್ತಿದೆ.

ದಕ್ಷಿಣ ಭಾತರದ ಪಶ್ಚಿಮ ಘಟ್ಟ ಸಾಲುಗಳಲ್ಲಿನ ಬಹುತೇಕ ಜಿಲ್ಲೆಗಳಲ್ಲಿಯೂ ಅಕರ್ಷಕ ಪ್ರಕೃತಿ ತಾಣಗಳಿವೆ. ಆದರೆ ಹೆಚ್ಚು ಪ್ರವಾಸಿಗರು ಕೊಡಗನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ಕಾರಣ ಇಲ್ಲಿನ ತಂಪಾದ ವಾತಾವರಣ. ಪೂರ್ವ ಮುಂಗಾರು ಉತ್ತಮವಾಗಿ ಆಗುತ್ತಿರುವುದರಿಂದ ಈಗ ಕೊಡಗಿನಲ್ಲಿ ತಂಪಾದ ವಾತಾವರಣ ಕಂಡುಬರುತ್ತಿದೆ.

ಮತ್ತೊಂದೆಡೆ ಹೋಂ ಸ್ಟೇಗಳಲ್ಲಿ ಈ ಹಿಂದೆ ಇದ್ದ ಸಮಸ್ಯೆಗಳು ಬಹುತೇಕ ದೂರಾಗಿದ್ದು, ಅನಽಕೃತ ಹೋಂ ಸ್ಟೇಗಳು ಕಡಿಮೆಯಾಗಿವೆ. ಒಂದಷ್ಟು ಅನಽಕೃತ ಹೋಂ ಸ್ಟೇಗಳಿದ್ದರೂ ಬಹುತೇಕ ಮಾಲೀಕರು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಂಡು ಶಿಸ್ತುಬದ್ಧವಾಗಿ ನಿರ್ವಹಣೆ ಮಾಡುತ್ತಿದ್ದಾರೆ. ಇದರಿಂದ ಟೂರಿಸಂ ಪ್ಲಾಟ್ ಫಾರಂಗಳಲ್ಲಿ ಕೊಡಗು ಪ್ರವಾಸಕ್ಕೆ ಆದ್ಯತೆ ನೀಡಲಾಗುತ್ತದೆ. ಜಿಲ್ಲೆಯಲ್ಲಿರುವ ಹೆಚ್ಚಿನ ಹೋಂ ಸ್ಟೇ ಮತ್ತು ರೆಸಾರ್ಟ್‌ಗಳು ಉತ್ತಮ ರೇಟಿಂಗ್ ಮತ್ತು ರಿವ್ಯೂಗಳೊಂದಿಗೆ ಪ್ರವಾಸಿಗರಿಗೆ ಉತ್ತಮ ಸೇವೆ ನೀಡುತ್ತಿವೆ.

೨೦೨೪ ಏಪ್ರಿಲ್‌ನಿಂದ ಮೇ ೨ನೇ ವಾರದವರೆಗೆ ಒಟ್ಟಾರೆ ೧೧. ೬೫ ಲಕ್ಷ ಪ್ರವಾಸಿಗರು ಜಿಲ್ಲೆಗೆ ಭೇಟಿ ನೀಡಿದ್ದರು. ಈ ಬಾರಿ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದವರ ಸಂಖ್ಯೆಯೇ ೧೧. ೯೫ ಲಕ್ಷದಷ್ಟಿದ್ದು, ರೆಸಾರ್ಟ್‌ಗಳಲ್ಲಿದ್ದವರು, ಹೋಂ ಸ್ಟೇಗಳಲ್ಲಿ ಕಳೆದ ಬಾರಿಗಿಂತ ಈ ಬಾರಿ ಅಂದಾಜು ೨. ೫ ಲಕ್ಷ ಪ್ರವಾಸಿಗರು ಹೆಚ್ಚುವರಿಯಾಗಿ ಭೇಟಿ ನೀಡಿದ್ದಾರೆ. ೧೫ ದಿನಗಳಲ್ಲಿಯೇ ಪ್ರವಾಸಿಗರ ಭೇಟಿಯಲ್ಲಿ ೧. ೫ಲಕ್ಷ ಹೆಚ್ಚಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಮಾಹಿತಿ ನೀಡಿದೆ.

ಟ್ರಾವಲ್ ಏಜೆಂಟ್‌ಗಳು ಮತ್ತು ಆನ್‌ಲೈನ್ ಬುಕ್ಕಿಂಗ್ ಆಪ್‌ಗಳ ಮೂಲಕ ತಿಂಗಳ ಮೊದಲೇ ಬುಕ್ ಮಾಡಿದ್ದ ಉತ್ತರದ ಪ್ರವಾಸ ರದ್ದಾಗಿದೆ. ಆದರೆ ಬಹುತೇಕ ಟ್ರಾವಲ್ ಏಜೆಂಟ್‌ಗಳು ರದ್ದಾದ ಪ್ರವಾಸದ ಬುಕ್ಕಿಂಗ್ ಹಣ ಹಿಂದಿರುಗಿಸುವ ಬದಲು ಅವರಿಗೆ ದಕ್ಷಿಣದ ಆಯ್ಕೆ ನೀಡುತ್ತಿದ್ದಾರೆ. ಹೀಗಾಗಿ ಯೋಜಿತ ಪ್ರವಾಸವನ್ನು ರದ್ದುಗೊಳಿಸುವ ಬದಲು ಪ್ರವಾಸಿಗರು ಉತ್ತರದ ಬದಲು ದಕ್ಷಿಣವನ್ನು ಆಯ್ಕೆ ಮಾಡಿಕೊಂಡು ಇತ್ತ ಬರುತ್ತಿದ್ದಾರೆ. ಇದರಿಂದ ದಕ್ಷಿಣ ಭಾರತದ ಬಹುತೇಕ ಪ್ರವಾಸಿತಾಣಗಳಲ್ಲಿ ಪ್ರವಾಸಿಗರ ಹರಿವು ಹೆಚ್ಚಳವಾಗಿದೆ.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

6 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

7 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

7 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

8 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

13 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

13 hours ago