Andolana originals

ಮುಡಾ ದೈನಂದಿನ ಕಾರ್ಯ ಪುನರಾರಂಭ

ಕೆಲಸ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು

  • ಹೆಚ್‌.ಎಸ್. ದಿನೇಶ್ ಕುಮಾರ್

 

ಮೈಸೂರು: ಅಂತೂ ಸಂಪೂರ್ಣವಾಗಿ ಅಲ್ಲದಿದ್ದರೂ ಖಾತಾ, ಕಂದಾಯ ನಿಗದಿ, ನಕ್ಷೆ ಮಂಜೂರು… ಹೀಗೆ ಸಾರ್ವಜನಿಕರ ದೈನಂದಿನ ಕೆಲಸ ಕಾರ್ಯಗಳಿಗೆ ತೊಂದರೆಯಾಗದ ರೀತಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸ್ಥಗಿತಗೊಂಡಿದ್ದ ಕೆಲಸವನ್ನು ಪುನರಾರಂಭಿಸಿದೆ.‌

ನಗರಾಭಿವೃದ್ಧಿ ಇಲಾಖೆಯು ಈ ಸಂಬಂಧ ಪ್ರಾಧಿಕಾರದ ಕೆಲಸಗಳನ್ನು ಆರಂಭಿಸುವಂತೆ ಪತ್ರ ಮುಖೇನ ತಿಳಿಸಿದೆ. ಕಳೆದ ವಾರ ಮುಡಾ ಆಯುಕ್ತ ರಘುನಂದನ್ ಅವರು ಸರ್ಕಾರಕ್ಕೆ ಪತ್ರ ಬರೆದು ದಿನ ನಿತ್ಯದ ಕೆಲಸಗಳಿಗೆ ಅನುವು ಮಾಡಿಕೊಡ ಬೇಕು ಎಂದು ಕೋರಿದ್ದರು.

ಮುಡಾ ಅಧ್ಯಕ್ಷ ಕೆ.ಮರೀಗೌಡ ಅವರು ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಗರಾ ಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರೊಂದಿಗೆ ಮಾತನಾಡಿ, ಮುಡಾ ಕೆಲಸಗಳು ಸ್ಥಗಿತಗೊಂಡಿ ರುವ ಹಾಗೂ ಇದರಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ವಿವರಿಸಿದ್ದರು.

ಮುಡಾ ನಿಯಮಬಾಹಿರವಾಗಿ ಶೇ.50:50ರ ಅನುಪಾತದಡಿ, ಪ್ರೋತ್ಸಾಹದಾಯಕ ಹಾಗೂ ಬದಲಿ ನಿವೇಶನಗಳನ್ನು ಮನಸೋ ಇಚ್ಛೆ ಹಂಚಿಕೆ ಮಾಡಿ ಸರ್ಕಾರಕ್ಕೆ ಸಾವಿರಾರು ಕೋಟಿ ರೂ. ನಷ್ಟ ಉಂಟು ಮಾಡಿರುವ ಪ್ರಕರಣದ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸಿದೆ ಇದರಿಂದಾಗಿ ಕಳೆದ ಒಂದು ತಿಂಗಳಿನಿಂದ ಮುಡಾ ನಿದ್ರಾವಸ್ಥೆಯಲ್ಲಿ ಇತ್ತು.

ಸರ್ಕಾರದ ಸೂಚನೆ ಮೇರೆಗೆ ಕಾಮಗಾರಿಗಳ ಕಾರ್ಯಾದೇಶ ಸೇರಿದಂತೆ ಮುಡಾದಲ್ಲಿ ಸಾರ್ವಜನಿಕರಿಗೆ ಸಂಬಂಧಿಸಿದ ಯಾವುದೇ ಕೆಲಸಗಳು ನಡೆಯುತ್ತಿರಲಿಲ್ಲ. ಮುಡಾ ಸಭೆ, ಕಡತಗಳಿಗೆ ಸಹಿ ಇನ್ನಿತರೆ ಎಲ್ಲಾ ಕಾರ್ಯ ಸ್ಥಗಿತಗೊಂಡಿರುವುದರಿಂದ ಆಯುಕ್ತರು, ಕಾರ್ಯ ದರ್ಶಿ, ನಗರ ಯೋಜಕ ಸದಸ್ಯ, ವಿಶೇಷ ಭೂ ಸ್ವಾಧೀನಾಧಿಕಾರಿ, ವಿಶೇಷ ತಹಸಿಲ್ದಾರ್‌ಗಳು, ಸೂಪರಿಂಟೆಂಡೆಂಟ್ ಎಂಜಿನಿಯರ್, ಎಕ್ಸಿಕ್ಯೂಟಿವ್ ಇಂಜಿನಿಯರ್, ಮುಖ್ಯ ಲೆಕ್ಕಾಧಿಕಾರಿಗಳು, ಸಿಬ್ಬಂದಿ ಯಾವುದೇ ಕೆಲಸವಿಲ್ಲದೇ ಕಾಲ ಕಳೆದು ಹೋಗುತ್ತಿದ್ದರು.

ಮುಡಾದ ಎಲ್ಲ ಕೆಲಸಗಳೂ ಸ್ಥಗಿತಗೊಂಡಿರುವು ದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಿತ್ತು. ತನಿಖೆಗೂ, ಮುಡಾ ಸೇವೆಗಳಿಗೂ ಸಂಬಂಧವಿಲ್ಲದಿದ್ದರೂ ಸರ್ಕಾರ ಸಾರ್ವಜನಿಕರ ಹಿತವನ್ನು ಬಲಿ ಕೊಟ್ಟಿದೆ ಎಂಬ ಆಕ್ರೋಶ ವ್ಯಕ್ತವಾಗಿತ್ತು.
ಇದೀಗ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಲತಾ ಅವರು ಮುಡಾ ಆಯುಕ್ತರಿಗೆ ಪತ್ರವನ್ನು ಬರೆದಿದ್ದಾರೆ. ನಗರಾ ಭಿವೃದ್ಧಿ ಕಾಯಿದೆ 1987ರ ಮಾರ್ಗಸೂಚಿಯಂತೆ ಯಾವುದೇ ನಿಯಮ, ನಿರ್ದೇಶನಗಳ ಉಲ್ಲಂಘನೆಯಾಗದಂತೆ ನಿಯಮಾನುಸಾರ ಕೆಲಸ ನಿರ್ವಹಿಸುವಂತೆ ಆ.3ರಂದು ಪತ್ರ ರವಾನಿಸಿದ್ದಾರೆ.

ಮುಡಾದಲ್ಲಿ ನಡೆಯುವ ಕೆಲಸಗಳೇನು?
ಕಂದಾಯ ಪಾವತಿ, ಕಟ್ಟಡ ವಿನ್ಯಾಸ ನಕ್ಷೆ, ಕಟ್ಟಡ ವಿನ್ಯಾಸ ನಕ್ಷೆ ಅನುಮೋದನೆ, ನ್ಯಾಯಾಲಯದ ಪ್ರಕರಣಗಳ ಕಡತಗಳು ಅನ್ಯಕ್ರಾಂತ ಅಭಿಪ್ರಾಯ ನೀಡುವುದು ಮಾಹಿತಿ ಹಕ್ಕು ಪ್ರಕರಣಗಳು

ಯಾವುದಕ್ಕೆ ಅವಕಾಶವಿಲ್ಲ?

ಪ್ರಾಧಿಕಾರದಿಂದ ಯಾವುದೇ ಸಭೆ ನಡೆಸುವಂತಿಲ್ಲ.

ಪ್ರಸ್ತುತ ಹಂತದಲ್ಲಿರುವ ಯಾವುದೇ ಕಡತಗಳ ತೀರ್ಮಾನ ಕೈಗೊಳ್ಳುವಂತಿಲ್ಲ •

ಪ್ರಾಧಿಕಾರದ ಸಭೆಯಲ್ಲಿ ಈ ಹಿಂದೆ ತೆಗೆದುಕೊಂಡ ಯಾವುದೇ ತೀರ್ಮಾನವನ್ನು ಅನುಷ್ಠಾನಗೊಳಿಸುವಂತಿಲ್ಲ.

ಸರ್ಕಾರದ ನಿರ್ದೇಶನವಿಲ್ಲದೆ ಯಾವುದೇ ನಿವೇಶನಗಳ ವಿಲೇವಾರಿ ಮಾಡುವಂತಿಲ್ಲ

ಖಾಸಗಿ ಬಡಾವಣೆಗಳ ನಿವೇಶನ ಬಿಡುಗಡೆ, ಅನುಮೋದನೆ ನೀಡುವಂತಿಲ್ಲ.

ಪ್ರಾಧಿಕಾರದ ದೈನಂದಿನ ಕೆಲಸ ಕಾರ್ಯ ನಡೆಸಲು ಅವಕಾಶ ನೀಡುವಂತೆ ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದೆವು. ವಿವಿಧ ಸೇವೆ ಕೋರಿ ಅರ್ಜಿ ಸಲ್ಲಿಸಿದ ಜನರು, ಕಚೇರಿಗೆ ಅಲೆಯುತ್ತಿದ್ದಾರೆ ಎಂಬುದನ್ನು ಮನವರಿಕೆ ಮಾಡಿದ್ದೆವು. ಇದೀಗ ದೈನಂದಿನ ಕೆಲಸಗಳಿಗೆ ಅಡ್ಡಿಯಾಗದಂತೆ ಕೆಲಸ ನಿರ್ವಹಿಸಲು ಇಲಾಖೆ ಸೂಚನೆ ನೀಡಿದೆ. ಅದರಂತೆ ಕೆಲಸ ನಿರ್ವಹಿಸಲಾಗುವುದು. ಮೇಲಾಧಿಕಾರಿಗಳಿಂದ ಮತ್ತೊಂದು ಆದೇಶದ ನಿರೀಕ್ಷೆಯಲ್ಲಿದ್ದು, ಮುಂದಿನ ದಿನಗಳಲ್ಲಿ ಮುಡಾ ಎಂದಿನಂತೆ ಕೆಲಸ ನಿರ್ವಹಿಸಲಿದೆ.

ರಘುನಂದನ, ಮುಡಾ ಆಯುಕ್ತರು.

ನಿವೇಶನ ಹಂಚಿಕೆ ಕುರಿತು ತನಿಖೆ ನಡೆಯುತ್ತಿರುವ ಕಾರಣ ಮುಡಾದ ಕೆಲಸಗಳು ಸ್ಥಗಿತಗೊಂಡಿದ್ದವು. ಆದರೆ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಕೆಲ ಮಾರ್ಗಸೂಚಿಗಳನ್ನು ನೀಡಿ ಕೆಲಸ ನಿರ್ವಹಿಸುವಂತೆ ಸೂಚಿಸಿದ್ದಾರೆ. ಅದರಂತೆ ಕೆಲಸ ನಿರ್ವಹಿಸಲಾಗುವುದು. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಕೆ.ಮರೀಗೌಡ, ಮುಡಾ ಅಧ್ಯಕ್ಷ

ಆಂದೋಲನ ಡೆಸ್ಕ್

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

2 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

3 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

4 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

5 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

5 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

7 hours ago