Andolana originals

ಮಗುವಿಗಿಂತ ಮದ್ಯ ಸೇವನೆಯೇ ಮುಖ್ಯ ಎಂದ ತಾಯಿ..!

ಮಂಜು ಕೋಟೆ

‘ಎಣ್ಣೆ’ ಬೇಕು ಎಂದು ರಂಪಾಟ ನಡೆಸಿದ ಗಿರಿಜನ ಹಾಡಿಯ ಪಾರ್ವತಿ ಮನವೊಲಿಸುವಲ್ಲಿ ವೈದ್ಯರು ಸುಸ್ತು

ಎಚ್.ಡಿ.ಕೋಟೆ: ತನ್ನ ೯ ತಿಂಗಳ ಮಗುವಿಗಿಂತ ಮದ್ಯ ಸೇವನೆಯೇ ಮುಖ್ಯ ಎಂದು ಮಗುವಿನ ತಾಯಿ ರಂಪಾಟ ಮಾಡಿದ ಘಟನೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.

ತಾಲ್ಲೂಕಿನ ಚಿಕ್ಕೆರೆಯೂರು ಗ್ರಾಮದ ಗಿರಿಜನ ಹಾಡಿಯ ಪಾರ್ವತಿ ತನ್ನ ೯ ತಿಂಗಳ ಗಂಡು ಮಗುವನ್ನು ಸಮರ್ಪಕವಾಗಿ ಪೋಷಣೆ ಮಾಡದೆ ಕುಡಿತದ ಚಟಕ್ಕೆ ಬಲಿಯಾಗಿ ಸದಾ ಮದ್ಯ ಸೇವನೆಯಲ್ಲಿ ತೊಡಗಿಕೊಂಡಿದ್ದರು.

ತಾಯಿ, ಮಗುವಿನ ಪರಿಸ್ಥಿತಿ ಹದಗೆಡುತ್ತಿರುವುದನ್ನು ಗಮನಿಸಿದ ಇಲ್ಲಿನ ಆಶಾ ಕಾರ್ಯಕತೆಯರಾದ ಮಂಜುಳಾ, ವೀಣಾ, ಚಂದ್ರಿಕಾ ಅವರು ಸಂಬಂಧ ಪಟ್ಟ ಅಽಕಾರಿಗಳಿಗೆ ವಿಚಾರ ತಿಳಿಸಿದಾಗ, ಮಹಿಳಾ ಸಾಂತ್ವನ ಕೇಂದ್ರದ ಮುಖ್ಯಸ್ಥರಾದ ಜಶೀಲ ಅವರು ತಾಯಿ ಮತ್ತು ಮಗುವನ್ನು ಶನಿವಾರ ಕೋಟೆ ಸಾರ್ವಜನಿಕ ಆಸ್ಪತ್ರೆಗೆ ಕರೆತರುವಂತೆ ಸೂಚಿಸಿದರು.

ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಮುಖಾಂತರ ತಾಯಿ ಮತ್ತು ಮಗುವನ್ನು ತಪಾಸಣೆ ಮಾಡಿಸಲು ಮುಂದಾದಾಗ ತಾಯಿ ಪಾರ್ವತಿ ಮದ್ಯದ ಚಟಕ್ಕೆ ಬಲಿಯಾಗಿದ್ದರಿಂದ ಸ್ತಿಮಿತತೆ ಕಳೆದುಕೊಂಡು ರಂಪಾಟ ನಡೆಸಿದರು.

ಮಗುವಿನ ಮೇಲೆ ತಾಯಿಂದ ಯಾವುದೇ ರೀತಿಯ ತೊಂದರೆಗಳು ಮತ್ತು ಹಲ್ಲೆಗಳು ನಡೆದಿಲ್ಲ. ಮುಂದಿನ ದಿನಗಳಲ್ಲಿ ಮದ್ಯ ಸೇವನೆ ಚಟದಿಂದ ಏನಾಗುತ್ತದೆ ಎಂದು ಹೇಳಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದರು.

ನಂತರ ಆಶಾ ಕಾರ್ಯಕರ್ತರು, ವೈದ್ಯರು, ಮಹಿಳಾ ಸಾಂತ್ವನ ಕೇಂದ್ರದವರು, ಸಿಡಿಪಿ ಇಲಾಖೆಯವರು ತಾಯಿ ಪಾರ್ವತಿಯವರಿಗೆ ಮದ್ಯದ ಚಟದ ದುಷ್ಪರಿಣಾಮಗಳ ಬಗ್ಗೆ ಮನವರಿಕೆ ಮಾಡಿಕೊಡಲು ಮುಂದಾದರು.

ಆದರೆ, ಪಾರ್ವತಿ ಅವರು, ನಾನು ಕುಡಿತ ಬಿಡುವ ಪ್ರಶ್ನೆಯೇ ಇಲ್ಲ. ಬೆಳಿಗ್ಗೆ, ಮಧ್ಯಾಹ್ನ, ಸಂಜೆ ನನಗೆ ‘೯೦ ಎಣ್ಣೆ’ ಬೇಕೇ ಬೇಕು ಎಂದು ಪಟ್ಟುಹಿಡಿದರು. ಕೊನೆಗೆ ಎಲ್ಲರೂ ಸೇರಿ ಆಕೆಯನ್ನು ಸಮಾಧಾನಪಡಿಸಿ ಊರಿಗೆ ಕರೆದುಕೊಂಡು ಹೋಗಿ ಬಿಟ್ಟಿದ್ದಾರೆ.

ಆದರೆ ಭಾನುವಾರ ಪಾರ್ವತಿ ಮತ್ತು ಆಕೆಯ ಮಗು ಹಾಡಿಯಲ್ಲಿ ವಾಸ್ತವ್ಯವಿರಲಿಲ್ಲ. ಆಕೆ ಕಳೆದ ಒಂದು ವರ್ಷದಿಂದ ಗಂಡ ಶಿವು ಜೊತೆ ಗಲಾಟೆ ಮಾಡಿಕೊಂಡು ಬೊಮ್ಮಲಾಪುರ ಹಾಡಿಯ ಪತಿಯ ಮನೆಯಿಂದ ಹೊರಬಂದು ತವರು ಮನೆ ಇರುವ ಚಿಕ್ಕ ಕೆರೆಯೂರಿನಲ್ಲಿ ವಾಸವಾಗಿದ್ದರು. ಆದರೆ ಈಗ ಅಲ್ಲೂ ಇಲ್ಲದೆ, ಪತಿಯ ಮನೆಗೂ ಹೋಗದೆ ಕುಡಿತದ ಮತ್ತಿನಲ್ಲಿ ನಾಪತ್ತೆಯಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

1 hour ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

2 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

7 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

9 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

9 hours ago

ಕೆಫೆ ‘ರೂಫ್ ಟಾಪ್’ಗೆ ಅನುಮತಿಯೇ ಇರಲಿಲ್ಲ!

ಎಚ್.ಎಸ್.ದಿನೇಶ್‌ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್‌ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…

10 hours ago