Andolana originals

ಮಗುವಿಗಿಂತ ಮದ್ಯ ಸೇವನೆಯೇ ಮುಖ್ಯ ಎಂದ ತಾಯಿ..!

ಮಂಜು ಕೋಟೆ

‘ಎಣ್ಣೆ’ ಬೇಕು ಎಂದು ರಂಪಾಟ ನಡೆಸಿದ ಗಿರಿಜನ ಹಾಡಿಯ ಪಾರ್ವತಿ ಮನವೊಲಿಸುವಲ್ಲಿ ವೈದ್ಯರು ಸುಸ್ತು

ಎಚ್.ಡಿ.ಕೋಟೆ: ತನ್ನ ೯ ತಿಂಗಳ ಮಗುವಿಗಿಂತ ಮದ್ಯ ಸೇವನೆಯೇ ಮುಖ್ಯ ಎಂದು ಮಗುವಿನ ತಾಯಿ ರಂಪಾಟ ಮಾಡಿದ ಘಟನೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.

ತಾಲ್ಲೂಕಿನ ಚಿಕ್ಕೆರೆಯೂರು ಗ್ರಾಮದ ಗಿರಿಜನ ಹಾಡಿಯ ಪಾರ್ವತಿ ತನ್ನ ೯ ತಿಂಗಳ ಗಂಡು ಮಗುವನ್ನು ಸಮರ್ಪಕವಾಗಿ ಪೋಷಣೆ ಮಾಡದೆ ಕುಡಿತದ ಚಟಕ್ಕೆ ಬಲಿಯಾಗಿ ಸದಾ ಮದ್ಯ ಸೇವನೆಯಲ್ಲಿ ತೊಡಗಿಕೊಂಡಿದ್ದರು.

ತಾಯಿ, ಮಗುವಿನ ಪರಿಸ್ಥಿತಿ ಹದಗೆಡುತ್ತಿರುವುದನ್ನು ಗಮನಿಸಿದ ಇಲ್ಲಿನ ಆಶಾ ಕಾರ್ಯಕತೆಯರಾದ ಮಂಜುಳಾ, ವೀಣಾ, ಚಂದ್ರಿಕಾ ಅವರು ಸಂಬಂಧ ಪಟ್ಟ ಅಽಕಾರಿಗಳಿಗೆ ವಿಚಾರ ತಿಳಿಸಿದಾಗ, ಮಹಿಳಾ ಸಾಂತ್ವನ ಕೇಂದ್ರದ ಮುಖ್ಯಸ್ಥರಾದ ಜಶೀಲ ಅವರು ತಾಯಿ ಮತ್ತು ಮಗುವನ್ನು ಶನಿವಾರ ಕೋಟೆ ಸಾರ್ವಜನಿಕ ಆಸ್ಪತ್ರೆಗೆ ಕರೆತರುವಂತೆ ಸೂಚಿಸಿದರು.

ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಮುಖಾಂತರ ತಾಯಿ ಮತ್ತು ಮಗುವನ್ನು ತಪಾಸಣೆ ಮಾಡಿಸಲು ಮುಂದಾದಾಗ ತಾಯಿ ಪಾರ್ವತಿ ಮದ್ಯದ ಚಟಕ್ಕೆ ಬಲಿಯಾಗಿದ್ದರಿಂದ ಸ್ತಿಮಿತತೆ ಕಳೆದುಕೊಂಡು ರಂಪಾಟ ನಡೆಸಿದರು.

ಮಗುವಿನ ಮೇಲೆ ತಾಯಿಂದ ಯಾವುದೇ ರೀತಿಯ ತೊಂದರೆಗಳು ಮತ್ತು ಹಲ್ಲೆಗಳು ನಡೆದಿಲ್ಲ. ಮುಂದಿನ ದಿನಗಳಲ್ಲಿ ಮದ್ಯ ಸೇವನೆ ಚಟದಿಂದ ಏನಾಗುತ್ತದೆ ಎಂದು ಹೇಳಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದರು.

ನಂತರ ಆಶಾ ಕಾರ್ಯಕರ್ತರು, ವೈದ್ಯರು, ಮಹಿಳಾ ಸಾಂತ್ವನ ಕೇಂದ್ರದವರು, ಸಿಡಿಪಿ ಇಲಾಖೆಯವರು ತಾಯಿ ಪಾರ್ವತಿಯವರಿಗೆ ಮದ್ಯದ ಚಟದ ದುಷ್ಪರಿಣಾಮಗಳ ಬಗ್ಗೆ ಮನವರಿಕೆ ಮಾಡಿಕೊಡಲು ಮುಂದಾದರು.

ಆದರೆ, ಪಾರ್ವತಿ ಅವರು, ನಾನು ಕುಡಿತ ಬಿಡುವ ಪ್ರಶ್ನೆಯೇ ಇಲ್ಲ. ಬೆಳಿಗ್ಗೆ, ಮಧ್ಯಾಹ್ನ, ಸಂಜೆ ನನಗೆ ‘೯೦ ಎಣ್ಣೆ’ ಬೇಕೇ ಬೇಕು ಎಂದು ಪಟ್ಟುಹಿಡಿದರು. ಕೊನೆಗೆ ಎಲ್ಲರೂ ಸೇರಿ ಆಕೆಯನ್ನು ಸಮಾಧಾನಪಡಿಸಿ ಊರಿಗೆ ಕರೆದುಕೊಂಡು ಹೋಗಿ ಬಿಟ್ಟಿದ್ದಾರೆ.

ಆದರೆ ಭಾನುವಾರ ಪಾರ್ವತಿ ಮತ್ತು ಆಕೆಯ ಮಗು ಹಾಡಿಯಲ್ಲಿ ವಾಸ್ತವ್ಯವಿರಲಿಲ್ಲ. ಆಕೆ ಕಳೆದ ಒಂದು ವರ್ಷದಿಂದ ಗಂಡ ಶಿವು ಜೊತೆ ಗಲಾಟೆ ಮಾಡಿಕೊಂಡು ಬೊಮ್ಮಲಾಪುರ ಹಾಡಿಯ ಪತಿಯ ಮನೆಯಿಂದ ಹೊರಬಂದು ತವರು ಮನೆ ಇರುವ ಚಿಕ್ಕ ಕೆರೆಯೂರಿನಲ್ಲಿ ವಾಸವಾಗಿದ್ದರು. ಆದರೆ ಈಗ ಅಲ್ಲೂ ಇಲ್ಲದೆ, ಪತಿಯ ಮನೆಗೂ ಹೋಗದೆ ಕುಡಿತದ ಮತ್ತಿನಲ್ಲಿ ನಾಪತ್ತೆಯಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

17 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

17 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

17 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

17 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

17 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

17 hours ago