Andolana originals

ಸೊಳ್ಳೆಗಳ ಕಾಟ; ಸಾಂಕ್ರಾಮಿಕ ರೋಗದ ಭೀತಿ

ಪ್ರಶಾಂತ್ ಎಸ್.

ಮನೆಗಳ ಮುಂದೆ ನಿಲ್ಲುವ ಚರಂಡಿ ನೀರು! ವಾರ್ಡ್ ಸಂಖ್ಯೆ ೬೫ರ ನಿವಾಸಿಗಳಿಗೆ ತಪ್ಪದ ಸಂಕಷ್ಟ 

ಮೈಸೂರು: ಸಣ್ಣ ಮಳೆ ಬಂದರೂ ಸಾಕು ಶ್ರೀರಾಂಪುರ ಮೂರನೇ ಹಂತದಲ್ಲಿರುವ ಶಿವಪುರ ಸ್ಮಶಾನದ ಸಮೀಪವಿರುವ ನಗರಪಾಲಿಕೆ ವಾರ್ಡ್ ಸಂಖ್ಯೆ ೬೫ರ ನಿವಾಸಿಗಳು ಆತಂಕಕ್ಕೆ ಒಳಗಾಗುತ್ತಾರೆ. ಮ್ಯಾನ್ ಹೋಲ್‌ಗಳಿಂದ ಚರಂಡಿ ನೀರು ಉಕ್ಕಿ ಮನೆಗಳ ಮುಂದೆಯೇ ನಿಲ್ಲುತ್ತದೆ. ಇದರಿಂದ ಸೊಳ್ಳೆಗಳ ಕಾಟ, ದುರ್ವಾಸನೆಯಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಿಸುತ್ತಿದ್ದಾರೆ ಇಲ್ಲಿನ ನಿವಾಸಿಗಳು.

ಏನು ಸಮಸ್ಯೆ?: ಯುಜಿಡಿಯ ಕೊಳಚೆ ನೀರು ಒಳ ಚರಂಡಿ ಸೇರುವ ಬದಲು ತೆರೆದ ಚರಂಡಿಗೆ ಸೇರುತ್ತಿದೆ. ಅಲ್ಲದೆ ನಡುರಸ್ತೆಯಲ್ಲಿ ಹರಿಯುತ್ತಿದೆ. ಇದರಿಂದಾಗಿ ಚರಂಡಿ ಕಟ್ಟಿಕೊಳ್ಳುತ್ತಿದೆ. ಚರಂಡಿ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ ಮನೆಗಳ ಮುಂದೆ ನಿಲ್ಲುತ್ತದೆ. ಇದರಿಂದ ಸೊಳ್ಳೆ, ನೊಣಗಳ ಕಾಟ ಹೆಚ್ಚಾಗಿದ್ದು ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಕಸ-ಕಡ್ಡಿ, ಪ್ಲಾಸ್ಟಿಕ್‌ಗಳಿಂದ ಕಟ್ಟಿಕೊಂಡಿರುವ ತೆರೆದ ಚರಂಡಿಗಳಿಂದ ಹೂಳು ತೆಗೆಸಲು ಕ್ರಮವಹಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಚರಂಡಿಗಳಲ್ಲಿ ತ್ಯಾಜ್ಯ ಸಂಗ್ರಹ: ಶ್ರೀರಾಂಪುರ ೩ನೇ ಹಂತದ ವ್ಯಾಪ್ತಿಯ ಬಹುತೇಕ ಪ್ರದೇಶಗಳು ಅವೈಜ್ಞಾನಿಕವಾಗಿದ್ದು, ಹೋಟೆಲ್‌ಗಳ ತ್ಯಾಜ್ಯ ಹಾಗೂ ಮನೆಗಳ ತ್ಯಾಜ್ಯಗಳೆಲ್ಲವೂ ಚರಂಡಿ ಸೇರುತ್ತಿವೆ. ಇದರಿಂದಾಗಿ ಚರಂಡಿಯಲ್ಲಿ ತ್ಯಾಜ್ಯ ಸಂಗ್ರಹವಾಗುತ್ತಿದೆ. ಇದರಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳೇ ಹೆಚ್ಚಿರುತ್ತವೆ.

ವಾಟ್ಸಾಪ್ ಮೊರೆ ಹೋದ ನಿವಾಸಿಗಳು: ಸಮಸ್ಯೆಯ ಬಗ್ಗೆ ನಿವಾಸಿಗಳು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಅವರ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ತಿಳಿಸುವ ಪ್ರಯತ್ನ ಮಾಡಿದ್ದಾರೆ. ಮತ್ತೊಂದೆಡೆ ಅವರ ವಾಟ್ಸಾಪ್‌ಗೆ ಮಾಹಿತಿ ನೀಡಿದ್ದರೂ ಆಯುಕ್ತರಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಯುಜಿಡಿ ಸಮಸ್ಯೆ ಪರಿಹಾರಕ್ಕೆ ಮೀನ-ಮೇಷ ಎಣಿಸುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ನಿವಾಸಿಗಳು ಆಗ್ರಹಿಸಿದ್ದಾರೆ.

ಸಮಸ್ಯೆ ಪರಿಹರಿಸಲು ಅಧಿಕಾರಿಗಳ ನಿರ್ಲಕ್ಷ್ಯ: ಅವೈಜ್ಞಾನಿಕ ಒಳಚರಂಡಿ ವ್ಯವಸ್ಥೆಯಿಂದಾಗಿ ಅನೈರ್ಮಲ್ಯ ಸಮಸ್ಯೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ನಗರಪಾಲಿಕೆ ಅಽಕಾರಿಗಳು ಸಾರ್ವ ಜನಿಕರ ಅಹವಾಲು ಕಡೆಗಣಿಸಿ, ಸ್ವಚ್ಛ ಭಾರತ್ ಅಭಿಯಾನ ಪ್ರಚಾರದಲ್ಲಿ ಮುಳುಗಿದ್ದಾರೆ. ಸಮಸ್ಯೆಗಳನ್ನು ಪರಿಹರಿಸುವಲ್ಲಿ ಜಾಣಕುರುಡು ಪ್ರದರ್ಶಿಸುತ್ತಿದ್ದಾರೆ ಎಂದು ನಿವಾಸಿಗಳು ಆರೋಪಿಸಿದ್ದಾರೆ.

” ಯುಜಿಡಿ ಅವ್ಯವಸ್ಥೆಯಿಂದ ಇಡೀ ಬಡಾವಣೆ ಕೊಳಗೇರಿಯಂತಾಗಿದೆ. ಮ್ಯಾನ್‌ಹೋಲ್‌ಗಳು ಉಕ್ಕಿ ಕೊಳಚೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು, ಬಡಾವಣೆಯಲ್ಲಿ ದುರ್ನಾತ ಬೀರುತ್ತಿದೆ. ರಸ್ತೆಗಳಲ್ಲಿ ಓಡಾಡಲು ತೀವ್ರ ಸಮಸ್ಯೆಯಾಗಿದೆ.”

-ಶೋಭಾ, ಸ್ಥಳೀಯ ನಿವಾಸಿ

” ಯುಜಿಡಿ ಸಮಸ್ಯೆ ಯಾವ ಭಾಗದಲ್ಲಿ ಹೆಚ್ಚಾಗಿದೆಯೋ ಅಲ್ಲಿಗೆ ಸಂಬಂಧಪಟ್ಟ ಇಂಜಿನಿಯರ್‌ಗಳು ಬಂದು ಪರಿಶೀಲಿಸಿ ಸೂಕ್ತ ಪರಿಹಾರ ಕಲ್ಪಿಸಬೇಕು. ಆದರೆ ಸಂಬಂಧಪಟ್ಟ ಅಧಿಕಾರಿಗಳು ತಲೆಕೆಡಿಸಿಕೊಳ್ಳುತ್ತಿಲ್ಲ. ಜನರ ಆರೋಗ್ಯದ ಹಿತದೃಷ್ಟಿಯಿಂದ ಬೇಗ ಪರಿಹಾರ ಕಂಡುಕೊಂಡರೆ ಒಳ್ಳೆಯದು.”

-ಬಾಲಗಣಪತಿ ಭಟ್, ಸ್ಥಳೀಯ ನಿವಾಸಿ

” ಯುಜಿಡಿ ಸಮಸ್ಯೆ ಕುರಿತು ನಗರಪಾಲಿಕೆ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಿ ಅಲ್ಲಿನ ಸಮಸ್ಯೆ ಯಾವ ಕಡೆಯಿಂದ ಆಗಿದೆ? ಅದಕ್ಕೆ ಪರಿಹಾರವೇನು ಎಂಬುದರ ಬಗ್ಗೆ ಕ್ರಮ ಕೈಗೊಳ್ಳುತ್ತೇನೆ.”

 -ಶೇಖ್ ತನ್ವೀರ್ ಆಸಿ-, ಆಯುಕ್ತರು, ನಗರಪಾಲಿಕೆ 

 

 

 

ಆಂದೋಲನ ಡೆಸ್ಕ್

Recent Posts

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

10 mins ago

ತಮಿಳುನಾಡಿನಲ್ಲಿ ಟಿವಿಕೆಗೆ ಮುನ್ನಡೆ: ವಿಜಯ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್‌ಗೆ ಸಿಎಂ…

1 hour ago

ಬಾಗಲಕೋಟೆ ಉಪಚುನಾವಣೆ : ‘ಉಮೇಶ್‌ ಮೇಟಿಗೆ ಜಯ ; ಇಲ್ಲಿವೆ ಗೆಲುವಿನ ಅಂಶಗಳು….

ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…

2 hours ago

ಕೇರಳದಲ್ಲಿ ಯುಡಿಎಫ್‌ ಅಭೂತಪೂರ್ವ ಸಾಧನೆ

ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…

3 hours ago

ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ವಿಜಯೋತ್ಸವ ಬ್ಯಾನ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ಆಚರಣೆಯ ರ್ಯಾಲಿ ನಡೆಸುವುದನ್ನು ಆಯೋಗ ನಿಷೇಧಿಸಿದೆ. ಈ ನಿರ್ಬಂಧ…

3 hours ago

ಉಪಚುನಾವಣೆ : ಎರಡು ಕ್ಷೇತ್ರಗಳಲ್ಲೂ ನಾವೇ ಗೆಲ್ತೇವೆ : ಸಿಎಂ

ಬೆಂಗಳುರು : ಇಂದು ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ…

3 hours ago