Andolana originals

ಡಿಸಿಗೆ ಮುಡಾ ಹೊಣೆ

ಅಧ್ಯಕ್ಷರಾಗಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಅಧಿಕಾರ ಸ್ವೀಕಾರ

ಮೈಸೂರು: ನಿವೇಶನಗಳ ಹಂಚಿಕೆ ಅಕ್ರಮ ಹಗರಣದಲ್ಲಿ ದೊಡ್ಡ ಸದ್ದು ಮಾಡಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವನ್ನು ಸರಿದಾರಿಗೆ ತರಲು ಖಡಕ್ ಐಎಎಸ್ ಅಧಿಕಾರಿಯನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಲಾಗುತ್ತದೆ ಎನ್ನುವ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿದಿದ್ದು, ಜಿಲ್ಲಾಧಿಕಾರಿಯನ್ನು ಅಧ್ಯಕ್ಷರಾಗಿ
ನೇಮಕ ಮಾಡಿದೆ.

ಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ.ಮರೀಗೌಡ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳನ್ನೇ ಅಧ್ಯಕ್ಷರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರ ಅನ್ವಯ ಡಿಸಿ ಜಿ ಲಕ್ಷ್ಮೀಕಾಂತ್ ರೆಡ್ಡಿ ಮುಡಾ ಅಧ್ಯಕ್ಷರಾಗಿ ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿ ದಂತೆ ಇಡಿ, ಲೋಕಾಯುಕ್ತ ತನಿಖೆ ನಡೆಸುತ್ತಿರುವ ಹೊತ್ತಿನಲ್ಲೇ ಡಿಸಿ ಹೆಗಲಿಗೆ ದೊಡ್ಡ ಜವಾಬ್ದಾರಿ ವಹಿಸಿದಂತಾಗಿದೆ.

ಮೈಸೂರು ಹೊರವಲಯದ ಕೆಸರೆ ಬಡಾವಣೆಯಲ್ಲಿ ಸಿಎಂ ಪತ್ನಿ ಪಾರ್ವತಿ ಅವರಿಗೆ ಬದಲಿ ನಿವೇಶನ ಕೊಡುವ ಬದಲಿಗೆ ವಿಜಯನಗರ ಬಡಾವಣೆಯಲ್ಲಿ 14 ನಿವೇಶನಗಳನ್ನು ಮಂಜೂರು ಮಾಡಿರುವ ವಿಚಾರ ದೊಡ್ಡ ಸದ್ದು ಮಾಡುತ್ತಿದ್ದಂತೆ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪ ಶುರುವಾಗಿತ್ತು.

ಹಗರಣದ ಕುರಿತು ತನಿಖೆ ನಡೆಸುವಂತೆ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್‌ಗೆ ಉಚ್ಚನ್ಯಾಯಾಲಯ ಒಪ್ಪಿದ್ದರಿಂದ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾದರೆ, ಸ್ನೇಹಮಯಿ ಕೃಷ್ಣ ಅವರ ದೂರಿನ ಮೇಲೆ ಇಡಿಯಿಂದ ತನಿಖೆ ಶುರುವಾಗಿದೆ. ಈ ಎಲ್ಲ ಬೆಳವಣಿಗೆಗಳಿಗೂ ಕೆ. ಮರೀಗೌಡ ಅವರೇ ಕಾರಣವೆಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಇದಾದ ಕೆಲ ದಿನಗಳ ನಂತರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಮುಡಾದಲ್ಲಿ ಹಲವಾರು ವರ್ಷಗಳಿಂದ ನಡೆದಿರುವ ಅಕ್ರಮಗಳನ್ನು ಹೊರತೆಗೆದು ಕಾನೂನುಬಾಹಿರವಾಗಿ ಬದಲಿ ನಿವೇಶನ, ಭೂ ಪರಿಹಾರ ಪಡೆದವರಿಗೆ ಬಿಸಿಮುಟ್ಟಿಸಲು ಖಡಕ್ ಐಎಎಸ್ ಅಧಿಕಾರಿಯನ್ನೇ ಆಡಳಿತಾಧಿಕಾರಿಯನ್ನಾಗಿ ನೇಮಿಸಲಾಗುತ್ತದೆ ಎನ್ನುವ ಮಾತು ಕೇಳಿಬಂದಿತ್ತು. ಇದಕ್ಕೆ ಪೂರಕವಾಗಿ ಮೂವರು ಅಧಿಕಾರಿಗಳ ಹೆಸರನ್ನು ಪಡೆಯಲಾಗಿತ್ತು. ಆದರೆ, ದಿಢೀರನೆ ಆಡಳಿತಾಧಿಕಾರಿ ನೇಮಕದ ಚಿಂತನೆಯನ್ನು ಕೈ ಬಿಟ್ಟು ಜಿಲ್ಲಾಧಿಕಾರಿಗಳನ್ನು ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ಅಧಿಕಾರ ಸ್ವೀಕಾರ: ಸರ್ಕಾರದ ಆದೇಶದಂತೆ ಮಂಗಳವಾರ ಮುಡಾ ಅಧ್ಯಕ್ಷರಾಗಿ ಜಿಲಕ್ಷ್ಮೀಕಾಂತ್ ರೆಡ್ಡಿ ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರಾಧಿಕಾರದ ಕೆಲಸಕಾರ್ಯಗಳಿಗೆ ಸಂಬಂಧಪಟ್ಟಂತೆ ಹಾಗೂ ವೈಯಕ್ತಿಕವಾಗಿ ನನ್ನ ಗಮನಕ್ಕೆ ತರಬೇಕಾದಂತಹ ಅರೆಸರ್ಕಾರಿ ಪತ್ರಗಳು, ಗೌಪ್ಯಪತ್ರಗಳು ಹಾಗೂ ಇತರೆ ದಾಖಲೆಗಳನ್ನು ಸಲ್ಲಿಸಬಹುದೆಂದು ಹೇಳಿದ್ದಾರೆ.

ಲೋಕಾಯುಕ್ತ ವಿಚಾರಣೆ ಚುರುಕು: ಮುಡಾ ನಿವೇಶನಗಳ ಹಗರಣ ಕುರಿತು ಇಡಿ ಅಧಿಕಾರಿಗಳು ಎರಡು ದಿನಗಳ ಕಾಲ ಮುಡಾ ಆಯುಕ್ತರು, ಕಾರ್ಯದರ್ಶಿ ಮತ್ತಿತರ ಅಧಿಕಾರಿಗಳನ್ನು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿದ್ದರೆ, ಮತ್ತೊಂದು ಕಡೆ ಲೋಕಾಯುಕ್ತ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಈಗಾಗಲೇ ನಿವೃತ್ತ ಐಎಎಸ್ ಅಧಿಕಾರಿ ಜಿ. ಕುಮಾರನಾಯ್ಕ ಅವರನ್ನು ವಿಚಾರಣೆ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಅ.24ರಂದು ಮತ್ತೊಬ್ಬ ಐಎಎಸ್ ಎಸ್.ಪಾಲಯ್ಯ ಅವರನ್ನು ವಿಚಾರಣೆಗೆ ಕರೆದಿದ್ದಾರೆ.

ಮುಡಾ ಆಡಳಿತ ಮಂಡಳಿ ರದ್ದಾಗುವುದು ಅನುಮಾನ: ಮುಡಾ ಆಡಳಿತ ಮಂಡಳಿಯನ್ನು ರದ್ದುಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡುವುದು ಅನುಮಾನವಾಗಿದೆ. ಆಡಳಿತಾಧಿಕಾರಿ ನೇಮಕ ಮಾಡಿದ್ದರೆ ಈ ಪ್ರಕ್ರಿಯೆಗೆ ಚಾಲನೆ ನೀಡುವ ಸಾಧ್ಯತೆ ಇತ್ತು. ಆದರೆ, ಈಗ ಅಧ್ಯಕ್ಷರನ್ನು ನೇಮಕ ಮಾಡಿರುವ ಸರ್ಕಾರ ಒಂದಿಷ್ಟು ದಿನಗಳ ಕಾಲ ಕಾದು ನೋಡುವ ಮೊರೆ ಹೋಗಿದೆ ಎಂದು ಮೂಲಗಳು ಹೇಳಿವೆ.

ಆಂದೋಲನ ಡೆಸ್ಕ್

Recent Posts

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

8 hours ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

9 hours ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

10 hours ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

10 hours ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

10 hours ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

10 hours ago