ಮಂಜು ಕೋಟೆ
‘ಎಣ್ಣೆ’ ಬೇಕು ಎಂದು ರಂಪಾಟ ನಡೆಸಿದ ಗಿರಿಜನ ಹಾಡಿಯ ಪಾರ್ವತಿ ಮನವೊಲಿಸುವಲ್ಲಿ ವೈದ್ಯರು ಸುಸ್ತು
ಎಚ್.ಡಿ.ಕೋಟೆ: ತನ್ನ ೯ ತಿಂಗಳ ಮಗುವಿಗಿಂತ ಮದ್ಯ ಸೇವನೆಯೇ ಮುಖ್ಯ ಎಂದು ಮಗುವಿನ ತಾಯಿ ರಂಪಾಟ ಮಾಡಿದ ಘಟನೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.
ತಾಲ್ಲೂಕಿನ ಚಿಕ್ಕೆರೆಯೂರು ಗ್ರಾಮದ ಗಿರಿಜನ ಹಾಡಿಯ ಪಾರ್ವತಿ ತನ್ನ ೯ ತಿಂಗಳ ಗಂಡು ಮಗುವನ್ನು ಸಮರ್ಪಕವಾಗಿ ಪೋಷಣೆ ಮಾಡದೆ ಕುಡಿತದ ಚಟಕ್ಕೆ ಬಲಿಯಾಗಿ ಸದಾ ಮದ್ಯ ಸೇವನೆಯಲ್ಲಿ ತೊಡಗಿಕೊಂಡಿದ್ದರು.
ತಾಯಿ, ಮಗುವಿನ ಪರಿಸ್ಥಿತಿ ಹದಗೆಡುತ್ತಿರುವುದನ್ನು ಗಮನಿಸಿದ ಇಲ್ಲಿನ ಆಶಾ ಕಾರ್ಯಕತೆಯರಾದ ಮಂಜುಳಾ, ವೀಣಾ, ಚಂದ್ರಿಕಾ ಅವರು ಸಂಬಂಧ ಪಟ್ಟ ಅಽಕಾರಿಗಳಿಗೆ ವಿಚಾರ ತಿಳಿಸಿದಾಗ, ಮಹಿಳಾ ಸಾಂತ್ವನ ಕೇಂದ್ರದ ಮುಖ್ಯಸ್ಥರಾದ ಜಶೀಲ ಅವರು ತಾಯಿ ಮತ್ತು ಮಗುವನ್ನು ಶನಿವಾರ ಕೋಟೆ ಸಾರ್ವಜನಿಕ ಆಸ್ಪತ್ರೆಗೆ ಕರೆತರುವಂತೆ ಸೂಚಿಸಿದರು.
ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಮುಖಾಂತರ ತಾಯಿ ಮತ್ತು ಮಗುವನ್ನು ತಪಾಸಣೆ ಮಾಡಿಸಲು ಮುಂದಾದಾಗ ತಾಯಿ ಪಾರ್ವತಿ ಮದ್ಯದ ಚಟಕ್ಕೆ ಬಲಿಯಾಗಿದ್ದರಿಂದ ಸ್ತಿಮಿತತೆ ಕಳೆದುಕೊಂಡು ರಂಪಾಟ ನಡೆಸಿದರು.
ಮಗುವಿನ ಮೇಲೆ ತಾಯಿಂದ ಯಾವುದೇ ರೀತಿಯ ತೊಂದರೆಗಳು ಮತ್ತು ಹಲ್ಲೆಗಳು ನಡೆದಿಲ್ಲ. ಮುಂದಿನ ದಿನಗಳಲ್ಲಿ ಮದ್ಯ ಸೇವನೆ ಚಟದಿಂದ ಏನಾಗುತ್ತದೆ ಎಂದು ಹೇಳಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದರು.
ನಂತರ ಆಶಾ ಕಾರ್ಯಕರ್ತರು, ವೈದ್ಯರು, ಮಹಿಳಾ ಸಾಂತ್ವನ ಕೇಂದ್ರದವರು, ಸಿಡಿಪಿ ಇಲಾಖೆಯವರು ತಾಯಿ ಪಾರ್ವತಿಯವರಿಗೆ ಮದ್ಯದ ಚಟದ ದುಷ್ಪರಿಣಾಮಗಳ ಬಗ್ಗೆ ಮನವರಿಕೆ ಮಾಡಿಕೊಡಲು ಮುಂದಾದರು.
ಆದರೆ, ಪಾರ್ವತಿ ಅವರು, ನಾನು ಕುಡಿತ ಬಿಡುವ ಪ್ರಶ್ನೆಯೇ ಇಲ್ಲ. ಬೆಳಿಗ್ಗೆ, ಮಧ್ಯಾಹ್ನ, ಸಂಜೆ ನನಗೆ ‘೯೦ ಎಣ್ಣೆ’ ಬೇಕೇ ಬೇಕು ಎಂದು ಪಟ್ಟುಹಿಡಿದರು. ಕೊನೆಗೆ ಎಲ್ಲರೂ ಸೇರಿ ಆಕೆಯನ್ನು ಸಮಾಧಾನಪಡಿಸಿ ಊರಿಗೆ ಕರೆದುಕೊಂಡು ಹೋಗಿ ಬಿಟ್ಟಿದ್ದಾರೆ.
ಆದರೆ ಭಾನುವಾರ ಪಾರ್ವತಿ ಮತ್ತು ಆಕೆಯ ಮಗು ಹಾಡಿಯಲ್ಲಿ ವಾಸ್ತವ್ಯವಿರಲಿಲ್ಲ. ಆಕೆ ಕಳೆದ ಒಂದು ವರ್ಷದಿಂದ ಗಂಡ ಶಿವು ಜೊತೆ ಗಲಾಟೆ ಮಾಡಿಕೊಂಡು ಬೊಮ್ಮಲಾಪುರ ಹಾಡಿಯ ಪತಿಯ ಮನೆಯಿಂದ ಹೊರಬಂದು ತವರು ಮನೆ ಇರುವ ಚಿಕ್ಕ ಕೆರೆಯೂರಿನಲ್ಲಿ ವಾಸವಾಗಿದ್ದರು. ಆದರೆ ಈಗ ಅಲ್ಲೂ ಇಲ್ಲದೆ, ಪತಿಯ ಮನೆಗೂ ಹೋಗದೆ ಕುಡಿತದ ಮತ್ತಿನಲ್ಲಿ ನಾಪತ್ತೆಯಾಗಿದ್ದಾರೆ.
ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ…
ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…
ಕಲಬುರ್ಗಿ: ಇಂದು(ಏಪ್ರಿಲ್.15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…
ಲಕ್ನೋ: ಕರ್ನಾಟಕ ಕಾಂಗ್ರೆಸ್ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ…
ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…