Andolana originals

ಮಗುವಿಗಿಂತ ಮದ್ಯ ಸೇವನೆಯೇ ಮುಖ್ಯ ಎಂದ ತಾಯಿ..!

ಮಂಜು ಕೋಟೆ

‘ಎಣ್ಣೆ’ ಬೇಕು ಎಂದು ರಂಪಾಟ ನಡೆಸಿದ ಗಿರಿಜನ ಹಾಡಿಯ ಪಾರ್ವತಿ ಮನವೊಲಿಸುವಲ್ಲಿ ವೈದ್ಯರು ಸುಸ್ತು

ಎಚ್.ಡಿ.ಕೋಟೆ: ತನ್ನ ೯ ತಿಂಗಳ ಮಗುವಿಗಿಂತ ಮದ್ಯ ಸೇವನೆಯೇ ಮುಖ್ಯ ಎಂದು ಮಗುವಿನ ತಾಯಿ ರಂಪಾಟ ಮಾಡಿದ ಘಟನೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.

ತಾಲ್ಲೂಕಿನ ಚಿಕ್ಕೆರೆಯೂರು ಗ್ರಾಮದ ಗಿರಿಜನ ಹಾಡಿಯ ಪಾರ್ವತಿ ತನ್ನ ೯ ತಿಂಗಳ ಗಂಡು ಮಗುವನ್ನು ಸಮರ್ಪಕವಾಗಿ ಪೋಷಣೆ ಮಾಡದೆ ಕುಡಿತದ ಚಟಕ್ಕೆ ಬಲಿಯಾಗಿ ಸದಾ ಮದ್ಯ ಸೇವನೆಯಲ್ಲಿ ತೊಡಗಿಕೊಂಡಿದ್ದರು.

ತಾಯಿ, ಮಗುವಿನ ಪರಿಸ್ಥಿತಿ ಹದಗೆಡುತ್ತಿರುವುದನ್ನು ಗಮನಿಸಿದ ಇಲ್ಲಿನ ಆಶಾ ಕಾರ್ಯಕತೆಯರಾದ ಮಂಜುಳಾ, ವೀಣಾ, ಚಂದ್ರಿಕಾ ಅವರು ಸಂಬಂಧ ಪಟ್ಟ ಅಽಕಾರಿಗಳಿಗೆ ವಿಚಾರ ತಿಳಿಸಿದಾಗ, ಮಹಿಳಾ ಸಾಂತ್ವನ ಕೇಂದ್ರದ ಮುಖ್ಯಸ್ಥರಾದ ಜಶೀಲ ಅವರು ತಾಯಿ ಮತ್ತು ಮಗುವನ್ನು ಶನಿವಾರ ಕೋಟೆ ಸಾರ್ವಜನಿಕ ಆಸ್ಪತ್ರೆಗೆ ಕರೆತರುವಂತೆ ಸೂಚಿಸಿದರು.

ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಮುಖಾಂತರ ತಾಯಿ ಮತ್ತು ಮಗುವನ್ನು ತಪಾಸಣೆ ಮಾಡಿಸಲು ಮುಂದಾದಾಗ ತಾಯಿ ಪಾರ್ವತಿ ಮದ್ಯದ ಚಟಕ್ಕೆ ಬಲಿಯಾಗಿದ್ದರಿಂದ ಸ್ತಿಮಿತತೆ ಕಳೆದುಕೊಂಡು ರಂಪಾಟ ನಡೆಸಿದರು.

ಮಗುವಿನ ಮೇಲೆ ತಾಯಿಂದ ಯಾವುದೇ ರೀತಿಯ ತೊಂದರೆಗಳು ಮತ್ತು ಹಲ್ಲೆಗಳು ನಡೆದಿಲ್ಲ. ಮುಂದಿನ ದಿನಗಳಲ್ಲಿ ಮದ್ಯ ಸೇವನೆ ಚಟದಿಂದ ಏನಾಗುತ್ತದೆ ಎಂದು ಹೇಳಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದರು.

ನಂತರ ಆಶಾ ಕಾರ್ಯಕರ್ತರು, ವೈದ್ಯರು, ಮಹಿಳಾ ಸಾಂತ್ವನ ಕೇಂದ್ರದವರು, ಸಿಡಿಪಿ ಇಲಾಖೆಯವರು ತಾಯಿ ಪಾರ್ವತಿಯವರಿಗೆ ಮದ್ಯದ ಚಟದ ದುಷ್ಪರಿಣಾಮಗಳ ಬಗ್ಗೆ ಮನವರಿಕೆ ಮಾಡಿಕೊಡಲು ಮುಂದಾದರು.

ಆದರೆ, ಪಾರ್ವತಿ ಅವರು, ನಾನು ಕುಡಿತ ಬಿಡುವ ಪ್ರಶ್ನೆಯೇ ಇಲ್ಲ. ಬೆಳಿಗ್ಗೆ, ಮಧ್ಯಾಹ್ನ, ಸಂಜೆ ನನಗೆ ‘೯೦ ಎಣ್ಣೆ’ ಬೇಕೇ ಬೇಕು ಎಂದು ಪಟ್ಟುಹಿಡಿದರು. ಕೊನೆಗೆ ಎಲ್ಲರೂ ಸೇರಿ ಆಕೆಯನ್ನು ಸಮಾಧಾನಪಡಿಸಿ ಊರಿಗೆ ಕರೆದುಕೊಂಡು ಹೋಗಿ ಬಿಟ್ಟಿದ್ದಾರೆ.

ಆದರೆ ಭಾನುವಾರ ಪಾರ್ವತಿ ಮತ್ತು ಆಕೆಯ ಮಗು ಹಾಡಿಯಲ್ಲಿ ವಾಸ್ತವ್ಯವಿರಲಿಲ್ಲ. ಆಕೆ ಕಳೆದ ಒಂದು ವರ್ಷದಿಂದ ಗಂಡ ಶಿವು ಜೊತೆ ಗಲಾಟೆ ಮಾಡಿಕೊಂಡು ಬೊಮ್ಮಲಾಪುರ ಹಾಡಿಯ ಪತಿಯ ಮನೆಯಿಂದ ಹೊರಬಂದು ತವರು ಮನೆ ಇರುವ ಚಿಕ್ಕ ಕೆರೆಯೂರಿನಲ್ಲಿ ವಾಸವಾಗಿದ್ದರು. ಆದರೆ ಈಗ ಅಲ್ಲೂ ಇಲ್ಲದೆ, ಪತಿಯ ಮನೆಗೂ ಹೋಗದೆ ಕುಡಿತದ ಮತ್ತಿನಲ್ಲಿ ನಾಪತ್ತೆಯಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

1 min ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

14 mins ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

20 mins ago

ಸರಗೂರಿನಲ್ಲಿ ಬೀದಿ ನಾಯಿಗಳ ಹಾವಳಿ : ತತ್ತರಿಸಿದ ಜನತೆ

ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…

28 mins ago

ಕುಕ್ಕರಹಳ್ಳಿ ಕೆರೆ ಸ್ವಚ್ಛತೆಗೆ ಗೋವಾದಿಂದ ದೋಣಿ ಖರೀದಿ

ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…

38 mins ago

ಓದುಗರ ಪತ್ರ | ಸೂಚನಾ ಫಲಕಗಳನ್ನು ಸರಿಪಡಿಸಿ

ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…

41 mins ago