Andolana originals

ಜನವರಿ.21ರಿಂದ ಮುಡುಕುತೊರೆ ಜಾತ್ರಾ ಮಹೋತ್ಸವ ಸಂಭ್ರಮ

ಎಂ.ನಾರಾಯಣ

ದೇವಾಲಯದ ಜೀರ್ಣೋದ್ಧಾರ ಹಿನ್ನೆಲೆಯಲ್ಲಿ ಈ ಬಾರಿಯೂ ರಥೋತ್ಸವ ಇಲ್ಲ 

ತಿ.ನರಸೀಪುರ: ಕಾವೇರಿ ನದಿ ದಡದಲ್ಲಿರುವ ತಾಲ್ಲೂಕಿನ ಪ್ರಸಿದ್ಧ ಪುಣ್ಯ ಕ್ಷೇತ್ರ ಶ್ರೀ ಮುಡುಕುತೊರೆ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ಜಿಲ್ಲೆಯ ದೊಡ್ಡ ಜಾತ್ರೆ ಎಂದೇ ಖ್ಯಾತಿ ಪಡೆದಿರುವ ಐತಿಹಾಸಿಕ ಮುಡುಕುತೊರೆ ಜಾತ್ರಾ ಮಹೋತ್ಸವವು ಜ.೨೧ರಂದು  ಸಾಂಪ್ರದಾಯಿಕ ಹಾಗೂ ಧಾರ್ಮಿಕ ಪೂಜಾ ಕಾರ್ಯಕ್ರಮ ಅಂಕುರಾರ್ಪಣೆಯೊಂದಿಗೆ ಪ್ರಾರಂಭವಾಗಲಿದೆ.

ದೇಗುಲದ ಕಾಮಗಾರಿ ನಡೆಯುತ್ತಿರುವುದರಿಂದ ಈ ಬಾರಿಯೂ ಜಾತ್ರಾ ಪೂಜೆಗಳನ್ನು ಹೊರತುಪಡಿಸಿ ಉಳಿದಂತೆ ಉತ್ಸವ ಮೆರವಣಿಗೆ, ರಥೋತ್ಸವ ನಡೆಯುವುದಿಲ್ಲ. ಆದರೆ ಪ್ರತಿದಿನ ನಿಗದಿತ ಪೂಜಾ ಕೈಂಕರ್ಯ ಗಳು ಮಾತ್ರ ನಡೆಯಲಿವೆ.ಶ್ರೀ ಭ್ರಮ ರಾಂಬ ಸಮೇತ ಮಲ್ಲಿಕಾರ್ಜುನಸ್ವಾಮಿ ಬ್ರಹ್ಮ ರಥೋತ್ಸವದ ಜಾತ್ರಾ ಮಹೋತ್ಸವದಲ್ಲಿ ದನಗಳ ಜಾತ್ರೆ ನಡೆಯುವುದು ವಾಡಿಕೆಯಾಗಿದ್ದು, ಈಗ ದೇವಾಲಯದ ಜೀರ್ಣೋದ್ಧಾರದ ಅಂಗವಾಗಿ ಕಾಮಗಾರಿ ಪೂರ್ಣಗೊಳ್ಳುವವರೆಗೆ ಬ್ರಹ್ಮರಥೋತ್ಸವ, ಮಹೋತ್ಸವಗಳನ್ನು ನಡೆಸಲು ಆಗಮಶಾಸ್ತ್ರದಲ್ಲಿ ಅವಕಾಶಗಳು ಇರುವುದಿಲ್ಲವಾದ್ದರಿಂದ ಕಳೆದ ವರ್ಷದಂತೆಯೇ ಈ ಬಾರಿಯೂ ದನಗಳ ಜಾತ್ರೆ ಮತ್ತು ಭಕ್ತರು ನಡೆಸುವ ಅರವಟ್ಟಿಗೆಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಭಕ್ತರಿಗೆ ದರ್ಶನಕ್ಕೆ ಮತ್ತು ಸೇವೆಗಳಿಗೆ ಈ ಬಾರಿಯೂ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಅಧಿಕಾರಿಗಳ ಸಭೆ ನಡೆಸಿ ಜಾತ್ರೋತ್ಸವದಲ್ಲಿ ಭಾಗವಹಿಸುವ ಭಕ್ತರಿಗೆ ಹಾಗೂ ದನಗಳ ಪರಿಷೆಗೆ ಅಗತ್ಯವಾದ ಕುಡಿಯುವ ನೀರು, ಬಟ್ಟೆ ಬದಲಿಸುವ ಕೊಠಡಿ, ತಾತ್ಕಾಲಿಕ ಶೌಚಾಲಯ, ದೇಗುಲಗಳಿಗೆ ವಿದ್ಯುತ್ ದೀಪಾಲಂಕಾರ, ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

” ಮುಡುಕುತೊರೆ ಮಲ್ಲಿಕಾರ್ಜುನ ದೇವಾಲಯದ ಜೀರ್ಣೋದ್ಧಾರ ಪ್ರಗತಿಯಲ್ಲಿದ್ದು, ಈ ಬಾರಿಯ ಜಾತ್ರೆಯಲ್ಲೂ ಉತ್ಸವಮೂರ್ತಿ ಮೆರವಣಿಗೆ, ಉತ್ಸವಗಳು ಇರುವುದಿಲ್ಲ. ಜಾತ್ರಾ ಪೂಜಾ ಕೈಂಕರ್ಯ ಎಂದಿನಂತೆ ನೆರವೇರಲಿದ್ದು, ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಮಹೋತ್ಸವದ ಅಂಗವಾಗಿ ವಿವಿಧ ಇಲಾಖೆಗಳಿಗೆ ನೀಡಿರುವ ಮೂಲ ಸೌಲಭ್ಯದ ಕಾರ್ಯಗಳಿಗೆ ಅನುಮೋದನೆ ದೊರಕಿದ್ದು, ಶೀಘ್ರದಲ್ಲೇ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು.”

-ವೆಂಕಟೇಶ್ ಪ್ರಸಾದ್, ಸಮೂಹ ದೇವಾಲಯಗಳ ಅಧಿಕಾರಿ

” ದನಗಳ ಜಾತ್ರೆ, ಭಕ್ತರಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದೆ. ಕಾಮಗಾರಿ ನಡೆಯುತ್ತಿದ್ದು, ಮುಂದಿನ ವರ್ಷ ಪೂರ್ಣಗೊಂಡು ಜಾತ್ರೆ ರಥೋತ್ಸವ ನಡೆಯುವ ಸಾಧ್ಯತೆಗಳಿವೆ. ಧಾರ್ಮಿಕ ಕಾರ್ಯಗಳು ಎಂದಿನಂತೆ ನಡೆಯಲಿವೆ. ಉತ್ಸವ ಮತ್ತು ರಥೋತ್ಸವ ಇರುವುದಿಲ್ಲ. ಅರವಟ್ಟಿಗೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ತಾಲ್ಲೂಕು ಆಡಳಿತ ಹಾಗೂ ಧಾರ್ಮಿಕ ದತ್ತಿ ಇಲಾಖೆವತಿಯಿಂದ ಸಾಂಸ್ಕ ತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.”

-ಆನಂದ್ ದೀಕ್ಷಿತ್, ಆಗಮಿಕರು, ವೈದ್ಯನಾಥೇಶ್ವರ ಮತ್ತು ಸಮೂಹ ದೇವಾಲಯ

ಆಂದೋಲನ ಡೆಸ್ಕ್

Recent Posts

TESLA | ಶೀಘ್ರದಲ್ಲೇ ಬೆಂಗಳೂರಿಗೆ ಟೆಸ್ಲಾ ಶೋ ರೂಂ!

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಶೀಘ್ರದಲ್ಲೇ ಶೋ ರೂಂ ತೆರೆಯುದಾಗಿ ವಿದ್ಯುತ್ ಚಾಲಿತ ಕಾರು ತಯಾರಿಕಾ ಕಂಪನಿ ʼಟೆಸ್ಲಾʼ…

3 hours ago

ಚಲನಚಿತ್ರ ಪ್ರಮಾಣೀಕರಣದಲ್ಲಿ ಪಾರದರ್ಶಕತೆ ಇರಲಿ : ನಟ ಕಮಲ್ ಹಾಸನ್ ಸಲಹೆ

ಚೆನ್ನೈ : ತಮಿಳ್ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ಹಾಗೂ ನಟ ವಿಜಯ್ ಅಭಿನಯದ ಜನ ನಾಯಗನ್ ಚಿತ್ರಕ್ಕೆ ಸಂಬಂಧಿಸಿದ…

3 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಸ್ಚಚ್ಛತಾ ಅಭಿಯಾನ : 410 ಕೆ.ಜಿ ಕಸ ಸಂಗ್ರಹ

ಮೈಸೂರು : ಸ್ವಚ್ಛ ನಗರಿ ಮೈಸೂರಿನ ರಮಣೀಯ ಸ್ಥಳವಾದ ಕುಕ್ಕರಹಳ್ಳಿ ಕೆರೆಯ ಸ್ವಚ್ಛತೆಗಾಗಿ, ಸ್ವಚ್ಛ ಸರ್ವೇಕ್ಷಣ ಅಭಿಯಾನದ ಭಾಗವಾಗಿ ಮೈಸೂರು…

4 hours ago

ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ : ಎಚ್‌ಡಿಕೆ ಲೇವಡಿ

ಬೆಂಗಳೂರು : ಸಿದ್ದರಾಮಯ್ಯ ಲೀಸ್ ಬೇಸ್ಡ್ ಮುಖ್ಯಮಂತ್ರಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಅಧಿಕಾರವಧಿಯಲ್ಲಿ…

5 hours ago

SSLC ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ

ಬೆಂಗಳೂರು : ವಿದ್ಯಾರ್ಥಿ ಜೀವನದ ಅತಿ ಮಹತ್ವದ ಘಟ್ಟ ಎಂದೇ ಪರಿಗಣಿಸಲಾದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ…

5 hours ago

ಸ್ಪಾಮ್‌ ಕರೆಗಳ ಕಾಟವೇ? TRAI DND ಅಥವಾ 1909ಗೆ ಕರೆಮಾಡಿ

ಮೈಸೂರು : ಸ್ಪಾಮ್ ಕರೆಗಳ ಮೂಲಕ ಡಿಜಿಟಲ್ ಅರೆಸ್ಟ್ ಹಾಗೂ ಡಿಜಿಟಲ್ ವಂಚನೆ ಮಾಡುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಫೋನಿನ ಕಾಲಿಂಗ್…

5 hours ago