ಓದುಗರ ಪತ್ರ
ಬಹುಭಾಷಾ ನಟ ಕಮಲ್ ಹಾಸನ್ ಒಬ್ಬ ವೈಚಾರಿಕ ಪ್ರಜ್ಞೆಯುಳ್ಳವರಾಗಿದ್ದು, ತಮ್ಮ ಸಿನಿಮಾದ ಆಡಿಯೋ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುವ ವೇಳೆ ಕನ್ನಡದ ಖ್ಯಾತ ನಟ ಶಿವರಾಜ್ ಕುಮಾರ್ ಅವರ ಮುಂದೆಯೇ ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿದ್ದು ಎಂದು ಹೇಳುವ ಮೂಲಕ ತಮಿಳು ಭಾಷೆ ಕನ್ನಡ ಭಾಷೆಯ ತಾಯಿ ಎನ್ನುವ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೆ.
ಈ ಹೇಳಿಕೆಯಿಂದಾಗಿ ಕರ್ನಾಟಕದ ಜನರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಅಲ್ಲದೆ ಈ ವಿಷಯವಾಗಿ ನಾನು ಕ್ಷಮೆ ಯಾಚಿಸುವುದಿಲ್ಲ,ಅದನ್ನು ಪ್ರೀತಿಯಿಂದ ಹೇಳಿದ್ದೇನೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿ ಕೊಂಡಿದ್ದಾರೆ. ತಮ್ಮ ಮಾತೃಭಾಷೆಯ ಮೇಲಿನ ಅಭಿಮಾನ ಮೆರೆಯು ವುದ್ದಕ್ಕಾಗಿ ಮತ್ತೊಂದು ಭಾಷೆಯ ಜನರ ಭಾವನೆಗಳಿಗೆ ಧಕ್ಕೆ ತರುವುದು ಕಮಲ್ ಹಾಸನ್ಗೆ ಶೋಭೆ ತರುವುದಿಲ್ಲ. ಇದು ಅತ್ಯಂತ ಖಂಡನೀಯ ಮತ್ತು ವಿಷಾದನೀಯ ಸಂಗತಿ . ಇದರ ಬಗ್ಗೆ ಕನ್ನಡ ಚಿತ್ರರಂಗದ ನಟರು ಮೌನ ಮುರಿಯಬೇಕಿದೆ. ಕಮಲ್ ಹಾಸನ್ ಕೂಡಲೇ ತಮ್ಮ ಹೇಳಿಕೆ ಹಿಂಪಡೆದು ಕನ್ನಡಿಗರ ಕ್ಷಮೆಯಾಚಿಸಬೇಕು.
– ಎಂ. ಪಿ. ದರ್ಶನ್ ಚಂದ್ರ. ಮುಕ್ಕಡಹಳ್ಳಿ, ಚಾಮರಾಜನಗರ
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…