Andolana originals

‘ಪೆರಿಫೆರಲ್ ರಿಂಗ್ ರಸ್ತೆ ಯೋಜನೆ ಆರಂಭಕ್ಕೆ ಮುಡಾ ಸಜ್ಜು ’

ಕೆ.ಬಿ.ರಮೇಶನಾಯಕ

ಶೀಘ್ರದಲ್ಲೇ ಡಿಪಿಆರ್ ತಯಾರಿಸಲು ಜಾಗತಿಕ ಮಟ್ಟದ ಟೆಂಡರ್ ಪ್ರಕ್ರಿಯೆ

ಪ್ರಸಕ್ತ ಸಾಲಿನಲ್ಲಿ ಡಿಪಿಆರ್‌ಗೆ ೭.೭೫ ಕೋಟಿ ರೂ.ಅನುದಾನ ಕಾಯ್ದಿರಿಸುವಿಕೆ

ಹಳೆಯ ಚಾರ್ಮ್‌ಗೆ ಮರಳುತ್ತಿರುವ ಅಧಿಕಾರಿಗಳ ಪಡೆ 

ಮೈಸೂರು: ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಮೈಸೂರು ನಗರದಲ್ಲಿ ಹೊರ ಪರಿಧಿ ರಸ್ತೆಯನ್ನು ನಿರ್ಮಿಸಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಜ್ಜಾಗಿದೆ. ಪ್ರಸಕ್ತ ಸಾಲಿನಲ್ಲಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸಲು ೭.೭೫ ಕೋಟಿ ರೂಪಾಯಿ ಕಾಯ್ದಿರಿಸಲಾಗಿದ್ದು, ಶೀಘ್ರದಲ್ಲೇ ಜಾಗತಿಕ ಮಟ್ಟದ ಟೆಂಡರ್ ಕರೆಯಲು ಪ್ರಕ್ರಿಯೆ ಆರಂಭಿಸಲಿದೆ.

೨೦೨೩ರಲ್ಲಿ ಡಿಪಿಆರ್ ತಯಾರಿಸಲು ಟೆಂಡರ್ ಪ್ರಕ್ರಿಯೆ ಆರಂಭಿಸಲಾಗಿತ್ತಾದರೂ ಒಂದು ಏಜೆನ್ಸಿ ಮಾತ್ರ ಪಾಲ್ಗೊಂಡಿದ್ದರಿಂದ ಮರು ಟೆಂಡರ್‌ಗೆ ಸರ್ಕಾರ ಸೂಚನೆ ನೀಡಿತ್ತು. ಆದರೆ, ನಂತರದ ದಿನಗಳಲ್ಲಿ ನಾನಾ ಬೆಳವಣಿಗೆಗಳಿಂದ ನನೆಗುದಿಗೆ ಬಿದ್ದಿತ್ತು. ಇದೀಗ ಮೈಸೂರು ನಗರದ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಮೈಸೂರು ಪೆರಿಫೆರಲ್ ರಿಂಗ್ ರಸ್ತೆ ಯೋಜನೆಗೆ ಮಹತ್ವದ ಡಿಪಿಆರ್ ತಯಾರಿಸಲು ಮುಡಾ ತನ್ನ ಬಜೆಟ್‌ನಲ್ಲಿ ಈ ಬಾರಿ ಹಣ ಕಾಯ್ದಿರಿಸಿರುವುದು ಆಶಾಭಾವನೆ ಮೂಡಿಸಿದೆ.

೨೫ ವರ್ಷಗಳ ಹಿಂದೆ ರೂಪಿಸಲಾದ ಹೊರ ವರ್ತುಲ ರಸ್ತೆ ಮೈಸೂರಿನ ಅಭಿವೃದ್ಧಿ ಮತ್ತು ಬೆಳವಣಿಗೆಗೆ ದಾರಿ ಮಾಡಿಕೊಟ್ಟಿತು. ಮೈಸೂರಿನ ಮುಂದಿನ ಮೂರ‍್ನಾಲ್ಕು ದಶಕಗಳ ಪ್ರಗತಿಯ ನಿಟ್ಟಿನಲ್ಲಿ ಪೆರಿಫೆರಲ್ ರಿಂಗ್ ರಸ್ತೆ ಯೋಜನೆಗೆ ಮತ್ತೊಮ್ಮೆ ವೇಗ ಸಿಗುತ್ತಿದೆ. ಒಂದು ವರ್ಷದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರ ನಿವೇಶನದ ವಿಚಾರದಲ್ಲಿ ವಿವಾದಕ್ಕೆ ಸಿಲುಕಿದ್ದ ಮುಡಾ ನಿಧಾನವಾಗಿ ಅದರಿಂದ ಹೊರ ಬರಲು ಪ್ರಯತ್ನಿಸುತ್ತಿದೆ. ಮೈಸೂರು ಕೇಂದ್ರ ಭಾಗದಿಂದ ಸುತ್ತಲಿನ ಸುಮಾರು ೧೫ರಿಂದ ೨೫ ಕಿ.ಮೀ. ವ್ಯಾಪ್ತಿಯಲ್ಲಿ ಪೆರಿ-ರಲ್ ರಿಂಗ್ ರಸ್ತೆ ನಿರ್ಮಿಸುವ ಚಟುವಟಿಕೆಗಳು ದಶಕದಿಂದಲೂ ನಡೆದಿವೆ. ಈಗ ಅದಕ್ಕೆ ಮತ್ತೆ ಜೀವ ಬಂದಿದೆ. ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದಾಗ ಈ ಯೋಜನೆ ಆರಂಭಿಸಬೇಕು ಎನ್ನುವುದು ಮುಡಾ ಅಧಿ ಕಾರಿಗಳ ಬಯಕೆಯಾಗಿದೆ.

ಭವಿಷ್ಯದಲ್ಲಿ ಮೈಸೂರಿನತ್ತ ಕಣ್ಣು: ಮೈಸೂರು ನಗರದ ಸುತ್ತಲೂ ಈಗಾಗಲೇ ೪ ರಿಂದ ೬ ನಾಗರಿಕ ಕೈಗಾರಿಕಾ ವಲಯಗಳು ಸ್ಥಾಪನೆಗೊಂಡು ಕಾರ್ಯ ನಿರ್ವಹಿಸುತ್ತಿವೆ. ನಂಜನಗೂಡು ಸಮೀಪ  ಸೆಮಿಕಂಡಕ್ಟರ್ ಯೋಜನೆಯನ್ನು ಕೈಗೊಳ್ಳಲು ಅನುಮೋದನೆಯಾಗಿರುವುದರಿಂದ ಭವಿಷ್ಯದಲ್ಲಿ ಸಂಚಾರ ದಟ್ಟಣೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಮೈಸೂರು ವಿಮಾನ ನಿಲ್ದಾಣವನ್ನೂ ಮೇಲ್ದರ್ಜೆಗೆ ಏರಿಸುವ ಯೋಜನೆಯೂ ಇದೆ. ಈ ಮಹಾಯೋಜನೆ ೨೦೩೧ರಲ್ಲಿ ಮೈಸೂರು -ಚೆನ್ನೈ ಬುಲೆಟ್ ಟ್ರೈನ್ ಮತ್ತು ಮೈಸೂರು-ಮಂಗಳೂರು ರಸ್ತೆಯನ್ನು ಉನ್ನತೀಕರಿಸುವ ಯೋಜನೆಗಳನ್ನು ಒಳಗೊಂಡಿದೆ. ಇದರಿಂದ ಮೈಸೂರು ನಗರವೂ ವೇಗವಾಗಿ ಬೆಳವಣಿಗೆಯಾಗ ಲಿದ್ದು, ಸಂಚಾರ ದಟ್ಟಣೆ ಕೂಡ ಅಧಿಕವಾಗಲಿದೆ.

ಪ್ರಮುಖ ಪ್ರವಾಸಿ ತಾಣವಾಗಿರುವ ಮೈಸೂರು ನಗರಕ್ಕೆ ವಾರ್ಷಿಕವಾಗಿ ಸುಮಾರು ೪೦ಲಕ್ಷಕ್ಕೂ ಹೆಚ್ಚಿನ ಪ್ರವಾಸಿಗರು ದೇಶ-ವಿದೇಶಗಳಿಂದ ಆಗಮಿಸುತ್ತಾರೆ. ನಗರದ ಸುತ್ತಲೂ ಹಾಲಿ ಇರುವ ಹೊರ ವರ್ತುಲ ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಪ್ರಸ್ತುತ ಮೈಸೂರು ನಗರದಲ್ಲಿ ಸುಮಾರು ೮ ಲಕ್ಷ ವಾಹನಗಳು ನೋಂದಣಿಯಾಗಿವೆ. ಇದಲ್ಲದೇ ಹೊರ ಜಿಲ್ಲೆಗಳ ನೋಂದಣಿ ವಾಹನಗಳ ಸಂಚಾರವೂ ಅಧಿಕವಾಗಿದೆ. ಮೈಸೂರಿನ ಬೆಳವಣಿಗೆಗೆ ಪೂರಕವಾಗಿ ೨ನೇ ರಿಂಗ್ ರಸ್ತೆಯನ್ನು ರೂಪಿಸಲು ಹಲವು ವರ್ಷಗಳಿಂದ ಪ್ರಯತ್ನಗಳು ನಡೆದಿವೆ ಎಂದು ಹೇಳಲಾಗಿದೆ.

ಅರಣ್ಯ ಪ್ರದೇಶದಿಂದ ಮುಕ್ತ: 

ಉದ್ದೇಶಿತ ಪೆರಿಫೆರಲ್ ರಿಂಗ್ ರಸ್ತೆಯು ಅರಣ್ಯ ಪ್ರದೇಶದಿಂದ ಮುಕ್ತವಾಗಿದ್ದು, ಪ್ರಸಕ್ತ ೧೦೫.೩೧ ಕಿ.ಮೀ. ರಸ್ತೆಯನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದ್ದು, ಇದು ೪೫ ಮೀ. ಅಗಲದ ರಸ್ತೆಯಾಗಿರುತ್ತದೆ. ಇದರಲ್ಲಿ ೩+೩ ಮುಖ್ಯ ಲೇನ್‌ಗಳು ಹಾಗೂ ೦೨ ಸರ್ವಿಸ್ ಲೈನ್‌ಗಳು ಇರಲಿವೆ. ಹೊರ ಪರಿಽ ರಸ್ತೆಯನ್ನು ನಿರ್ಮಿಸಲು ಡಿಪಿಆರ್ ತಯಾರಿಸಲು ೨೦೨೫-೨೬ನೇ ಸಾಲಿನಲ್ಲಿ ೭.೭೫ ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ ಎಂದು ಮುಡಾ ಬಜೆಟ್‌ನಲ್ಲಿ ಉಲ್ಲೇಖಿಸಲಾಗಿದೆ. ಮೈಸೂರಿನಲ್ಲಿ ಹೊರವರ್ತುಲ ರಸ್ತೆ ಈಗಾಗಲೇ ಬಳಕೆಯಲ್ಲಿದೆ. ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದಾಗ ಇದನ್ನು ಬಳಕೆಗೆ ಒದಗಿಸಲಾಗಿತ್ತು. ಅಪೂರ್ಣವಾಗಿದ್ದ ಕೆಲಸವನ್ನು ದಶಕದ ಹಿಂದೆ ಮುಗಿಸಲಾಗಿದೆ. ಇದಲ್ಲದೇ ಮುಡಾದಿಂದಲೇ ಪೆರಿ-ರಲ್ ರಿಂಗ್ ರಸ್ತೆ ರೂಪಿಸುವ ಕುರಿತು ೭-೮ ವರ್ಷಗಳ ಹಿಂದೆಯೇ ಚರ್ಚೆಗಳು ನಡೆದು ಜಾಗವನ್ನು ಗುರುತಿಸಲಾಗಿತ್ತು. ಆದರೆ, ಯೋಜನೆ ಕುಂಟುತ್ತಾ ಸಾಗಿತ್ತು. ಈಗ ಮತ್ತೆ ಯೋಜನೆ ಅನುಷ್ಠಾನಕ್ಕೆ ಮುಡಾ ಮುಂದಾಗಿರುವುದರಿಂದ ಭೂಸ್ವಾಽನದ ಜತೆಗೆ ರಸ್ತೆ ನಿರ್ಮಾಣಕ್ಕೆ ಕೋಟಿಗಟ್ಟಲೇ ಅನುದಾನ ಬೇಕಿದೆ. ಖಾಸಗಿ ಸಹಭಾಗಿತ್ವದಲ್ಲಿ ಯೋಜನೆ ಆರಂಭಿಸುವ ಚಿಂತನೆ ಇರುವ ಕಾರಣ ಡಿಪಿಆರ್ ತಯಾರಾದ ಮೇಲೆ ಯೋಜನೆ ಬಗ್ಗೆ ನಿಖರ ತೀರ್ಮಾನವಾಗುವ ಸಾಧ್ಯತೆ ಇದೆ.

” ಮೈಸೂರಿನ ಮುಂದಿನ ನಾಲ್ಕೈದು ದಶಕಗಳ ಅಭಿವೃದ್ಧಿಯನ್ನು ಗಮನ ದಲ್ಲಿಟ್ಟುಕೊಂಡು ಹೊರ ಪರಿಧಿ ರಸ್ತೆ ನಿರ್ಮಾಣವಾದರೆ ಮತ್ತಷ್ಟು ಕೈಗಾರಿಕೆಗಳು ಸ್ಥಾಪನೆಯಾಗಲು ಮತ್ತು ಸಂಚಾರದ ದಟ್ಟಣೆ ತಗ್ಗಿಸಲು ಅನುಕೂಲವಾಗಲಿದೆ. ಈಗಾಗಲೇ ಡಿಪಿಆರ್ ತಯಾರಿಸಲು ಅನುದಾನ ಕಾಯ್ದಿರಿಸಲಾಗಿದೆ. ಸರ್ಕಾರದ ಅನುಮೋದನೆ ಪಡೆದು ಟೆಂಡರ್ ಪ್ರಕ್ರಿಯೆ ಶುರು ಮಾಡುತ್ತೇವೆ.”

-ಎ.ಎನ್.ರಘುನಂದನ್, ಆಯುಕ್ತರು, ಮುಡಾ.

ಆಂದೋಲನ ಡೆಸ್ಕ್

Recent Posts

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪ ಪ್ರಕರಣ | ಸಿಬ್ಬಂದಿಗಳಿಂದಲೇ ಕೃತ್ಯ ; ಇಬ್ಬರ ಬಂಧನ

ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…

23 mins ago

ಮೂರು ದಿನಗಳೊಳಗೆ ಒಪ್ಪಂದಕ್ಕೆ ಬನ್ನಿ : ಇರಾನ್‌ಗೆ ಟ್ರಂಪ್‌ ವಾರ್ನಿಂಗ್‌

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮವನ್ನು ಒಪ್ಪಿಕೊಳ್ಳಲು ಮೂರು…

45 mins ago

ಕೆರೆಯ ನೀರಿಗೆ ಯೂರಿಯಾ ಬೆರಕೆ ; ನೀರು ಕುಡಿದು 7 ಕುರಿಗಳು ಸಾವು

ಹನೂರು : ಜಾನುವಾರುಗಳು ಕುಡಿಯುವ ಕೆರೆಯ ನೀರಿಗೆ ಯೂರಿಯಾ ಬೆರಕೆ ಮಾಡಿದ್ದ ವಿಷಪೂರಿತ ನೀರು ಕುಡಿದು ಏಳು ಕುರಿಗಳು ಮೃತಪಟ್ಟಿರುವ…

1 hour ago

KCET 2026 | ಸಿಇಟಿ ಪರೀಕ್ಷೆಯೆ ವಿಷಯವಾರು ಕೀ ಉತ್ತರ ಪ್ರಕಟಿಸಿದ ಕೆಇಎ

ಬೆಂಗಳೂರು : ಪ್ರಸಕ್ತ-2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ…

2 hours ago

ಹೊರ್ಮುಜ್‌ ಬಿಕ್ಕಟ್ಟು : ಸಂಘರ್ಷ ಶಮನಕ್ಕೆ ಇರಾನ್‌ ಹೊಸ ದಾಳ

ಟೆಹ್ರಾನ್‌ : ಅಮೆರಿಕವು ಶಾಂತಿ ಮಾತುಕತೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ ಇರಾನ್ ಸಂಘರ್ಷ ಶಮನಕ್ಕೆ ಹೊಸ ದಾಳ ಉರುಳಿಸಿದೆ. ಪಾಕಿಸ್ತಾನದ ಸಂಧಾನಕಾರರ…

2 hours ago

ಹನೂರು| ಮಹಿಳಾ ಮೀಸಲಾತಿ ಮಸೂದೆ ವಿರೋಧಿಸಿದ ಕಾಂಗ್ರೆಸ್‌ ಮತ್ತು ಮಿತ್ರಪಕ್ಷಗಳ ವಿರುದ್ಧ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಜಾರಿಗೆ ತರಲು ಮುಂದಾದ…

3 hours ago