Andolana originals

ಸೊಳ್ಳೆಗಳ ಕಾಟ; ಸಾಂಕ್ರಾಮಿಕ ರೋಗದ ಭೀತಿ

ಪ್ರಶಾಂತ್ ಎಸ್.

ಮನೆಗಳ ಮುಂದೆ ನಿಲ್ಲುವ ಚರಂಡಿ ನೀರು! ವಾರ್ಡ್ ಸಂಖ್ಯೆ ೬೫ರ ನಿವಾಸಿಗಳಿಗೆ ತಪ್ಪದ ಸಂಕಷ್ಟ 

ಮೈಸೂರು: ಸಣ್ಣ ಮಳೆ ಬಂದರೂ ಸಾಕು ಶ್ರೀರಾಂಪುರ ಮೂರನೇ ಹಂತದಲ್ಲಿರುವ ಶಿವಪುರ ಸ್ಮಶಾನದ ಸಮೀಪವಿರುವ ನಗರಪಾಲಿಕೆ ವಾರ್ಡ್ ಸಂಖ್ಯೆ ೬೫ರ ನಿವಾಸಿಗಳು ಆತಂಕಕ್ಕೆ ಒಳಗಾಗುತ್ತಾರೆ. ಮ್ಯಾನ್ ಹೋಲ್‌ಗಳಿಂದ ಚರಂಡಿ ನೀರು ಉಕ್ಕಿ ಮನೆಗಳ ಮುಂದೆಯೇ ನಿಲ್ಲುತ್ತದೆ. ಇದರಿಂದ ಸೊಳ್ಳೆಗಳ ಕಾಟ, ದುರ್ವಾಸನೆಯಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಿಸುತ್ತಿದ್ದಾರೆ ಇಲ್ಲಿನ ನಿವಾಸಿಗಳು.

ಏನು ಸಮಸ್ಯೆ?: ಯುಜಿಡಿಯ ಕೊಳಚೆ ನೀರು ಒಳ ಚರಂಡಿ ಸೇರುವ ಬದಲು ತೆರೆದ ಚರಂಡಿಗೆ ಸೇರುತ್ತಿದೆ. ಅಲ್ಲದೆ ನಡುರಸ್ತೆಯಲ್ಲಿ ಹರಿಯುತ್ತಿದೆ. ಇದರಿಂದಾಗಿ ಚರಂಡಿ ಕಟ್ಟಿಕೊಳ್ಳುತ್ತಿದೆ. ಚರಂಡಿ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ ಮನೆಗಳ ಮುಂದೆ ನಿಲ್ಲುತ್ತದೆ. ಇದರಿಂದ ಸೊಳ್ಳೆ, ನೊಣಗಳ ಕಾಟ ಹೆಚ್ಚಾಗಿದ್ದು ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಕಸ-ಕಡ್ಡಿ, ಪ್ಲಾಸ್ಟಿಕ್‌ಗಳಿಂದ ಕಟ್ಟಿಕೊಂಡಿರುವ ತೆರೆದ ಚರಂಡಿಗಳಿಂದ ಹೂಳು ತೆಗೆಸಲು ಕ್ರಮವಹಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಚರಂಡಿಗಳಲ್ಲಿ ತ್ಯಾಜ್ಯ ಸಂಗ್ರಹ: ಶ್ರೀರಾಂಪುರ ೩ನೇ ಹಂತದ ವ್ಯಾಪ್ತಿಯ ಬಹುತೇಕ ಪ್ರದೇಶಗಳು ಅವೈಜ್ಞಾನಿಕವಾಗಿದ್ದು, ಹೋಟೆಲ್‌ಗಳ ತ್ಯಾಜ್ಯ ಹಾಗೂ ಮನೆಗಳ ತ್ಯಾಜ್ಯಗಳೆಲ್ಲವೂ ಚರಂಡಿ ಸೇರುತ್ತಿವೆ. ಇದರಿಂದಾಗಿ ಚರಂಡಿಯಲ್ಲಿ ತ್ಯಾಜ್ಯ ಸಂಗ್ರಹವಾಗುತ್ತಿದೆ. ಇದರಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳೇ ಹೆಚ್ಚಿರುತ್ತವೆ.

ವಾಟ್ಸಾಪ್ ಮೊರೆ ಹೋದ ನಿವಾಸಿಗಳು: ಸಮಸ್ಯೆಯ ಬಗ್ಗೆ ನಿವಾಸಿಗಳು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಅವರ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ತಿಳಿಸುವ ಪ್ರಯತ್ನ ಮಾಡಿದ್ದಾರೆ. ಮತ್ತೊಂದೆಡೆ ಅವರ ವಾಟ್ಸಾಪ್‌ಗೆ ಮಾಹಿತಿ ನೀಡಿದ್ದರೂ ಆಯುಕ್ತರಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಯುಜಿಡಿ ಸಮಸ್ಯೆ ಪರಿಹಾರಕ್ಕೆ ಮೀನ-ಮೇಷ ಎಣಿಸುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ನಿವಾಸಿಗಳು ಆಗ್ರಹಿಸಿದ್ದಾರೆ.

ಸಮಸ್ಯೆ ಪರಿಹರಿಸಲು ಅಧಿಕಾರಿಗಳ ನಿರ್ಲಕ್ಷ್ಯ: ಅವೈಜ್ಞಾನಿಕ ಒಳಚರಂಡಿ ವ್ಯವಸ್ಥೆಯಿಂದಾಗಿ ಅನೈರ್ಮಲ್ಯ ಸಮಸ್ಯೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ನಗರಪಾಲಿಕೆ ಅಽಕಾರಿಗಳು ಸಾರ್ವ ಜನಿಕರ ಅಹವಾಲು ಕಡೆಗಣಿಸಿ, ಸ್ವಚ್ಛ ಭಾರತ್ ಅಭಿಯಾನ ಪ್ರಚಾರದಲ್ಲಿ ಮುಳುಗಿದ್ದಾರೆ. ಸಮಸ್ಯೆಗಳನ್ನು ಪರಿಹರಿಸುವಲ್ಲಿ ಜಾಣಕುರುಡು ಪ್ರದರ್ಶಿಸುತ್ತಿದ್ದಾರೆ ಎಂದು ನಿವಾಸಿಗಳು ಆರೋಪಿಸಿದ್ದಾರೆ.

” ಯುಜಿಡಿ ಅವ್ಯವಸ್ಥೆಯಿಂದ ಇಡೀ ಬಡಾವಣೆ ಕೊಳಗೇರಿಯಂತಾಗಿದೆ. ಮ್ಯಾನ್‌ಹೋಲ್‌ಗಳು ಉಕ್ಕಿ ಕೊಳಚೆ ನೀರು ರಸ್ತೆಯಲ್ಲಿ ಹರಿಯುತ್ತಿದ್ದು, ಬಡಾವಣೆಯಲ್ಲಿ ದುರ್ನಾತ ಬೀರುತ್ತಿದೆ. ರಸ್ತೆಗಳಲ್ಲಿ ಓಡಾಡಲು ತೀವ್ರ ಸಮಸ್ಯೆಯಾಗಿದೆ.”

-ಶೋಭಾ, ಸ್ಥಳೀಯ ನಿವಾಸಿ

” ಯುಜಿಡಿ ಸಮಸ್ಯೆ ಯಾವ ಭಾಗದಲ್ಲಿ ಹೆಚ್ಚಾಗಿದೆಯೋ ಅಲ್ಲಿಗೆ ಸಂಬಂಧಪಟ್ಟ ಇಂಜಿನಿಯರ್‌ಗಳು ಬಂದು ಪರಿಶೀಲಿಸಿ ಸೂಕ್ತ ಪರಿಹಾರ ಕಲ್ಪಿಸಬೇಕು. ಆದರೆ ಸಂಬಂಧಪಟ್ಟ ಅಧಿಕಾರಿಗಳು ತಲೆಕೆಡಿಸಿಕೊಳ್ಳುತ್ತಿಲ್ಲ. ಜನರ ಆರೋಗ್ಯದ ಹಿತದೃಷ್ಟಿಯಿಂದ ಬೇಗ ಪರಿಹಾರ ಕಂಡುಕೊಂಡರೆ ಒಳ್ಳೆಯದು.”

-ಬಾಲಗಣಪತಿ ಭಟ್, ಸ್ಥಳೀಯ ನಿವಾಸಿ

” ಯುಜಿಡಿ ಸಮಸ್ಯೆ ಕುರಿತು ನಗರಪಾಲಿಕೆ ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಿ ಅಲ್ಲಿನ ಸಮಸ್ಯೆ ಯಾವ ಕಡೆಯಿಂದ ಆಗಿದೆ? ಅದಕ್ಕೆ ಪರಿಹಾರವೇನು ಎಂಬುದರ ಬಗ್ಗೆ ಕ್ರಮ ಕೈಗೊಳ್ಳುತ್ತೇನೆ.”

 -ಶೇಖ್ ತನ್ವೀರ್ ಆಸಿ-, ಆಯುಕ್ತರು, ನಗರಪಾಲಿಕೆ 

 

 

 

ಆಂದೋಲನ ಡೆಸ್ಕ್

Recent Posts

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

1 hour ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

2 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

10 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

10 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

10 hours ago

ಮೀಸಲಾತಿ ಸಾಂವಿಧಾನಿಕ ಹಕ್ಕು ; ಸಮಾನತೆಯ ಮೆಟ್ಟಿಲು

ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…

11 hours ago