ಓದುಗರ ಪತ್ರ
ಬಹುಭಾಷಾ ನಟ ಕಮಲ್ ಹಾಸನ್ ಒಬ್ಬ ವೈಚಾರಿಕ ಪ್ರಜ್ಞೆಯುಳ್ಳವರಾಗಿದ್ದು, ತಮ್ಮ ಸಿನಿಮಾದ ಆಡಿಯೋ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುವ ವೇಳೆ ಕನ್ನಡದ ಖ್ಯಾತ ನಟ ಶಿವರಾಜ್ ಕುಮಾರ್ ಅವರ ಮುಂದೆಯೇ ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿದ್ದು ಎಂದು ಹೇಳುವ ಮೂಲಕ ತಮಿಳು ಭಾಷೆ ಕನ್ನಡ ಭಾಷೆಯ ತಾಯಿ ಎನ್ನುವ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೆ.
ಈ ಹೇಳಿಕೆಯಿಂದಾಗಿ ಕರ್ನಾಟಕದ ಜನರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಅಲ್ಲದೆ ಈ ವಿಷಯವಾಗಿ ನಾನು ಕ್ಷಮೆ ಯಾಚಿಸುವುದಿಲ್ಲ,ಅದನ್ನು ಪ್ರೀತಿಯಿಂದ ಹೇಳಿದ್ದೇನೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿ ಕೊಂಡಿದ್ದಾರೆ. ತಮ್ಮ ಮಾತೃಭಾಷೆಯ ಮೇಲಿನ ಅಭಿಮಾನ ಮೆರೆಯು ವುದ್ದಕ್ಕಾಗಿ ಮತ್ತೊಂದು ಭಾಷೆಯ ಜನರ ಭಾವನೆಗಳಿಗೆ ಧಕ್ಕೆ ತರುವುದು ಕಮಲ್ ಹಾಸನ್ಗೆ ಶೋಭೆ ತರುವುದಿಲ್ಲ. ಇದು ಅತ್ಯಂತ ಖಂಡನೀಯ ಮತ್ತು ವಿಷಾದನೀಯ ಸಂಗತಿ . ಇದರ ಬಗ್ಗೆ ಕನ್ನಡ ಚಿತ್ರರಂಗದ ನಟರು ಮೌನ ಮುರಿಯಬೇಕಿದೆ. ಕಮಲ್ ಹಾಸನ್ ಕೂಡಲೇ ತಮ್ಮ ಹೇಳಿಕೆ ಹಿಂಪಡೆದು ಕನ್ನಡಿಗರ ಕ್ಷಮೆಯಾಚಿಸಬೇಕು.
– ಎಂ. ಪಿ. ದರ್ಶನ್ ಚಂದ್ರ. ಮುಕ್ಕಡಹಳ್ಳಿ, ಚಾಮರಾಜನಗರ
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…