Andolana originals

ಜನವರಿ.21ರಿಂದ ಮುಡುಕುತೊರೆ ಜಾತ್ರಾ ಮಹೋತ್ಸವ ಸಂಭ್ರಮ

ಎಂ.ನಾರಾಯಣ

ದೇವಾಲಯದ ಜೀರ್ಣೋದ್ಧಾರ ಹಿನ್ನೆಲೆಯಲ್ಲಿ ಈ ಬಾರಿಯೂ ರಥೋತ್ಸವ ಇಲ್ಲ 

ತಿ.ನರಸೀಪುರ: ಕಾವೇರಿ ನದಿ ದಡದಲ್ಲಿರುವ ತಾಲ್ಲೂಕಿನ ಪ್ರಸಿದ್ಧ ಪುಣ್ಯ ಕ್ಷೇತ್ರ ಶ್ರೀ ಮುಡುಕುತೊರೆ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ಜಿಲ್ಲೆಯ ದೊಡ್ಡ ಜಾತ್ರೆ ಎಂದೇ ಖ್ಯಾತಿ ಪಡೆದಿರುವ ಐತಿಹಾಸಿಕ ಮುಡುಕುತೊರೆ ಜಾತ್ರಾ ಮಹೋತ್ಸವವು ಜ.೨೧ರಂದು  ಸಾಂಪ್ರದಾಯಿಕ ಹಾಗೂ ಧಾರ್ಮಿಕ ಪೂಜಾ ಕಾರ್ಯಕ್ರಮ ಅಂಕುರಾರ್ಪಣೆಯೊಂದಿಗೆ ಪ್ರಾರಂಭವಾಗಲಿದೆ.

ದೇಗುಲದ ಕಾಮಗಾರಿ ನಡೆಯುತ್ತಿರುವುದರಿಂದ ಈ ಬಾರಿಯೂ ಜಾತ್ರಾ ಪೂಜೆಗಳನ್ನು ಹೊರತುಪಡಿಸಿ ಉಳಿದಂತೆ ಉತ್ಸವ ಮೆರವಣಿಗೆ, ರಥೋತ್ಸವ ನಡೆಯುವುದಿಲ್ಲ. ಆದರೆ ಪ್ರತಿದಿನ ನಿಗದಿತ ಪೂಜಾ ಕೈಂಕರ್ಯ ಗಳು ಮಾತ್ರ ನಡೆಯಲಿವೆ.ಶ್ರೀ ಭ್ರಮ ರಾಂಬ ಸಮೇತ ಮಲ್ಲಿಕಾರ್ಜುನಸ್ವಾಮಿ ಬ್ರಹ್ಮ ರಥೋತ್ಸವದ ಜಾತ್ರಾ ಮಹೋತ್ಸವದಲ್ಲಿ ದನಗಳ ಜಾತ್ರೆ ನಡೆಯುವುದು ವಾಡಿಕೆಯಾಗಿದ್ದು, ಈಗ ದೇವಾಲಯದ ಜೀರ್ಣೋದ್ಧಾರದ ಅಂಗವಾಗಿ ಕಾಮಗಾರಿ ಪೂರ್ಣಗೊಳ್ಳುವವರೆಗೆ ಬ್ರಹ್ಮರಥೋತ್ಸವ, ಮಹೋತ್ಸವಗಳನ್ನು ನಡೆಸಲು ಆಗಮಶಾಸ್ತ್ರದಲ್ಲಿ ಅವಕಾಶಗಳು ಇರುವುದಿಲ್ಲವಾದ್ದರಿಂದ ಕಳೆದ ವರ್ಷದಂತೆಯೇ ಈ ಬಾರಿಯೂ ದನಗಳ ಜಾತ್ರೆ ಮತ್ತು ಭಕ್ತರು ನಡೆಸುವ ಅರವಟ್ಟಿಗೆಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಭಕ್ತರಿಗೆ ದರ್ಶನಕ್ಕೆ ಮತ್ತು ಸೇವೆಗಳಿಗೆ ಈ ಬಾರಿಯೂ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಅಧಿಕಾರಿಗಳ ಸಭೆ ನಡೆಸಿ ಜಾತ್ರೋತ್ಸವದಲ್ಲಿ ಭಾಗವಹಿಸುವ ಭಕ್ತರಿಗೆ ಹಾಗೂ ದನಗಳ ಪರಿಷೆಗೆ ಅಗತ್ಯವಾದ ಕುಡಿಯುವ ನೀರು, ಬಟ್ಟೆ ಬದಲಿಸುವ ಕೊಠಡಿ, ತಾತ್ಕಾಲಿಕ ಶೌಚಾಲಯ, ದೇಗುಲಗಳಿಗೆ ವಿದ್ಯುತ್ ದೀಪಾಲಂಕಾರ, ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

” ಮುಡುಕುತೊರೆ ಮಲ್ಲಿಕಾರ್ಜುನ ದೇವಾಲಯದ ಜೀರ್ಣೋದ್ಧಾರ ಪ್ರಗತಿಯಲ್ಲಿದ್ದು, ಈ ಬಾರಿಯ ಜಾತ್ರೆಯಲ್ಲೂ ಉತ್ಸವಮೂರ್ತಿ ಮೆರವಣಿಗೆ, ಉತ್ಸವಗಳು ಇರುವುದಿಲ್ಲ. ಜಾತ್ರಾ ಪೂಜಾ ಕೈಂಕರ್ಯ ಎಂದಿನಂತೆ ನೆರವೇರಲಿದ್ದು, ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಮಹೋತ್ಸವದ ಅಂಗವಾಗಿ ವಿವಿಧ ಇಲಾಖೆಗಳಿಗೆ ನೀಡಿರುವ ಮೂಲ ಸೌಲಭ್ಯದ ಕಾರ್ಯಗಳಿಗೆ ಅನುಮೋದನೆ ದೊರಕಿದ್ದು, ಶೀಘ್ರದಲ್ಲೇ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು.”

-ವೆಂಕಟೇಶ್ ಪ್ರಸಾದ್, ಸಮೂಹ ದೇವಾಲಯಗಳ ಅಧಿಕಾರಿ

” ದನಗಳ ಜಾತ್ರೆ, ಭಕ್ತರಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದೆ. ಕಾಮಗಾರಿ ನಡೆಯುತ್ತಿದ್ದು, ಮುಂದಿನ ವರ್ಷ ಪೂರ್ಣಗೊಂಡು ಜಾತ್ರೆ ರಥೋತ್ಸವ ನಡೆಯುವ ಸಾಧ್ಯತೆಗಳಿವೆ. ಧಾರ್ಮಿಕ ಕಾರ್ಯಗಳು ಎಂದಿನಂತೆ ನಡೆಯಲಿವೆ. ಉತ್ಸವ ಮತ್ತು ರಥೋತ್ಸವ ಇರುವುದಿಲ್ಲ. ಅರವಟ್ಟಿಗೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ತಾಲ್ಲೂಕು ಆಡಳಿತ ಹಾಗೂ ಧಾರ್ಮಿಕ ದತ್ತಿ ಇಲಾಖೆವತಿಯಿಂದ ಸಾಂಸ್ಕ ತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.”

-ಆನಂದ್ ದೀಕ್ಷಿತ್, ಆಗಮಿಕರು, ವೈದ್ಯನಾಥೇಶ್ವರ ಮತ್ತು ಸಮೂಹ ದೇವಾಲಯ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

2 hours ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

2 hours ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

2 hours ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

2 hours ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

2 hours ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

3 hours ago