Andolana originals

ಮುಡಾ ದೈನಂದಿನ ಕಾರ್ಯ ಪುನರಾರಂಭ

ಕೆಲಸ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು

  • ಹೆಚ್‌.ಎಸ್. ದಿನೇಶ್ ಕುಮಾರ್

 

ಮೈಸೂರು: ಅಂತೂ ಸಂಪೂರ್ಣವಾಗಿ ಅಲ್ಲದಿದ್ದರೂ ಖಾತಾ, ಕಂದಾಯ ನಿಗದಿ, ನಕ್ಷೆ ಮಂಜೂರು… ಹೀಗೆ ಸಾರ್ವಜನಿಕರ ದೈನಂದಿನ ಕೆಲಸ ಕಾರ್ಯಗಳಿಗೆ ತೊಂದರೆಯಾಗದ ರೀತಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸ್ಥಗಿತಗೊಂಡಿದ್ದ ಕೆಲಸವನ್ನು ಪುನರಾರಂಭಿಸಿದೆ.‌

ನಗರಾಭಿವೃದ್ಧಿ ಇಲಾಖೆಯು ಈ ಸಂಬಂಧ ಪ್ರಾಧಿಕಾರದ ಕೆಲಸಗಳನ್ನು ಆರಂಭಿಸುವಂತೆ ಪತ್ರ ಮುಖೇನ ತಿಳಿಸಿದೆ. ಕಳೆದ ವಾರ ಮುಡಾ ಆಯುಕ್ತ ರಘುನಂದನ್ ಅವರು ಸರ್ಕಾರಕ್ಕೆ ಪತ್ರ ಬರೆದು ದಿನ ನಿತ್ಯದ ಕೆಲಸಗಳಿಗೆ ಅನುವು ಮಾಡಿಕೊಡ ಬೇಕು ಎಂದು ಕೋರಿದ್ದರು.

ಮುಡಾ ಅಧ್ಯಕ್ಷ ಕೆ.ಮರೀಗೌಡ ಅವರು ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಗರಾ ಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರೊಂದಿಗೆ ಮಾತನಾಡಿ, ಮುಡಾ ಕೆಲಸಗಳು ಸ್ಥಗಿತಗೊಂಡಿ ರುವ ಹಾಗೂ ಇದರಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ವಿವರಿಸಿದ್ದರು.

ಮುಡಾ ನಿಯಮಬಾಹಿರವಾಗಿ ಶೇ.50:50ರ ಅನುಪಾತದಡಿ, ಪ್ರೋತ್ಸಾಹದಾಯಕ ಹಾಗೂ ಬದಲಿ ನಿವೇಶನಗಳನ್ನು ಮನಸೋ ಇಚ್ಛೆ ಹಂಚಿಕೆ ಮಾಡಿ ಸರ್ಕಾರಕ್ಕೆ ಸಾವಿರಾರು ಕೋಟಿ ರೂ. ನಷ್ಟ ಉಂಟು ಮಾಡಿರುವ ಪ್ರಕರಣದ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸಿದೆ ಇದರಿಂದಾಗಿ ಕಳೆದ ಒಂದು ತಿಂಗಳಿನಿಂದ ಮುಡಾ ನಿದ್ರಾವಸ್ಥೆಯಲ್ಲಿ ಇತ್ತು.

ಸರ್ಕಾರದ ಸೂಚನೆ ಮೇರೆಗೆ ಕಾಮಗಾರಿಗಳ ಕಾರ್ಯಾದೇಶ ಸೇರಿದಂತೆ ಮುಡಾದಲ್ಲಿ ಸಾರ್ವಜನಿಕರಿಗೆ ಸಂಬಂಧಿಸಿದ ಯಾವುದೇ ಕೆಲಸಗಳು ನಡೆಯುತ್ತಿರಲಿಲ್ಲ. ಮುಡಾ ಸಭೆ, ಕಡತಗಳಿಗೆ ಸಹಿ ಇನ್ನಿತರೆ ಎಲ್ಲಾ ಕಾರ್ಯ ಸ್ಥಗಿತಗೊಂಡಿರುವುದರಿಂದ ಆಯುಕ್ತರು, ಕಾರ್ಯ ದರ್ಶಿ, ನಗರ ಯೋಜಕ ಸದಸ್ಯ, ವಿಶೇಷ ಭೂ ಸ್ವಾಧೀನಾಧಿಕಾರಿ, ವಿಶೇಷ ತಹಸಿಲ್ದಾರ್‌ಗಳು, ಸೂಪರಿಂಟೆಂಡೆಂಟ್ ಎಂಜಿನಿಯರ್, ಎಕ್ಸಿಕ್ಯೂಟಿವ್ ಇಂಜಿನಿಯರ್, ಮುಖ್ಯ ಲೆಕ್ಕಾಧಿಕಾರಿಗಳು, ಸಿಬ್ಬಂದಿ ಯಾವುದೇ ಕೆಲಸವಿಲ್ಲದೇ ಕಾಲ ಕಳೆದು ಹೋಗುತ್ತಿದ್ದರು.

ಮುಡಾದ ಎಲ್ಲ ಕೆಲಸಗಳೂ ಸ್ಥಗಿತಗೊಂಡಿರುವು ದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಿತ್ತು. ತನಿಖೆಗೂ, ಮುಡಾ ಸೇವೆಗಳಿಗೂ ಸಂಬಂಧವಿಲ್ಲದಿದ್ದರೂ ಸರ್ಕಾರ ಸಾರ್ವಜನಿಕರ ಹಿತವನ್ನು ಬಲಿ ಕೊಟ್ಟಿದೆ ಎಂಬ ಆಕ್ರೋಶ ವ್ಯಕ್ತವಾಗಿತ್ತು.
ಇದೀಗ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಲತಾ ಅವರು ಮುಡಾ ಆಯುಕ್ತರಿಗೆ ಪತ್ರವನ್ನು ಬರೆದಿದ್ದಾರೆ. ನಗರಾ ಭಿವೃದ್ಧಿ ಕಾಯಿದೆ 1987ರ ಮಾರ್ಗಸೂಚಿಯಂತೆ ಯಾವುದೇ ನಿಯಮ, ನಿರ್ದೇಶನಗಳ ಉಲ್ಲಂಘನೆಯಾಗದಂತೆ ನಿಯಮಾನುಸಾರ ಕೆಲಸ ನಿರ್ವಹಿಸುವಂತೆ ಆ.3ರಂದು ಪತ್ರ ರವಾನಿಸಿದ್ದಾರೆ.

ಮುಡಾದಲ್ಲಿ ನಡೆಯುವ ಕೆಲಸಗಳೇನು?
ಕಂದಾಯ ಪಾವತಿ, ಕಟ್ಟಡ ವಿನ್ಯಾಸ ನಕ್ಷೆ, ಕಟ್ಟಡ ವಿನ್ಯಾಸ ನಕ್ಷೆ ಅನುಮೋದನೆ, ನ್ಯಾಯಾಲಯದ ಪ್ರಕರಣಗಳ ಕಡತಗಳು ಅನ್ಯಕ್ರಾಂತ ಅಭಿಪ್ರಾಯ ನೀಡುವುದು ಮಾಹಿತಿ ಹಕ್ಕು ಪ್ರಕರಣಗಳು

ಯಾವುದಕ್ಕೆ ಅವಕಾಶವಿಲ್ಲ?

ಪ್ರಾಧಿಕಾರದಿಂದ ಯಾವುದೇ ಸಭೆ ನಡೆಸುವಂತಿಲ್ಲ.

ಪ್ರಸ್ತುತ ಹಂತದಲ್ಲಿರುವ ಯಾವುದೇ ಕಡತಗಳ ತೀರ್ಮಾನ ಕೈಗೊಳ್ಳುವಂತಿಲ್ಲ •

ಪ್ರಾಧಿಕಾರದ ಸಭೆಯಲ್ಲಿ ಈ ಹಿಂದೆ ತೆಗೆದುಕೊಂಡ ಯಾವುದೇ ತೀರ್ಮಾನವನ್ನು ಅನುಷ್ಠಾನಗೊಳಿಸುವಂತಿಲ್ಲ.

ಸರ್ಕಾರದ ನಿರ್ದೇಶನವಿಲ್ಲದೆ ಯಾವುದೇ ನಿವೇಶನಗಳ ವಿಲೇವಾರಿ ಮಾಡುವಂತಿಲ್ಲ

ಖಾಸಗಿ ಬಡಾವಣೆಗಳ ನಿವೇಶನ ಬಿಡುಗಡೆ, ಅನುಮೋದನೆ ನೀಡುವಂತಿಲ್ಲ.

ಪ್ರಾಧಿಕಾರದ ದೈನಂದಿನ ಕೆಲಸ ಕಾರ್ಯ ನಡೆಸಲು ಅವಕಾಶ ನೀಡುವಂತೆ ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದೆವು. ವಿವಿಧ ಸೇವೆ ಕೋರಿ ಅರ್ಜಿ ಸಲ್ಲಿಸಿದ ಜನರು, ಕಚೇರಿಗೆ ಅಲೆಯುತ್ತಿದ್ದಾರೆ ಎಂಬುದನ್ನು ಮನವರಿಕೆ ಮಾಡಿದ್ದೆವು. ಇದೀಗ ದೈನಂದಿನ ಕೆಲಸಗಳಿಗೆ ಅಡ್ಡಿಯಾಗದಂತೆ ಕೆಲಸ ನಿರ್ವಹಿಸಲು ಇಲಾಖೆ ಸೂಚನೆ ನೀಡಿದೆ. ಅದರಂತೆ ಕೆಲಸ ನಿರ್ವಹಿಸಲಾಗುವುದು. ಮೇಲಾಧಿಕಾರಿಗಳಿಂದ ಮತ್ತೊಂದು ಆದೇಶದ ನಿರೀಕ್ಷೆಯಲ್ಲಿದ್ದು, ಮುಂದಿನ ದಿನಗಳಲ್ಲಿ ಮುಡಾ ಎಂದಿನಂತೆ ಕೆಲಸ ನಿರ್ವಹಿಸಲಿದೆ.

ರಘುನಂದನ, ಮುಡಾ ಆಯುಕ್ತರು.

ನಿವೇಶನ ಹಂಚಿಕೆ ಕುರಿತು ತನಿಖೆ ನಡೆಯುತ್ತಿರುವ ಕಾರಣ ಮುಡಾದ ಕೆಲಸಗಳು ಸ್ಥಗಿತಗೊಂಡಿದ್ದವು. ಆದರೆ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಕೆಲ ಮಾರ್ಗಸೂಚಿಗಳನ್ನು ನೀಡಿ ಕೆಲಸ ನಿರ್ವಹಿಸುವಂತೆ ಸೂಚಿಸಿದ್ದಾರೆ. ಅದರಂತೆ ಕೆಲಸ ನಿರ್ವಹಿಸಲಾಗುವುದು. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಕೆ.ಮರೀಗೌಡ, ಮುಡಾ ಅಧ್ಯಕ್ಷ

ಆಂದೋಲನ ಡೆಸ್ಕ್

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago