Andolana originals

ಮುಡಾ ಮತ್ತೊಂದು ಅಕ್ರಮ ಬಯಲು; 52 ಕೋಟಿ ರೂ ಸೈಟ್‌ 3 ಸಾವಿರಕ್ಕೆ ಮಾರಾಟ!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿಯನ್ನೇ ಅಲುಗಾಡಿಸುತ್ತಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ವಿಜಯನಗರದ ಮಧ್ಯಭಾಗದಲ್ಲಿರುವ ಕೋಟ್ಯಂತರ ರೂ. ಬೆಲೆ ಬಾಳುವ ೨೬ ನಿವೇಶನ ಗಳನ್ನು ಕೇವಲ ೩ರಿಂದ ೬ ಸಾವಿರ ರೂ. ಗಳಿಗೆ ಮಾರಾಟ ಮಾಡಿರುವುದನ್ನು ಜಾರಿ ನಿರ್ದೇಶನಾಲಯ (ಇಡಿ) ಪತ್ತೆಹಚ್ಚಿದೆ.

ಈ ಹಿಂದೆ ಮೈಸೂರಿನಲ್ಲಿ ಮುಡಾ ಆಯುಕ್ತ ರಾಗಿದ್ದ ಜಿ. ಟಿ. ದಿನೇಶ್‌ಕುಮಾರ್ ಅವರು ಸ್ಥಳೀಯ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಎಂಬವರ ಜೊತೆ ಸೇರಿ ಪ್ರೋತ್ಸಾಹದಾಯಕ ಯೋಜನೆ ಹೆಸರಿನಲ್ಲಿ ಕೇವಲ ೩ ಸಾವಿರ ರೂ. ಸೇವಾ ಶುಲ್ಕ ಪಡೆದು ಕೋಟ್ಯಂತರ ರೂ.ಬೆಲೆಬಾಳುವ ೨೬ ನಿವೇಶನಗಳನ್ನು ಮಂಜೂರು ಮಾಡಿದ್ದು, ದಿನೇಶ್ ಕುಮಾರ್, ಉದ್ಯಮಿ ಮಂಜುನಾಥ್ ಇವರನ್ನೊಳಗೊಂಡ ವಿವಿಧ ಪ್ರಕರಣಗಳಲ್ಲಿ ಮುಡಾಗೆ ೩೦೦ ಕೋಟಿ ರೂ. ನಷ್ಟ ಉಂಟಾಗಿರುವ ಬಗ್ಗೆ ಇಡಿ ಮಾಹಿತಿ ನೀಡಿದೆ.

ಪ್ರೋತ್ಸಾಹದಾಯಕ ಯೋಜನೆಯಡಿ ಈ ೨೬ ನಿವೇಶನಗಳನ್ನು ಕೇವಲ ೪ ದಿನಗಳಲ್ಲಿ ಮಂಜೂರು ಮಾಡಿರುವುದು ಭಾರೀ ಸಂಶಯಕ್ಕೆ ಎಡೆ ಮಾಡಿ ಕೊಟ್ಟಿದೆ. ಮೈಸೂರಿನ ಕಾರ್ತಿಕ ಬಡಾವಣೆಯ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಎಂಬವರು ಈ ನಿವೇಶನಗಳನ್ನು ಖರೀದಿಸಿದ್ದಾರೆ. ಮತ್ತೊಂದು ವಿಶೇಷವೆಂದರೆ ೫ ಲಕ್ಷ ರೂ. ಶುಲ್ಕ ಪಾವತಿಸಬೇಕಾದ ಕಡೆ ಕೇವಲ ೬೦೦ ರೂ. ಪಾವತಿಸಿ ಮಂಜುನಾಥ್ ನಿವೇಶನ ಮಂಜೂರು ಮಾಡಿಸಿಕೊಂಡಿದ್ದಾರೆ. ಮೂಲ ಮಾಲೀಕರ ಹೆಸರು ಕೈಬಿಟ್ಟು ಜಿಪಿಎ ಪ್ರತಿ ನಿಽ ಮಂಜುನಾಥ್ ನೇರವಾಗಿ ತಮ್ಮ ಹೆಸರಿಗೆ ನಿವೇ ಶನ ನೋಂದಣಿ ಮಾಡಿಕೊಂಡಿದ್ದಾರೆ.

ಮೈಸೂರಿನ ವಿಜಯನಗರ ಬಡಾವಣೆಯ ೩ ಮತ್ತು ೪ನೇ ಹಂತದಲ್ಲಿ ಈ ನಿವೇಶನಗಳನ್ನು ಮಂಜೂರು ಮಾಡಲಾಗಿದೆ. ೬೦೪೦ ಚದರ ಅಡಿ ಅಳತೆಯ ನಿವೇಶನಗಳಿಗೆ ಈಗ ಇಲ್ಲಿ ಒಂದೂವರೆಯಿಂದ ೨ ಕೋಟಿ ರೂ. ಮಾರುಕಟ್ಟೆ ದರ ಇದ್ದು, ಇಷ್ಟು ಕಡಿಮೆ ಬೆಲೆಯಲ್ಲಿ ನಿವೇಶನಗಳನ್ನು ಹೇಗೆ ಮಾರಾಟ ಮಾಡಲಾಯಿತು ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ. ಒಂದು ವರ್ಷದ ಹಿಂದೆಯೇ ಮುಡಾ ಭ್ರಷ್ಟಾಚಾರದ ಬಗ್ಗೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿತ್ತು. ಮುಡಾ ಆಯುಕ್ತ ಜಿ. ಟಿ. ದಿನೇಶ್ ಕುಮಾರ್, ಉದ್ಯಮಿ ಮಂಜುನಾಥ್ ವಿರುದ್ಧ ಕೃಷ್ಣ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಮೈಸೂರು ನಗರಾಭಿವೃದ್ಧಿ ಪ್ರಾಽಕಾರದ ಆಯುಕ್ತ ಜಿ. ಟಿ. ದಿನೇಶ್‌ಕುಮಾರ್, ವಿಶೇಷ ತಹಸಿಲ್ದಾರ್ ಶಿವಕುಮಾರ್, ಹೆಚ್ಚುವರಿ ಜಿಲ್ಲಾ ನೋಂದಣಾಽಕಾರಿ ಕಾವ್ಯ, ರಿಯಲ್ ಎಸ್ಟೇಟ್ ಉದ್ಯಮಿ ಎನ್. ಮಂಜುನಾಥ್ ವಿರುದ್ಧ ದೂರು ದಾಖಲಾಗಿದೆ.

ಮತ್ತೊಂದು ಪ್ರಕರಣದಲ್ಲಿ 7 ನಿವೇಶನ ಸೇಲ್‌ ಅಗ್ರಿಮೆಂಟ್‌
ಮೈಸೂರು: ರಾಮಕೃಷ್ಣನಗರದ ಆಂದೋಲನ ಸರ್ಕಲ್ ಬಳಿ ಇರುವ ಮುಡಾ ನಿವೇಶನಗಳನ್ನು ಖಾಸಗಿ ಸಂಘಸಂಸ್ಥೆಗಳಿಗೆ ನೀಡಲಾಗಿತ್ತು. ಆದರೆ ಸಂಘದ ಸದಸ್ಯರಿಗೆ ಕ್ರಯ ಮಾಡುವ ಮುನ್ನವೇ ಕಾರ್ತಿಕ ಬಡಾವಣೆಯ ಬಿಲ್ಡರ್ ಮಂಜುನಾಥ್ ಅವರು ಆ ಸಂಘದ ವಿವಿಧ ಸದಸ್ಯರಿಂದ ಒಟ್ಟು ೭ ನಿವೇಶನಗಳನ್ನು ತಮ್ಮ ಹೆಸರಿಗೆ ಸೇಲ್ ಅಗ್ರಿಮೆಂಟ್ ಮಾಡಿ ಕೊಂಡಿದ್ದರು. ಈಗ ಮಂಜುನಾಥ್ ವಿರುದ್ಧ ಇಡಿ ಅಽಕಾರಿಗಳು ತನಿಖೆ ನಡೆಸುತ್ತಿರುವ ಹೊತ್ತಲ್ಲೇ ಒಂದೊಂದಾಗಿ ಅಕ್ರಮಗಳು ಹೊರ ಬರುತ್ತಿವೆ. ಈಗ ವಿಜಯನಗರ ಬಡಾವಣೆ ಯಲ್ಲಿ ಕೋಟ್ಯಂತರ ರೂ. ಬೆಲೆಯ ನಿವೇಶನ ಗಳನ್ನು ಕಡಿಮೆ ದರಕ್ಕೆ ನೋಂದಣಿ ಮಾಡಿಕೊಟ್ಟಿ ರುವ ದೊಡ್ಡ ಹಗರಣ ಬಯಲಿಗೆ ಬಂದಿದೆ

 

 

andolana

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

6 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

6 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

8 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

8 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

8 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

8 hours ago